Homeಮುಖಪುಟಅಫಿಡವಿಟ್‌ ಸೋರಿಕೆ ವಿಚಾರ: ಕೇಂದ್ರ ಸರ್ಕಾರಕ್ಕೆ ಮಹುವಾ ಮೊಯಿತ್ರಾ ತರಾಟೆ

ಅಫಿಡವಿಟ್‌ ಸೋರಿಕೆ ವಿಚಾರ: ಕೇಂದ್ರ ಸರ್ಕಾರಕ್ಕೆ ಮಹುವಾ ಮೊಯಿತ್ರಾ ತರಾಟೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರು ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಅಫಿಡವಿಟ್‌ ಸೋರಿಕೆ ವಿಚಾರವಾಗಿ ಕೇಂದ್ರ ಸರ್ಕಾರವನ್ನು ತರಾಟೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಎಕ್ಸಾನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ”ನೈತಿಕ ಸಮಿತಿಯ ಅಧ್ಯಕ್ಷರು ಮಾಧ್ಯಮಗಳೊಂದಿಗೆ ಬಹಿರಂಗವಾಗಿ ಮಾತನಾಡುತ್ತಾರೆ. ದಯವಿಟ್ಟು ಕೆಳಗಿನ ಲೋಕಸಭೆಯ ನಿಯಮಗಳನ್ನು ನೋಡಿ. “ಅಫಿಡವಿಟ್” ಮಾಧ್ಯಮಗಳಿಗೆ ಹೇಗೆ ಸಿಗುತ್ತದೆ? ಇದು ಹೇಗೆ ಸೋರಿಕೆಯಾಗಿದೆ ಎಂಬ ಬಗ್ಗೆ ಅಧ್ಯಕ್ಷರು ಮೊದಲು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

”ಬಿಜೆಪಿ ಏಕೈಕ ಅಜೆಂಡಾ ಎಂದರೆ, ಅದಾನಿಯ ವಿಚಾರದಲ್ಲಿ ನನ್ನ ಬಾಯಿ ಮುಚ್ಚಿಸಲು ನನ್ನನ್ನು ಲೋಕಸಭೆಯಿಂದಲೇ ಹೊರಹಾಕುವುದಾಗಿದೆ” ಎಂದು ಕಿಡಿಕಾರಿದ್ದಾರೆ.

”ಸಿಬಿಐ ಮತ್ತು ನೈತಿಕ ಸಮಿತಿ (ಇದು ಬಿಜೆಪಿ ಸದಸ್ಯರ ಸಂಪೂರ್ಣ ಬಹುಮತವನ್ನು ಹೊಂದಿರುವ ಸಮಿತಿ)  ನನ್ನನ್ನು ಕರೆದರೆ ಮತ್ತು ನನ್ನನ್ನು ಪ್ರಶ್ನಿಸಿದರೆ ನಾನು ಸ್ವಾಗತಿಸುತ್ತೇನೆ. ಅದಾನಿ ನಿರ್ದೇಶನದ ಮಾಧ್ಯಮ ಸರ್ಕಸ್ ವಿಚಾರಣೆಗೆ ಅಥವಾ ಬಿಜೆಪಿ ಟ್ರೋಲ್‌ಗಳಿಗೆ ಉತ್ತರಿಸಲು ನನಗೆ ಸಮಯ ಅಥವಾ ಆಸಕ್ತಿ ಇಲ್ಲ.
ನಾನು ನಾಡಿಯಾದಲ್ಲಿ ದುರ್ಗಾ ಪೂಜೆಯನ್ನು ಆನಂದಿಸುತ್ತಿದ್ದೇನೆ. ಶುಭೋ ಷಷ್ಠಿ” ಎಂದಿದ್ದಾರೆ.

ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಅಫಿಡವಿಟ್‌ ಸೋರಿಕೆ ವಿಚಾರವಾಗಿ ಬಿಜೆಪಿ ಸಂಸದ ವಿರುದ್ಧ ಹರಿಹಾಯ್ದ ಮಹುವಾ ಮೊಯಿತ್ರಾ ಅವರು, ”ತಮ್ಮ PA ಗಳು ಮತ್ತು ಸಂಶೋಧಕರು/ಇಂಟರ್ನ್‌ಗಳು/ಸಿಬ್ಬಂದಿಗಳ ID ಗಳನ್ನು ಪರಿಕ್ಷಿಸಿದರೆ ಅವರು ಯಾವ ಸ್ಥಳದಲ್ಲಿ ಇದ್ದಾರೆ ಎಂಬುದನ್ನು ತೋರಿಸಬಹುದು. ದಯವಿಟ್ಟು ಸಾರ್ವಜನಿಕವಾಗಿ ಸಂಸದರ ಎಲ್ಲಾ ವಿವರಗಳನ್ನು ಬಿಡುಗಡೆ ಮಾಡಲು NICಗೆ ವಿನಂತಿಸುತ್ತೇನೆ. ಸೋರಿಕೆಗಾಗಿ ನಕಲಿ ಪದವಿ ವಾಲಾವನ್ನು ಬಳಸಬೇಡಿ, ಇದೀಗ ಇದನ್ನು ಸಾರ್ವಜನಿಕಗೊಳಿಸಿ” ಎಂದು ಹೇಳಿದ್ದಾರೆ.

ಹೆಸರಿಸದ ವಿದೇಶಿ ಬಂಡವಾಳ ಹೂಡಿಕೆಯನ್ನು ಅದಾನಿ ಷೇರುಗಳಲ್ಲಿದೆ, ಅದರ ಮೂಲವನ್ನು ಸೆಬಿಯು ಕಂಡುಹಿಡಿಯಲಿಲ್ಲ ಮತ್ತು ಮುಂಬೈ ವಿಮಾನ ನಿಲ್ದಾಣವನ್ನು ಖರೀದಿಸಲು ಅದಾನಿ ಗೃಹ ವ್ಯವಹಾರಗಳ ಸಚಿವಾಲಯd ಅನುಮತಿಯನ್ನು ಪಡೆಯುತ್ತಾರೆ.

”ಕ್ಷಮಿಸಿ ಮಿಸ್ಟರ್ ಅದಾನಿ, ಪ್ರತಿಯಾಗಿ ನಾನು ಸುಮ್ಮನಿರಲು ಆರು ತಿಂಗಳವರೆಗೆ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತಿಲ್ಲ. ಹೌದು, ನಾನು ಎರಡನೇ ಒಪ್ಪಂದವನ್ನು ತೆಗೆದುಕೊಳ್ಳುತ್ತಿಲ್ಲ, ಏಕೆಂದರೆ ನನಗೆ ನಿಮ್ಮ ಮೇಲೆ ದಾಳಿ ಮಾಡಲು ಈಗ ಅವಕಾಶವಿದೆ, ಆದರೆ PMಗೆ ಆ ಅವಕಾಶ ಇಲ್ಲ” ಎಂದು ಕುಟುಕಿದ್ದಾರೆ.

”ಅದಾನಿ ಪ್ರಶ್ನೆ ಮಾಡದಿರಲು ಹಣ ನೀಡುತ್ತಿದ್ದರು, ಈಗ ಅವರು ಪ್ರಶ್ನೆಗಳಿಗೆ ನಕಲಿ ನಗದು ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

”ಸಿಬಿಐ ದಾಳಿ ನಡೆಯಲಿರುವ ಬಗ್ಗೆ ಕೂಡ ಸಂದೇಶ ಬಂದಿದೆ. ನಾನು ದುರ್ಗಾ ಪೂಜೆಯಲ್ಲಿ ನಿರತನಾಗಿದ್ದೇನೆ. ಮನೆಗೆ ಬಂದು ನನ್ನ ಜೋಡಿ ಶೂಗಳನ್ನು ಎಣಿಸಲು ನಾನು ಸಿಬಿಐ ಅನ್ನು ಆಹ್ವಾನಿಸುತ್ತೇನೆ. ಆದರೆ ಮೊದಲು ದಯವಿಟ್ಟು ಅದಾನಿ ಭಾರತೀಯರಿಂದ ಕದ್ದ ₹13,000 ಕೋಟಿ ಕಲ್ಲಿದ್ದಲು ಹಣಕ್ಕೆ ಎಫ್‌ಐಆರ್ ದಾಖಲಿಸಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...