Homeಮುಖಪುಟಅಫಿಡವಿಟ್‌ ಸೋರಿಕೆ ವಿಚಾರ: ಕೇಂದ್ರ ಸರ್ಕಾರಕ್ಕೆ ಮಹುವಾ ಮೊಯಿತ್ರಾ ತರಾಟೆ

ಅಫಿಡವಿಟ್‌ ಸೋರಿಕೆ ವಿಚಾರ: ಕೇಂದ್ರ ಸರ್ಕಾರಕ್ಕೆ ಮಹುವಾ ಮೊಯಿತ್ರಾ ತರಾಟೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರು ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಅಫಿಡವಿಟ್‌ ಸೋರಿಕೆ ವಿಚಾರವಾಗಿ ಕೇಂದ್ರ ಸರ್ಕಾರವನ್ನು ತರಾಟೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಎಕ್ಸಾನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ”ನೈತಿಕ ಸಮಿತಿಯ ಅಧ್ಯಕ್ಷರು ಮಾಧ್ಯಮಗಳೊಂದಿಗೆ ಬಹಿರಂಗವಾಗಿ ಮಾತನಾಡುತ್ತಾರೆ. ದಯವಿಟ್ಟು ಕೆಳಗಿನ ಲೋಕಸಭೆಯ ನಿಯಮಗಳನ್ನು ನೋಡಿ. “ಅಫಿಡವಿಟ್” ಮಾಧ್ಯಮಗಳಿಗೆ ಹೇಗೆ ಸಿಗುತ್ತದೆ? ಇದು ಹೇಗೆ ಸೋರಿಕೆಯಾಗಿದೆ ಎಂಬ ಬಗ್ಗೆ ಅಧ್ಯಕ್ಷರು ಮೊದಲು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

”ಬಿಜೆಪಿ ಏಕೈಕ ಅಜೆಂಡಾ ಎಂದರೆ, ಅದಾನಿಯ ವಿಚಾರದಲ್ಲಿ ನನ್ನ ಬಾಯಿ ಮುಚ್ಚಿಸಲು ನನ್ನನ್ನು ಲೋಕಸಭೆಯಿಂದಲೇ ಹೊರಹಾಕುವುದಾಗಿದೆ” ಎಂದು ಕಿಡಿಕಾರಿದ್ದಾರೆ.

”ಸಿಬಿಐ ಮತ್ತು ನೈತಿಕ ಸಮಿತಿ (ಇದು ಬಿಜೆಪಿ ಸದಸ್ಯರ ಸಂಪೂರ್ಣ ಬಹುಮತವನ್ನು ಹೊಂದಿರುವ ಸಮಿತಿ)  ನನ್ನನ್ನು ಕರೆದರೆ ಮತ್ತು ನನ್ನನ್ನು ಪ್ರಶ್ನಿಸಿದರೆ ನಾನು ಸ್ವಾಗತಿಸುತ್ತೇನೆ. ಅದಾನಿ ನಿರ್ದೇಶನದ ಮಾಧ್ಯಮ ಸರ್ಕಸ್ ವಿಚಾರಣೆಗೆ ಅಥವಾ ಬಿಜೆಪಿ ಟ್ರೋಲ್‌ಗಳಿಗೆ ಉತ್ತರಿಸಲು ನನಗೆ ಸಮಯ ಅಥವಾ ಆಸಕ್ತಿ ಇಲ್ಲ.
ನಾನು ನಾಡಿಯಾದಲ್ಲಿ ದುರ್ಗಾ ಪೂಜೆಯನ್ನು ಆನಂದಿಸುತ್ತಿದ್ದೇನೆ. ಶುಭೋ ಷಷ್ಠಿ” ಎಂದಿದ್ದಾರೆ.

ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಅಫಿಡವಿಟ್‌ ಸೋರಿಕೆ ವಿಚಾರವಾಗಿ ಬಿಜೆಪಿ ಸಂಸದ ವಿರುದ್ಧ ಹರಿಹಾಯ್ದ ಮಹುವಾ ಮೊಯಿತ್ರಾ ಅವರು, ”ತಮ್ಮ PA ಗಳು ಮತ್ತು ಸಂಶೋಧಕರು/ಇಂಟರ್ನ್‌ಗಳು/ಸಿಬ್ಬಂದಿಗಳ ID ಗಳನ್ನು ಪರಿಕ್ಷಿಸಿದರೆ ಅವರು ಯಾವ ಸ್ಥಳದಲ್ಲಿ ಇದ್ದಾರೆ ಎಂಬುದನ್ನು ತೋರಿಸಬಹುದು. ದಯವಿಟ್ಟು ಸಾರ್ವಜನಿಕವಾಗಿ ಸಂಸದರ ಎಲ್ಲಾ ವಿವರಗಳನ್ನು ಬಿಡುಗಡೆ ಮಾಡಲು NICಗೆ ವಿನಂತಿಸುತ್ತೇನೆ. ಸೋರಿಕೆಗಾಗಿ ನಕಲಿ ಪದವಿ ವಾಲಾವನ್ನು ಬಳಸಬೇಡಿ, ಇದೀಗ ಇದನ್ನು ಸಾರ್ವಜನಿಕಗೊಳಿಸಿ” ಎಂದು ಹೇಳಿದ್ದಾರೆ.

ಹೆಸರಿಸದ ವಿದೇಶಿ ಬಂಡವಾಳ ಹೂಡಿಕೆಯನ್ನು ಅದಾನಿ ಷೇರುಗಳಲ್ಲಿದೆ, ಅದರ ಮೂಲವನ್ನು ಸೆಬಿಯು ಕಂಡುಹಿಡಿಯಲಿಲ್ಲ ಮತ್ತು ಮುಂಬೈ ವಿಮಾನ ನಿಲ್ದಾಣವನ್ನು ಖರೀದಿಸಲು ಅದಾನಿ ಗೃಹ ವ್ಯವಹಾರಗಳ ಸಚಿವಾಲಯd ಅನುಮತಿಯನ್ನು ಪಡೆಯುತ್ತಾರೆ.

”ಕ್ಷಮಿಸಿ ಮಿಸ್ಟರ್ ಅದಾನಿ, ಪ್ರತಿಯಾಗಿ ನಾನು ಸುಮ್ಮನಿರಲು ಆರು ತಿಂಗಳವರೆಗೆ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತಿಲ್ಲ. ಹೌದು, ನಾನು ಎರಡನೇ ಒಪ್ಪಂದವನ್ನು ತೆಗೆದುಕೊಳ್ಳುತ್ತಿಲ್ಲ, ಏಕೆಂದರೆ ನನಗೆ ನಿಮ್ಮ ಮೇಲೆ ದಾಳಿ ಮಾಡಲು ಈಗ ಅವಕಾಶವಿದೆ, ಆದರೆ PMಗೆ ಆ ಅವಕಾಶ ಇಲ್ಲ” ಎಂದು ಕುಟುಕಿದ್ದಾರೆ.

”ಅದಾನಿ ಪ್ರಶ್ನೆ ಮಾಡದಿರಲು ಹಣ ನೀಡುತ್ತಿದ್ದರು, ಈಗ ಅವರು ಪ್ರಶ್ನೆಗಳಿಗೆ ನಕಲಿ ನಗದು ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

”ಸಿಬಿಐ ದಾಳಿ ನಡೆಯಲಿರುವ ಬಗ್ಗೆ ಕೂಡ ಸಂದೇಶ ಬಂದಿದೆ. ನಾನು ದುರ್ಗಾ ಪೂಜೆಯಲ್ಲಿ ನಿರತನಾಗಿದ್ದೇನೆ. ಮನೆಗೆ ಬಂದು ನನ್ನ ಜೋಡಿ ಶೂಗಳನ್ನು ಎಣಿಸಲು ನಾನು ಸಿಬಿಐ ಅನ್ನು ಆಹ್ವಾನಿಸುತ್ತೇನೆ. ಆದರೆ ಮೊದಲು ದಯವಿಟ್ಟು ಅದಾನಿ ಭಾರತೀಯರಿಂದ ಕದ್ದ ₹13,000 ಕೋಟಿ ಕಲ್ಲಿದ್ದಲು ಹಣಕ್ಕೆ ಎಫ್‌ಐಆರ್ ದಾಖಲಿಸಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....