Homeಮುಖಪುಟಅಫಿಡವಿಟ್‌ ಸೋರಿಕೆ ವಿಚಾರ: ಕೇಂದ್ರ ಸರ್ಕಾರಕ್ಕೆ ಮಹುವಾ ಮೊಯಿತ್ರಾ ತರಾಟೆ

ಅಫಿಡವಿಟ್‌ ಸೋರಿಕೆ ವಿಚಾರ: ಕೇಂದ್ರ ಸರ್ಕಾರಕ್ಕೆ ಮಹುವಾ ಮೊಯಿತ್ರಾ ತರಾಟೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರು ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಅಫಿಡವಿಟ್‌ ಸೋರಿಕೆ ವಿಚಾರವಾಗಿ ಕೇಂದ್ರ ಸರ್ಕಾರವನ್ನು ತರಾಟೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಎಕ್ಸಾನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ”ನೈತಿಕ ಸಮಿತಿಯ ಅಧ್ಯಕ್ಷರು ಮಾಧ್ಯಮಗಳೊಂದಿಗೆ ಬಹಿರಂಗವಾಗಿ ಮಾತನಾಡುತ್ತಾರೆ. ದಯವಿಟ್ಟು ಕೆಳಗಿನ ಲೋಕಸಭೆಯ ನಿಯಮಗಳನ್ನು ನೋಡಿ. “ಅಫಿಡವಿಟ್” ಮಾಧ್ಯಮಗಳಿಗೆ ಹೇಗೆ ಸಿಗುತ್ತದೆ? ಇದು ಹೇಗೆ ಸೋರಿಕೆಯಾಗಿದೆ ಎಂಬ ಬಗ್ಗೆ ಅಧ್ಯಕ್ಷರು ಮೊದಲು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

”ಬಿಜೆಪಿ ಏಕೈಕ ಅಜೆಂಡಾ ಎಂದರೆ, ಅದಾನಿಯ ವಿಚಾರದಲ್ಲಿ ನನ್ನ ಬಾಯಿ ಮುಚ್ಚಿಸಲು ನನ್ನನ್ನು ಲೋಕಸಭೆಯಿಂದಲೇ ಹೊರಹಾಕುವುದಾಗಿದೆ” ಎಂದು ಕಿಡಿಕಾರಿದ್ದಾರೆ.

”ಸಿಬಿಐ ಮತ್ತು ನೈತಿಕ ಸಮಿತಿ (ಇದು ಬಿಜೆಪಿ ಸದಸ್ಯರ ಸಂಪೂರ್ಣ ಬಹುಮತವನ್ನು ಹೊಂದಿರುವ ಸಮಿತಿ)  ನನ್ನನ್ನು ಕರೆದರೆ ಮತ್ತು ನನ್ನನ್ನು ಪ್ರಶ್ನಿಸಿದರೆ ನಾನು ಸ್ವಾಗತಿಸುತ್ತೇನೆ. ಅದಾನಿ ನಿರ್ದೇಶನದ ಮಾಧ್ಯಮ ಸರ್ಕಸ್ ವಿಚಾರಣೆಗೆ ಅಥವಾ ಬಿಜೆಪಿ ಟ್ರೋಲ್‌ಗಳಿಗೆ ಉತ್ತರಿಸಲು ನನಗೆ ಸಮಯ ಅಥವಾ ಆಸಕ್ತಿ ಇಲ್ಲ.
ನಾನು ನಾಡಿಯಾದಲ್ಲಿ ದುರ್ಗಾ ಪೂಜೆಯನ್ನು ಆನಂದಿಸುತ್ತಿದ್ದೇನೆ. ಶುಭೋ ಷಷ್ಠಿ” ಎಂದಿದ್ದಾರೆ.

ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಅಫಿಡವಿಟ್‌ ಸೋರಿಕೆ ವಿಚಾರವಾಗಿ ಬಿಜೆಪಿ ಸಂಸದ ವಿರುದ್ಧ ಹರಿಹಾಯ್ದ ಮಹುವಾ ಮೊಯಿತ್ರಾ ಅವರು, ”ತಮ್ಮ PA ಗಳು ಮತ್ತು ಸಂಶೋಧಕರು/ಇಂಟರ್ನ್‌ಗಳು/ಸಿಬ್ಬಂದಿಗಳ ID ಗಳನ್ನು ಪರಿಕ್ಷಿಸಿದರೆ ಅವರು ಯಾವ ಸ್ಥಳದಲ್ಲಿ ಇದ್ದಾರೆ ಎಂಬುದನ್ನು ತೋರಿಸಬಹುದು. ದಯವಿಟ್ಟು ಸಾರ್ವಜನಿಕವಾಗಿ ಸಂಸದರ ಎಲ್ಲಾ ವಿವರಗಳನ್ನು ಬಿಡುಗಡೆ ಮಾಡಲು NICಗೆ ವಿನಂತಿಸುತ್ತೇನೆ. ಸೋರಿಕೆಗಾಗಿ ನಕಲಿ ಪದವಿ ವಾಲಾವನ್ನು ಬಳಸಬೇಡಿ, ಇದೀಗ ಇದನ್ನು ಸಾರ್ವಜನಿಕಗೊಳಿಸಿ” ಎಂದು ಹೇಳಿದ್ದಾರೆ.

ಹೆಸರಿಸದ ವಿದೇಶಿ ಬಂಡವಾಳ ಹೂಡಿಕೆಯನ್ನು ಅದಾನಿ ಷೇರುಗಳಲ್ಲಿದೆ, ಅದರ ಮೂಲವನ್ನು ಸೆಬಿಯು ಕಂಡುಹಿಡಿಯಲಿಲ್ಲ ಮತ್ತು ಮುಂಬೈ ವಿಮಾನ ನಿಲ್ದಾಣವನ್ನು ಖರೀದಿಸಲು ಅದಾನಿ ಗೃಹ ವ್ಯವಹಾರಗಳ ಸಚಿವಾಲಯd ಅನುಮತಿಯನ್ನು ಪಡೆಯುತ್ತಾರೆ.

”ಕ್ಷಮಿಸಿ ಮಿಸ್ಟರ್ ಅದಾನಿ, ಪ್ರತಿಯಾಗಿ ನಾನು ಸುಮ್ಮನಿರಲು ಆರು ತಿಂಗಳವರೆಗೆ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತಿಲ್ಲ. ಹೌದು, ನಾನು ಎರಡನೇ ಒಪ್ಪಂದವನ್ನು ತೆಗೆದುಕೊಳ್ಳುತ್ತಿಲ್ಲ, ಏಕೆಂದರೆ ನನಗೆ ನಿಮ್ಮ ಮೇಲೆ ದಾಳಿ ಮಾಡಲು ಈಗ ಅವಕಾಶವಿದೆ, ಆದರೆ PMಗೆ ಆ ಅವಕಾಶ ಇಲ್ಲ” ಎಂದು ಕುಟುಕಿದ್ದಾರೆ.

”ಅದಾನಿ ಪ್ರಶ್ನೆ ಮಾಡದಿರಲು ಹಣ ನೀಡುತ್ತಿದ್ದರು, ಈಗ ಅವರು ಪ್ರಶ್ನೆಗಳಿಗೆ ನಕಲಿ ನಗದು ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

”ಸಿಬಿಐ ದಾಳಿ ನಡೆಯಲಿರುವ ಬಗ್ಗೆ ಕೂಡ ಸಂದೇಶ ಬಂದಿದೆ. ನಾನು ದುರ್ಗಾ ಪೂಜೆಯಲ್ಲಿ ನಿರತನಾಗಿದ್ದೇನೆ. ಮನೆಗೆ ಬಂದು ನನ್ನ ಜೋಡಿ ಶೂಗಳನ್ನು ಎಣಿಸಲು ನಾನು ಸಿಬಿಐ ಅನ್ನು ಆಹ್ವಾನಿಸುತ್ತೇನೆ. ಆದರೆ ಮೊದಲು ದಯವಿಟ್ಟು ಅದಾನಿ ಭಾರತೀಯರಿಂದ ಕದ್ದ ₹13,000 ಕೋಟಿ ಕಲ್ಲಿದ್ದಲು ಹಣಕ್ಕೆ ಎಫ್‌ಐಆರ್ ದಾಖಲಿಸಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...