Homeಅಂತರಾಷ್ಟ್ರೀಯಹಿಂದೆ 600 ಕೋಟಿ ಡಾಲರ್ ಬಜೆಟ್‌ ಮಂಡಿಸಿದ್ದ ಅಫ್ಘಾನ್‌ ಸಚಿವ, ಈಗ ಅಮೆರಿಕಾದಲ್ಲಿ ‘ಉಬರ್‌’ ಡ್ರೈವರ್‌‌!

ಹಿಂದೆ 600 ಕೋಟಿ ಡಾಲರ್ ಬಜೆಟ್‌ ಮಂಡಿಸಿದ್ದ ಅಫ್ಘಾನ್‌ ಸಚಿವ, ಈಗ ಅಮೆರಿಕಾದಲ್ಲಿ ‘ಉಬರ್‌’ ಡ್ರೈವರ್‌‌!

- Advertisement -
- Advertisement -

ಈ ಹಿಂದೆ ಅಫ್ಘಾನಿಸ್ತಾನದ ಹಣಕಾಸು ಸಚಿವರಾಗಿ 600 ಕೋಟಿ ಡಾಲರ್ ಬಜೆಟ್‌ ಅನ್ನು ಮಂಡಿಸಿದ್ದ ಖಾಲಿದ್ ಪಯೆಂಡಾ ಅವರು ತಮ್ಮ ಕುಟುಂಬದ ನಿರ್ವಹಣೆಗಾಗಿ ಅಮೆರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ಉಬರ್ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ವರದಿಯಾಗಿದೆ. ವಾಷಿಂಗ್ಟನ್ ಪೋಸ್ಟ್‌ ಪತ್ರಿಕೆಯೊಂದಿಗೆ ಮಾತನಾಡಿದ ಅವರು ‘‘ಆರು ಗಂಟೆಗಳ ಕೆಲಸ ಮಾಡಿ 150 ಡಾಲರ್‌ಗಳಿಗಿಂತ ಸ್ವಲ್ಪ ಹೆಚ್ಚು ಗಳಿಸುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

ಅಫ್ಘಾನಿಸ್ತಾನವು ಪ್ರಸ್ತುತ ಆರ್ಥಿಕ ಮತ್ತು ಮಾನವೀಯ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಅಮೆರಿಕಾ ಬೆಂಬಲಿತ ಆಡಳಿತವನ್ನು ಉರುಳಿಸಿದ ತಾಲಿಬಾನ್ ಸರ್ಕಾರವನ್ನು ಗುರುತಿಸಲು ಪ್ರಪಂಚದಾದ್ಯಂತದ ಅನೇಕ ದೇಶಗಳು ಹಿಂಜರಿಯುತ್ತಿವೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ತಾಲಿಬಾನ್‌ಗೆ ಥ್ಯಾಂಕ್ಸ್‌ ಹೇಳಿದ ಈ ಟ್ವಿಟರ್‌ ಅಕೌಂಟ್‌ ದಿಟ್ಟ ವಿದ್ಯಾರ್ಥಿನಿ ಮುಸ್ಕಾನ್‌ ಅವರದ್ದಲ್ಲ, ಅದು ನಕಲಿ

ದೇಶದ ಈ ಹಿಂದಿನ ಪ್ರಧಾನಿ ಅಶ್ರಫ್ ಘನಿ ಅವರೊಂದಿಗಿನ ಸಂಬಂಧ ಹಳಸಿದ ಕಾರಣ, ತಾಲಿಬಾನ್ ರಾಜಧಾನಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಒಂದು ವಾರದ ಮೊದಲು ಪಯೆಂಡಾ ಅವರು ದೇಶದ ಹಣಕಾಸು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಕಳೆದ ಆಗಸ್ಟ್‌ 10 ರಂದು ಮತ್ತೆ ಟ್ವೀಟ್ ಮಾಡಿದ್ದ ಅವರು, “ಇಂದು ನಾನು ಹಂಗಾಮಿ ಹಣಕಾಸು ಸಚಿವ ಸ್ಥಾನದಿಂದ ಕೆಳಗಿಳಿದಿದ್ದೇನೆ. ಹಣಕಾಸು ಸಚಿವಾಲಯವನ್ನು ಮುನ್ನಡೆಸಿದ್ದು ನನ್ನ ಜೀವನದ ಶ್ರೇಷ್ಠ ಗೌರವವಾಗಿದೆ. ಆದರೆ ವೈಯಕ್ತಿಕ ಕಾರಣಗಳಿಗಾಗಿ ಈ ಸ್ಥಾನದಿಂದ ಕೆಳಗಿಳಿಯುತ್ತಿದ್ದೇನೆ” ಎಂದು ಹೇಳಿದ್ದರು.

ತಾಲಿಬಾನ್‌ ಸರ್ಕಾರದಿಂದ ಬಂಧನಕ್ಕೊಳಗಾಗುವ ಭಯದಿಂದ ಅವರು ಅಫ್ಘಾನಿಸ್ತಾನವನ್ನು ತೊರೆದು, ಅಮೆರಿಕಾಕ್ಕೆ ತೆರಳಿ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದರು. ವಾಷಿಂಗ್ಟನ್ ಪೋಸ್ಟ್‌ ಮಾಡಿದ ಸಂದರ್ಶನದಲ್ಲಿ, “ಈ ಪ್ರಯಾಣಕ್ಕೆ ‘ಸಾಕಷ್ಟು ಹೊಂದಾಣಿಕೆ’ ಮಾಡಿಕೊಂಡಿದ್ದೇನೆ. ಆದರೆ ನನ್ನ ಕುಟುಂಬದ ನಿರ್ವಹಣೆಗಾಗಿ ಇದನ್ನು ಖುಷಿಯಿಂದ ಮಾಡುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿಗೆ ತಾನು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾವನ್ನು ದೂಷಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಅಮೆರಿಕಾ ತನ್ನ ಸೈನ್ಯವನ್ನು ಹಿಂತೆಗೆದುಕೊಂಡಿದ್ದರಿಂದ ದೇಶವನ್ನು ತಾಲಿಬಾನ್ ಸ್ವಾಧೀನಪಡಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಚೀನಾ ಮತ್ತು ತಾಲಿಬಾನ್‌ಗೆ ಹೆದರಿದ್ದಾಯಿತು, ಮುಂದೆ ಮಾಲ್ಡೀವ್‌?: BJP ಸಂಸದ ಸುಬ್ರಮಣಿಯನ್‌ ಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...