Homeಅಂತರಾಷ್ಟ್ರೀಯಅಫ್ಘಾನ್: ಯಾರೊಂದಿಗೂ ದ್ವೇಷವಿಲ್ಲ, ಎಲ್ಲರಿಗೂ ಕ್ಷಮೆ ನೀಡಿದ್ದೇವೆ - ತಾಲಿಬಾನ್‌

ಅಫ್ಘಾನ್: ಯಾರೊಂದಿಗೂ ದ್ವೇಷವಿಲ್ಲ, ಎಲ್ಲರಿಗೂ ಕ್ಷಮೆ ನೀಡಿದ್ದೇವೆ – ತಾಲಿಬಾನ್‌

- Advertisement -
- Advertisement -

ವಿದೇಶಿ ರಾಯಭಾರ ಕಚೇರಿಗಳ ಭದ್ರತೆಯು ತಾಲಿಬಾನ್‌ಗೆ ಮುಖ್ಯವಾಗಿದ್ದು, ಅವರು ಸಂಪೂರ್ಣವಾಗಿ ಸುರಕ್ಷಿತವಾಗಿರುತ್ತಾರೆ ಎಂದು ತಾಲಿಬಾನ್‌ ವಕ್ತಾರ ಜಬೀಹುಲ್ಲಾ ಮುಜಾಹಿದ್ ಹೇಳಿದ್ದಾರೆ. ತಾಲಿಬಾನ್‌‌ ಅಫಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ಎರಡು ದಿನಗಳ ನಂತರ ಮಂಗಳವಾರದಂದು ಕಾಬೂಲ್‌ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಇದನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಾಲಿಬಾನಿಗಳು ಯಾರೊಂದಿಗೂ ದ್ವೇಷವನ್ನು ಹೊಂದಿಲ್ಲ ಮತ್ತು ತಮ್ಮ ನಾಯಕನ ಆದೇಶದ ಮೇರೆಗೆ ಅವರು ಎಲ್ಲರಿಗೂ ಕ್ಷಮೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ ಎಂದು ಟೊಲೊನ್ಯೂಸ್ ವರದಿ ಮಾಡಿದೆ.

ಇದನ್ನೂ ಓದಿ: ಅಫ್ಘಾನ್ ಪತನ: ಕಾಬೂಲ್‌ನಿಂ‌ದ ಭಾರತೀಯ ರಾಯಭಾರ ಕಚೇರಿ ಸ್ಥಳಾಂತರ

ಅಫ್ಘಾನಿಸ್ತಾನದಿಂದ ಯಾವುದೇ ಅಪಾಯವಿಲ್ಲ ಎಂದು ‘ಇಸ್ಲಾಮಿಕ್ ಎಮಿರೇಟ್’ ಜಗತ್ತಿನ ಎಲ್ಲ ದೇಶಗಳಿಗೆ ಪ್ರತಿಜ್ಞೆ ಮಾಡುತ್ತಿದೆ ಎಂದು ಮುಜಾಹಿದ್ ಹೇಳಿದ್ದಾರೆ. ಅಫ್ಘಾನಿಸ್ತಾನದ ಆರ್ಥಿಕತೆ ಮತ್ತು ಜನ ಜೀವನೋಪಾಯದಲ್ಲಿ ಸುಧಾರಣೆಯಾಗಲಿದೆ ಎಂದು ತಿಳಿಸಿದ್ದಾರೆ.

ಮಂಗಳವಾರ ಮುಂಜಾನೆ, ತಾಲಿಬಾನ್ ಸರ್ಕಾರಿ ಅಧಿಕಾರಿಗಳಿಗೆ ‘ಸಾಮಾನ್ಯ ಕ್ಷಮಾದಾನ’ ಘೋಷಿಸಿದ್ದು, ಅವರನ್ನು ಕೆಲಸಕ್ಕೆ ಮರಳುವಂತೆ ಒತ್ತಾಯಿಸಿದೆ ಎಂದು ವರದಿಯಾಗಿದೆ. ಅಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ ದೇಶದಿಂದ ಪಲಾಯನ ಮಾಡಿದ ನಂತರ, ಬಂಡುಕೋರರು 20 ವರ್ಷಗಳ ಯುದ್ಧವನ್ನು ಗೆದ್ದಿದ್ದಾರೆ ಎಂದು ಘೋಷಿಸಿದ್ದಾರೆ. ಪ್ರಸ್ತುತ ದೇಶವು ತಾಲಿಬಾನ್‌ ನಿಯಂತ್ರಣದಲ್ಲಿದೆ.

ಇದನ್ನೂ ಓದಿ: ಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

ಭಾರತವು ಇ-ಎಮರ್ಜೆನ್ಸಿ ಎಕ್ಸ್-ಮಿಸ್ಕ್ ವೀಸಾ ಎಂಬ ಹೊಸ ವರ್ಗದ ಎಲೆಕ್ಟ್ರಾನಿಕ್ ವೀಸಾವನ್ನು ಪರಿಚಯಿಸಿದ್ದು, ಇದು ದೇಶಕ್ಕೆ ಪ್ರವೇಶಿಸುವ ವೀಸಾ ಅರ್ಜಿಗಳನ್ನು ತ್ವರಿತಗತಿಯಲ್ಲಿ ಪರಿಣಿಸಲಿದೆ.

ಅಫ್ಘಾನಿಸ್ತಾನದಲ್ಲಿ ಅಮೆರಿಕವು ಅಶಾಂತಿ, ವಿಭಜನೆ ಮತ್ತು ಒಡೆದ ಕುಟುಂಬಗಳ ಭೀಕರ ಅವ್ಯವಸ್ಥೆಯನ್ನು ಬಿಟ್ಟಿದೆ ಎಂದು ಚೀನಾ ಹೇಳಿದೆ.

ಭಾನುವಾರವಷ್ಟೇ, ತಾಲಿಬಾನ್ ಕಮಾಂಡರ್‌ಗಳು ತಾವು ಅಫ್ಘಾನ್ ಅಧ್ಯಕ್ಷರ ಅರಮನೆಯ ನಿಯಂತ್ರಣವನ್ನು ಪಡೆದುಕೊಂಡಿದ್ದೇವೆ ಎಂದು ಘೋಷಿಸಿದ್ದರು. ಮೇ 1 ರಂದು ಬಹುಪಾಲು ಅಮೆರಿಕಾ ಸೈನ್ಯವನ್ನು ಹಿಂತೆಗೆದುಕೊಂಡ ನಂತರ, ತಾಲಿಬಾನ್ ಅಫ್ಘಾನ್‌ ಅನ್ನು ಶೀಘ್ರವಾಗಿ ಆವರಿಸಿ, ರಾಜಧಾನಿಯನ್ನು ವಶಪಡಿಸಿಕೊಂಡಿತು.

ಇದನ್ನೂ ಓದಿ: ಅಫ್ಘಾನ್‌‌ ಪತನ: ನೆರೆ ದೇಶಗಳಿಗೆ ಸಂಬಂಧಿಸಿದ ವಿದೇಶಾಂಗ ನೀತಿಯನ್ನು ಪರಿಶೀಲಿಸಬೇಕು – ಶರದ್ ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...