Homeಅಂತರಾಷ್ಟ್ರೀಯಅಫ್ಘಾನ್: ಯಾರೊಂದಿಗೂ ದ್ವೇಷವಿಲ್ಲ, ಎಲ್ಲರಿಗೂ ಕ್ಷಮೆ ನೀಡಿದ್ದೇವೆ - ತಾಲಿಬಾನ್‌

ಅಫ್ಘಾನ್: ಯಾರೊಂದಿಗೂ ದ್ವೇಷವಿಲ್ಲ, ಎಲ್ಲರಿಗೂ ಕ್ಷಮೆ ನೀಡಿದ್ದೇವೆ – ತಾಲಿಬಾನ್‌

- Advertisement -
- Advertisement -

ವಿದೇಶಿ ರಾಯಭಾರ ಕಚೇರಿಗಳ ಭದ್ರತೆಯು ತಾಲಿಬಾನ್‌ಗೆ ಮುಖ್ಯವಾಗಿದ್ದು, ಅವರು ಸಂಪೂರ್ಣವಾಗಿ ಸುರಕ್ಷಿತವಾಗಿರುತ್ತಾರೆ ಎಂದು ತಾಲಿಬಾನ್‌ ವಕ್ತಾರ ಜಬೀಹುಲ್ಲಾ ಮುಜಾಹಿದ್ ಹೇಳಿದ್ದಾರೆ. ತಾಲಿಬಾನ್‌‌ ಅಫಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ಎರಡು ದಿನಗಳ ನಂತರ ಮಂಗಳವಾರದಂದು ಕಾಬೂಲ್‌ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಇದನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಾಲಿಬಾನಿಗಳು ಯಾರೊಂದಿಗೂ ದ್ವೇಷವನ್ನು ಹೊಂದಿಲ್ಲ ಮತ್ತು ತಮ್ಮ ನಾಯಕನ ಆದೇಶದ ಮೇರೆಗೆ ಅವರು ಎಲ್ಲರಿಗೂ ಕ್ಷಮೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ ಎಂದು ಟೊಲೊನ್ಯೂಸ್ ವರದಿ ಮಾಡಿದೆ.

ಇದನ್ನೂ ಓದಿ: ಅಫ್ಘಾನ್ ಪತನ: ಕಾಬೂಲ್‌ನಿಂ‌ದ ಭಾರತೀಯ ರಾಯಭಾರ ಕಚೇರಿ ಸ್ಥಳಾಂತರ

ಅಫ್ಘಾನಿಸ್ತಾನದಿಂದ ಯಾವುದೇ ಅಪಾಯವಿಲ್ಲ ಎಂದು ‘ಇಸ್ಲಾಮಿಕ್ ಎಮಿರೇಟ್’ ಜಗತ್ತಿನ ಎಲ್ಲ ದೇಶಗಳಿಗೆ ಪ್ರತಿಜ್ಞೆ ಮಾಡುತ್ತಿದೆ ಎಂದು ಮುಜಾಹಿದ್ ಹೇಳಿದ್ದಾರೆ. ಅಫ್ಘಾನಿಸ್ತಾನದ ಆರ್ಥಿಕತೆ ಮತ್ತು ಜನ ಜೀವನೋಪಾಯದಲ್ಲಿ ಸುಧಾರಣೆಯಾಗಲಿದೆ ಎಂದು ತಿಳಿಸಿದ್ದಾರೆ.

ಮಂಗಳವಾರ ಮುಂಜಾನೆ, ತಾಲಿಬಾನ್ ಸರ್ಕಾರಿ ಅಧಿಕಾರಿಗಳಿಗೆ ‘ಸಾಮಾನ್ಯ ಕ್ಷಮಾದಾನ’ ಘೋಷಿಸಿದ್ದು, ಅವರನ್ನು ಕೆಲಸಕ್ಕೆ ಮರಳುವಂತೆ ಒತ್ತಾಯಿಸಿದೆ ಎಂದು ವರದಿಯಾಗಿದೆ. ಅಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ ದೇಶದಿಂದ ಪಲಾಯನ ಮಾಡಿದ ನಂತರ, ಬಂಡುಕೋರರು 20 ವರ್ಷಗಳ ಯುದ್ಧವನ್ನು ಗೆದ್ದಿದ್ದಾರೆ ಎಂದು ಘೋಷಿಸಿದ್ದಾರೆ. ಪ್ರಸ್ತುತ ದೇಶವು ತಾಲಿಬಾನ್‌ ನಿಯಂತ್ರಣದಲ್ಲಿದೆ.

ಇದನ್ನೂ ಓದಿ: ಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

ಭಾರತವು ಇ-ಎಮರ್ಜೆನ್ಸಿ ಎಕ್ಸ್-ಮಿಸ್ಕ್ ವೀಸಾ ಎಂಬ ಹೊಸ ವರ್ಗದ ಎಲೆಕ್ಟ್ರಾನಿಕ್ ವೀಸಾವನ್ನು ಪರಿಚಯಿಸಿದ್ದು, ಇದು ದೇಶಕ್ಕೆ ಪ್ರವೇಶಿಸುವ ವೀಸಾ ಅರ್ಜಿಗಳನ್ನು ತ್ವರಿತಗತಿಯಲ್ಲಿ ಪರಿಣಿಸಲಿದೆ.

ಅಫ್ಘಾನಿಸ್ತಾನದಲ್ಲಿ ಅಮೆರಿಕವು ಅಶಾಂತಿ, ವಿಭಜನೆ ಮತ್ತು ಒಡೆದ ಕುಟುಂಬಗಳ ಭೀಕರ ಅವ್ಯವಸ್ಥೆಯನ್ನು ಬಿಟ್ಟಿದೆ ಎಂದು ಚೀನಾ ಹೇಳಿದೆ.

ಭಾನುವಾರವಷ್ಟೇ, ತಾಲಿಬಾನ್ ಕಮಾಂಡರ್‌ಗಳು ತಾವು ಅಫ್ಘಾನ್ ಅಧ್ಯಕ್ಷರ ಅರಮನೆಯ ನಿಯಂತ್ರಣವನ್ನು ಪಡೆದುಕೊಂಡಿದ್ದೇವೆ ಎಂದು ಘೋಷಿಸಿದ್ದರು. ಮೇ 1 ರಂದು ಬಹುಪಾಲು ಅಮೆರಿಕಾ ಸೈನ್ಯವನ್ನು ಹಿಂತೆಗೆದುಕೊಂಡ ನಂತರ, ತಾಲಿಬಾನ್ ಅಫ್ಘಾನ್‌ ಅನ್ನು ಶೀಘ್ರವಾಗಿ ಆವರಿಸಿ, ರಾಜಧಾನಿಯನ್ನು ವಶಪಡಿಸಿಕೊಂಡಿತು.

ಇದನ್ನೂ ಓದಿ: ಅಫ್ಘಾನ್‌‌ ಪತನ: ನೆರೆ ದೇಶಗಳಿಗೆ ಸಂಬಂಧಿಸಿದ ವಿದೇಶಾಂಗ ನೀತಿಯನ್ನು ಪರಿಶೀಲಿಸಬೇಕು – ಶರದ್ ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...