Homeಅಂತರಾಷ್ಟ್ರೀಯಅಫ್ಘಾನ್ ಮಹಿಳೆಯರ ಪ್ರತಿಭಟನೆ ವರದಿ ಮಾಡಿದ ಪತ್ರಕರ್ತರ ಮೇಲೆ ತಾಲಿಬಾನ್‌ನಿಂದ ಹಲ್ಲೆ

ಅಫ್ಘಾನ್ ಮಹಿಳೆಯರ ಪ್ರತಿಭಟನೆ ವರದಿ ಮಾಡಿದ ಪತ್ರಕರ್ತರ ಮೇಲೆ ತಾಲಿಬಾನ್‌ನಿಂದ ಹಲ್ಲೆ

- Advertisement -
- Advertisement -

ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳ ವಿರುದ್ಧ, ಶಿಕ್ಷಣ ಮತ್ತು ಉದ್ಯೋಗದ ಹಕ್ಕಿಗಾಗಿ ಮಹಿಳೆಯರು ನಡೆಸಿದ ಪ್ರತಿಭಟನೆಯನ್ನು ವರದಿ ಮಾಡಿದ ಪತ್ರಕರ್ತರ ಮೇಲೆ ತಾಲಿಬಾನಿಗಳು ಹಲ್ಲೆ ನಡೆಸಿ, ಚಿತ್ರಹಿಂಸೆ ನೀಡಿದ್ದಾರೆ ಎಂದು ಸುದ್ದಿಸಂಸ್ಥೆಗಳು ಆರೋಪಿಸಿವೆ.

ತೀವ್ರತರದ ಗಾಯಗಳಿಂದ ಬಳಲುತ್ತಿರುವ ಪತ್ರಕರ್ತರ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ತಾಲಿಬಾನ್ ತನ್ನ ಸರ್ಕಾರವನ್ನು ಘೋಷಿಸಿಕೊಂಡ ಬಳಿಕ ಇಂತಹ ಚಿತ್ರಗಳು ಹೊರ ಬಂದಿದ್ದು, ತಾಲಿಬಾನ್ ಆಡಳಿತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸಂಶಯ ವ್ಯಕ್ತವಾಗಿದೆ.

ಅಫ್ಘಾನಿಸ್ತಾನದಲ್ಲಿ ಪತ್ರಕರ್ತರ ಮೇಲೆ ನಡೆದ ದೌರ್ಜನ್ಯ ಬಗ್ಗೆ ಲಾಸ್ ಏಂಜಲೀಸ್ ಟೈಮ್ಸ್ ವಿದೇಶಿ ವರದಿಗಾರ ಮಾರ್ಕಸ್ ಯಾಮ್ ಮತ್ತು ಅಫ್ಘಾನ್ ಸುದ್ದಿಸಂಸ್ಥೆ ಎಟಿಲಾಟ್ರೋಜ್ (Etilaatroz) ತಮ್ಮ ಅಧೀಕೃತ ಟ್ವಿಟರ್‌ ಖಾತೆಗಳಿಂದ ಗಾಯಗೊಂಡಿರುವ ಪತ್ರಕರ್ತರ ಫೋಟೊವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಅಫ್ಘಾನ್: ಪತ್ರಕರ್ತರನ್ನು ಹುಡುಕುವಾಗ ಸಂಬಂಧಿಯನ್ನು ಕೊಂದ ತಾಲಿಬಾನಿಗಳು

ಅಫ್ಘಾನ್ ಸುದ್ದಿಸಂಸ್ಥೆ ಎಟಿಲಾಟ್ರೋಜ್, ಟಾಕಿ ದಾರ್ಯಾಬಿ ಮತ್ತು ನೇಮತ್‌ಉಲ್ಲಾ ನಖ್ದಿ ಎಂಬ ಇಬ್ಬರು ತಮ್ಮ ಸಂಸ್ಥೆಯ ಪತ್ರಕರ್ತರಾಗಿದ್ದು, ಪತ್ರಕರ್ತರನ್ನು ತಾಲಿಬಾನಿಗಳು ಬಂಧಿಸಿ, ಇಬ್ಬರ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಟ್ವೀಟ್ ಮಾಡಿದೆ.

ಟಾಕಿ ದಾರ್ಯಾಬಿ ಮತ್ತು ನೇಮತ್‌ಉಲ್ಲಾ ನಖ್ದಿ ಇಬ್ಬರು, ನಿನ್ನೆ ಪಶ್ಚಿಮ ಕಾಬೂಲ್‌ನ ಕಾರ್ಟ್ -ಇ -ಚಾರ್ ಪ್ರದೇಶದಲ್ಲಿ ಮಹಿಳೆಯರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದಾಗ ಅವರನ್ನು ತಾಲಿಬಾನ್‌ಗಳು ಅಪಹರಿಸಿದ್ದರು. ಬಳಿಕ ಅವರನ್ನು ಹೊಡೆದು ಹಿಂಸಿಸಲಾಗಿದೆ ಎಂದು ಎಟಿಲಾಟ್ರೋಜ್ ಹೇಳಿದೆ.

ಅಫ್ಘಾನ್ ಮಹಿಳೆಯರು ಶಿಕ್ಷಣ ಮತ್ತು ಕೆಲಸದ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇವರ ಚಿತ್ರಗಳನ್ನು ತೆಗೆಯಲು ಆರಂಭಿಸಿದ ತಕ್ಷಣ ತಾಲಿಬಾನಿಗಳು ನಮ್ಮನ್ನು ಬಂಧಿಸಿದರು ಎಂದು ಪತ್ರಕರ್ತರು ತಿಳಿಸಿದ್ದಾರೆ.

ಲಾಸ್ ಏಂಜಲೀಸ್ ಟೈಮ್ಸ್ ವಿದೇಶಿ ವರದಿಗಾರ ಮಾರ್ಕಸ್ ಯಾಮ್ ಕೂಡ ಟ್ವೀಟ್ ಮಾಡಿ, ಅಫ್ಘಾನಿಸ್ತಾನದಲ್ಲಿ ಮಹಿಳಾ ರ್‍ಯಾಲಿಯ ಬಗ್ಗೆ ವರದಿ ಮಾಡಿದಕ್ಕಾಗಿ ಎಟಿಲಾಟ್ರೋಜ್‌ದ ಪತ್ರಕರ್ತರಾದ ಟಾಕಿ ದಾರ್ಯಾಬಿ ಮತ್ತು ನೇಮತ್‌ಉಲ್ಲಾ ನಖ್ದಿ ಅವರನ್ನು ಬಂಧಿಸಿ, ತಾಲಿಬಾನ್ ಚಿತ್ರಹಿಂಸೆ ನೀಡಿದೆ ಎಂದಿದ್ದಾರೆ.

ಲಾಸ್ ಏಂಜಲೀಸ್ ಟೈಮ್ಸ್ ಪ್ರಕಾರ, ಮಹಿಳೆಯರ ಪ್ರತಿಭಟನೆಯ ಛಾಯಾಚಿತ್ರ ತೆಗೆಯುವುದಕ್ಕೆ ತಾಲಿಬಾನ್ ಆಕ್ಷೇಪ ವ್ಯಕ್ತಪಡಿಸಿತು. ವಿದೇಶಿ ವರದಿಗಾರರನ್ನು ಆ ಪ್ರದೇಶ ಬಿಟ್ಟು ಹೋಗುವಂತೆ ಒತ್ತಾಯಸಿದರು. ಫ್ರಾನ್ಸ್ ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಯೂರೋನ್ಯೂಸ್‌ನ ಸ್ಥಳೀಯ ಮುಖ್ಯಸ್ಥ ಸೇರಿದಂತೆ ಇತರ ಮೂವರು ಪತ್ರಕರ್ತರನ್ನು ಸಹ ಅಪಹರಿಸಲಾಗಿತ್ತು. ಯೂರೋನ್ಯೂಸ್‌ ಮುಖ್ಯಸ್ಥನಿಗೆ ಹೊಡೆಯಾಗಿದೆ. ಉಳಿದವರನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದೆ.


ಇದನ್ನೂ ಓದಿ: ಅಫ್ಘಾನ್: ಮಹಿಳೆಯರು ಕೆಲಸಕ್ಕೆ ಹೊರ ಹೋಗುವುದು ಸುರಕ್ಷಿತವಲ್ಲ- ತಾಲಿಬಾನ್ ವಕ್ತಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...