Homeಅಂತರಾಷ್ಟ್ರೀಯಅಫ್ಘಾನ್ ಮಹಿಳೆಯರ ಪ್ರತಿಭಟನೆ ವರದಿ ಮಾಡಿದ ಪತ್ರಕರ್ತರ ಮೇಲೆ ತಾಲಿಬಾನ್‌ನಿಂದ ಹಲ್ಲೆ

ಅಫ್ಘಾನ್ ಮಹಿಳೆಯರ ಪ್ರತಿಭಟನೆ ವರದಿ ಮಾಡಿದ ಪತ್ರಕರ್ತರ ಮೇಲೆ ತಾಲಿಬಾನ್‌ನಿಂದ ಹಲ್ಲೆ

- Advertisement -
- Advertisement -

ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳ ವಿರುದ್ಧ, ಶಿಕ್ಷಣ ಮತ್ತು ಉದ್ಯೋಗದ ಹಕ್ಕಿಗಾಗಿ ಮಹಿಳೆಯರು ನಡೆಸಿದ ಪ್ರತಿಭಟನೆಯನ್ನು ವರದಿ ಮಾಡಿದ ಪತ್ರಕರ್ತರ ಮೇಲೆ ತಾಲಿಬಾನಿಗಳು ಹಲ್ಲೆ ನಡೆಸಿ, ಚಿತ್ರಹಿಂಸೆ ನೀಡಿದ್ದಾರೆ ಎಂದು ಸುದ್ದಿಸಂಸ್ಥೆಗಳು ಆರೋಪಿಸಿವೆ.

ತೀವ್ರತರದ ಗಾಯಗಳಿಂದ ಬಳಲುತ್ತಿರುವ ಪತ್ರಕರ್ತರ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ತಾಲಿಬಾನ್ ತನ್ನ ಸರ್ಕಾರವನ್ನು ಘೋಷಿಸಿಕೊಂಡ ಬಳಿಕ ಇಂತಹ ಚಿತ್ರಗಳು ಹೊರ ಬಂದಿದ್ದು, ತಾಲಿಬಾನ್ ಆಡಳಿತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸಂಶಯ ವ್ಯಕ್ತವಾಗಿದೆ.

ಅಫ್ಘಾನಿಸ್ತಾನದಲ್ಲಿ ಪತ್ರಕರ್ತರ ಮೇಲೆ ನಡೆದ ದೌರ್ಜನ್ಯ ಬಗ್ಗೆ ಲಾಸ್ ಏಂಜಲೀಸ್ ಟೈಮ್ಸ್ ವಿದೇಶಿ ವರದಿಗಾರ ಮಾರ್ಕಸ್ ಯಾಮ್ ಮತ್ತು ಅಫ್ಘಾನ್ ಸುದ್ದಿಸಂಸ್ಥೆ ಎಟಿಲಾಟ್ರೋಜ್ (Etilaatroz) ತಮ್ಮ ಅಧೀಕೃತ ಟ್ವಿಟರ್‌ ಖಾತೆಗಳಿಂದ ಗಾಯಗೊಂಡಿರುವ ಪತ್ರಕರ್ತರ ಫೋಟೊವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಅಫ್ಘಾನ್: ಪತ್ರಕರ್ತರನ್ನು ಹುಡುಕುವಾಗ ಸಂಬಂಧಿಯನ್ನು ಕೊಂದ ತಾಲಿಬಾನಿಗಳು

ಅಫ್ಘಾನ್ ಸುದ್ದಿಸಂಸ್ಥೆ ಎಟಿಲಾಟ್ರೋಜ್, ಟಾಕಿ ದಾರ್ಯಾಬಿ ಮತ್ತು ನೇಮತ್‌ಉಲ್ಲಾ ನಖ್ದಿ ಎಂಬ ಇಬ್ಬರು ತಮ್ಮ ಸಂಸ್ಥೆಯ ಪತ್ರಕರ್ತರಾಗಿದ್ದು, ಪತ್ರಕರ್ತರನ್ನು ತಾಲಿಬಾನಿಗಳು ಬಂಧಿಸಿ, ಇಬ್ಬರ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಟ್ವೀಟ್ ಮಾಡಿದೆ.

ಟಾಕಿ ದಾರ್ಯಾಬಿ ಮತ್ತು ನೇಮತ್‌ಉಲ್ಲಾ ನಖ್ದಿ ಇಬ್ಬರು, ನಿನ್ನೆ ಪಶ್ಚಿಮ ಕಾಬೂಲ್‌ನ ಕಾರ್ಟ್ -ಇ -ಚಾರ್ ಪ್ರದೇಶದಲ್ಲಿ ಮಹಿಳೆಯರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದಾಗ ಅವರನ್ನು ತಾಲಿಬಾನ್‌ಗಳು ಅಪಹರಿಸಿದ್ದರು. ಬಳಿಕ ಅವರನ್ನು ಹೊಡೆದು ಹಿಂಸಿಸಲಾಗಿದೆ ಎಂದು ಎಟಿಲಾಟ್ರೋಜ್ ಹೇಳಿದೆ.

ಅಫ್ಘಾನ್ ಮಹಿಳೆಯರು ಶಿಕ್ಷಣ ಮತ್ತು ಕೆಲಸದ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇವರ ಚಿತ್ರಗಳನ್ನು ತೆಗೆಯಲು ಆರಂಭಿಸಿದ ತಕ್ಷಣ ತಾಲಿಬಾನಿಗಳು ನಮ್ಮನ್ನು ಬಂಧಿಸಿದರು ಎಂದು ಪತ್ರಕರ್ತರು ತಿಳಿಸಿದ್ದಾರೆ.

ಲಾಸ್ ಏಂಜಲೀಸ್ ಟೈಮ್ಸ್ ವಿದೇಶಿ ವರದಿಗಾರ ಮಾರ್ಕಸ್ ಯಾಮ್ ಕೂಡ ಟ್ವೀಟ್ ಮಾಡಿ, ಅಫ್ಘಾನಿಸ್ತಾನದಲ್ಲಿ ಮಹಿಳಾ ರ್‍ಯಾಲಿಯ ಬಗ್ಗೆ ವರದಿ ಮಾಡಿದಕ್ಕಾಗಿ ಎಟಿಲಾಟ್ರೋಜ್‌ದ ಪತ್ರಕರ್ತರಾದ ಟಾಕಿ ದಾರ್ಯಾಬಿ ಮತ್ತು ನೇಮತ್‌ಉಲ್ಲಾ ನಖ್ದಿ ಅವರನ್ನು ಬಂಧಿಸಿ, ತಾಲಿಬಾನ್ ಚಿತ್ರಹಿಂಸೆ ನೀಡಿದೆ ಎಂದಿದ್ದಾರೆ.

ಲಾಸ್ ಏಂಜಲೀಸ್ ಟೈಮ್ಸ್ ಪ್ರಕಾರ, ಮಹಿಳೆಯರ ಪ್ರತಿಭಟನೆಯ ಛಾಯಾಚಿತ್ರ ತೆಗೆಯುವುದಕ್ಕೆ ತಾಲಿಬಾನ್ ಆಕ್ಷೇಪ ವ್ಯಕ್ತಪಡಿಸಿತು. ವಿದೇಶಿ ವರದಿಗಾರರನ್ನು ಆ ಪ್ರದೇಶ ಬಿಟ್ಟು ಹೋಗುವಂತೆ ಒತ್ತಾಯಸಿದರು. ಫ್ರಾನ್ಸ್ ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಯೂರೋನ್ಯೂಸ್‌ನ ಸ್ಥಳೀಯ ಮುಖ್ಯಸ್ಥ ಸೇರಿದಂತೆ ಇತರ ಮೂವರು ಪತ್ರಕರ್ತರನ್ನು ಸಹ ಅಪಹರಿಸಲಾಗಿತ್ತು. ಯೂರೋನ್ಯೂಸ್‌ ಮುಖ್ಯಸ್ಥನಿಗೆ ಹೊಡೆಯಾಗಿದೆ. ಉಳಿದವರನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದೆ.


ಇದನ್ನೂ ಓದಿ: ಅಫ್ಘಾನ್: ಮಹಿಳೆಯರು ಕೆಲಸಕ್ಕೆ ಹೊರ ಹೋಗುವುದು ಸುರಕ್ಷಿತವಲ್ಲ- ತಾಲಿಬಾನ್ ವಕ್ತಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....