Homeಅಂತರಾಷ್ಟ್ರೀಯಅಫ್ಘಾನ್ ಮಹಿಳೆಯರ ಪ್ರತಿಭಟನೆ ವರದಿ ಮಾಡಿದ ಪತ್ರಕರ್ತರ ಮೇಲೆ ತಾಲಿಬಾನ್‌ನಿಂದ ಹಲ್ಲೆ

ಅಫ್ಘಾನ್ ಮಹಿಳೆಯರ ಪ್ರತಿಭಟನೆ ವರದಿ ಮಾಡಿದ ಪತ್ರಕರ್ತರ ಮೇಲೆ ತಾಲಿಬಾನ್‌ನಿಂದ ಹಲ್ಲೆ

- Advertisement -
- Advertisement -

ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳ ವಿರುದ್ಧ, ಶಿಕ್ಷಣ ಮತ್ತು ಉದ್ಯೋಗದ ಹಕ್ಕಿಗಾಗಿ ಮಹಿಳೆಯರು ನಡೆಸಿದ ಪ್ರತಿಭಟನೆಯನ್ನು ವರದಿ ಮಾಡಿದ ಪತ್ರಕರ್ತರ ಮೇಲೆ ತಾಲಿಬಾನಿಗಳು ಹಲ್ಲೆ ನಡೆಸಿ, ಚಿತ್ರಹಿಂಸೆ ನೀಡಿದ್ದಾರೆ ಎಂದು ಸುದ್ದಿಸಂಸ್ಥೆಗಳು ಆರೋಪಿಸಿವೆ.

ತೀವ್ರತರದ ಗಾಯಗಳಿಂದ ಬಳಲುತ್ತಿರುವ ಪತ್ರಕರ್ತರ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ತಾಲಿಬಾನ್ ತನ್ನ ಸರ್ಕಾರವನ್ನು ಘೋಷಿಸಿಕೊಂಡ ಬಳಿಕ ಇಂತಹ ಚಿತ್ರಗಳು ಹೊರ ಬಂದಿದ್ದು, ತಾಲಿಬಾನ್ ಆಡಳಿತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸಂಶಯ ವ್ಯಕ್ತವಾಗಿದೆ.

ಅಫ್ಘಾನಿಸ್ತಾನದಲ್ಲಿ ಪತ್ರಕರ್ತರ ಮೇಲೆ ನಡೆದ ದೌರ್ಜನ್ಯ ಬಗ್ಗೆ ಲಾಸ್ ಏಂಜಲೀಸ್ ಟೈಮ್ಸ್ ವಿದೇಶಿ ವರದಿಗಾರ ಮಾರ್ಕಸ್ ಯಾಮ್ ಮತ್ತು ಅಫ್ಘಾನ್ ಸುದ್ದಿಸಂಸ್ಥೆ ಎಟಿಲಾಟ್ರೋಜ್ (Etilaatroz) ತಮ್ಮ ಅಧೀಕೃತ ಟ್ವಿಟರ್‌ ಖಾತೆಗಳಿಂದ ಗಾಯಗೊಂಡಿರುವ ಪತ್ರಕರ್ತರ ಫೋಟೊವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಅಫ್ಘಾನ್: ಪತ್ರಕರ್ತರನ್ನು ಹುಡುಕುವಾಗ ಸಂಬಂಧಿಯನ್ನು ಕೊಂದ ತಾಲಿಬಾನಿಗಳು

ಅಫ್ಘಾನ್ ಸುದ್ದಿಸಂಸ್ಥೆ ಎಟಿಲಾಟ್ರೋಜ್, ಟಾಕಿ ದಾರ್ಯಾಬಿ ಮತ್ತು ನೇಮತ್‌ಉಲ್ಲಾ ನಖ್ದಿ ಎಂಬ ಇಬ್ಬರು ತಮ್ಮ ಸಂಸ್ಥೆಯ ಪತ್ರಕರ್ತರಾಗಿದ್ದು, ಪತ್ರಕರ್ತರನ್ನು ತಾಲಿಬಾನಿಗಳು ಬಂಧಿಸಿ, ಇಬ್ಬರ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಟ್ವೀಟ್ ಮಾಡಿದೆ.

ಟಾಕಿ ದಾರ್ಯಾಬಿ ಮತ್ತು ನೇಮತ್‌ಉಲ್ಲಾ ನಖ್ದಿ ಇಬ್ಬರು, ನಿನ್ನೆ ಪಶ್ಚಿಮ ಕಾಬೂಲ್‌ನ ಕಾರ್ಟ್ -ಇ -ಚಾರ್ ಪ್ರದೇಶದಲ್ಲಿ ಮಹಿಳೆಯರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದಾಗ ಅವರನ್ನು ತಾಲಿಬಾನ್‌ಗಳು ಅಪಹರಿಸಿದ್ದರು. ಬಳಿಕ ಅವರನ್ನು ಹೊಡೆದು ಹಿಂಸಿಸಲಾಗಿದೆ ಎಂದು ಎಟಿಲಾಟ್ರೋಜ್ ಹೇಳಿದೆ.

ಅಫ್ಘಾನ್ ಮಹಿಳೆಯರು ಶಿಕ್ಷಣ ಮತ್ತು ಕೆಲಸದ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇವರ ಚಿತ್ರಗಳನ್ನು ತೆಗೆಯಲು ಆರಂಭಿಸಿದ ತಕ್ಷಣ ತಾಲಿಬಾನಿಗಳು ನಮ್ಮನ್ನು ಬಂಧಿಸಿದರು ಎಂದು ಪತ್ರಕರ್ತರು ತಿಳಿಸಿದ್ದಾರೆ.

ಲಾಸ್ ಏಂಜಲೀಸ್ ಟೈಮ್ಸ್ ವಿದೇಶಿ ವರದಿಗಾರ ಮಾರ್ಕಸ್ ಯಾಮ್ ಕೂಡ ಟ್ವೀಟ್ ಮಾಡಿ, ಅಫ್ಘಾನಿಸ್ತಾನದಲ್ಲಿ ಮಹಿಳಾ ರ್‍ಯಾಲಿಯ ಬಗ್ಗೆ ವರದಿ ಮಾಡಿದಕ್ಕಾಗಿ ಎಟಿಲಾಟ್ರೋಜ್‌ದ ಪತ್ರಕರ್ತರಾದ ಟಾಕಿ ದಾರ್ಯಾಬಿ ಮತ್ತು ನೇಮತ್‌ಉಲ್ಲಾ ನಖ್ದಿ ಅವರನ್ನು ಬಂಧಿಸಿ, ತಾಲಿಬಾನ್ ಚಿತ್ರಹಿಂಸೆ ನೀಡಿದೆ ಎಂದಿದ್ದಾರೆ.

ಲಾಸ್ ಏಂಜಲೀಸ್ ಟೈಮ್ಸ್ ಪ್ರಕಾರ, ಮಹಿಳೆಯರ ಪ್ರತಿಭಟನೆಯ ಛಾಯಾಚಿತ್ರ ತೆಗೆಯುವುದಕ್ಕೆ ತಾಲಿಬಾನ್ ಆಕ್ಷೇಪ ವ್ಯಕ್ತಪಡಿಸಿತು. ವಿದೇಶಿ ವರದಿಗಾರರನ್ನು ಆ ಪ್ರದೇಶ ಬಿಟ್ಟು ಹೋಗುವಂತೆ ಒತ್ತಾಯಸಿದರು. ಫ್ರಾನ್ಸ್ ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಯೂರೋನ್ಯೂಸ್‌ನ ಸ್ಥಳೀಯ ಮುಖ್ಯಸ್ಥ ಸೇರಿದಂತೆ ಇತರ ಮೂವರು ಪತ್ರಕರ್ತರನ್ನು ಸಹ ಅಪಹರಿಸಲಾಗಿತ್ತು. ಯೂರೋನ್ಯೂಸ್‌ ಮುಖ್ಯಸ್ಥನಿಗೆ ಹೊಡೆಯಾಗಿದೆ. ಉಳಿದವರನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದೆ.


ಇದನ್ನೂ ಓದಿ: ಅಫ್ಘಾನ್: ಮಹಿಳೆಯರು ಕೆಲಸಕ್ಕೆ ಹೊರ ಹೋಗುವುದು ಸುರಕ್ಷಿತವಲ್ಲ- ತಾಲಿಬಾನ್ ವಕ್ತಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...