Homeಅಂತರಾಷ್ಟ್ರೀಯಅಫ್ಘಾನಿಸ್ತಾನ: ಉದ್ಯೋಗ ಬಿಟ್ಟು ಬೇರೆ ಕೆಲಸಕ್ಕೆ ಸೇರಿದ 79% ದಷ್ಟು ಪತ್ರಕರ್ತರು

ಅಫ್ಘಾನಿಸ್ತಾನ: ಉದ್ಯೋಗ ಬಿಟ್ಟು ಬೇರೆ ಕೆಲಸಕ್ಕೆ ಸೇರಿದ 79% ದಷ್ಟು ಪತ್ರಕರ್ತರು

- Advertisement -
- Advertisement -

ಅಫ್ಘಾನಿಸ್ತಾನದಲ್ಲಿ ಮಾಧ್ಯಮ ಪ್ರತಿನಿಧಿಗಳು ಅತ್ಯಂತ ಕೆಟ್ಟ ಆರ್ಥಿಕ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಅವರಲ್ಲಿ ಶೇಕಡಾ 79 ರಷ್ಟು ಜನರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ಅಫ್ಘಾನಿಸ್ತಾನ ಜರ್ನಲಿಸ್ಟ್ ಫೌಂಡೇಶನ್ ಹೇಳಿದೆ.

ಆರ್ಥಿಕ ಪರಿಸ್ಥಿತಿ ತೀರ ಕೆಳಮಟ್ಟಕ್ಕೆ ಇಳಿದಿದ್ದು ಹಣ ಸಂಪಾದಿಸಲು ಮತ್ತು ಬದುಕಲು ಪತ್ರಕರ್ತರು ಇತರ ವೃತ್ತಿಗಳನ್ನು ಆಶ್ರಯಿಸಿದ್ದಾರೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ:ಅಫ್ಘಾನ್ ಮಹಿಳೆಯರ ಪ್ರತಿಭಟನೆ ವರದಿ ಮಾಡಿದ ಪತ್ರಕರ್ತರ ಮೇಲೆ ತಾಲಿಬಾನ್‌ನಿಂದ ಹಲ್ಲೆ

ಫೌಂಡೇಶನ್ ಕಳೆದ ಒಂದೂವರೆ ತಿಂಗಳಲ್ಲಿ ಆಫ್ಘನ್ ಪತ್ರಕರ್ತರ ಜೀವನವನ್ನು ಮೌಲ್ಯಮಾಪನ ಮಾಡಿರುವ ಸಂಸ್ಥೆ, ಪತ್ರಕರ್ತರು ದುರ್ಬಲ ಆರ್ಥಿಕ ಪರಿಸ್ಥಿತಿಯಿಂದಾಗಿ ಅತ್ಯಂತ ಕೆಟ್ಟ ಜೀವನವನ್ನು ನಡೆಸುತ್ತಿದ್ದಾರೆ ಎಂದು ತಿಳಿಸಿದೆ.

ಪತ್ರಕರ್ತರು ಉದ್ಯೋಗ ಕಳೆದುಕೊಳ್ಳೂವ ಜೊತೆಗೆ, ಅಫ್ಘಾನಿಸ್ತಾನದಲ್ಲಿ ಶೇಕಡಾ 75 ರಷ್ಟು ಮಾಧ್ಯಮಗಳು ಹಣಕಾಸಿನ ತೊಂದರೆಗಳಿಂದ ಮುಚ್ಚಲ್ಪಟ್ಟಿವೆ ಎಂದು ಅಂಕಿಅಂಶಗಳು ತೋರಿಸಿವೆ ಎಂದು ಖಾಮಾ ಪ್ರೆಸ್ ವರದಿ ಹೇಳಿದೆ.

ಅಫ್ಘಾನಿಸ್ತಾನದಾದ್ಯಂತ ಒಟ್ಟು 462 ಆಫ್ಘನ್ ಪತ್ರಕರ್ತರು ಸಂಸ್ಥೆ ನಡೆಸಿದ್ದ ಸಮೀಕ್ಷೆಯಲ್ಲಿ ಭಾಗವಹಿಸಿದ್ದರು ಮತ್ತು ಅವರಲ್ಲಿ 390 ಪುರುಷರು ಮತ್ತು 72 ಮಹಿಳೆಯರು ಸೇರಿದ್ದಾರೆ.

ಇದನ್ನೂ ಓದಿ:ಭಾರತದಲ್ಲಿ ಆಶ್ರಯ ಪಡೆಯಲು ಕೋರಿ 736 ಅಫ್ಘಾನಿಸ್ತಾನಿಯರಿಂದ ಹೊಸ ಅರ್ಜಿ

ಪತ್ರಕರ್ತರ ಆರ್ಥಿಕ ಪರಿಸ್ಥಿತಿಯನ್ನು ಸರಿಪಡಿಸಲು ಪತ್ರಕರ್ತರ ಫೌಂಡೇಶನ್ ಅಂತರರಾಷ್ಟ್ರೀಯ ಸಮುದಾಯ ಮತ್ತು ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರಕ್ಕೆ ಕರೆ ನೀಡಿತ್ತು.

ಇನ್ನು, ಇತ್ತೀಚಿಗೆ ಬಿದ್ದ ಹಿಮ ಮತ್ತು ಉಂಟಾದ ಭೀಕರ ಪ್ರವಾಹ ಅಫ್ಘಾನ್‌ ಜನರನ್ನು ದುಸ್ಥಿತಿಗೆ ತಳ್ಳಿದೆ. ಇಂತಹ ಸಮಯದಲ್ಲಿ “ರಾಜಕೀಯ ಪೂರ್ವಾಗ್ರಹ”ವಿಲ್ಲದೆ ತುರ್ತು ಮಾನವೀಯ ನೆರವು ನೀಡಬೇಕು ಎಂದು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನ್ ವಿಶ್ವದ ಇತರ ರಾಷ್ಟ್ರಗಳಿಗೆ ಮನವಿ ಮಾಡಿದೆ.

ಉಪಪ್ರಧಾನಿ ಅಬ್ದುಲ್ ಘನಿ ಬರಾದಾರ್, “ವಿವಿಧ ಸ್ಥಳಗಳಲ್ಲಿ, ಜನರಿಗೆ ಊಟ, ವಸತಿ, ಬೆಚ್ಚಗಿನ ಬಟ್ಟೆ ಮತ್ತು ಹಣ ಕೂಡ ಇಲ್ಲ. ಜಗತ್ತು ಯಾವುದೇ ರಾಜಕೀಯ ಪಕ್ಷಪಾತವಿಲ್ಲದೆ, ಪೂರ್ವಾಗ್ರಹಗಳಿಲ್ಲದೇ ಆಫ್ಘನ್ ಜನರನ್ನು ಬೆಂಬಲಿಸಬೇಕು. ಇತರೆ ದೇಶಗಳು ತಮ್ಮ ಮಾನವೀಯ ಜವಾಬ್ದಾರಿಗಳನ್ನು ನಿರ್ವಹಿಸಬೇಕು” ಎಂದು ವಿಡಿಯೊವೊಂದರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಅಫ್ಘಾನ್‌ಗೆ ರಾಜಕೀಯ ಪೂರ್ವಾಗ್ರಹಗಳನ್ನು ಬಿಟ್ಟು ಸಹಾಯ ಮಾಡಿ: ತಾಲಿಬಾನ್ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...