Homeಅಂತರಾಷ್ಟ್ರೀಯಅಫ್ಘಾನಿಸ್ತಾನ: ಉದ್ಯೋಗ ಬಿಟ್ಟು ಬೇರೆ ಕೆಲಸಕ್ಕೆ ಸೇರಿದ 79% ದಷ್ಟು ಪತ್ರಕರ್ತರು

ಅಫ್ಘಾನಿಸ್ತಾನ: ಉದ್ಯೋಗ ಬಿಟ್ಟು ಬೇರೆ ಕೆಲಸಕ್ಕೆ ಸೇರಿದ 79% ದಷ್ಟು ಪತ್ರಕರ್ತರು

- Advertisement -
- Advertisement -

ಅಫ್ಘಾನಿಸ್ತಾನದಲ್ಲಿ ಮಾಧ್ಯಮ ಪ್ರತಿನಿಧಿಗಳು ಅತ್ಯಂತ ಕೆಟ್ಟ ಆರ್ಥಿಕ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಅವರಲ್ಲಿ ಶೇಕಡಾ 79 ರಷ್ಟು ಜನರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ಅಫ್ಘಾನಿಸ್ತಾನ ಜರ್ನಲಿಸ್ಟ್ ಫೌಂಡೇಶನ್ ಹೇಳಿದೆ.

ಆರ್ಥಿಕ ಪರಿಸ್ಥಿತಿ ತೀರ ಕೆಳಮಟ್ಟಕ್ಕೆ ಇಳಿದಿದ್ದು ಹಣ ಸಂಪಾದಿಸಲು ಮತ್ತು ಬದುಕಲು ಪತ್ರಕರ್ತರು ಇತರ ವೃತ್ತಿಗಳನ್ನು ಆಶ್ರಯಿಸಿದ್ದಾರೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ:ಅಫ್ಘಾನ್ ಮಹಿಳೆಯರ ಪ್ರತಿಭಟನೆ ವರದಿ ಮಾಡಿದ ಪತ್ರಕರ್ತರ ಮೇಲೆ ತಾಲಿಬಾನ್‌ನಿಂದ ಹಲ್ಲೆ

ಫೌಂಡೇಶನ್ ಕಳೆದ ಒಂದೂವರೆ ತಿಂಗಳಲ್ಲಿ ಆಫ್ಘನ್ ಪತ್ರಕರ್ತರ ಜೀವನವನ್ನು ಮೌಲ್ಯಮಾಪನ ಮಾಡಿರುವ ಸಂಸ್ಥೆ, ಪತ್ರಕರ್ತರು ದುರ್ಬಲ ಆರ್ಥಿಕ ಪರಿಸ್ಥಿತಿಯಿಂದಾಗಿ ಅತ್ಯಂತ ಕೆಟ್ಟ ಜೀವನವನ್ನು ನಡೆಸುತ್ತಿದ್ದಾರೆ ಎಂದು ತಿಳಿಸಿದೆ.

ಪತ್ರಕರ್ತರು ಉದ್ಯೋಗ ಕಳೆದುಕೊಳ್ಳೂವ ಜೊತೆಗೆ, ಅಫ್ಘಾನಿಸ್ತಾನದಲ್ಲಿ ಶೇಕಡಾ 75 ರಷ್ಟು ಮಾಧ್ಯಮಗಳು ಹಣಕಾಸಿನ ತೊಂದರೆಗಳಿಂದ ಮುಚ್ಚಲ್ಪಟ್ಟಿವೆ ಎಂದು ಅಂಕಿಅಂಶಗಳು ತೋರಿಸಿವೆ ಎಂದು ಖಾಮಾ ಪ್ರೆಸ್ ವರದಿ ಹೇಳಿದೆ.

ಅಫ್ಘಾನಿಸ್ತಾನದಾದ್ಯಂತ ಒಟ್ಟು 462 ಆಫ್ಘನ್ ಪತ್ರಕರ್ತರು ಸಂಸ್ಥೆ ನಡೆಸಿದ್ದ ಸಮೀಕ್ಷೆಯಲ್ಲಿ ಭಾಗವಹಿಸಿದ್ದರು ಮತ್ತು ಅವರಲ್ಲಿ 390 ಪುರುಷರು ಮತ್ತು 72 ಮಹಿಳೆಯರು ಸೇರಿದ್ದಾರೆ.

ಇದನ್ನೂ ಓದಿ:ಭಾರತದಲ್ಲಿ ಆಶ್ರಯ ಪಡೆಯಲು ಕೋರಿ 736 ಅಫ್ಘಾನಿಸ್ತಾನಿಯರಿಂದ ಹೊಸ ಅರ್ಜಿ

ಪತ್ರಕರ್ತರ ಆರ್ಥಿಕ ಪರಿಸ್ಥಿತಿಯನ್ನು ಸರಿಪಡಿಸಲು ಪತ್ರಕರ್ತರ ಫೌಂಡೇಶನ್ ಅಂತರರಾಷ್ಟ್ರೀಯ ಸಮುದಾಯ ಮತ್ತು ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರಕ್ಕೆ ಕರೆ ನೀಡಿತ್ತು.

ಇನ್ನು, ಇತ್ತೀಚಿಗೆ ಬಿದ್ದ ಹಿಮ ಮತ್ತು ಉಂಟಾದ ಭೀಕರ ಪ್ರವಾಹ ಅಫ್ಘಾನ್‌ ಜನರನ್ನು ದುಸ್ಥಿತಿಗೆ ತಳ್ಳಿದೆ. ಇಂತಹ ಸಮಯದಲ್ಲಿ “ರಾಜಕೀಯ ಪೂರ್ವಾಗ್ರಹ”ವಿಲ್ಲದೆ ತುರ್ತು ಮಾನವೀಯ ನೆರವು ನೀಡಬೇಕು ಎಂದು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನ್ ವಿಶ್ವದ ಇತರ ರಾಷ್ಟ್ರಗಳಿಗೆ ಮನವಿ ಮಾಡಿದೆ.

ಉಪಪ್ರಧಾನಿ ಅಬ್ದುಲ್ ಘನಿ ಬರಾದಾರ್, “ವಿವಿಧ ಸ್ಥಳಗಳಲ್ಲಿ, ಜನರಿಗೆ ಊಟ, ವಸತಿ, ಬೆಚ್ಚಗಿನ ಬಟ್ಟೆ ಮತ್ತು ಹಣ ಕೂಡ ಇಲ್ಲ. ಜಗತ್ತು ಯಾವುದೇ ರಾಜಕೀಯ ಪಕ್ಷಪಾತವಿಲ್ಲದೆ, ಪೂರ್ವಾಗ್ರಹಗಳಿಲ್ಲದೇ ಆಫ್ಘನ್ ಜನರನ್ನು ಬೆಂಬಲಿಸಬೇಕು. ಇತರೆ ದೇಶಗಳು ತಮ್ಮ ಮಾನವೀಯ ಜವಾಬ್ದಾರಿಗಳನ್ನು ನಿರ್ವಹಿಸಬೇಕು” ಎಂದು ವಿಡಿಯೊವೊಂದರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಅಫ್ಘಾನ್‌ಗೆ ರಾಜಕೀಯ ಪೂರ್ವಾಗ್ರಹಗಳನ್ನು ಬಿಟ್ಟು ಸಹಾಯ ಮಾಡಿ: ತಾಲಿಬಾನ್ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...