Homeಅಂತರಾಷ್ಟ್ರೀಯಅಫ್ಘಾನಿಸ್ತಾನ: ಮಸೀದಿಯಲ್ಲಿ ಸ್ಫೋಟ 32 ಸಾವು, 53 ಮಂದಿಗೆ ಗಾಯ

ಅಫ್ಘಾನಿಸ್ತಾನ: ಮಸೀದಿಯಲ್ಲಿ ಸ್ಫೋಟ 32 ಸಾವು, 53 ಮಂದಿಗೆ ಗಾಯ

- Advertisement -
- Advertisement -

ದಕ್ಷಿಣ ಅಫ್ಘಾನಿಸ್ತಾನದ ಕಂದಹಾರ್‌ನಲ್ಲಿರುವ ಶಿಯಾ ಮಸೀದಿಯೊಂದರಲ್ಲಿ ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಸ್ಫೋಟ ಸಂಭವಿಸಿದೆ. ದುರಂತದಲ್ಲಿ 32 ಜನರು ಸಾವನ್ನಪ್ಪಿದ್ದು, 53 ಮಂದಿ ಗಾಯಗೊಂಡಿದ್ದಾರೆ.

“ಮೂವತ್ತೆರಡು ಮೃತ ದೇಹಗಳು ಪತ್ತೆಯಾಗಿವೆ. ಸುಮಾರು 53 ಗಾಯಾಳುಗಳನ್ನು ಇಲ್ಲಿಯವರೆಗೆ ನಮ್ಮ ಆಸ್ಪತ್ರೆಗೆ ತರಲಾಗಿದೆ” ಎಂದು ಕಂದಹಾರ್‌ ನಗರದ ಕೇಂದ್ರ ಮಿರ್ವಾಯಿಸ್ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

ಇತರೆ ವೈದ್ಯಕೀಯ ಮೂಲಗಳು ಮತ್ತು ಪ್ರಾಂತೀಯ ಅಧಿಕಾರಿಯೊಬ್ಬರು 30 ಕ್ಕಿಂತ ಹೆಚ್ಚಿನ ಜನರು ಮೃತಪಟ್ಟಿರುವ ಬಗ್ಗೆ ದೃಢಪಡಿಸಿದ್ದಾರೆ. ಘಟನಾ ಸ್ಥಳದಲ್ಲಿ ಕನಿಷ್ಠ 15 ಆಂಬ್ಯುಲೆನ್ಸ್‌ಗಳು ಇದ್ದು, ಮಸೀದಿಯ ಫೇಸ್‌ಬುಕ್ ಖಾತೆಯು ರಕ್ತದಾನ ಮಾಡುವಂತೆ ಮನವಿ ಮಾಡಿದೆ.

ಇದನ್ನೂ ಓದಿ: ‘ದೊಡ್ಡ ತಪ್ಪಾಗಿದೆ’ – ಅಫ್ಘಾನ್‌ನ 7 ಮಕ್ಕಳು ಸೇರಿದಂತೆ 10 ನಾಗರಿಕರನ್ನು ಕೊಂದ ಬಗ್ಗೆ ತಪ್ಪೊಪ್ಪಿಕೊಂಡ ಅಮೆರಿಕಾ

ಇಡೀ ವಾರದಲ್ಲೇ ಅತಿ ಹೆಚ್ಚು ಜನ ಸೇರುವ ಶುಕ್ರವಾರ ಈ ದಾಳಿ ನಡೆಸಲಾಗಿದ್ದು, ಮೂರು ಸ್ಥಳಗಳಲ್ಲಿ ಸ್ಫೋಟ ಸಂಭವಿಸಿವೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಒಂದು ಮಸೀದಿಯ ಮುಖ್ಯ ಬಾಗಿಲಲ್ಲಿ, ಇನ್ನೊಂದು ದಕ್ಷಿಣದ ಪ್ರದೇಶದಲ್ಲಿ, ಮತ್ತು ಜನರು ಪ್ರಾರ್ಥನೆ ಮಾಡುವ ಮೊದಲು ಮುಖ ತೊಳೆಯುವ ಜಾಗಗಳಲ್ಲಿ ಸ್ಫೋಟ ಸಂಭವಿಸಿವೆ.

ಸ್ಫೋಟಕ್ಕೆ ಕಾರಣ ಸ್ಪಷ್ಟವಾಗಿಲ್ಲ, ಆದರೆ ಕಳೆದ ವಾರ ಉತ್ತರ ನಗರದ ಕುಂಡುಜ್‌ನ ಮಸೀದಿಯಲ್ಲಿ ಶಿಯಾ ಮಸೀದಿಯಲ್ಲಿ ನಡೆದಿದ್ದ ಆತ್ಮಾಹುತಿ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಗುಂಪು ಹೊತ್ತುಕೊಂಡಿತ್ತು. ಇದನ್ನು ಕೂಡ ಅದೇ ಸಂಘಟನೆ ಮಾಡಿರುವ ಅನುಮಾನ ಉಂಟಾಗಿದೆ.

“ಕಂದಹಾರ್ ನಗರದ ಶಿಯಾ ಮಸೀದಿಯಲ್ಲಿ ಸ್ಫೋಟ ಸಂಭವಿಸಿರುವುದನ್ನು ತಿಳಿದು ನಾವು ದುಃಖಿತರಾಗಿದ್ದೇವೆ, ಸ್ಫೋಟದಲ್ಲಿ ನಮ್ಮ ಹಲವಾರು ದೇಶವಾಸಿಗಳು ಹುತಾತ್ಮರಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ” ಎಂದು ತಾಲಿಬಾನ್ ಚಳುವಳಿಯ ಆಂತರಿಕ ಸಚಿವಾಲಯದ ವಕ್ತಾರ ಕರಿ ಸೈಯದ್ ಖೋಸ್ತಿ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕಾಬೂಲ್ ಆತ್ಮಾಹುತಿ ದಾಳಿ: 13 ಅಮೆರಿಕಾ ಸೈನಿಕರು, 60 ನಾಗರಿಕರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...