Homeಸಿನಿಮಾಕ್ರೀಡೆಆಫ್ಘಾನಿಸ್ತಾನಕ್ಕೆ ಸೋಲು: ಭಾರತದ ಸೆಮಿಫೈನಲ್ ಕನಸು ಭಗ್ನ

ಆಫ್ಘಾನಿಸ್ತಾನಕ್ಕೆ ಸೋಲು: ಭಾರತದ ಸೆಮಿಫೈನಲ್ ಕನಸು ಭಗ್ನ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಗ್ರೂಪ್ 2 ರ ನಿರ್ಣಾಯಕ ಪಂದ್ಯದಲ್ಲಿ ಆಫ್ಘಾನಿಸ್ತಾನ ತಂಡವು ನ್ಯೂಜಿಲೆಂಡ್ ಎದುರು ಸೋಲು ಅನುಭವಿಸುವುದರ ಮೂಲಕ ಭಾರತ ಮತ್ತು ಆಫ್ಘಾನಿಸ್ತಾನದ ಸೆಮಿಫೈನಲ್ ಕನಸು ಭಗ್ನಗೊಂಡಿದೆ. ಈ ಗೆಲುವಿನ ಮೂಲಕ ನ್ಯೂಜಿಲೆಂಡ್ ತಂಡ ಸೆಮಿಫೈನಲ್ ಹಂತಕ್ಕೆ ಅರ್ಹತೆ ಪಡೆಯಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಫ್ಘಾನಿಸ್ತಾನ ತಂಡವು ನ್ಯೂಜಿಲೆಂಡ್‌ ಬೌಲರ್‌ಗಳ ದಾಳಿಗೆ ತತ್ತರಿಸಿತು. 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು ಕೇವಲ 124 ರನ್ ಪೇರಿಸಿತು. ನಜೀಬುಲ್ಲಾ ಝಾರ್ಡನ್ ಮಾತ್ರ ಹೋರಾಟ ಮಾಡಿ 48 ಎಸೆತಗಳಲ್ಲಿ 73 ರನ್ ಗಳಿಸಿ ತಂಡ 120 ರ ಗಡಿ ದಾಟಲು ಸಹಾಯಕರಾದರು.

ಇದಕ್ಕೆ ಉತ್ತರವಾಗ ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಎರಡು ವಿಕೆಟ್ ಕಳೆದುಕೊಂಡು ಅನಾಯಸವಾಗಿ 125 ರನ್ ಗಳಿಸಿತು. ತಂಡದ ನಾಯಕ ಕೇನ್ ವಿಲಿಯಂಸನ್ ಔಟಾಗದೆ 40 ರನ್ ಗಳಿಸಿದರೆ ಕಾನ್ವೆ 36 ರನ್ ಗಳಿಸಿದರು.

ಇಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಸೋತಿದ್ದರೆ 6 ಪಾಯಿಂಟ್‌ ಪಡೆದಿರುತ್ತಿತ್ತು. ಅದೇ ರೀತಿ ಆಫ್ಘಾನಿಸ್ತಾನಕ್ಕೂ 6 ಪಾಯಿಂಟ್ ಸಿಕ್ಕುತ್ತಿತ್ತು. ಭಾರತ ಸೋಮವಾರದ ಕಡೆಯ ಪಂದ್ಯದಲ್ಲಿ ನಮಿಬೀಯ ಎದುರು ಗೆದ್ದಲ್ಲಿ ಅದಕ್ಕೂ 6 ಪಾಯಿಂಟ್ ದಕ್ಕುತ್ತಿತ್ತು. ಆಗ ನೆಟ್‌ ರನ್ ರೇಟ್ ಜಾಸ್ತಿಯಿದ್ದವರು ಸೆಮಿಫೈನಲ್‌ಗೆ ಅರ್ಹತೆ ಗಿಟ್ಟಿಸುತ್ತಿದ್ದರು. ಆ ಆಸೆಯಲ್ಲಿ ಭಾರತ ತಂಡವಿತ್ತು. ಆದರೆ ನ್ಯೂಜಿಲೆಂಡ್ ಗೆಲುವಿನೊಂದಿಗೆ ಆ ಆಸೆ ಕಮರಿ ಹೋಗಿದೆ.

ಗ್ರೂಪ್2 ರಲ್ಲಿ ನ್ಯೂಜಿಲೆಂಡ್ ಮತ್ತ ಪಾಕಿಸ್ತಾನ ತಂಡಗಳು ಸೆಮಿಫೈನಲ್‌ಗೆ ಪ್ರವೇಶ ಪಡೆದಿವೆ. ಗ್ರೂಪ್ 1 ರಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಅರ್ಹತೆ ಪಡೆದಿವೆ. ನವೆಂಬರ್ 10 ಮತ್ತು 11 ರಂದು ಸೆಮಫೈನಲ್ ಪಂದ್ಯಗಳು ನಡೆಯಲಿದ್ದು, 14 ರಂದು ಫೈನಲ್ ನಡೆಯಲಿದೆ.

ನಾಳೆ ಭಾರತವು ನಮೀಬಿಯಾ ಎದುರು ತನ್ನ ಕಡೆಯ ಔಪಚಾರಿಕ ಪಂದ್ಯ ಆಡಲಿದೆ.


ಇದನ್ನೂ ಓದಿ: ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಹೀಗಾದರೆ ಹೇಗೆ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...