Homeಮುಖಪುಟಅಫ್ಘಾನಿಸ್ತಾನ | ಪೋಲಿಯೊ ಲಸಿಕೆ ಅಭಿಯಾನವನ್ನು ಸ್ಥಗಿತಗೊಳಿಸಿದ ತಾಲಿಬಾನ್!

ಅಫ್ಘಾನಿಸ್ತಾನ | ಪೋಲಿಯೊ ಲಸಿಕೆ ಅಭಿಯಾನವನ್ನು ಸ್ಥಗಿತಗೊಳಿಸಿದ ತಾಲಿಬಾನ್!

- Advertisement -
- Advertisement -

ಪೋಲಿಯೊ ಲಸಿಕೆ ಅಭಿಯಾನವನ್ನು ಅಫ್ಘಾನಿಸ್ತಾನ ಅಡಳಿತ ನಡೆಸುತ್ತಿರುವ ತಾಲಿಬಾನ್ ಸ್ಥಗಿತಗೊಳಿಸಿದೆ ಎಂದು ವಿಶ್ವಸಂಸ್ಥೆ ಸೋಮವಾರ ತಿಳಿಸಿದೆ. ಸೆಪ್ಟೆಂಬರ್ ವೇಳೆ ನಡೆಯಲಿದ್ದ ಲಸಿಕೆ ಅಭಿಯಾನವು ಪ್ರಾರಂಭವಾಗುವ ಮೊದಲು ಈ ಲಸಿಕೆ ಅಭಿಯಾನ ಸ್ಥಗಿತಗೊಳಿಸುವಿಕೆಯ ಬಗ್ಗೆ ವಿಶ್ವಸಂಸ್ಥೆ ಏಜೆನ್ಸಿಗಳಿಗೆ ತಿಳಿಸಲಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸ್ಥಗಿತಗೊಳಿಸುವಿಕೆಗೆ ಯಾವುದೇ ಕಾರಣವನ್ನು ನೀಡಲಾಗಿಲ್ಲ ಮತ್ತು ತಾಲಿಬಾನ್ ನಿಯಂತ್ರಿತ ಸರ್ಕಾರ ಈ ಬಗ್ಗೆ ತಕ್ಷಣಕ್ಕೆ ಯಾರೂ ಪ್ರತಿಕ್ರಿಯೆ ನೀಡಿಲ್ಲ ಎಂದು ವರದಿಗಳು ಹೇಳಿವೆ. ದೇಶದ ಮನೆ-ಮನೆಗೆ ಲಸಿಕೆಗಳಿಂದ ದೂರವಿರಲು ಮತ್ತು ಧಾರ್ಮಿಕ ಸ್ಥಳಗಳಲ್ಲಿ ಲಸಿಕೆಯ ಬಗ್ಗೆ ಚರ್ಚೆ ನಡೆದಿತ್ತು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂಓದಿ: ಪ್ರಸ್ತುತ ಸಂವಿಧಾನದ ಅಡಿಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಾಧ್ಯವಿಲ್ಲ: ಪಿ. ಚಿದಂಬರಂ

ದೇಶದ ದಕ್ಷಿಣದ ಭಾಗದಲ್ಲಿ ಎರಡು ಪ್ರಕರಣಗಳನ್ನು ಹೊರತುಪಡಿಸಿ, ವಿಶ್ವ ಆರೋಗ್ಯ ಸಂಸ್ಥೆ(WHO) ಈ ವರ್ಷ ಅಫ್ಘಾನಿಸ್ತಾನ ದೇಶದಲ್ಲಿ 18 ಪೋಲಿಯೊ ಪ್ರಕರಣಗಳನ್ನು ದೃಢಪಡಿಸಿದೆ. 2023 ರಲ್ಲಿ ಅಫ್ಘಾನಿಸ್ಥಾನದಲ್ಲಿ ಆರು ಪ್ರಕರಣಗಳು ಪತ್ತೆಯಾಗಿದ್ದವು ಎಂದು ವರದಿಗಳು ಹೇಳಿವೆ.

“ಜಾಗತಿಕ ಪೋಲಿಯೊ ನಿರ್ಮೂಲನೆ ಮಾಡುವ ಈ ಉಪಕ್ರಮವು ಅಫ್ಘಾನಿಸ್ತಾನದ ಕೆಲವು ಭಾಗಗಳಲ್ಲಿ ಮನೆ-ಮನೆಗೆ ಪೋಲಿಯೊ ಲಸಿಕೆ ಅಭಿಯಾನದಿಂದ ಸೈಟ್-ಟು-ಸೈಟ್ ಲಸಿಕೆಗೆ ಬದಲಾಯಿಸುವ ಬಗ್ಗೆ ಇತ್ತೀಚೆಗೆ ಚರ್ಚೆಯಾಗಿದೆ. ಅಭಿಯಾನದಲ್ಲಿ ಒಳಗೊಂಡಿರುವವರು ಪ್ರಸ್ತುತ ನೀತಿಯಲ್ಲಿನ ಯಾವುದೇ ಬದಲಾವಣೆಯ ವ್ಯಾಪ್ತಿ ಮತ್ತು ಪ್ರಭಾವವನ್ನು ಚರ್ಚಿಸುವ ಮತ್ತು ಅರ್ಥಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿದ್ದಾರೆ” ಎಂದು WHO ಅಧಿಕಾರಿ ಡಾ. ಹಮೀದ್ ಜಾಫಾರಿ ಹೇಳಿದ್ದಾರೆ.

ನೆರೆಯ ಪಾಕಿಸ್ತಾನದಲ್ಲಿ ಪೋಲಿಯೊ ವಿರೋಧಿ ಅಭಿಯಾನಗಳು ನಿಯಮಿತವಾಗಿ ಹಿಂಸಾಚಾರದಿಂದ ಸ್ಥಗಿತಗೊಳ್ಳುತ್ತಿವೆ. ಜನರಿಗೆ ಮಕ್ಕಳಾಗದಂತೆ ಮಾಡುವ ಪಾಶ್ಚಿಮಾತ್ಯ ರಾಷ್ಟ್ರಗಳ ಪಿತೂರಿ ಇದಾಗಿ ಎಂದು ಪೊಲೀಯೊ ಲಸಿಕೆಯನ್ನು ತಪ್ಪಾಗಿ ಅರ್ಥೈಸಿ, ಲಸಿಕೆ ತಂಡಗಳು ಮತ್ತು ಅವರನ್ನು ರಕ್ಷಿಸಲು ನಿಯೋಜಿಸಲಾದ ಪೊಲೀಸರನ್ನು ಉಗ್ರಗಾಮಿಗಳು ಗುರಿಮಾಡುತ್ತಾರೆ.

ವಿಡಿಯೊನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...