Homeಅಂತರಾಷ್ಟ್ರೀಯಅಫ್ಘಾನ್: ಮಹಿಳೆಯರನ್ನು ಕ್ರಿಕೆಟ್ ಸೇರಿ ಹಲವು ಕ್ರೀಡೆಗಳಿಂದ ಹೊರಗಿಟ್ಟ ತಾಲಿಬಾನ್‌ ಸರ್ಕಾರ

ಅಫ್ಘಾನ್: ಮಹಿಳೆಯರನ್ನು ಕ್ರಿಕೆಟ್ ಸೇರಿ ಹಲವು ಕ್ರೀಡೆಗಳಿಂದ ಹೊರಗಿಟ್ಟ ತಾಲಿಬಾನ್‌ ಸರ್ಕಾರ

- Advertisement -
- Advertisement -

ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳು ಹೊಸ ಸರ್ಕಾರವನ್ನು ರಚನೆ ಮಾಡಿದ್ದು, ನೂತನ ಪ್ರಧಾನಿಯಾಗಿ ಮುಲ್ಲಾ ಮೊಹಮ್ಮದ್​ ಹಸನ್​ ಅಕುಂದ್ ಅಧಿಕಾರಕ್ಕೆ ಏರಲಿದ್ದಾರೆ. ಇದೇ ವೇಳೆ ಅಫ್ಘಾನ್ ಮಹಿಳೆಯರಿಗೆ ಕ್ರಿಕೆಟ್ ಸೇರಿದಂತೆ ಹಲವು ಕ್ರೀಡೆಗಳಿಂದ ಬ್ಯಾನ್ ಮಾಡಲಾಗಿದೆ.

ಅಫ್ಘಾನಿಸ್ತಾನದಲ್ಲಿ ಸರ್ಕಾರ ರಚಿಸಿರುವ ತಾಲಿಬಾನ್, ಹಲವು ಇಲಾಖೆಗಳಿಗೆ ಸಚಿವರನ್ನು ನೇಮಿಸಿದೆ.

ಆಸ್ಟ್ರೇಲಿಯಾದ ಎಸ್‌ಬಿಎಸ್ ಟಿವಿಗೆ ಹೇಳಿಕೆ ನೀಡಿರುವ ತಾಲಿಬಾನ್ ಸಾಂಸ್ಕೃತಿಕ ಆಯೋಗದ ಉಪ ಮುಖ್ಯಸ್ಥ ಅಹ್ಮದುಲ್ಲಾ ವಾಸಿಕ್, “ಕ್ರಿಕೆಟ್‌ನಲ್ಲಿ, ಮಹಿಳೆಯರು ತಮ್ಮ ಮುಖ ಮತ್ತು ದೇಹವನ್ನು ಮುಚ್ಚಿಕೊಳ್ಳದಂತಹ ಪರಿಸ್ಥಿತಿಯನ್ನು ಎದುರಿಸಬಹುದು. ಮಹಿಳೆಯರನ್ನು ಈ ರೀತಿ ನೋಡಲು ಇಸ್ಲಾಂ ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಫ್ಘಾನ್: ಮಹಿಳೆಯರು ಕೆಲಸಕ್ಕೆ ಹೊರ ಹೋಗುವುದು ಸುರಕ್ಷಿತವಲ್ಲ- ತಾಲಿಬಾನ್ ವಕ್ತಾರ

“ಇದು ಮಾಧ್ಯಮದ ಯುಗ, ಕ್ರೀಡೆಯ ಫೋಟೋಗಳು ಮತ್ತು ವಿಡಿಯೊಗಳು ಹರಿದಾಡುತ್ತವೆ. ಅದನ್ನು ಜನರು ನೋಡುತ್ತಾರೆ. ಇಸ್ಲಾಂ ಮತ್ತು ಇಸ್ಲಾಮಿಕ್ ಎಮಿರೇಟ್ ಮಹಿಳೆಯರಿಗೆ ಕ್ರಿಕೆಟ್ ಆಡಲು ಅಥವಾ ಅವರ  ಮುಖ ಮತ್ತು ದೇಹ ಕಾಣಿಸುವಂತಹ ರೀತಿಯ ಕ್ರೀಡೆಗಳನ್ನು ಆಡಲು ಅನುಮತಿಸುವುದಿಲ್ಲ” ಎಂದಿದ್ದಾರೆ.

20 ವರ್ಷಗಳ ಬಳಿಕ ಮಂಗಳವಾರ (ಸೆ.7) ತಾಲಿಬಾನಿಗಳು ಅಫ್ಘಾನಿಸ್ತಾನದಲ್ಲಿ ಪುರುಷರ ಸರ್ಕಾರ ರಚಿಸಿದ್ದು, ಕ್ಯಾಬಿನೆಟ್ ಕೂಡ ರಚಿಸಿದೆ. ಆದರೆ, ತಮ್ಮ ಸಂಪುಟದಲ್ಲಿ ಒಂದೇ ಒಂದು ಸ್ಥಾನವನ್ನು ಮಹಿಳೆಯರಿಗೆ ನೀಡಿಲ್ಲ. ಇದು ತಾಲಿಬಾನ್ ಆಡಳಿತದಲ್ಲಿ ಮಹಿಳೆಯರ ಸ್ಥಿತಿಯ ಬಗ್ಗೆ ಚಿಂತಿಸುವಂತೆ ಮಾಡಿದೆ.

ಈ ಹಿಂದೆ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಸುದ್ದಿಗೋಷ್ಠಿಯಲ್ಲಿ, “ಮಹಿಳೆಯರು ತಮ್ಮ ಸುರಕ್ಷತೆಗಾಗಿ ಕೆಲಸಕ್ಕೆ ಹೋಗಬಾರದು, ನಮ್ಮ ಸೈನಿಕರ ಗುಂಪು ಇನ್ನು ಹಳೆಯ ಮನಸ್ಥಿತಿಯಲ್ಲಿಯೇ ಇದೆ. ಹೊಸ ಬದಲಾವಣೆ ಬರಲು ಸಮಯ ಬೇಕಾಗಿದೆ” ಎಂದಿದ್ದರು.

ತಾಲಿಬಾನಿಗಳ ವಿರುದ್ಧ, ಶಿಕ್ಷಣ ಮತ್ತು ಉದ್ಯೋಗದ ಹಕ್ಕಿಗಾಗಿ ಮಹಿಳೆಯರು ಬುಧವಾರ ಅಫ್ಘಾನ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯ ವಿಡಿಯೊ, ಫೋಟೋಗಳು ಹೊರ ಬರದಂತೆ ತಡೆದ ತಾಲಿಬಾನಿಗಳು, ಪ್ರತಿಭಟನೆಯ ವರದಿ ಮಾಡಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಅಫ್ಘಾನ್ ಮಹಿಳೆಯರ ಪ್ರತಿಭಟನೆ ವರದಿ ಮಾಡಿದ ಪತ್ರಕರ್ತರ ಮೇಲೆ ತಾಲಿಬಾನ್‌ನಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...