Homeಅಂತರಾಷ್ಟ್ರೀಯಅಫ್ಘಾನ್: ಮಹಿಳೆಯರನ್ನು ಕ್ರಿಕೆಟ್ ಸೇರಿ ಹಲವು ಕ್ರೀಡೆಗಳಿಂದ ಹೊರಗಿಟ್ಟ ತಾಲಿಬಾನ್‌ ಸರ್ಕಾರ

ಅಫ್ಘಾನ್: ಮಹಿಳೆಯರನ್ನು ಕ್ರಿಕೆಟ್ ಸೇರಿ ಹಲವು ಕ್ರೀಡೆಗಳಿಂದ ಹೊರಗಿಟ್ಟ ತಾಲಿಬಾನ್‌ ಸರ್ಕಾರ

- Advertisement -
- Advertisement -

ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳು ಹೊಸ ಸರ್ಕಾರವನ್ನು ರಚನೆ ಮಾಡಿದ್ದು, ನೂತನ ಪ್ರಧಾನಿಯಾಗಿ ಮುಲ್ಲಾ ಮೊಹಮ್ಮದ್​ ಹಸನ್​ ಅಕುಂದ್ ಅಧಿಕಾರಕ್ಕೆ ಏರಲಿದ್ದಾರೆ. ಇದೇ ವೇಳೆ ಅಫ್ಘಾನ್ ಮಹಿಳೆಯರಿಗೆ ಕ್ರಿಕೆಟ್ ಸೇರಿದಂತೆ ಹಲವು ಕ್ರೀಡೆಗಳಿಂದ ಬ್ಯಾನ್ ಮಾಡಲಾಗಿದೆ.

ಅಫ್ಘಾನಿಸ್ತಾನದಲ್ಲಿ ಸರ್ಕಾರ ರಚಿಸಿರುವ ತಾಲಿಬಾನ್, ಹಲವು ಇಲಾಖೆಗಳಿಗೆ ಸಚಿವರನ್ನು ನೇಮಿಸಿದೆ.

ಆಸ್ಟ್ರೇಲಿಯಾದ ಎಸ್‌ಬಿಎಸ್ ಟಿವಿಗೆ ಹೇಳಿಕೆ ನೀಡಿರುವ ತಾಲಿಬಾನ್ ಸಾಂಸ್ಕೃತಿಕ ಆಯೋಗದ ಉಪ ಮುಖ್ಯಸ್ಥ ಅಹ್ಮದುಲ್ಲಾ ವಾಸಿಕ್, “ಕ್ರಿಕೆಟ್‌ನಲ್ಲಿ, ಮಹಿಳೆಯರು ತಮ್ಮ ಮುಖ ಮತ್ತು ದೇಹವನ್ನು ಮುಚ್ಚಿಕೊಳ್ಳದಂತಹ ಪರಿಸ್ಥಿತಿಯನ್ನು ಎದುರಿಸಬಹುದು. ಮಹಿಳೆಯರನ್ನು ಈ ರೀತಿ ನೋಡಲು ಇಸ್ಲಾಂ ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಫ್ಘಾನ್: ಮಹಿಳೆಯರು ಕೆಲಸಕ್ಕೆ ಹೊರ ಹೋಗುವುದು ಸುರಕ್ಷಿತವಲ್ಲ- ತಾಲಿಬಾನ್ ವಕ್ತಾರ

“ಇದು ಮಾಧ್ಯಮದ ಯುಗ, ಕ್ರೀಡೆಯ ಫೋಟೋಗಳು ಮತ್ತು ವಿಡಿಯೊಗಳು ಹರಿದಾಡುತ್ತವೆ. ಅದನ್ನು ಜನರು ನೋಡುತ್ತಾರೆ. ಇಸ್ಲಾಂ ಮತ್ತು ಇಸ್ಲಾಮಿಕ್ ಎಮಿರೇಟ್ ಮಹಿಳೆಯರಿಗೆ ಕ್ರಿಕೆಟ್ ಆಡಲು ಅಥವಾ ಅವರ  ಮುಖ ಮತ್ತು ದೇಹ ಕಾಣಿಸುವಂತಹ ರೀತಿಯ ಕ್ರೀಡೆಗಳನ್ನು ಆಡಲು ಅನುಮತಿಸುವುದಿಲ್ಲ” ಎಂದಿದ್ದಾರೆ.

20 ವರ್ಷಗಳ ಬಳಿಕ ಮಂಗಳವಾರ (ಸೆ.7) ತಾಲಿಬಾನಿಗಳು ಅಫ್ಘಾನಿಸ್ತಾನದಲ್ಲಿ ಪುರುಷರ ಸರ್ಕಾರ ರಚಿಸಿದ್ದು, ಕ್ಯಾಬಿನೆಟ್ ಕೂಡ ರಚಿಸಿದೆ. ಆದರೆ, ತಮ್ಮ ಸಂಪುಟದಲ್ಲಿ ಒಂದೇ ಒಂದು ಸ್ಥಾನವನ್ನು ಮಹಿಳೆಯರಿಗೆ ನೀಡಿಲ್ಲ. ಇದು ತಾಲಿಬಾನ್ ಆಡಳಿತದಲ್ಲಿ ಮಹಿಳೆಯರ ಸ್ಥಿತಿಯ ಬಗ್ಗೆ ಚಿಂತಿಸುವಂತೆ ಮಾಡಿದೆ.

ಈ ಹಿಂದೆ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಸುದ್ದಿಗೋಷ್ಠಿಯಲ್ಲಿ, “ಮಹಿಳೆಯರು ತಮ್ಮ ಸುರಕ್ಷತೆಗಾಗಿ ಕೆಲಸಕ್ಕೆ ಹೋಗಬಾರದು, ನಮ್ಮ ಸೈನಿಕರ ಗುಂಪು ಇನ್ನು ಹಳೆಯ ಮನಸ್ಥಿತಿಯಲ್ಲಿಯೇ ಇದೆ. ಹೊಸ ಬದಲಾವಣೆ ಬರಲು ಸಮಯ ಬೇಕಾಗಿದೆ” ಎಂದಿದ್ದರು.

ತಾಲಿಬಾನಿಗಳ ವಿರುದ್ಧ, ಶಿಕ್ಷಣ ಮತ್ತು ಉದ್ಯೋಗದ ಹಕ್ಕಿಗಾಗಿ ಮಹಿಳೆಯರು ಬುಧವಾರ ಅಫ್ಘಾನ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯ ವಿಡಿಯೊ, ಫೋಟೋಗಳು ಹೊರ ಬರದಂತೆ ತಡೆದ ತಾಲಿಬಾನಿಗಳು, ಪ್ರತಿಭಟನೆಯ ವರದಿ ಮಾಡಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಅಫ್ಘಾನ್ ಮಹಿಳೆಯರ ಪ್ರತಿಭಟನೆ ವರದಿ ಮಾಡಿದ ಪತ್ರಕರ್ತರ ಮೇಲೆ ತಾಲಿಬಾನ್‌ನಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...