Homeಅಂತರಾಷ್ಟ್ರೀಯಅಫ್ಘಾನ್: ಮಹಿಳೆಯರನ್ನು ಕ್ರಿಕೆಟ್ ಸೇರಿ ಹಲವು ಕ್ರೀಡೆಗಳಿಂದ ಹೊರಗಿಟ್ಟ ತಾಲಿಬಾನ್‌ ಸರ್ಕಾರ

ಅಫ್ಘಾನ್: ಮಹಿಳೆಯರನ್ನು ಕ್ರಿಕೆಟ್ ಸೇರಿ ಹಲವು ಕ್ರೀಡೆಗಳಿಂದ ಹೊರಗಿಟ್ಟ ತಾಲಿಬಾನ್‌ ಸರ್ಕಾರ

- Advertisement -
- Advertisement -

ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳು ಹೊಸ ಸರ್ಕಾರವನ್ನು ರಚನೆ ಮಾಡಿದ್ದು, ನೂತನ ಪ್ರಧಾನಿಯಾಗಿ ಮುಲ್ಲಾ ಮೊಹಮ್ಮದ್​ ಹಸನ್​ ಅಕುಂದ್ ಅಧಿಕಾರಕ್ಕೆ ಏರಲಿದ್ದಾರೆ. ಇದೇ ವೇಳೆ ಅಫ್ಘಾನ್ ಮಹಿಳೆಯರಿಗೆ ಕ್ರಿಕೆಟ್ ಸೇರಿದಂತೆ ಹಲವು ಕ್ರೀಡೆಗಳಿಂದ ಬ್ಯಾನ್ ಮಾಡಲಾಗಿದೆ.

ಅಫ್ಘಾನಿಸ್ತಾನದಲ್ಲಿ ಸರ್ಕಾರ ರಚಿಸಿರುವ ತಾಲಿಬಾನ್, ಹಲವು ಇಲಾಖೆಗಳಿಗೆ ಸಚಿವರನ್ನು ನೇಮಿಸಿದೆ.

ಆಸ್ಟ್ರೇಲಿಯಾದ ಎಸ್‌ಬಿಎಸ್ ಟಿವಿಗೆ ಹೇಳಿಕೆ ನೀಡಿರುವ ತಾಲಿಬಾನ್ ಸಾಂಸ್ಕೃತಿಕ ಆಯೋಗದ ಉಪ ಮುಖ್ಯಸ್ಥ ಅಹ್ಮದುಲ್ಲಾ ವಾಸಿಕ್, “ಕ್ರಿಕೆಟ್‌ನಲ್ಲಿ, ಮಹಿಳೆಯರು ತಮ್ಮ ಮುಖ ಮತ್ತು ದೇಹವನ್ನು ಮುಚ್ಚಿಕೊಳ್ಳದಂತಹ ಪರಿಸ್ಥಿತಿಯನ್ನು ಎದುರಿಸಬಹುದು. ಮಹಿಳೆಯರನ್ನು ಈ ರೀತಿ ನೋಡಲು ಇಸ್ಲಾಂ ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಫ್ಘಾನ್: ಮಹಿಳೆಯರು ಕೆಲಸಕ್ಕೆ ಹೊರ ಹೋಗುವುದು ಸುರಕ್ಷಿತವಲ್ಲ- ತಾಲಿಬಾನ್ ವಕ್ತಾರ

“ಇದು ಮಾಧ್ಯಮದ ಯುಗ, ಕ್ರೀಡೆಯ ಫೋಟೋಗಳು ಮತ್ತು ವಿಡಿಯೊಗಳು ಹರಿದಾಡುತ್ತವೆ. ಅದನ್ನು ಜನರು ನೋಡುತ್ತಾರೆ. ಇಸ್ಲಾಂ ಮತ್ತು ಇಸ್ಲಾಮಿಕ್ ಎಮಿರೇಟ್ ಮಹಿಳೆಯರಿಗೆ ಕ್ರಿಕೆಟ್ ಆಡಲು ಅಥವಾ ಅವರ  ಮುಖ ಮತ್ತು ದೇಹ ಕಾಣಿಸುವಂತಹ ರೀತಿಯ ಕ್ರೀಡೆಗಳನ್ನು ಆಡಲು ಅನುಮತಿಸುವುದಿಲ್ಲ” ಎಂದಿದ್ದಾರೆ.

20 ವರ್ಷಗಳ ಬಳಿಕ ಮಂಗಳವಾರ (ಸೆ.7) ತಾಲಿಬಾನಿಗಳು ಅಫ್ಘಾನಿಸ್ತಾನದಲ್ಲಿ ಪುರುಷರ ಸರ್ಕಾರ ರಚಿಸಿದ್ದು, ಕ್ಯಾಬಿನೆಟ್ ಕೂಡ ರಚಿಸಿದೆ. ಆದರೆ, ತಮ್ಮ ಸಂಪುಟದಲ್ಲಿ ಒಂದೇ ಒಂದು ಸ್ಥಾನವನ್ನು ಮಹಿಳೆಯರಿಗೆ ನೀಡಿಲ್ಲ. ಇದು ತಾಲಿಬಾನ್ ಆಡಳಿತದಲ್ಲಿ ಮಹಿಳೆಯರ ಸ್ಥಿತಿಯ ಬಗ್ಗೆ ಚಿಂತಿಸುವಂತೆ ಮಾಡಿದೆ.

ಈ ಹಿಂದೆ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಸುದ್ದಿಗೋಷ್ಠಿಯಲ್ಲಿ, “ಮಹಿಳೆಯರು ತಮ್ಮ ಸುರಕ್ಷತೆಗಾಗಿ ಕೆಲಸಕ್ಕೆ ಹೋಗಬಾರದು, ನಮ್ಮ ಸೈನಿಕರ ಗುಂಪು ಇನ್ನು ಹಳೆಯ ಮನಸ್ಥಿತಿಯಲ್ಲಿಯೇ ಇದೆ. ಹೊಸ ಬದಲಾವಣೆ ಬರಲು ಸಮಯ ಬೇಕಾಗಿದೆ” ಎಂದಿದ್ದರು.

ತಾಲಿಬಾನಿಗಳ ವಿರುದ್ಧ, ಶಿಕ್ಷಣ ಮತ್ತು ಉದ್ಯೋಗದ ಹಕ್ಕಿಗಾಗಿ ಮಹಿಳೆಯರು ಬುಧವಾರ ಅಫ್ಘಾನ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯ ವಿಡಿಯೊ, ಫೋಟೋಗಳು ಹೊರ ಬರದಂತೆ ತಡೆದ ತಾಲಿಬಾನಿಗಳು, ಪ್ರತಿಭಟನೆಯ ವರದಿ ಮಾಡಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಅಫ್ಘಾನ್ ಮಹಿಳೆಯರ ಪ್ರತಿಭಟನೆ ವರದಿ ಮಾಡಿದ ಪತ್ರಕರ್ತರ ಮೇಲೆ ತಾಲಿಬಾನ್‌ನಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...