Homeಅಂತರಾಷ್ಟ್ರೀಯಅಫ್ಘಾನ್: ಮಹಿಳೆಯರನ್ನು ಕ್ರಿಕೆಟ್ ಸೇರಿ ಹಲವು ಕ್ರೀಡೆಗಳಿಂದ ಹೊರಗಿಟ್ಟ ತಾಲಿಬಾನ್‌ ಸರ್ಕಾರ

ಅಫ್ಘಾನ್: ಮಹಿಳೆಯರನ್ನು ಕ್ರಿಕೆಟ್ ಸೇರಿ ಹಲವು ಕ್ರೀಡೆಗಳಿಂದ ಹೊರಗಿಟ್ಟ ತಾಲಿಬಾನ್‌ ಸರ್ಕಾರ

- Advertisement -
- Advertisement -

ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳು ಹೊಸ ಸರ್ಕಾರವನ್ನು ರಚನೆ ಮಾಡಿದ್ದು, ನೂತನ ಪ್ರಧಾನಿಯಾಗಿ ಮುಲ್ಲಾ ಮೊಹಮ್ಮದ್​ ಹಸನ್​ ಅಕುಂದ್ ಅಧಿಕಾರಕ್ಕೆ ಏರಲಿದ್ದಾರೆ. ಇದೇ ವೇಳೆ ಅಫ್ಘಾನ್ ಮಹಿಳೆಯರಿಗೆ ಕ್ರಿಕೆಟ್ ಸೇರಿದಂತೆ ಹಲವು ಕ್ರೀಡೆಗಳಿಂದ ಬ್ಯಾನ್ ಮಾಡಲಾಗಿದೆ.

ಅಫ್ಘಾನಿಸ್ತಾನದಲ್ಲಿ ಸರ್ಕಾರ ರಚಿಸಿರುವ ತಾಲಿಬಾನ್, ಹಲವು ಇಲಾಖೆಗಳಿಗೆ ಸಚಿವರನ್ನು ನೇಮಿಸಿದೆ.

ಆಸ್ಟ್ರೇಲಿಯಾದ ಎಸ್‌ಬಿಎಸ್ ಟಿವಿಗೆ ಹೇಳಿಕೆ ನೀಡಿರುವ ತಾಲಿಬಾನ್ ಸಾಂಸ್ಕೃತಿಕ ಆಯೋಗದ ಉಪ ಮುಖ್ಯಸ್ಥ ಅಹ್ಮದುಲ್ಲಾ ವಾಸಿಕ್, “ಕ್ರಿಕೆಟ್‌ನಲ್ಲಿ, ಮಹಿಳೆಯರು ತಮ್ಮ ಮುಖ ಮತ್ತು ದೇಹವನ್ನು ಮುಚ್ಚಿಕೊಳ್ಳದಂತಹ ಪರಿಸ್ಥಿತಿಯನ್ನು ಎದುರಿಸಬಹುದು. ಮಹಿಳೆಯರನ್ನು ಈ ರೀತಿ ನೋಡಲು ಇಸ್ಲಾಂ ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಫ್ಘಾನ್: ಮಹಿಳೆಯರು ಕೆಲಸಕ್ಕೆ ಹೊರ ಹೋಗುವುದು ಸುರಕ್ಷಿತವಲ್ಲ- ತಾಲಿಬಾನ್ ವಕ್ತಾರ

“ಇದು ಮಾಧ್ಯಮದ ಯುಗ, ಕ್ರೀಡೆಯ ಫೋಟೋಗಳು ಮತ್ತು ವಿಡಿಯೊಗಳು ಹರಿದಾಡುತ್ತವೆ. ಅದನ್ನು ಜನರು ನೋಡುತ್ತಾರೆ. ಇಸ್ಲಾಂ ಮತ್ತು ಇಸ್ಲಾಮಿಕ್ ಎಮಿರೇಟ್ ಮಹಿಳೆಯರಿಗೆ ಕ್ರಿಕೆಟ್ ಆಡಲು ಅಥವಾ ಅವರ  ಮುಖ ಮತ್ತು ದೇಹ ಕಾಣಿಸುವಂತಹ ರೀತಿಯ ಕ್ರೀಡೆಗಳನ್ನು ಆಡಲು ಅನುಮತಿಸುವುದಿಲ್ಲ” ಎಂದಿದ್ದಾರೆ.

20 ವರ್ಷಗಳ ಬಳಿಕ ಮಂಗಳವಾರ (ಸೆ.7) ತಾಲಿಬಾನಿಗಳು ಅಫ್ಘಾನಿಸ್ತಾನದಲ್ಲಿ ಪುರುಷರ ಸರ್ಕಾರ ರಚಿಸಿದ್ದು, ಕ್ಯಾಬಿನೆಟ್ ಕೂಡ ರಚಿಸಿದೆ. ಆದರೆ, ತಮ್ಮ ಸಂಪುಟದಲ್ಲಿ ಒಂದೇ ಒಂದು ಸ್ಥಾನವನ್ನು ಮಹಿಳೆಯರಿಗೆ ನೀಡಿಲ್ಲ. ಇದು ತಾಲಿಬಾನ್ ಆಡಳಿತದಲ್ಲಿ ಮಹಿಳೆಯರ ಸ್ಥಿತಿಯ ಬಗ್ಗೆ ಚಿಂತಿಸುವಂತೆ ಮಾಡಿದೆ.

ಈ ಹಿಂದೆ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಸುದ್ದಿಗೋಷ್ಠಿಯಲ್ಲಿ, “ಮಹಿಳೆಯರು ತಮ್ಮ ಸುರಕ್ಷತೆಗಾಗಿ ಕೆಲಸಕ್ಕೆ ಹೋಗಬಾರದು, ನಮ್ಮ ಸೈನಿಕರ ಗುಂಪು ಇನ್ನು ಹಳೆಯ ಮನಸ್ಥಿತಿಯಲ್ಲಿಯೇ ಇದೆ. ಹೊಸ ಬದಲಾವಣೆ ಬರಲು ಸಮಯ ಬೇಕಾಗಿದೆ” ಎಂದಿದ್ದರು.

ತಾಲಿಬಾನಿಗಳ ವಿರುದ್ಧ, ಶಿಕ್ಷಣ ಮತ್ತು ಉದ್ಯೋಗದ ಹಕ್ಕಿಗಾಗಿ ಮಹಿಳೆಯರು ಬುಧವಾರ ಅಫ್ಘಾನ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯ ವಿಡಿಯೊ, ಫೋಟೋಗಳು ಹೊರ ಬರದಂತೆ ತಡೆದ ತಾಲಿಬಾನಿಗಳು, ಪ್ರತಿಭಟನೆಯ ವರದಿ ಮಾಡಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಅಫ್ಘಾನ್ ಮಹಿಳೆಯರ ಪ್ರತಿಭಟನೆ ವರದಿ ಮಾಡಿದ ಪತ್ರಕರ್ತರ ಮೇಲೆ ತಾಲಿಬಾನ್‌ನಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...