Homeಅಂತರಾಷ್ಟ್ರೀಯಅಫ್ಘಾನಿಸ್ತಾನ | ಮಹಿಳೆಯನ್ನು ನೇಮಿಸಿಕೊಳ್ಳುವ ಎನ್‌ಜಿಒಗಳ ಸ್ಥಗಿತ - ತಾಲಿಬಾನ್

ಅಫ್ಘಾನಿಸ್ತಾನ | ಮಹಿಳೆಯನ್ನು ನೇಮಿಸಿಕೊಳ್ಳುವ ಎನ್‌ಜಿಒಗಳ ಸ್ಥಗಿತ – ತಾಲಿಬಾನ್

- Advertisement -
- Advertisement -

ಮಹಿಳೆಯರನ್ನು ನೇಮಿಸಿಕೊಳ್ಳುವ ರಾಷ್ಟ್ರೀಯ ಮತ್ತು ವಿದೇಶಿ ಸರ್ಕಾರೇತರ ಸಂಸ್ಥೆ(ಎನ್‌ಜಿಒ)ಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ಭಾನುವಾರ ಘೋಷಿಸಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಡಿಸೆಂಬರ್ 2022ರಲ್ಲಿ ತಾಲಿಬಾನ್ ಆಡಳಿತವು, ಮಹಿಳೆಯರು ಸರಿಯಾಗಿ ಹಿಜಾಬ್ ಧರಿಸುವುದಿಲ್ಲ ಎಂದು ಆರೋಪಿಸಿ ಅಫ್ಘಾನ್ ಮಹಿಳೆಯರನ್ನು ಉದ್ಯೋಗದಿಂದ ತೆಗೆದುಹಾಕಬೇಕು ಎಂದು ಇಂತಹ ಸಂಸ್ಥೆಗಳಿಗೆ ಆದೇಶಿಸಿತ್ತು. ಇದಾಗಿ ಎರಡು ವರ್ಷಗಳ ನಂತರ ಅಂತಹ ಸಂಸ್ಥೆಗಳನ್ನು ನಿಲ್ಲಿಸುವುದಾಗಿ ಸರ್ಕಾರವು ಆದೇಶಿಸಿದೆ. ಅಫ್ಘಾನಿಸ್ತಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಭಾನುವಾರ ಎಕ್ಸ್‌ನಲ್ಲಿ ನೀಡಲಾಗಿರುವ ನೋಟೀಸ್‌ನಲ್ಲಿ, ಸರ್ಕಾರೇತರ ಸಂಸ್ಥೆಗಳು ನಡೆಸುವ ಎಲ್ಲಾ ಚಟುವಟಿಕೆಗಳನ್ನು ನಿಯಂತ್ರಿಸುವ ಜವಾಬ್ದಾರಿಯ ಬಗ್ಗೆ ದೇಶದ ಆರ್ಥಿಕ ಸಚಿವಾಲಯ ತಿಳಿಸಿದೆ. ತಾಲಿಬಾನ್ ಸರ್ಕಾರವು ತನ್ನ ನಿಯಂತ್ರಣದಲ್ಲಿಲ್ಲದ ಸಂಸ್ಥೆಗಳಲ್ಲಿ ಮಹಿಳಾ ಕಾರ್ಮಿಕರ ಮೇಲೆ ನಿಷೇಧ ಹೇರಲು ಮತ್ತೊಮ್ಮೆ ಆದೇಶಿಸುತ್ತಿದೆ ಎಂದು ಅದು ಹೇಳಿದೆ.

“ಸಹಕಾರದ ಕೊರತೆಯ ಕಾರಣದಿಂದ ಅಂತಹ ಸಂಸ್ಥೆಯ ಎಲ್ಲಾ ಚಟುವಟಿಕೆಗಳನ್ನು ರದ್ದುಗೊಳಿಸಲಾಗುತ್ತದೆ ಮತ್ತು ಸಚಿವಾಲಯದಿಂದ ನೀಡಲಾದ ಸಂಸ್ಥೆಯ ಚಟುವಟಿಕೆ ಪರವಾನಗಿಯನ್ನು ಸಹ ರದ್ದುಗೊಳಿಸಲಾಗುತ್ತದೆ” ಎಂದು ಅದು ಹೇಳಿದೆ. ಅಫ್ಘಾನಿಸ್ತಾನ

ಸೆಪ್ಟೆಂಬರ್ 2021 ರಲ್ಲಿ, ಇಸ್ಲಾಮಿಕ್ ಕಾನೂನನ್ನು ಅನುಸರಿಸಲಾಗುತ್ತಿಲ್ಲ ಎಂದು ಆರೋಪಿಸಿ ಆರನೇ ತರಗತಿಗಿಂತ ಮೇಲೆ ಹುಡುಗಿಯರಿಗೆ ಶಿಕ್ಷಣವನ್ನು ನಿಷೇಧಿಸಿತ್ತು. ತಾಲಿಬಾನ್ ಸಂಘಟನೆಯು ದೇಶವನ್ನು ವಶಕ್ಕೆ ಪಡೆದುಕೊಂಡ ಒಂದು ತಿಂಗಳ ನಂತರ ಈ ಆದೇಶ ಮಾಡಿತ್ತು. ಅಷ್ಟೆ ಅಲ್ಲದೆ, ಇತರ ಹಲವಾರು ಉದ್ಯೋಗಗಳು ಮತ್ತು ಸಾರ್ವಜನಿಕ ಸ್ಥಳಗಳಿಂದ ಮಹಿಳೆಯರನ್ನು ತಾಲಿಬಾನ್ ನಿರ್ಬಂಧಿಸಿದೆ.

ಮಹಿಳೆ ಕುಳಿತುಕೊಳ್ಳುವ ಅಥವಾ ನಿಲ್ಲುವ ಸ್ಥಳಗಳಲ್ಲಿ ಹೊರಗೆ ಕಾಣುವ ಕಟ್ಟಡಗಳಿಗೆ ಕಿಟಕಿಗಳನ್ನು ಹೊಂದಿರಬಾರದು ಎಂದು ತಾಲಿಬಾನ್ ನಾಯಕ ಹಿಬತುಲ್ಲಾ ಅಖುಂದ್ಜಾದಾ ಶನಿವಾರ ಘೋಷಿಸಿದ್ದರು. ಹೊಸ ಹೊಸ ಕಟ್ಟಡಗಳು ಮತ್ತು ಅಸ್ತಿತ್ವದಲ್ಲಿರುವ ಕಟ್ಟಡಗಳಿಗೆ ಆದೇಶವು ಅನ್ವಯಿಸುತ್ತದೆ ಎಂದು ಅವರು ಹೇಳಿದ್ದಾರೆ.

ತಾಲಿಬಾನ್ ಸರ್ಕಾರದ ಜೊತೆಗೆ ಜಾಗತಿಕವಾಗಿ ಹಲವಾರು ಸರ್ಕಾರಗಳು ತೊಡಗಿಸಿಕೊಂಡಿದ್ದರೂ ಸಹ, ಯಾವುದೇ ದೇಶವು ಅದನ್ನು ಇನ್ನೂ ಗುರುತಿಸಲಾಗಿಲ್ಲ.

ಇದನ್ನೂ ಓದಿ: ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

https://naanugauri.com/travel-agency-fraud-medina-paradadu-coast-umrah-pilgrim/

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...