Homeಅಂತರಾಷ್ಟ್ರೀಯಅಫ್ಘಾನಿಸ್ತಾನ | ಮಹಿಳೆಯನ್ನು ನೇಮಿಸಿಕೊಳ್ಳುವ ಎನ್‌ಜಿಒಗಳ ಸ್ಥಗಿತ - ತಾಲಿಬಾನ್

ಅಫ್ಘಾನಿಸ್ತಾನ | ಮಹಿಳೆಯನ್ನು ನೇಮಿಸಿಕೊಳ್ಳುವ ಎನ್‌ಜಿಒಗಳ ಸ್ಥಗಿತ – ತಾಲಿಬಾನ್

- Advertisement -
- Advertisement -

ಮಹಿಳೆಯರನ್ನು ನೇಮಿಸಿಕೊಳ್ಳುವ ರಾಷ್ಟ್ರೀಯ ಮತ್ತು ವಿದೇಶಿ ಸರ್ಕಾರೇತರ ಸಂಸ್ಥೆ(ಎನ್‌ಜಿಒ)ಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ಭಾನುವಾರ ಘೋಷಿಸಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಡಿಸೆಂಬರ್ 2022ರಲ್ಲಿ ತಾಲಿಬಾನ್ ಆಡಳಿತವು, ಮಹಿಳೆಯರು ಸರಿಯಾಗಿ ಹಿಜಾಬ್ ಧರಿಸುವುದಿಲ್ಲ ಎಂದು ಆರೋಪಿಸಿ ಅಫ್ಘಾನ್ ಮಹಿಳೆಯರನ್ನು ಉದ್ಯೋಗದಿಂದ ತೆಗೆದುಹಾಕಬೇಕು ಎಂದು ಇಂತಹ ಸಂಸ್ಥೆಗಳಿಗೆ ಆದೇಶಿಸಿತ್ತು. ಇದಾಗಿ ಎರಡು ವರ್ಷಗಳ ನಂತರ ಅಂತಹ ಸಂಸ್ಥೆಗಳನ್ನು ನಿಲ್ಲಿಸುವುದಾಗಿ ಸರ್ಕಾರವು ಆದೇಶಿಸಿದೆ. ಅಫ್ಘಾನಿಸ್ತಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಭಾನುವಾರ ಎಕ್ಸ್‌ನಲ್ಲಿ ನೀಡಲಾಗಿರುವ ನೋಟೀಸ್‌ನಲ್ಲಿ, ಸರ್ಕಾರೇತರ ಸಂಸ್ಥೆಗಳು ನಡೆಸುವ ಎಲ್ಲಾ ಚಟುವಟಿಕೆಗಳನ್ನು ನಿಯಂತ್ರಿಸುವ ಜವಾಬ್ದಾರಿಯ ಬಗ್ಗೆ ದೇಶದ ಆರ್ಥಿಕ ಸಚಿವಾಲಯ ತಿಳಿಸಿದೆ. ತಾಲಿಬಾನ್ ಸರ್ಕಾರವು ತನ್ನ ನಿಯಂತ್ರಣದಲ್ಲಿಲ್ಲದ ಸಂಸ್ಥೆಗಳಲ್ಲಿ ಮಹಿಳಾ ಕಾರ್ಮಿಕರ ಮೇಲೆ ನಿಷೇಧ ಹೇರಲು ಮತ್ತೊಮ್ಮೆ ಆದೇಶಿಸುತ್ತಿದೆ ಎಂದು ಅದು ಹೇಳಿದೆ.

“ಸಹಕಾರದ ಕೊರತೆಯ ಕಾರಣದಿಂದ ಅಂತಹ ಸಂಸ್ಥೆಯ ಎಲ್ಲಾ ಚಟುವಟಿಕೆಗಳನ್ನು ರದ್ದುಗೊಳಿಸಲಾಗುತ್ತದೆ ಮತ್ತು ಸಚಿವಾಲಯದಿಂದ ನೀಡಲಾದ ಸಂಸ್ಥೆಯ ಚಟುವಟಿಕೆ ಪರವಾನಗಿಯನ್ನು ಸಹ ರದ್ದುಗೊಳಿಸಲಾಗುತ್ತದೆ” ಎಂದು ಅದು ಹೇಳಿದೆ. ಅಫ್ಘಾನಿಸ್ತಾನ

ಸೆಪ್ಟೆಂಬರ್ 2021 ರಲ್ಲಿ, ಇಸ್ಲಾಮಿಕ್ ಕಾನೂನನ್ನು ಅನುಸರಿಸಲಾಗುತ್ತಿಲ್ಲ ಎಂದು ಆರೋಪಿಸಿ ಆರನೇ ತರಗತಿಗಿಂತ ಮೇಲೆ ಹುಡುಗಿಯರಿಗೆ ಶಿಕ್ಷಣವನ್ನು ನಿಷೇಧಿಸಿತ್ತು. ತಾಲಿಬಾನ್ ಸಂಘಟನೆಯು ದೇಶವನ್ನು ವಶಕ್ಕೆ ಪಡೆದುಕೊಂಡ ಒಂದು ತಿಂಗಳ ನಂತರ ಈ ಆದೇಶ ಮಾಡಿತ್ತು. ಅಷ್ಟೆ ಅಲ್ಲದೆ, ಇತರ ಹಲವಾರು ಉದ್ಯೋಗಗಳು ಮತ್ತು ಸಾರ್ವಜನಿಕ ಸ್ಥಳಗಳಿಂದ ಮಹಿಳೆಯರನ್ನು ತಾಲಿಬಾನ್ ನಿರ್ಬಂಧಿಸಿದೆ.

ಮಹಿಳೆ ಕುಳಿತುಕೊಳ್ಳುವ ಅಥವಾ ನಿಲ್ಲುವ ಸ್ಥಳಗಳಲ್ಲಿ ಹೊರಗೆ ಕಾಣುವ ಕಟ್ಟಡಗಳಿಗೆ ಕಿಟಕಿಗಳನ್ನು ಹೊಂದಿರಬಾರದು ಎಂದು ತಾಲಿಬಾನ್ ನಾಯಕ ಹಿಬತುಲ್ಲಾ ಅಖುಂದ್ಜಾದಾ ಶನಿವಾರ ಘೋಷಿಸಿದ್ದರು. ಹೊಸ ಹೊಸ ಕಟ್ಟಡಗಳು ಮತ್ತು ಅಸ್ತಿತ್ವದಲ್ಲಿರುವ ಕಟ್ಟಡಗಳಿಗೆ ಆದೇಶವು ಅನ್ವಯಿಸುತ್ತದೆ ಎಂದು ಅವರು ಹೇಳಿದ್ದಾರೆ.

ತಾಲಿಬಾನ್ ಸರ್ಕಾರದ ಜೊತೆಗೆ ಜಾಗತಿಕವಾಗಿ ಹಲವಾರು ಸರ್ಕಾರಗಳು ತೊಡಗಿಸಿಕೊಂಡಿದ್ದರೂ ಸಹ, ಯಾವುದೇ ದೇಶವು ಅದನ್ನು ಇನ್ನೂ ಗುರುತಿಸಲಾಗಿಲ್ಲ.

ಇದನ್ನೂ ಓದಿ: ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

https://naanugauri.com/travel-agency-fraud-medina-paradadu-coast-umrah-pilgrim/

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...