Homeಅಂತರಾಷ್ಟ್ರೀಯಅಫ್ಘಾನಿಸ್ತಾನ: ಪುರುಷನ ಬೆಂಗಾವಲು ಇಲ್ಲದೆ ಮಹಿಳೆ ದೂರ ಪ್ರಯಾಣಿಸುವಂತಿಲ್ಲ- ತಾಲಿಬಾನ್

ಅಫ್ಘಾನಿಸ್ತಾನ: ಪುರುಷನ ಬೆಂಗಾವಲು ಇಲ್ಲದೆ ಮಹಿಳೆ ದೂರ ಪ್ರಯಾಣಿಸುವಂತಿಲ್ಲ- ತಾಲಿಬಾನ್

- Advertisement -
- Advertisement -

ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನ್ ಅಲ್ಲಿನ ಮಹಿಳೆಯರ ಮೇಲೆ ಹಿಡಿತ ಸಾಧಿಸುತ್ತಿದ್ದು, ಮತ್ತೆ ಹೊಸ ನಿರ್ಬಂಧ ವಿಧಿಸಿದೆ. ಇಸ್ಲಾಮಿಕ್ ಹಿಜಾಬ್‌ಗಳನ್ನು ಧರಿಸದೆ, ಹತ್ತಿರದ ಪುರುಷ ಸಂಬಂಧಿ ಜೊತೆಗಿರದೇ ದೂರದ ಸ್ಥಳಗಳಿಗೆ ಪ್ರಯಾಣಿಸುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಕಡಿಮೆ ದೂರದ ಹೊರತಾಗಿ ಬೇರೆ ಯಾವುದಾದರೂ ಸ್ಥಳಕ್ಕೆ ಪ್ರಯಾಣಿಸಲು ಬಯಸುವ ಮಹಿಳೆಯರು ತಮ್ಮ ಹತ್ತಿರದ ಪುರುಷ ಸಂಬಂಧಿ ಜೊತೆಗೆ ಮಾತ್ರ ಪ್ರಯಾಣಿಸಬಹುದುದಾಗಿದೆ. ಜೊತೆಗೆ ಇಸ್ಲಾಮಿಕ್ ಹಿಜಾಬ್‌ಗಳನ್ನು ಧರಿಸದಿರುವವರಿಗೆ ಪ್ರಯಾಣಿಸಲು ಅವಕಾಶ ನೀಡಬಾರದು ಎಂದು ಅಫ್ಘಾನಿಸ್ತಾನದ ತಾಲಿಬಾನ್ ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.

ತಾಲಿಬಾನ್ ಸರ್ಕಾರದ ಸಚ್ಚಾರಿತ್ರ್ಯ ಬೆಂಬಲ ಮತ್ತು ದುರಾಚಾರ ನಿಯಂತ್ರಣ ಸಚಿವಾಲಯವು ಹೊರಡಿಸಿದ ಮಾರ್ಗಸೂಚಿಯಲ್ಲಿ, ಇಸ್ಲಾಮಿಕ್ ಹಿಜಾಬ್‌ಗಳನ್ನು ಧರಿಸಿರುವ ಮಹಿಳೆಯರಿಗೆ ಮಾತ್ರ ಪ್ರಯಾಣ ಮಾಡಲು ಅವಕಾಶ ನೀಡುವಂತೆ ಎಲ್ಲಾ ವಾಹನ ಮಾಲೀಕರಿಗೆ ಕರೆ ನೀಡಲಾಗಿದೆ.

ಇದನ್ನೂ ಓದಿ: ಅಫ್ಘಾನ್: ಮಹಿಳೆಯರು ಕೆಲಸಕ್ಕೆ ಹೊರ ಹೋಗುವುದು ಸುರಕ್ಷಿತವಲ್ಲ- ತಾಲಿಬಾನ್ ವಕ್ತಾರ

“45 ಮೈಲುಗಳಿಗಿಂತ ಹೆಚ್ಚು (72 ಕಿಲೋಮೀಟರ್) ಪ್ರಯಾಣಿಸುವ ಮಹಿಳೆಯರು ತಮ್ಮ ಹತ್ತಿರದ ಕುಟುಂಬದ ಸದಸ್ಯರಿಲ್ಲದೆ ಪ್ರಯಾಣ ಮಾಡಬಾರದು” ಎಂದು ಸಚಿವಾಲಯದ ವಕ್ತಾರ ಸಾದಿಕ್ ಅಕಿಫ್ ಮುಹಾಜಿರ್ ಭಾನುವಾರ AFPಗೆ ತಿಳಿಸಿದ್ದಾರೆ. ಜೊತೆಗೆ, ಮಹಿಳೆಯ ಜೊತೆ ಹೋಗುವ ಪುರುಷ ಸಂಬಂಧಿ ಹತ್ತಿರದವರೇ ಆಗಿರಬೇಕು ಎಂದು ಸೂಚಿಸಿದ್ದಾರೆ.

ನಟಿಯರಿರುವ ಜಾಹೀರಾತು, ಧಾರಾವಾಹಿಗಳನ್ನು ಪ್ರಸಾರ ಮಾಡುವುದನ್ನು ನಿಲ್ಲಿಸುವಂತೆ ಅಫ್ಘಾನಿಸ್ತಾನದ ಟಿವಿ ಚಾನೆಲ್‌ಗಳಿಗೆ ಕಳೆದ ವಾರ ಸೂಚನೆ ನೀಡಲಾಗಿತ್ತು. ಇನ್ನು ಮಹಿಳಾ ಟಿವಿ ಪತ್ರಕರ್ತರು ಸುದ್ದಿ ಓದುವಾಗ ಹಿಜಾಬ್ ಧರಿಸುವಂತೆ ಸಚಿವಾಲಯವು ಕರೆ ನೀಡಿದೆ. ಇನ್ನು ಜನರು ತಮ್ಮ ವಾಹನಗಳಲ್ಲಿ ಹಾಡು ಕೇಳುವುದನ್ನು ನಿಲ್ಲಿಸುವಂತೆ ತಿಳಿಸಲಾಗಿದೆ.

ಕಳೆದ ಆಗಸ್ಟ್‌ನಲ್ಲಿ ಅಧಿಕಾರ ವಹಿಸಿಕೊಂಡ ತಾಲಿಬಾನ್‌ಗಳು 1990 ರ ದಶಕದಲ್ಲಿನ ಅಧಿಕಾರದಲ್ಲಿದ್ದಾಗ ನಡೆದುಕೊಂಡಂತೆ ನಡೆಯುವುದಿಲ್ಲ ಎಂದು ತಿಳಿಸಿದ್ದರು. ಆದರೆ, ಈಗ ಮಹಿಳೆಯರು ಮತ್ತು ಹುಡುಗಿಯರ ಮೇಲೆ ವಿವಿಧ ನಿರ್ಬಂಧಗಳನ್ನು ವಿಧಿಸಿದ್ದಾರೆ. ಹಲವು ಹೆಣ್ಣು ಮಕ್ಕಳು ಶಾಲೆಯಿಂದ ವಂಚಿತರಾಗಿದ್ದಾರೆ.

ಈ ಹಿಂದೆ ಮಹಿಳೆಯರಿಗೆ ಕ್ರಿಕೆಟ್ ಸೇರಿದಂತೆ ಹಲವು ಕ್ರೀಡೆಗಳಿಂದ ಬ್ಯಾನ್ ಮಾಡಲಾಗಿದೆ. ಆಸ್ಟ್ರೇಲಿಯಾದ ಎಸ್‌ಬಿಎಸ್ ಟಿವಿಗೆ ಹೇಳಿಕೆ ನೀಡಿರುವ ತಾಲಿಬಾನ್ ಸಾಂಸ್ಕೃತಿಕ ಆಯೋಗದ ಉಪ ಮುಖ್ಯಸ್ಥ ಅಹ್ಮದುಲ್ಲಾ ವಾಸಿಕ್, “ಕ್ರಿಕೆಟ್‌ನಲ್ಲಿ, ಮಹಿಳೆಯರು ತಮ್ಮ ಮುಖ ಮತ್ತು ದೇಹವನ್ನು ಮುಚ್ಚಿಕೊಳ್ಳದಂತಹ ಪರಿಸ್ಥಿತಿಯನ್ನು ಎದುರಿಸಬಹುದು. ಮಹಿಳೆಯರನ್ನು ಈ ರೀತಿ ನೋಡಲು ಇಸ್ಲಾಂ ಅನುಮತಿಸುವುದಿಲ್ಲ” ಎಂದು ಹೇಳಿದ್ದರು.


ಇದನ್ನೂ ಓದಿ: ಅಫ್ಘಾನ್: ಮಹಿಳೆಯರನ್ನು ಕ್ರಿಕೆಟ್ ಸೇರಿ ಹಲವು ಕ್ರೀಡೆಗಳಿಂದ ಹೊರಗಿಟ್ಟ ತಾಲಿಬಾನ್‌ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ತಾಲಿಬಾನಿಗಳ ಅಟ್ಟಹಾಸ ಅತಿಯಾಗುತ್ತಿದೆ.

    ಇವರನ್ನು ಸರಿ ದಾರಿಗೆ ತರಲು ವಿಶ್ವ ನಾಯಕರಿಗೆ ಏಕೆ ಆಗುತ್ತಿಲ್ಲ

    ಈ ಒಂದು ವಿಷಯದಲ್ಲಿಯಾದರೂ ಒಗ್ಗೂಡಿ ಕೆಲಸ ಮಾಡಬಹುದಲ್ಲಾ

    Biden ತಪ್ಪು ಮಾಡಿದರೇ……

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...