Homeಅಂತರಾಷ್ಟ್ರೀಯಅಫ್ಘಾನಿಸ್ತಾನ: ಪುರುಷನ ಬೆಂಗಾವಲು ಇಲ್ಲದೆ ಮಹಿಳೆ ದೂರ ಪ್ರಯಾಣಿಸುವಂತಿಲ್ಲ- ತಾಲಿಬಾನ್

ಅಫ್ಘಾನಿಸ್ತಾನ: ಪುರುಷನ ಬೆಂಗಾವಲು ಇಲ್ಲದೆ ಮಹಿಳೆ ದೂರ ಪ್ರಯಾಣಿಸುವಂತಿಲ್ಲ- ತಾಲಿಬಾನ್

- Advertisement -
- Advertisement -

ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನ್ ಅಲ್ಲಿನ ಮಹಿಳೆಯರ ಮೇಲೆ ಹಿಡಿತ ಸಾಧಿಸುತ್ತಿದ್ದು, ಮತ್ತೆ ಹೊಸ ನಿರ್ಬಂಧ ವಿಧಿಸಿದೆ. ಇಸ್ಲಾಮಿಕ್ ಹಿಜಾಬ್‌ಗಳನ್ನು ಧರಿಸದೆ, ಹತ್ತಿರದ ಪುರುಷ ಸಂಬಂಧಿ ಜೊತೆಗಿರದೇ ದೂರದ ಸ್ಥಳಗಳಿಗೆ ಪ್ರಯಾಣಿಸುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಕಡಿಮೆ ದೂರದ ಹೊರತಾಗಿ ಬೇರೆ ಯಾವುದಾದರೂ ಸ್ಥಳಕ್ಕೆ ಪ್ರಯಾಣಿಸಲು ಬಯಸುವ ಮಹಿಳೆಯರು ತಮ್ಮ ಹತ್ತಿರದ ಪುರುಷ ಸಂಬಂಧಿ ಜೊತೆಗೆ ಮಾತ್ರ ಪ್ರಯಾಣಿಸಬಹುದುದಾಗಿದೆ. ಜೊತೆಗೆ ಇಸ್ಲಾಮಿಕ್ ಹಿಜಾಬ್‌ಗಳನ್ನು ಧರಿಸದಿರುವವರಿಗೆ ಪ್ರಯಾಣಿಸಲು ಅವಕಾಶ ನೀಡಬಾರದು ಎಂದು ಅಫ್ಘಾನಿಸ್ತಾನದ ತಾಲಿಬಾನ್ ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.

ತಾಲಿಬಾನ್ ಸರ್ಕಾರದ ಸಚ್ಚಾರಿತ್ರ್ಯ ಬೆಂಬಲ ಮತ್ತು ದುರಾಚಾರ ನಿಯಂತ್ರಣ ಸಚಿವಾಲಯವು ಹೊರಡಿಸಿದ ಮಾರ್ಗಸೂಚಿಯಲ್ಲಿ, ಇಸ್ಲಾಮಿಕ್ ಹಿಜಾಬ್‌ಗಳನ್ನು ಧರಿಸಿರುವ ಮಹಿಳೆಯರಿಗೆ ಮಾತ್ರ ಪ್ರಯಾಣ ಮಾಡಲು ಅವಕಾಶ ನೀಡುವಂತೆ ಎಲ್ಲಾ ವಾಹನ ಮಾಲೀಕರಿಗೆ ಕರೆ ನೀಡಲಾಗಿದೆ.

ಇದನ್ನೂ ಓದಿ: ಅಫ್ಘಾನ್: ಮಹಿಳೆಯರು ಕೆಲಸಕ್ಕೆ ಹೊರ ಹೋಗುವುದು ಸುರಕ್ಷಿತವಲ್ಲ- ತಾಲಿಬಾನ್ ವಕ್ತಾರ

“45 ಮೈಲುಗಳಿಗಿಂತ ಹೆಚ್ಚು (72 ಕಿಲೋಮೀಟರ್) ಪ್ರಯಾಣಿಸುವ ಮಹಿಳೆಯರು ತಮ್ಮ ಹತ್ತಿರದ ಕುಟುಂಬದ ಸದಸ್ಯರಿಲ್ಲದೆ ಪ್ರಯಾಣ ಮಾಡಬಾರದು” ಎಂದು ಸಚಿವಾಲಯದ ವಕ್ತಾರ ಸಾದಿಕ್ ಅಕಿಫ್ ಮುಹಾಜಿರ್ ಭಾನುವಾರ AFPಗೆ ತಿಳಿಸಿದ್ದಾರೆ. ಜೊತೆಗೆ, ಮಹಿಳೆಯ ಜೊತೆ ಹೋಗುವ ಪುರುಷ ಸಂಬಂಧಿ ಹತ್ತಿರದವರೇ ಆಗಿರಬೇಕು ಎಂದು ಸೂಚಿಸಿದ್ದಾರೆ.

ನಟಿಯರಿರುವ ಜಾಹೀರಾತು, ಧಾರಾವಾಹಿಗಳನ್ನು ಪ್ರಸಾರ ಮಾಡುವುದನ್ನು ನಿಲ್ಲಿಸುವಂತೆ ಅಫ್ಘಾನಿಸ್ತಾನದ ಟಿವಿ ಚಾನೆಲ್‌ಗಳಿಗೆ ಕಳೆದ ವಾರ ಸೂಚನೆ ನೀಡಲಾಗಿತ್ತು. ಇನ್ನು ಮಹಿಳಾ ಟಿವಿ ಪತ್ರಕರ್ತರು ಸುದ್ದಿ ಓದುವಾಗ ಹಿಜಾಬ್ ಧರಿಸುವಂತೆ ಸಚಿವಾಲಯವು ಕರೆ ನೀಡಿದೆ. ಇನ್ನು ಜನರು ತಮ್ಮ ವಾಹನಗಳಲ್ಲಿ ಹಾಡು ಕೇಳುವುದನ್ನು ನಿಲ್ಲಿಸುವಂತೆ ತಿಳಿಸಲಾಗಿದೆ.

ಕಳೆದ ಆಗಸ್ಟ್‌ನಲ್ಲಿ ಅಧಿಕಾರ ವಹಿಸಿಕೊಂಡ ತಾಲಿಬಾನ್‌ಗಳು 1990 ರ ದಶಕದಲ್ಲಿನ ಅಧಿಕಾರದಲ್ಲಿದ್ದಾಗ ನಡೆದುಕೊಂಡಂತೆ ನಡೆಯುವುದಿಲ್ಲ ಎಂದು ತಿಳಿಸಿದ್ದರು. ಆದರೆ, ಈಗ ಮಹಿಳೆಯರು ಮತ್ತು ಹುಡುಗಿಯರ ಮೇಲೆ ವಿವಿಧ ನಿರ್ಬಂಧಗಳನ್ನು ವಿಧಿಸಿದ್ದಾರೆ. ಹಲವು ಹೆಣ್ಣು ಮಕ್ಕಳು ಶಾಲೆಯಿಂದ ವಂಚಿತರಾಗಿದ್ದಾರೆ.

ಈ ಹಿಂದೆ ಮಹಿಳೆಯರಿಗೆ ಕ್ರಿಕೆಟ್ ಸೇರಿದಂತೆ ಹಲವು ಕ್ರೀಡೆಗಳಿಂದ ಬ್ಯಾನ್ ಮಾಡಲಾಗಿದೆ. ಆಸ್ಟ್ರೇಲಿಯಾದ ಎಸ್‌ಬಿಎಸ್ ಟಿವಿಗೆ ಹೇಳಿಕೆ ನೀಡಿರುವ ತಾಲಿಬಾನ್ ಸಾಂಸ್ಕೃತಿಕ ಆಯೋಗದ ಉಪ ಮುಖ್ಯಸ್ಥ ಅಹ್ಮದುಲ್ಲಾ ವಾಸಿಕ್, “ಕ್ರಿಕೆಟ್‌ನಲ್ಲಿ, ಮಹಿಳೆಯರು ತಮ್ಮ ಮುಖ ಮತ್ತು ದೇಹವನ್ನು ಮುಚ್ಚಿಕೊಳ್ಳದಂತಹ ಪರಿಸ್ಥಿತಿಯನ್ನು ಎದುರಿಸಬಹುದು. ಮಹಿಳೆಯರನ್ನು ಈ ರೀತಿ ನೋಡಲು ಇಸ್ಲಾಂ ಅನುಮತಿಸುವುದಿಲ್ಲ” ಎಂದು ಹೇಳಿದ್ದರು.


ಇದನ್ನೂ ಓದಿ: ಅಫ್ಘಾನ್: ಮಹಿಳೆಯರನ್ನು ಕ್ರಿಕೆಟ್ ಸೇರಿ ಹಲವು ಕ್ರೀಡೆಗಳಿಂದ ಹೊರಗಿಟ್ಟ ತಾಲಿಬಾನ್‌ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ತಾಲಿಬಾನಿಗಳ ಅಟ್ಟಹಾಸ ಅತಿಯಾಗುತ್ತಿದೆ.

    ಇವರನ್ನು ಸರಿ ದಾರಿಗೆ ತರಲು ವಿಶ್ವ ನಾಯಕರಿಗೆ ಏಕೆ ಆಗುತ್ತಿಲ್ಲ

    ಈ ಒಂದು ವಿಷಯದಲ್ಲಿಯಾದರೂ ಒಗ್ಗೂಡಿ ಕೆಲಸ ಮಾಡಬಹುದಲ್ಲಾ

    Biden ತಪ್ಪು ಮಾಡಿದರೇ……

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...