Homeಅಂತರಾಷ್ಟ್ರೀಯಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

ಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

’ಕಾಬೂಲ್‌ನಲ್ಲಿ ಕಳೆದ 1, 2 ದಿನಗಳಲ್ಲಿ ಬಹಳಷ್ಟು ಬದಲಾವಣೆಯನ್ನು ನೋಡಿದೆ. ಬ್ಯೂಟಿ ಪಾರ್ಲರ್‌ಗಳಿಗೆ ಬಣ್ಣ ಬಳಿಯಲಾಗುತ್ತಿತ್ತು, ಬೀದಿಗಳಲ್ಲಿ ಮಹಿಳೆಯರು ಕಾಣಿಸುತ್ತಿರಲಿಲ್ಲ’

- Advertisement -
- Advertisement -

ತಾಲಿಬಾನ್‌‌ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ಬಳಿಕ ಅಲ್ಲಿನ ನಾಗರಿಕರು ಪಾಕಿಸ್ತಾನಕ್ಕಿಂತ ಭಾರತದ ಬಗ್ಗೆ ಹೆಚ್ಚು ಅನುಕೂಲಕರ ದೃಷ್ಟಿಕೋನವನ್ನು ಹೊಂದಿದ್ದಾರೆ. ಭಾರತದಿಂದ ಹೆಚ್ಚಿನದನ್ನು ನಿರೀಕ್ಷಿಸಿದ್ದಾರೆ ಎಂದು ಕಾಬೂಲ್‌ನಿಂದ ದೇಶಕ್ಕೆ ಹಿಂದಿರುಗಿರುವ ಪತ್ರಕರ್ತೆ ಹೇಳಿದ್ದಾರೆ.

ಭಾರತೀಯ ವಾಯುಪಡೆಯ (ಐಎಎಫ್) ವಿಶೇಷ ವಿಮಾನದಲ್ಲಿ ಕಾಬೂಲ್‌ನಿಂದ ಹಿಂದಿರುಗಿದ ಪತ್ರಕರ್ತೆಯಾದ ಕನಿಕಾ ಗುಪ್ತಾ, ಅಘ್ಘಾನಿಸ್ತಾನದಲ್ಲಿನ ಬೆಳವಣಿಗೆಗಳ ಬಗ್ಗೆ NDTV ಜೊತೆ ಮಾತನಾಡಿದ್ದಾರೆ. ಕನಿಕಾ ಗುಪ್ತಾ, ಭಾರತೀಯ ರಾಯಭಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಕರೆ ತಂದ ವಿಮಾನದಲ್ಲಿ ದೇಶಕ್ಕೆ ವಾಪಸ್ ಆಗಿದ್ದಾರೆ.

“ತಾಲಿಬಾನಿಗಳು ನನ್ನನ್ನು ಮತ್ತು ನನ್ನ ಇನ್ನೊಬ್ಬ ಸಹೋದ್ಯೋಗಿಯನ್ನು ಹುಡುಕುತ್ತಿದ್ದಾಗ ನಾನು ಅಲ್ಲಿಂದ ಹೊರಡಲು ನಿರ್ಧರಿಸಿದೆ. ತಾಲಿಬಾನಿಗಳು ನಗರವನ್ನು ವಶಪಡಿಸಿಕೊಳ್ಳುತ್ತಿದ್ದಂತೆಯೇ, ನಾನು ಭಾರತದ ರಾಯಭಾರಿ ಕಚೇರಿಯೊಂದಿಗೆ ಮಾತನಾಡಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಫ್ಘಾನ್: ಯಾರೊಂದಿಗೂ ದ್ವೇಷವಿಲ್ಲ, ಎಲ್ಲರಿಗೂ ಕ್ಷಮೆ ನೀಡಿದ್ದೇವೆ – ತಾಲಿಬಾನ್‌

“ಹೇಗಾದರೂ ರಾಯಭಾರಿ ಕಚೇರಿ ತಲುಪಬೇಕಿದ್ದ ನಮ್ಮನ್ನು ತಾಲಿಬಾನಿಗಳು ಚೆಕ್‌ಪಾಯಿಂಟ್‌ನಲ್ಲಿ ತಡೆದು ನಿಲ್ಲಿಸಿದ್ದರು. ನಾನು ಮಹಿಳೆಯಾಗಿದ್ದರಿಂದ ಅವರು ನನ್ನೊಂದಿಗೆ ಮಾತನಾಡುವುದನ್ನು ತಪ್ಪಿಸುತ್ತಿದ್ದರು. ನನ್ನ ಡ್ರೈವರ್‌ನೊಂದಿಗೆ ಮಾತನಾಡುತ್ತಿದ್ದರು. ನಾವು ವಾಪಸ್ ಹೋಗಬೇಕೆಂದು ಅವರು ಒತ್ತಾಯಿಸುತ್ತಿದ್ದರು, ಸುಮಾರು 2 ಗಂಟೆಗಳ ನಂತರ ಅವರು ನಮ್ಮನ್ನು ರಾಯಭಾರ ಕಚೇರಿಗೆ ಕರೆದೊಯ್ದರು” ಎಂದು ಕನಿಕಾ ಗುಪ್ತಾ ಹೇಳಿದ್ದಾರೆ.

“ನಾವು ನಿನ್ನೆ ರಾತ್ರಿ 10 ಗಂಟೆಗೆ ಕಾಬೂಲ್ ವಿಮಾನ ನಿಲ್ದಾಣಕ್ಕೆ ಬಂದೆವು. ಆದರೆ, ವಿಮಾನ ನಿಲ್ದಾಣದ ಗೇಟ್‌ಗಳ ಹೊರಗೆ ಸಾವಿರಾರು ಜನರು ಒಳಗೆ ಹೋಗಲು ಪ್ರಯತ್ನಿಸುತ್ತಿದ್ದರು. ಅವರು ಗಾಳಿಯಲ್ಲಿ ಗುಂಡು ಹಾರಿಸಿ ಜನರನ್ನು ಚದುರಿಸಲು ಪ್ರಯತ್ನಿಸಿದರು”  ಎಂದಿದ್ದಾರೆ.

“ನಾವು ವಿಮಾನ ನಿಲ್ದಾಣದ ಹೊರಗೆ ಐದು ಗಂಟೆಗಳ ಕಾಲ ಕಾದಿದ್ದೇವೆ. ಅಂತಿಮವಾಗಿ, ನಾವು ಯುಎಸ್ ಮತ್ತು ಟರ್ಕಿಶ್ ಪಡೆಗಳಿಂದ ನಿಯೋಜಿಸಲ್ಪಟ್ಟ ಇನ್ನೊಂದು ಗೇಟ್‌ ಬಳಸಿ ಒಳಗೆ ಹೋಗಬೇಕಾಯಿತು. ಬೆಳಿಗ್ಗೆ 6 ಗಂಟೆಗೆ ನಾವು ಭಾರತಕ್ಕೆ ಹೊರಟೆವು. 11 ಕ್ಕೆ ಇಲ್ಲಿಗೆ ಬಂದೆವು. ಏರ್ ಫೋರ್ಸ್ ನಮ್ಮನ್ನು ಬಹಳ ಕಾಳಜಿ ವಹಿಸಿ ಕರೆ ತಂದಿತು. ಅವರಿಗೆ ನಾನು ಕೃತಜ್ಞಳಾಗಿದ್ದೇನೆ” ಎಂದು ಪತ್ರಕರ್ತೆ ಹೇಳಿದ್ದಾರೆ.

“ಕಾಬೂಲ್ ವಿಮಾನ ನಿಲ್ದಾಣದಲ್ಲಿ, ನಾನು ಚಪ್ಪಲಿ, ಮಕ್ಕಳ ಪಾದರಕ್ಷೆಗಳು, ಮಹಿಳೆಯರ ದುಪಟ್ಟಾಗಳನ್ನು ನೋಡಿದೆ. ಅದು ಹಿಂದಿನ ರಾತ್ರಿ ನಡೆದ ಭಯಾನಕತೆಗೆ ಸಾಕ್ಷಿಯಾಗಿದೆ. ಅಲ್ಲಿನ ಮಹಿಳೆಯರಲ್ಲಿ ಅತಿ ಹೆಚ್ಚು ಭಯವಿದೆ. ಅವರು ತಮ್ಮನ್ನು ತಾವು ಬಟ್ಟೆಯಿಂದ ಸರಿಯಾಗಿ ಮುಚ್ಚಿಕೊಳ್ಳದಿದ್ದರೆ ಆಸಿಡ್ ದಾಳಿಯಂತಹ ಬೆದರಿಕೆಗಳನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ತಾಲಿಬಾನಿಗಳು ಇಂದು ಯಾವುದೇ ತಾರತಮ್ಯ ಇಲ್ಲ ಎಂದು ಮಾತಾಡುವಾಗ ಅದರ ಬಗ್ಗೆ ವಿಶ್ವಾಸ ಮೂಡುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

“ನಾನು ಕಾಬೂಲ್‌ನಲ್ಲಿ ಕಳೆದ 1 ಅಥವಾ 2 ದಿನಗಳಲ್ಲಿ ಬಹಳಷ್ಟು ಬದಲಾವಣೆಯನ್ನು ನೋಡಿದೆ. ಬ್ಯೂಟಿ ಪಾರ್ಲರ್‌ಗಳಿಗೆ ಬಣ್ಣ ಬಳಿಯಲಾಗುತ್ತಿತ್ತು, ಬೀದಿಗಳಲ್ಲಿ ಮಹಿಳೆಯರಿರಲಿಲ್ಲ. ಕಾಬೂಲ್ ಕ್ರಿಯಾತ್ಮಕ, ಬುದ್ಧಿವಂತ ಮತ್ತು ಫ್ಯಾಶನ್ ಮಹಿಳೆಯರನ್ನು ಹೊಂದಿದೆ” ಎಂದು ಕನಿಕಾ ಹೇಳಿದ್ದಾರೆ.

“ಅವರೆಲ್ಲರೂ ಭಾರತವನ್ನು ಪ್ರೀತಿಸುತ್ತಾರೆ. ನೀವು ಅಲ್ಲಿ 10 ಜನರೊಂದಿಗೆ ಮಾತನಾಡಿ, ಅದರಲ್ಲಿ ಭಾರತದ ಮೇಲೆ ಪ್ರೀತಿ ಮತ್ತು ಪಾಕಿಸ್ತಾನದ ಬಗ್ಗೆ ದ್ವೇಷವಿರುವುದು ನಿಮಗೆ ತಿಳಿಯುತ್ತದೆ. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಅವರು ಭಾರತದಿಂದ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದಾರೆ” ಎಂದು ಪತ್ರಕರ್ತೆ ಕನಿಕಾ ಗುಪ್ತಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇತ್ತ, ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿರುವ ತಾಲಿಬಾನ್‌ ವಕ್ತಾರ ಜಬೀಹುಲ್ಲಾ ಮುಜಾಹಿದ್, ’ತಾಲಿಬಾನಿಗಳು ಯಾರೊಂದಿಗೂ ದ್ವೇಷವನ್ನು ಹೊಂದಿಲ್ಲ ಮತ್ತು ತಮ್ಮ ನಾಯಕನ ಆದೇಶದ ಮೇರೆಗೆ ಅವರು ಎಲ್ಲರಿಗೂ ಕ್ಷಮೆ ನೀಡಿದ್ದಾರೆ. ಅಫ್ಘಾನಿಸ್ತಾನದಿಂದ ಯಾವುದೇ ಅಪಾಯವಿಲ್ಲ ಎಂದು ‘ಇಸ್ಲಾಮಿಕ್ ಎಮಿರೇಟ್’ ಜಗತ್ತಿನ ಎಲ್ಲ ದೇಶಗಳಿಗೆ ಪ್ರತಿಜ್ಞೆ ಮಾಡುತ್ತಿದೆ. ಅಫ್ಘಾನಿಸ್ತಾನದ ಆರ್ಥಿಕತೆ ಮತ್ತು ಜನ ಜೀವನೋಪಾಯದಲ್ಲಿ ಸುಧಾರಣೆಯಾಗಲಿದೆ’ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...