Homeಅಂತರಾಷ್ಟ್ರೀಯಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

ಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

’ಕಾಬೂಲ್‌ನಲ್ಲಿ ಕಳೆದ 1, 2 ದಿನಗಳಲ್ಲಿ ಬಹಳಷ್ಟು ಬದಲಾವಣೆಯನ್ನು ನೋಡಿದೆ. ಬ್ಯೂಟಿ ಪಾರ್ಲರ್‌ಗಳಿಗೆ ಬಣ್ಣ ಬಳಿಯಲಾಗುತ್ತಿತ್ತು, ಬೀದಿಗಳಲ್ಲಿ ಮಹಿಳೆಯರು ಕಾಣಿಸುತ್ತಿರಲಿಲ್ಲ’

- Advertisement -
- Advertisement -

ತಾಲಿಬಾನ್‌‌ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ಬಳಿಕ ಅಲ್ಲಿನ ನಾಗರಿಕರು ಪಾಕಿಸ್ತಾನಕ್ಕಿಂತ ಭಾರತದ ಬಗ್ಗೆ ಹೆಚ್ಚು ಅನುಕೂಲಕರ ದೃಷ್ಟಿಕೋನವನ್ನು ಹೊಂದಿದ್ದಾರೆ. ಭಾರತದಿಂದ ಹೆಚ್ಚಿನದನ್ನು ನಿರೀಕ್ಷಿಸಿದ್ದಾರೆ ಎಂದು ಕಾಬೂಲ್‌ನಿಂದ ದೇಶಕ್ಕೆ ಹಿಂದಿರುಗಿರುವ ಪತ್ರಕರ್ತೆ ಹೇಳಿದ್ದಾರೆ.

ಭಾರತೀಯ ವಾಯುಪಡೆಯ (ಐಎಎಫ್) ವಿಶೇಷ ವಿಮಾನದಲ್ಲಿ ಕಾಬೂಲ್‌ನಿಂದ ಹಿಂದಿರುಗಿದ ಪತ್ರಕರ್ತೆಯಾದ ಕನಿಕಾ ಗುಪ್ತಾ, ಅಘ್ಘಾನಿಸ್ತಾನದಲ್ಲಿನ ಬೆಳವಣಿಗೆಗಳ ಬಗ್ಗೆ NDTV ಜೊತೆ ಮಾತನಾಡಿದ್ದಾರೆ. ಕನಿಕಾ ಗುಪ್ತಾ, ಭಾರತೀಯ ರಾಯಭಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಕರೆ ತಂದ ವಿಮಾನದಲ್ಲಿ ದೇಶಕ್ಕೆ ವಾಪಸ್ ಆಗಿದ್ದಾರೆ.

“ತಾಲಿಬಾನಿಗಳು ನನ್ನನ್ನು ಮತ್ತು ನನ್ನ ಇನ್ನೊಬ್ಬ ಸಹೋದ್ಯೋಗಿಯನ್ನು ಹುಡುಕುತ್ತಿದ್ದಾಗ ನಾನು ಅಲ್ಲಿಂದ ಹೊರಡಲು ನಿರ್ಧರಿಸಿದೆ. ತಾಲಿಬಾನಿಗಳು ನಗರವನ್ನು ವಶಪಡಿಸಿಕೊಳ್ಳುತ್ತಿದ್ದಂತೆಯೇ, ನಾನು ಭಾರತದ ರಾಯಭಾರಿ ಕಚೇರಿಯೊಂದಿಗೆ ಮಾತನಾಡಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಫ್ಘಾನ್: ಯಾರೊಂದಿಗೂ ದ್ವೇಷವಿಲ್ಲ, ಎಲ್ಲರಿಗೂ ಕ್ಷಮೆ ನೀಡಿದ್ದೇವೆ – ತಾಲಿಬಾನ್‌

“ಹೇಗಾದರೂ ರಾಯಭಾರಿ ಕಚೇರಿ ತಲುಪಬೇಕಿದ್ದ ನಮ್ಮನ್ನು ತಾಲಿಬಾನಿಗಳು ಚೆಕ್‌ಪಾಯಿಂಟ್‌ನಲ್ಲಿ ತಡೆದು ನಿಲ್ಲಿಸಿದ್ದರು. ನಾನು ಮಹಿಳೆಯಾಗಿದ್ದರಿಂದ ಅವರು ನನ್ನೊಂದಿಗೆ ಮಾತನಾಡುವುದನ್ನು ತಪ್ಪಿಸುತ್ತಿದ್ದರು. ನನ್ನ ಡ್ರೈವರ್‌ನೊಂದಿಗೆ ಮಾತನಾಡುತ್ತಿದ್ದರು. ನಾವು ವಾಪಸ್ ಹೋಗಬೇಕೆಂದು ಅವರು ಒತ್ತಾಯಿಸುತ್ತಿದ್ದರು, ಸುಮಾರು 2 ಗಂಟೆಗಳ ನಂತರ ಅವರು ನಮ್ಮನ್ನು ರಾಯಭಾರ ಕಚೇರಿಗೆ ಕರೆದೊಯ್ದರು” ಎಂದು ಕನಿಕಾ ಗುಪ್ತಾ ಹೇಳಿದ್ದಾರೆ.

“ನಾವು ನಿನ್ನೆ ರಾತ್ರಿ 10 ಗಂಟೆಗೆ ಕಾಬೂಲ್ ವಿಮಾನ ನಿಲ್ದಾಣಕ್ಕೆ ಬಂದೆವು. ಆದರೆ, ವಿಮಾನ ನಿಲ್ದಾಣದ ಗೇಟ್‌ಗಳ ಹೊರಗೆ ಸಾವಿರಾರು ಜನರು ಒಳಗೆ ಹೋಗಲು ಪ್ರಯತ್ನಿಸುತ್ತಿದ್ದರು. ಅವರು ಗಾಳಿಯಲ್ಲಿ ಗುಂಡು ಹಾರಿಸಿ ಜನರನ್ನು ಚದುರಿಸಲು ಪ್ರಯತ್ನಿಸಿದರು”  ಎಂದಿದ್ದಾರೆ.

“ನಾವು ವಿಮಾನ ನಿಲ್ದಾಣದ ಹೊರಗೆ ಐದು ಗಂಟೆಗಳ ಕಾಲ ಕಾದಿದ್ದೇವೆ. ಅಂತಿಮವಾಗಿ, ನಾವು ಯುಎಸ್ ಮತ್ತು ಟರ್ಕಿಶ್ ಪಡೆಗಳಿಂದ ನಿಯೋಜಿಸಲ್ಪಟ್ಟ ಇನ್ನೊಂದು ಗೇಟ್‌ ಬಳಸಿ ಒಳಗೆ ಹೋಗಬೇಕಾಯಿತು. ಬೆಳಿಗ್ಗೆ 6 ಗಂಟೆಗೆ ನಾವು ಭಾರತಕ್ಕೆ ಹೊರಟೆವು. 11 ಕ್ಕೆ ಇಲ್ಲಿಗೆ ಬಂದೆವು. ಏರ್ ಫೋರ್ಸ್ ನಮ್ಮನ್ನು ಬಹಳ ಕಾಳಜಿ ವಹಿಸಿ ಕರೆ ತಂದಿತು. ಅವರಿಗೆ ನಾನು ಕೃತಜ್ಞಳಾಗಿದ್ದೇನೆ” ಎಂದು ಪತ್ರಕರ್ತೆ ಹೇಳಿದ್ದಾರೆ.

“ಕಾಬೂಲ್ ವಿಮಾನ ನಿಲ್ದಾಣದಲ್ಲಿ, ನಾನು ಚಪ್ಪಲಿ, ಮಕ್ಕಳ ಪಾದರಕ್ಷೆಗಳು, ಮಹಿಳೆಯರ ದುಪಟ್ಟಾಗಳನ್ನು ನೋಡಿದೆ. ಅದು ಹಿಂದಿನ ರಾತ್ರಿ ನಡೆದ ಭಯಾನಕತೆಗೆ ಸಾಕ್ಷಿಯಾಗಿದೆ. ಅಲ್ಲಿನ ಮಹಿಳೆಯರಲ್ಲಿ ಅತಿ ಹೆಚ್ಚು ಭಯವಿದೆ. ಅವರು ತಮ್ಮನ್ನು ತಾವು ಬಟ್ಟೆಯಿಂದ ಸರಿಯಾಗಿ ಮುಚ್ಚಿಕೊಳ್ಳದಿದ್ದರೆ ಆಸಿಡ್ ದಾಳಿಯಂತಹ ಬೆದರಿಕೆಗಳನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ತಾಲಿಬಾನಿಗಳು ಇಂದು ಯಾವುದೇ ತಾರತಮ್ಯ ಇಲ್ಲ ಎಂದು ಮಾತಾಡುವಾಗ ಅದರ ಬಗ್ಗೆ ವಿಶ್ವಾಸ ಮೂಡುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

“ನಾನು ಕಾಬೂಲ್‌ನಲ್ಲಿ ಕಳೆದ 1 ಅಥವಾ 2 ದಿನಗಳಲ್ಲಿ ಬಹಳಷ್ಟು ಬದಲಾವಣೆಯನ್ನು ನೋಡಿದೆ. ಬ್ಯೂಟಿ ಪಾರ್ಲರ್‌ಗಳಿಗೆ ಬಣ್ಣ ಬಳಿಯಲಾಗುತ್ತಿತ್ತು, ಬೀದಿಗಳಲ್ಲಿ ಮಹಿಳೆಯರಿರಲಿಲ್ಲ. ಕಾಬೂಲ್ ಕ್ರಿಯಾತ್ಮಕ, ಬುದ್ಧಿವಂತ ಮತ್ತು ಫ್ಯಾಶನ್ ಮಹಿಳೆಯರನ್ನು ಹೊಂದಿದೆ” ಎಂದು ಕನಿಕಾ ಹೇಳಿದ್ದಾರೆ.

“ಅವರೆಲ್ಲರೂ ಭಾರತವನ್ನು ಪ್ರೀತಿಸುತ್ತಾರೆ. ನೀವು ಅಲ್ಲಿ 10 ಜನರೊಂದಿಗೆ ಮಾತನಾಡಿ, ಅದರಲ್ಲಿ ಭಾರತದ ಮೇಲೆ ಪ್ರೀತಿ ಮತ್ತು ಪಾಕಿಸ್ತಾನದ ಬಗ್ಗೆ ದ್ವೇಷವಿರುವುದು ನಿಮಗೆ ತಿಳಿಯುತ್ತದೆ. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಅವರು ಭಾರತದಿಂದ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದಾರೆ” ಎಂದು ಪತ್ರಕರ್ತೆ ಕನಿಕಾ ಗುಪ್ತಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇತ್ತ, ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿರುವ ತಾಲಿಬಾನ್‌ ವಕ್ತಾರ ಜಬೀಹುಲ್ಲಾ ಮುಜಾಹಿದ್, ’ತಾಲಿಬಾನಿಗಳು ಯಾರೊಂದಿಗೂ ದ್ವೇಷವನ್ನು ಹೊಂದಿಲ್ಲ ಮತ್ತು ತಮ್ಮ ನಾಯಕನ ಆದೇಶದ ಮೇರೆಗೆ ಅವರು ಎಲ್ಲರಿಗೂ ಕ್ಷಮೆ ನೀಡಿದ್ದಾರೆ. ಅಫ್ಘಾನಿಸ್ತಾನದಿಂದ ಯಾವುದೇ ಅಪಾಯವಿಲ್ಲ ಎಂದು ‘ಇಸ್ಲಾಮಿಕ್ ಎಮಿರೇಟ್’ ಜಗತ್ತಿನ ಎಲ್ಲ ದೇಶಗಳಿಗೆ ಪ್ರತಿಜ್ಞೆ ಮಾಡುತ್ತಿದೆ. ಅಫ್ಘಾನಿಸ್ತಾನದ ಆರ್ಥಿಕತೆ ಮತ್ತು ಜನ ಜೀವನೋಪಾಯದಲ್ಲಿ ಸುಧಾರಣೆಯಾಗಲಿದೆ’ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...