Homeಅಂತರಾಷ್ಟ್ರೀಯಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

ಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

’ಕಾಬೂಲ್‌ನಲ್ಲಿ ಕಳೆದ 1, 2 ದಿನಗಳಲ್ಲಿ ಬಹಳಷ್ಟು ಬದಲಾವಣೆಯನ್ನು ನೋಡಿದೆ. ಬ್ಯೂಟಿ ಪಾರ್ಲರ್‌ಗಳಿಗೆ ಬಣ್ಣ ಬಳಿಯಲಾಗುತ್ತಿತ್ತು, ಬೀದಿಗಳಲ್ಲಿ ಮಹಿಳೆಯರು ಕಾಣಿಸುತ್ತಿರಲಿಲ್ಲ’

- Advertisement -
- Advertisement -

ತಾಲಿಬಾನ್‌‌ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ಬಳಿಕ ಅಲ್ಲಿನ ನಾಗರಿಕರು ಪಾಕಿಸ್ತಾನಕ್ಕಿಂತ ಭಾರತದ ಬಗ್ಗೆ ಹೆಚ್ಚು ಅನುಕೂಲಕರ ದೃಷ್ಟಿಕೋನವನ್ನು ಹೊಂದಿದ್ದಾರೆ. ಭಾರತದಿಂದ ಹೆಚ್ಚಿನದನ್ನು ನಿರೀಕ್ಷಿಸಿದ್ದಾರೆ ಎಂದು ಕಾಬೂಲ್‌ನಿಂದ ದೇಶಕ್ಕೆ ಹಿಂದಿರುಗಿರುವ ಪತ್ರಕರ್ತೆ ಹೇಳಿದ್ದಾರೆ.

ಭಾರತೀಯ ವಾಯುಪಡೆಯ (ಐಎಎಫ್) ವಿಶೇಷ ವಿಮಾನದಲ್ಲಿ ಕಾಬೂಲ್‌ನಿಂದ ಹಿಂದಿರುಗಿದ ಪತ್ರಕರ್ತೆಯಾದ ಕನಿಕಾ ಗುಪ್ತಾ, ಅಘ್ಘಾನಿಸ್ತಾನದಲ್ಲಿನ ಬೆಳವಣಿಗೆಗಳ ಬಗ್ಗೆ NDTV ಜೊತೆ ಮಾತನಾಡಿದ್ದಾರೆ. ಕನಿಕಾ ಗುಪ್ತಾ, ಭಾರತೀಯ ರಾಯಭಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಕರೆ ತಂದ ವಿಮಾನದಲ್ಲಿ ದೇಶಕ್ಕೆ ವಾಪಸ್ ಆಗಿದ್ದಾರೆ.

“ತಾಲಿಬಾನಿಗಳು ನನ್ನನ್ನು ಮತ್ತು ನನ್ನ ಇನ್ನೊಬ್ಬ ಸಹೋದ್ಯೋಗಿಯನ್ನು ಹುಡುಕುತ್ತಿದ್ದಾಗ ನಾನು ಅಲ್ಲಿಂದ ಹೊರಡಲು ನಿರ್ಧರಿಸಿದೆ. ತಾಲಿಬಾನಿಗಳು ನಗರವನ್ನು ವಶಪಡಿಸಿಕೊಳ್ಳುತ್ತಿದ್ದಂತೆಯೇ, ನಾನು ಭಾರತದ ರಾಯಭಾರಿ ಕಚೇರಿಯೊಂದಿಗೆ ಮಾತನಾಡಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಫ್ಘಾನ್: ಯಾರೊಂದಿಗೂ ದ್ವೇಷವಿಲ್ಲ, ಎಲ್ಲರಿಗೂ ಕ್ಷಮೆ ನೀಡಿದ್ದೇವೆ – ತಾಲಿಬಾನ್‌

“ಹೇಗಾದರೂ ರಾಯಭಾರಿ ಕಚೇರಿ ತಲುಪಬೇಕಿದ್ದ ನಮ್ಮನ್ನು ತಾಲಿಬಾನಿಗಳು ಚೆಕ್‌ಪಾಯಿಂಟ್‌ನಲ್ಲಿ ತಡೆದು ನಿಲ್ಲಿಸಿದ್ದರು. ನಾನು ಮಹಿಳೆಯಾಗಿದ್ದರಿಂದ ಅವರು ನನ್ನೊಂದಿಗೆ ಮಾತನಾಡುವುದನ್ನು ತಪ್ಪಿಸುತ್ತಿದ್ದರು. ನನ್ನ ಡ್ರೈವರ್‌ನೊಂದಿಗೆ ಮಾತನಾಡುತ್ತಿದ್ದರು. ನಾವು ವಾಪಸ್ ಹೋಗಬೇಕೆಂದು ಅವರು ಒತ್ತಾಯಿಸುತ್ತಿದ್ದರು, ಸುಮಾರು 2 ಗಂಟೆಗಳ ನಂತರ ಅವರು ನಮ್ಮನ್ನು ರಾಯಭಾರ ಕಚೇರಿಗೆ ಕರೆದೊಯ್ದರು” ಎಂದು ಕನಿಕಾ ಗುಪ್ತಾ ಹೇಳಿದ್ದಾರೆ.

“ನಾವು ನಿನ್ನೆ ರಾತ್ರಿ 10 ಗಂಟೆಗೆ ಕಾಬೂಲ್ ವಿಮಾನ ನಿಲ್ದಾಣಕ್ಕೆ ಬಂದೆವು. ಆದರೆ, ವಿಮಾನ ನಿಲ್ದಾಣದ ಗೇಟ್‌ಗಳ ಹೊರಗೆ ಸಾವಿರಾರು ಜನರು ಒಳಗೆ ಹೋಗಲು ಪ್ರಯತ್ನಿಸುತ್ತಿದ್ದರು. ಅವರು ಗಾಳಿಯಲ್ಲಿ ಗುಂಡು ಹಾರಿಸಿ ಜನರನ್ನು ಚದುರಿಸಲು ಪ್ರಯತ್ನಿಸಿದರು”  ಎಂದಿದ್ದಾರೆ.

“ನಾವು ವಿಮಾನ ನಿಲ್ದಾಣದ ಹೊರಗೆ ಐದು ಗಂಟೆಗಳ ಕಾಲ ಕಾದಿದ್ದೇವೆ. ಅಂತಿಮವಾಗಿ, ನಾವು ಯುಎಸ್ ಮತ್ತು ಟರ್ಕಿಶ್ ಪಡೆಗಳಿಂದ ನಿಯೋಜಿಸಲ್ಪಟ್ಟ ಇನ್ನೊಂದು ಗೇಟ್‌ ಬಳಸಿ ಒಳಗೆ ಹೋಗಬೇಕಾಯಿತು. ಬೆಳಿಗ್ಗೆ 6 ಗಂಟೆಗೆ ನಾವು ಭಾರತಕ್ಕೆ ಹೊರಟೆವು. 11 ಕ್ಕೆ ಇಲ್ಲಿಗೆ ಬಂದೆವು. ಏರ್ ಫೋರ್ಸ್ ನಮ್ಮನ್ನು ಬಹಳ ಕಾಳಜಿ ವಹಿಸಿ ಕರೆ ತಂದಿತು. ಅವರಿಗೆ ನಾನು ಕೃತಜ್ಞಳಾಗಿದ್ದೇನೆ” ಎಂದು ಪತ್ರಕರ್ತೆ ಹೇಳಿದ್ದಾರೆ.

“ಕಾಬೂಲ್ ವಿಮಾನ ನಿಲ್ದಾಣದಲ್ಲಿ, ನಾನು ಚಪ್ಪಲಿ, ಮಕ್ಕಳ ಪಾದರಕ್ಷೆಗಳು, ಮಹಿಳೆಯರ ದುಪಟ್ಟಾಗಳನ್ನು ನೋಡಿದೆ. ಅದು ಹಿಂದಿನ ರಾತ್ರಿ ನಡೆದ ಭಯಾನಕತೆಗೆ ಸಾಕ್ಷಿಯಾಗಿದೆ. ಅಲ್ಲಿನ ಮಹಿಳೆಯರಲ್ಲಿ ಅತಿ ಹೆಚ್ಚು ಭಯವಿದೆ. ಅವರು ತಮ್ಮನ್ನು ತಾವು ಬಟ್ಟೆಯಿಂದ ಸರಿಯಾಗಿ ಮುಚ್ಚಿಕೊಳ್ಳದಿದ್ದರೆ ಆಸಿಡ್ ದಾಳಿಯಂತಹ ಬೆದರಿಕೆಗಳನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ತಾಲಿಬಾನಿಗಳು ಇಂದು ಯಾವುದೇ ತಾರತಮ್ಯ ಇಲ್ಲ ಎಂದು ಮಾತಾಡುವಾಗ ಅದರ ಬಗ್ಗೆ ವಿಶ್ವಾಸ ಮೂಡುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

“ನಾನು ಕಾಬೂಲ್‌ನಲ್ಲಿ ಕಳೆದ 1 ಅಥವಾ 2 ದಿನಗಳಲ್ಲಿ ಬಹಳಷ್ಟು ಬದಲಾವಣೆಯನ್ನು ನೋಡಿದೆ. ಬ್ಯೂಟಿ ಪಾರ್ಲರ್‌ಗಳಿಗೆ ಬಣ್ಣ ಬಳಿಯಲಾಗುತ್ತಿತ್ತು, ಬೀದಿಗಳಲ್ಲಿ ಮಹಿಳೆಯರಿರಲಿಲ್ಲ. ಕಾಬೂಲ್ ಕ್ರಿಯಾತ್ಮಕ, ಬುದ್ಧಿವಂತ ಮತ್ತು ಫ್ಯಾಶನ್ ಮಹಿಳೆಯರನ್ನು ಹೊಂದಿದೆ” ಎಂದು ಕನಿಕಾ ಹೇಳಿದ್ದಾರೆ.

“ಅವರೆಲ್ಲರೂ ಭಾರತವನ್ನು ಪ್ರೀತಿಸುತ್ತಾರೆ. ನೀವು ಅಲ್ಲಿ 10 ಜನರೊಂದಿಗೆ ಮಾತನಾಡಿ, ಅದರಲ್ಲಿ ಭಾರತದ ಮೇಲೆ ಪ್ರೀತಿ ಮತ್ತು ಪಾಕಿಸ್ತಾನದ ಬಗ್ಗೆ ದ್ವೇಷವಿರುವುದು ನಿಮಗೆ ತಿಳಿಯುತ್ತದೆ. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಅವರು ಭಾರತದಿಂದ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದಾರೆ” ಎಂದು ಪತ್ರಕರ್ತೆ ಕನಿಕಾ ಗುಪ್ತಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇತ್ತ, ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿರುವ ತಾಲಿಬಾನ್‌ ವಕ್ತಾರ ಜಬೀಹುಲ್ಲಾ ಮುಜಾಹಿದ್, ’ತಾಲಿಬಾನಿಗಳು ಯಾರೊಂದಿಗೂ ದ್ವೇಷವನ್ನು ಹೊಂದಿಲ್ಲ ಮತ್ತು ತಮ್ಮ ನಾಯಕನ ಆದೇಶದ ಮೇರೆಗೆ ಅವರು ಎಲ್ಲರಿಗೂ ಕ್ಷಮೆ ನೀಡಿದ್ದಾರೆ. ಅಫ್ಘಾನಿಸ್ತಾನದಿಂದ ಯಾವುದೇ ಅಪಾಯವಿಲ್ಲ ಎಂದು ‘ಇಸ್ಲಾಮಿಕ್ ಎಮಿರೇಟ್’ ಜಗತ್ತಿನ ಎಲ್ಲ ದೇಶಗಳಿಗೆ ಪ್ರತಿಜ್ಞೆ ಮಾಡುತ್ತಿದೆ. ಅಫ್ಘಾನಿಸ್ತಾನದ ಆರ್ಥಿಕತೆ ಮತ್ತು ಜನ ಜೀವನೋಪಾಯದಲ್ಲಿ ಸುಧಾರಣೆಯಾಗಲಿದೆ’ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...