Homeಅಂತರಾಷ್ಟ್ರೀಯಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

ಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

’ಕಾಬೂಲ್‌ನಲ್ಲಿ ಕಳೆದ 1, 2 ದಿನಗಳಲ್ಲಿ ಬಹಳಷ್ಟು ಬದಲಾವಣೆಯನ್ನು ನೋಡಿದೆ. ಬ್ಯೂಟಿ ಪಾರ್ಲರ್‌ಗಳಿಗೆ ಬಣ್ಣ ಬಳಿಯಲಾಗುತ್ತಿತ್ತು, ಬೀದಿಗಳಲ್ಲಿ ಮಹಿಳೆಯರು ಕಾಣಿಸುತ್ತಿರಲಿಲ್ಲ’

- Advertisement -
- Advertisement -

ತಾಲಿಬಾನ್‌‌ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ಬಳಿಕ ಅಲ್ಲಿನ ನಾಗರಿಕರು ಪಾಕಿಸ್ತಾನಕ್ಕಿಂತ ಭಾರತದ ಬಗ್ಗೆ ಹೆಚ್ಚು ಅನುಕೂಲಕರ ದೃಷ್ಟಿಕೋನವನ್ನು ಹೊಂದಿದ್ದಾರೆ. ಭಾರತದಿಂದ ಹೆಚ್ಚಿನದನ್ನು ನಿರೀಕ್ಷಿಸಿದ್ದಾರೆ ಎಂದು ಕಾಬೂಲ್‌ನಿಂದ ದೇಶಕ್ಕೆ ಹಿಂದಿರುಗಿರುವ ಪತ್ರಕರ್ತೆ ಹೇಳಿದ್ದಾರೆ.

ಭಾರತೀಯ ವಾಯುಪಡೆಯ (ಐಎಎಫ್) ವಿಶೇಷ ವಿಮಾನದಲ್ಲಿ ಕಾಬೂಲ್‌ನಿಂದ ಹಿಂದಿರುಗಿದ ಪತ್ರಕರ್ತೆಯಾದ ಕನಿಕಾ ಗುಪ್ತಾ, ಅಘ್ಘಾನಿಸ್ತಾನದಲ್ಲಿನ ಬೆಳವಣಿಗೆಗಳ ಬಗ್ಗೆ NDTV ಜೊತೆ ಮಾತನಾಡಿದ್ದಾರೆ. ಕನಿಕಾ ಗುಪ್ತಾ, ಭಾರತೀಯ ರಾಯಭಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಕರೆ ತಂದ ವಿಮಾನದಲ್ಲಿ ದೇಶಕ್ಕೆ ವಾಪಸ್ ಆಗಿದ್ದಾರೆ.

“ತಾಲಿಬಾನಿಗಳು ನನ್ನನ್ನು ಮತ್ತು ನನ್ನ ಇನ್ನೊಬ್ಬ ಸಹೋದ್ಯೋಗಿಯನ್ನು ಹುಡುಕುತ್ತಿದ್ದಾಗ ನಾನು ಅಲ್ಲಿಂದ ಹೊರಡಲು ನಿರ್ಧರಿಸಿದೆ. ತಾಲಿಬಾನಿಗಳು ನಗರವನ್ನು ವಶಪಡಿಸಿಕೊಳ್ಳುತ್ತಿದ್ದಂತೆಯೇ, ನಾನು ಭಾರತದ ರಾಯಭಾರಿ ಕಚೇರಿಯೊಂದಿಗೆ ಮಾತನಾಡಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಫ್ಘಾನ್: ಯಾರೊಂದಿಗೂ ದ್ವೇಷವಿಲ್ಲ, ಎಲ್ಲರಿಗೂ ಕ್ಷಮೆ ನೀಡಿದ್ದೇವೆ – ತಾಲಿಬಾನ್‌

“ಹೇಗಾದರೂ ರಾಯಭಾರಿ ಕಚೇರಿ ತಲುಪಬೇಕಿದ್ದ ನಮ್ಮನ್ನು ತಾಲಿಬಾನಿಗಳು ಚೆಕ್‌ಪಾಯಿಂಟ್‌ನಲ್ಲಿ ತಡೆದು ನಿಲ್ಲಿಸಿದ್ದರು. ನಾನು ಮಹಿಳೆಯಾಗಿದ್ದರಿಂದ ಅವರು ನನ್ನೊಂದಿಗೆ ಮಾತನಾಡುವುದನ್ನು ತಪ್ಪಿಸುತ್ತಿದ್ದರು. ನನ್ನ ಡ್ರೈವರ್‌ನೊಂದಿಗೆ ಮಾತನಾಡುತ್ತಿದ್ದರು. ನಾವು ವಾಪಸ್ ಹೋಗಬೇಕೆಂದು ಅವರು ಒತ್ತಾಯಿಸುತ್ತಿದ್ದರು, ಸುಮಾರು 2 ಗಂಟೆಗಳ ನಂತರ ಅವರು ನಮ್ಮನ್ನು ರಾಯಭಾರ ಕಚೇರಿಗೆ ಕರೆದೊಯ್ದರು” ಎಂದು ಕನಿಕಾ ಗುಪ್ತಾ ಹೇಳಿದ್ದಾರೆ.

“ನಾವು ನಿನ್ನೆ ರಾತ್ರಿ 10 ಗಂಟೆಗೆ ಕಾಬೂಲ್ ವಿಮಾನ ನಿಲ್ದಾಣಕ್ಕೆ ಬಂದೆವು. ಆದರೆ, ವಿಮಾನ ನಿಲ್ದಾಣದ ಗೇಟ್‌ಗಳ ಹೊರಗೆ ಸಾವಿರಾರು ಜನರು ಒಳಗೆ ಹೋಗಲು ಪ್ರಯತ್ನಿಸುತ್ತಿದ್ದರು. ಅವರು ಗಾಳಿಯಲ್ಲಿ ಗುಂಡು ಹಾರಿಸಿ ಜನರನ್ನು ಚದುರಿಸಲು ಪ್ರಯತ್ನಿಸಿದರು”  ಎಂದಿದ್ದಾರೆ.

“ನಾವು ವಿಮಾನ ನಿಲ್ದಾಣದ ಹೊರಗೆ ಐದು ಗಂಟೆಗಳ ಕಾಲ ಕಾದಿದ್ದೇವೆ. ಅಂತಿಮವಾಗಿ, ನಾವು ಯುಎಸ್ ಮತ್ತು ಟರ್ಕಿಶ್ ಪಡೆಗಳಿಂದ ನಿಯೋಜಿಸಲ್ಪಟ್ಟ ಇನ್ನೊಂದು ಗೇಟ್‌ ಬಳಸಿ ಒಳಗೆ ಹೋಗಬೇಕಾಯಿತು. ಬೆಳಿಗ್ಗೆ 6 ಗಂಟೆಗೆ ನಾವು ಭಾರತಕ್ಕೆ ಹೊರಟೆವು. 11 ಕ್ಕೆ ಇಲ್ಲಿಗೆ ಬಂದೆವು. ಏರ್ ಫೋರ್ಸ್ ನಮ್ಮನ್ನು ಬಹಳ ಕಾಳಜಿ ವಹಿಸಿ ಕರೆ ತಂದಿತು. ಅವರಿಗೆ ನಾನು ಕೃತಜ್ಞಳಾಗಿದ್ದೇನೆ” ಎಂದು ಪತ್ರಕರ್ತೆ ಹೇಳಿದ್ದಾರೆ.

“ಕಾಬೂಲ್ ವಿಮಾನ ನಿಲ್ದಾಣದಲ್ಲಿ, ನಾನು ಚಪ್ಪಲಿ, ಮಕ್ಕಳ ಪಾದರಕ್ಷೆಗಳು, ಮಹಿಳೆಯರ ದುಪಟ್ಟಾಗಳನ್ನು ನೋಡಿದೆ. ಅದು ಹಿಂದಿನ ರಾತ್ರಿ ನಡೆದ ಭಯಾನಕತೆಗೆ ಸಾಕ್ಷಿಯಾಗಿದೆ. ಅಲ್ಲಿನ ಮಹಿಳೆಯರಲ್ಲಿ ಅತಿ ಹೆಚ್ಚು ಭಯವಿದೆ. ಅವರು ತಮ್ಮನ್ನು ತಾವು ಬಟ್ಟೆಯಿಂದ ಸರಿಯಾಗಿ ಮುಚ್ಚಿಕೊಳ್ಳದಿದ್ದರೆ ಆಸಿಡ್ ದಾಳಿಯಂತಹ ಬೆದರಿಕೆಗಳನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ತಾಲಿಬಾನಿಗಳು ಇಂದು ಯಾವುದೇ ತಾರತಮ್ಯ ಇಲ್ಲ ಎಂದು ಮಾತಾಡುವಾಗ ಅದರ ಬಗ್ಗೆ ವಿಶ್ವಾಸ ಮೂಡುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

“ನಾನು ಕಾಬೂಲ್‌ನಲ್ಲಿ ಕಳೆದ 1 ಅಥವಾ 2 ದಿನಗಳಲ್ಲಿ ಬಹಳಷ್ಟು ಬದಲಾವಣೆಯನ್ನು ನೋಡಿದೆ. ಬ್ಯೂಟಿ ಪಾರ್ಲರ್‌ಗಳಿಗೆ ಬಣ್ಣ ಬಳಿಯಲಾಗುತ್ತಿತ್ತು, ಬೀದಿಗಳಲ್ಲಿ ಮಹಿಳೆಯರಿರಲಿಲ್ಲ. ಕಾಬೂಲ್ ಕ್ರಿಯಾತ್ಮಕ, ಬುದ್ಧಿವಂತ ಮತ್ತು ಫ್ಯಾಶನ್ ಮಹಿಳೆಯರನ್ನು ಹೊಂದಿದೆ” ಎಂದು ಕನಿಕಾ ಹೇಳಿದ್ದಾರೆ.

“ಅವರೆಲ್ಲರೂ ಭಾರತವನ್ನು ಪ್ರೀತಿಸುತ್ತಾರೆ. ನೀವು ಅಲ್ಲಿ 10 ಜನರೊಂದಿಗೆ ಮಾತನಾಡಿ, ಅದರಲ್ಲಿ ಭಾರತದ ಮೇಲೆ ಪ್ರೀತಿ ಮತ್ತು ಪಾಕಿಸ್ತಾನದ ಬಗ್ಗೆ ದ್ವೇಷವಿರುವುದು ನಿಮಗೆ ತಿಳಿಯುತ್ತದೆ. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಅವರು ಭಾರತದಿಂದ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದಾರೆ” ಎಂದು ಪತ್ರಕರ್ತೆ ಕನಿಕಾ ಗುಪ್ತಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇತ್ತ, ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿರುವ ತಾಲಿಬಾನ್‌ ವಕ್ತಾರ ಜಬೀಹುಲ್ಲಾ ಮುಜಾಹಿದ್, ’ತಾಲಿಬಾನಿಗಳು ಯಾರೊಂದಿಗೂ ದ್ವೇಷವನ್ನು ಹೊಂದಿಲ್ಲ ಮತ್ತು ತಮ್ಮ ನಾಯಕನ ಆದೇಶದ ಮೇರೆಗೆ ಅವರು ಎಲ್ಲರಿಗೂ ಕ್ಷಮೆ ನೀಡಿದ್ದಾರೆ. ಅಫ್ಘಾನಿಸ್ತಾನದಿಂದ ಯಾವುದೇ ಅಪಾಯವಿಲ್ಲ ಎಂದು ‘ಇಸ್ಲಾಮಿಕ್ ಎಮಿರೇಟ್’ ಜಗತ್ತಿನ ಎಲ್ಲ ದೇಶಗಳಿಗೆ ಪ್ರತಿಜ್ಞೆ ಮಾಡುತ್ತಿದೆ. ಅಫ್ಘಾನಿಸ್ತಾನದ ಆರ್ಥಿಕತೆ ಮತ್ತು ಜನ ಜೀವನೋಪಾಯದಲ್ಲಿ ಸುಧಾರಣೆಯಾಗಲಿದೆ’ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...