Homeಅಂತರಾಷ್ಟ್ರೀಯಅಫ್ಘಾನ್‌ಗೆ ರಾಜಕೀಯ ಪೂರ್ವಾಗ್ರಹಗಳನ್ನು ಬಿಟ್ಟು ಸಹಾಯ ಮಾಡಿ: ತಾಲಿಬಾನ್ ಮನವಿ

ಅಫ್ಘಾನ್‌ಗೆ ರಾಜಕೀಯ ಪೂರ್ವಾಗ್ರಹಗಳನ್ನು ಬಿಟ್ಟು ಸಹಾಯ ಮಾಡಿ: ತಾಲಿಬಾನ್ ಮನವಿ

- Advertisement -
- Advertisement -

ಇತ್ತೀಚಿಗೆ ಬಿದ್ದ ಹಿಮ ಮತ್ತು ಉಂಟಾದ ಭೀಕರ ಪ್ರವಾಹ ಅಫ್ಘಾನ್‌ ಜನರನ್ನು ದುಸ್ಥಿತಿಗೆ ತಳ್ಳಿದೆ. ಇಂತಹ ಸಮಯದಲ್ಲಿ “ರಾಜಕೀಯ ಪೂರ್ವಾಗ್ರಹ”ವಿಲ್ಲದೆ ತುರ್ತು ಮಾನವೀಯ ನೆರವು ನೀಡಬೇಕು ಎಂದು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನ್ ವಿಶ್ವದ ಇತರ ರಾಷ್ಟ್ರಗಳಿಗೆ ಮನವಿ ಮಾಡಿದೆ.

ಆಗಸ್ಟ್ ಮಧ್ಯದಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡು ಹೊಸ ಸರ್ಕಾರ ರಚಿಸಿದೆ. ಅಂದಿನಿಂದ ದೇಶದಲ್ಲಿ ಹಣದುಬ್ಬರ, ಆಹಾರದ ಕೊರತೆ ಮತ್ತು ನಿರುದ್ಯೋಗ ಹೆಚ್ಚಾಗಿ ದೇಶವು ಆರ್ಥಿಕ ಅವ್ಯವಸ್ಥೆಯಲ್ಲಿ ಮುಳುಗಿದೆ.

ವೀಡಿಯೊ ಒಂದರಲ್ಲಿ ಮನವಿ ಮಾಡಿರುವ, ಉಪಪ್ರಧಾನಿ ಅಬ್ದುಲ್ ಘನಿ ಬರಾದಾರ್, “ಇದೀಗ ವಿವಿಧ ಸ್ಥಳಗಳಲ್ಲಿ, ಜನರಿಗೆ ಊಟ, ವಸತಿ, ಬೆಚ್ಚಗಿನ ಬಟ್ಟೆ ಮತ್ತು ಹಣ ಕೂಡ ಇಲ್ಲ. ಜಗತ್ತು ಯಾವುದೇ ರಾಜಕೀಯ ಪಕ್ಷಪಾತವಿಲ್ಲದೆ, ಪೂರ್ವಾಗ್ರಹಗಳಿಲ್ಲದೇ ಆಫ್ಘನ್ ಜನರನ್ನು ಬೆಂಬಲಿಸಬೇಕು. ಇತರೆ ದೇಶಗಳು ತಮ್ಮ ಮಾನವೀಯ ಜವಾಬ್ದಾರಿಗಳನ್ನು ನಿರ್ವಹಿಸಬೇಕು” ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನ: ಪುರುಷನ ಬೆಂಗಾವಲು ಇಲ್ಲದೆ ಮಹಿಳೆ ದೂರ ಪ್ರಯಾಣಿಸುವಂತಿಲ್ಲ- ತಾಲಿಬಾನ್

ಇತ್ತೀಚಿನ ದಿನಗಳಲ್ಲಿ ಮಧ್ಯ ಮತ್ತು ಉತ್ತರ ಅಫ್ಘಾನಿಸ್ತಾನದ ಬಹುತೇಕ ಭಾಗಗಳಲ್ಲಿ ಹಿಮ ಆವರಿಸಿದೆ, ಇತ್ತ ದಕ್ಷಿಣದ ಭಾಗಗಳಲ್ಲಿ ಪ್ರವಾಹವು ಪರಿಣಾಮ ಬೀರಿದೆ. ಅನೇಕ ಜನ ಬಿಸಿ ಊಟವನ್ನು ಪಡೆಯಲು ಕೂಡ ಹೆಣಗಾಡುತ್ತಿದ್ದಾರೆ. ಸರಿಯಾದ ವಿದ್ಯುತ್ ಸಂಪರ್ಕ ಕೂಡ ಸಾಧ್ಯವಾಗುತ್ತಿಲ್ಲ ಎಂದು ಅಂತರರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

“ಅಫ್ಘಾನಿಸ್ತಾನವು ಗಂಭೀರ ಪರಿಸ್ಥಿತಿಯಲ್ಲಿದೆ. ಜಗತ್ತು ನಮ್ಮ ಬಡ ಜನರನ್ನು ಮರೆಯಬಾರದು ಎಂದು ನಾವು ಅಂತರರಾಷ್ಟ್ರೀಯ ಸಮುದಾಯ, ಎನ್‌ಜಿಒಗಳು ಮತ್ತು ಎಲ್ಲಾ ದೇಶಗಳಿಗೆ ಕರೆ ನೀಡುತ್ತೇವೆ” ಎಂದು ಉಪ ಪ್ರಧಾನಿ ಅಬ್ದುಲ್ ಘನಿ ಬರಾದರ್ ಮನವಿ ಮಾಡಿದ್ದಾರೆ.

“ಒಂದು ಕಡೆ, ದಬ್ಬಾಳಿಕೆಯ ನಿರ್ಬಂಧಗಳಿವೆ ಮತ್ತು ಇನ್ನೊಂದು ಬದಿಯಲ್ಲಿ ನಾಗರಿಕರಿಗೆ ಉದ್ಯೋಗಾವಕಾಶಗಳನ್ನು ನೀಡಲು ಅಫ್ಘಾನಿಸ್ತಾನದಲ್ಲಿ ಕಳೆದ 20 ವರ್ಷಗಳಿಂದ ಯಾವುದೇ ಮೂಲಸೌಕರ್ಯಗಳಿಲ್ಲ” ಎಂದು ಹೇಳಿದ್ದಾರೆ.

ಇನ್ನು, ಜನವರಿ 7 ರಂದು ಭಾರತವು 2 ಟನ್‌ ಅಗತ್ಯ ವೈದ್ಯಕೀಯ ಸಾಮಗ್ರಿಯನ್ನು ತಾಲಿಬಾನ್‌ ಆಡಳಿತದ ದೇಶಕ್ಕೆ ರವಾನಿಸಿದೆ. ಕಾಬೂಲ್‌ನ ಇಂದಿರಾಗಾಂಧಿ ಆಸ್ಪತ್ರೆಗೆ ಸಾಮಗ್ರಿಗಳನ್ನು ಹಸ್ತಾಂತರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ತಿಳಿಸಿದೆ.


ಇದನ್ನೂ ಓದಿ: ನಾವು ತಾಳಿ, ಕಾಲುಂಗುರ ಸಹ ಹಾಕುವುದಿಲ್ಲ, ಕೇಳಲು ನೀವ್ಯಾರು?: ಬಜರಂಗದಳ ಸದಸ್ಯರಿಗೆ ಮಹಿಳೆಯ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...