Homeಅಂತರಾಷ್ಟ್ರೀಯಅಫ್ಘಾನ್‌ಗೆ ರಾಜಕೀಯ ಪೂರ್ವಾಗ್ರಹಗಳನ್ನು ಬಿಟ್ಟು ಸಹಾಯ ಮಾಡಿ: ತಾಲಿಬಾನ್ ಮನವಿ

ಅಫ್ಘಾನ್‌ಗೆ ರಾಜಕೀಯ ಪೂರ್ವಾಗ್ರಹಗಳನ್ನು ಬಿಟ್ಟು ಸಹಾಯ ಮಾಡಿ: ತಾಲಿಬಾನ್ ಮನವಿ

- Advertisement -
- Advertisement -

ಇತ್ತೀಚಿಗೆ ಬಿದ್ದ ಹಿಮ ಮತ್ತು ಉಂಟಾದ ಭೀಕರ ಪ್ರವಾಹ ಅಫ್ಘಾನ್‌ ಜನರನ್ನು ದುಸ್ಥಿತಿಗೆ ತಳ್ಳಿದೆ. ಇಂತಹ ಸಮಯದಲ್ಲಿ “ರಾಜಕೀಯ ಪೂರ್ವಾಗ್ರಹ”ವಿಲ್ಲದೆ ತುರ್ತು ಮಾನವೀಯ ನೆರವು ನೀಡಬೇಕು ಎಂದು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನ್ ವಿಶ್ವದ ಇತರ ರಾಷ್ಟ್ರಗಳಿಗೆ ಮನವಿ ಮಾಡಿದೆ.

ಆಗಸ್ಟ್ ಮಧ್ಯದಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡು ಹೊಸ ಸರ್ಕಾರ ರಚಿಸಿದೆ. ಅಂದಿನಿಂದ ದೇಶದಲ್ಲಿ ಹಣದುಬ್ಬರ, ಆಹಾರದ ಕೊರತೆ ಮತ್ತು ನಿರುದ್ಯೋಗ ಹೆಚ್ಚಾಗಿ ದೇಶವು ಆರ್ಥಿಕ ಅವ್ಯವಸ್ಥೆಯಲ್ಲಿ ಮುಳುಗಿದೆ.

ವೀಡಿಯೊ ಒಂದರಲ್ಲಿ ಮನವಿ ಮಾಡಿರುವ, ಉಪಪ್ರಧಾನಿ ಅಬ್ದುಲ್ ಘನಿ ಬರಾದಾರ್, “ಇದೀಗ ವಿವಿಧ ಸ್ಥಳಗಳಲ್ಲಿ, ಜನರಿಗೆ ಊಟ, ವಸತಿ, ಬೆಚ್ಚಗಿನ ಬಟ್ಟೆ ಮತ್ತು ಹಣ ಕೂಡ ಇಲ್ಲ. ಜಗತ್ತು ಯಾವುದೇ ರಾಜಕೀಯ ಪಕ್ಷಪಾತವಿಲ್ಲದೆ, ಪೂರ್ವಾಗ್ರಹಗಳಿಲ್ಲದೇ ಆಫ್ಘನ್ ಜನರನ್ನು ಬೆಂಬಲಿಸಬೇಕು. ಇತರೆ ದೇಶಗಳು ತಮ್ಮ ಮಾನವೀಯ ಜವಾಬ್ದಾರಿಗಳನ್ನು ನಿರ್ವಹಿಸಬೇಕು” ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನ: ಪುರುಷನ ಬೆಂಗಾವಲು ಇಲ್ಲದೆ ಮಹಿಳೆ ದೂರ ಪ್ರಯಾಣಿಸುವಂತಿಲ್ಲ- ತಾಲಿಬಾನ್

ಇತ್ತೀಚಿನ ದಿನಗಳಲ್ಲಿ ಮಧ್ಯ ಮತ್ತು ಉತ್ತರ ಅಫ್ಘಾನಿಸ್ತಾನದ ಬಹುತೇಕ ಭಾಗಗಳಲ್ಲಿ ಹಿಮ ಆವರಿಸಿದೆ, ಇತ್ತ ದಕ್ಷಿಣದ ಭಾಗಗಳಲ್ಲಿ ಪ್ರವಾಹವು ಪರಿಣಾಮ ಬೀರಿದೆ. ಅನೇಕ ಜನ ಬಿಸಿ ಊಟವನ್ನು ಪಡೆಯಲು ಕೂಡ ಹೆಣಗಾಡುತ್ತಿದ್ದಾರೆ. ಸರಿಯಾದ ವಿದ್ಯುತ್ ಸಂಪರ್ಕ ಕೂಡ ಸಾಧ್ಯವಾಗುತ್ತಿಲ್ಲ ಎಂದು ಅಂತರರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

“ಅಫ್ಘಾನಿಸ್ತಾನವು ಗಂಭೀರ ಪರಿಸ್ಥಿತಿಯಲ್ಲಿದೆ. ಜಗತ್ತು ನಮ್ಮ ಬಡ ಜನರನ್ನು ಮರೆಯಬಾರದು ಎಂದು ನಾವು ಅಂತರರಾಷ್ಟ್ರೀಯ ಸಮುದಾಯ, ಎನ್‌ಜಿಒಗಳು ಮತ್ತು ಎಲ್ಲಾ ದೇಶಗಳಿಗೆ ಕರೆ ನೀಡುತ್ತೇವೆ” ಎಂದು ಉಪ ಪ್ರಧಾನಿ ಅಬ್ದುಲ್ ಘನಿ ಬರಾದರ್ ಮನವಿ ಮಾಡಿದ್ದಾರೆ.

“ಒಂದು ಕಡೆ, ದಬ್ಬಾಳಿಕೆಯ ನಿರ್ಬಂಧಗಳಿವೆ ಮತ್ತು ಇನ್ನೊಂದು ಬದಿಯಲ್ಲಿ ನಾಗರಿಕರಿಗೆ ಉದ್ಯೋಗಾವಕಾಶಗಳನ್ನು ನೀಡಲು ಅಫ್ಘಾನಿಸ್ತಾನದಲ್ಲಿ ಕಳೆದ 20 ವರ್ಷಗಳಿಂದ ಯಾವುದೇ ಮೂಲಸೌಕರ್ಯಗಳಿಲ್ಲ” ಎಂದು ಹೇಳಿದ್ದಾರೆ.

ಇನ್ನು, ಜನವರಿ 7 ರಂದು ಭಾರತವು 2 ಟನ್‌ ಅಗತ್ಯ ವೈದ್ಯಕೀಯ ಸಾಮಗ್ರಿಯನ್ನು ತಾಲಿಬಾನ್‌ ಆಡಳಿತದ ದೇಶಕ್ಕೆ ರವಾನಿಸಿದೆ. ಕಾಬೂಲ್‌ನ ಇಂದಿರಾಗಾಂಧಿ ಆಸ್ಪತ್ರೆಗೆ ಸಾಮಗ್ರಿಗಳನ್ನು ಹಸ್ತಾಂತರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ತಿಳಿಸಿದೆ.


ಇದನ್ನೂ ಓದಿ: ನಾವು ತಾಳಿ, ಕಾಲುಂಗುರ ಸಹ ಹಾಕುವುದಿಲ್ಲ, ಕೇಳಲು ನೀವ್ಯಾರು?: ಬಜರಂಗದಳ ಸದಸ್ಯರಿಗೆ ಮಹಿಳೆಯ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...