Homeಕರ್ನಾಟಕಮಂಗಳೂರು: ಮಂಗಳಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ

ಮಂಗಳೂರು: ಮಂಗಳಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ

- Advertisement -
- Advertisement -

ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧಿಸಿರುವ ಬಗ್ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯು ಜಿಲ್ಲಾಧಿಕಾರಿಗೆ ದೂರು ನೀಡಿದೆ.

ಈ ಮಂಗಳಾದೇವಿ ದೇವಸ್ಥಾನವು ಮುಜುರಾಯಿ ಇಲಾಖೆ ವ್ಯಾಪ್ತಿಗೆ ಬರುತ್ತದೆ. ದೇವಸ್ಥಾನದ ನವರಾತ್ರಿ ಉತ್ಸವವು ಅಕ್ಟೋಬರ್ 15 ರಿಂದ 24 ರ ವರೆಗೆ ನಡೆಯಲಿದೆ. ಆದರೆ, ಸನಾತನ ಸಂಸ್ಥೆಯಿಂದ ಪತ್ರ ಬಂದಿದೆ ಹಾಗಾಗಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ನಿರಾಕರಿಸಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯುವ ಹೇಳಿದೆ ಎನ್ನಲಾಗಿದೆ.

ಪ್ರತಿವರ್ಷದಂತೆ ಈ ವರ್ಷವು ನವರಾತ್ರಿ ಸಿದ್ಧತೆ ಹಿನ್ನೆಲೆಯಲ್ಲಿ ಅಂಗಡಿ ಜಾಗದ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ. ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ ವ್ಯಾಪಾರ ನಡೆಸಲು ಜಾಗ ಹಂಚಿಕೆ ಮಾಡಲಾಗುತ್ತಿದೆ. ಇದು ಮಂಗಳೂರು ಮಹಾನಗರ ಪಾಲಿಕೆಗೆ ಸೇರಿದ ಸರ್ಕಾರಿ ರಸ್ತೆಯಾಗಿದೆ.

ಹಲವು ವರ್ಷಗಳಿಂದ ಈ ರಸ್ತೆಯ ಬದಿಗಳಲ್ಲಿ ನವರಾತ್ರಿ ಜಾತ್ರಾ ವ್ಯಾಪಾರ ನಡೆಯುತ್ತಾ ಬಂದಿದೆ. ಪಾಲಿಕೆ ರಸ್ತೆಯಾಗಿದ್ದರೂ ಹಲವು ವರ್ಷಗಳಿಂದ ದೇವಸ್ಥಾನದ ಆಡಳಿತದಿಂದಲೇ ವ್ಯಾಪಾರದ ಜಾಗ ಹರಾಜು ಮಾಡಲಾಗುತ್ತಿದೆ. ಆದರೆ ಈ ಬಾರಿ ಮಾತ್ರ ದೇವಸ್ಥಾನದ ಆಡಳಿತ ಮಂಡಳಿಯು ಮುಸ್ಲಿಂ ಸಮುದಾಯದ ವ್ಯಾಪಾರಸ್ಥರಿಗೆ ಅವಕಾಶ ನೀಡಿಲ್ಲ. ಇದು ಮುಸ್ಲಿಂ ಸಮುದಾಯದ ವ್ಯಾಪಾರಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಸಂಬಂಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯು ಜಿಲ್ಲಾಧಿಕಾರಿಗೆ ದೂರು ನೀಡಿದ್ದು, ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡುವಂತೆ ಮನವಿ ಮಾಡಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್ ಅವರು, ”ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ದೇವಸ್ಥಾನಗಳಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂದು ಮಂಗಳೂರಿನ ಹಲವು ದೇವಸ್ಥಾನಗಳ ಮುಂದೆ ಬ್ಯಾನರ್ ಹಾಕಲಾಗುತ್ತಿತ್ತು. ಆದರೆ ಮಂಗಳಾದೇವಿ ದೇವಸ್ಥಾನದಲ್ಲಿ ಈವರೆಗೂ ಮುಸ್ಲಿಂ ವ್ಯಾಪಾರಸ್ಥರಿಗೆ ನಿಷೇಧ ಹೇರಿರಲಿಲ್ಲ. ಆದರೆ ಈ ಬಾರಿ ಇಲ್ಲಿಯೂ ಅದೇ ಬೆಳವಣಿಗೆ ನಡೆದಿದೆ” ಎಂದು ತಿಳಿಸಿದರು.

”ಕಾನೂನಿನ ಪ್ರಕಾರ ದೇವಸ್ಥಾನದ ಪ್ರಣಾಂಗದಲ್ಲಿ ಅನ್ಯ ಧರ್ಮಿಯರಿಗೆ ವ್ಯಾಪಾರ ನಡೆಸಲು ಅವಕಾಶ ಇಲ್ಲ, ಆದರೆ ಈವರೆಗೂ ಮುಸ್ಲಿಂ ವ್ಯಾಪಾರಸ್ಥರು ದೇವಸ್ಥಾನದ ಒಳಾಂಗಣದಲ್ಲಿ ವ್ಯಾಪಾರ ಮಾಡಿಲ್ಲ. ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ ವ್ಯಾಪಾರ ನಡೆಸಲು ಜಾಗ ಹಂಚಿಕೆ ಮಾಡಲಾಗುತ್ತದೆ. ಈ ಬಾರಿಯೂ ಅಂಗಡಿ ಜಾಗದ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ. ಅಲ್ಲಿ 95 ಅಂಗಡಿಗಳಿದ್ದು ಪ್ರತಿವರ್ಷದಂತೆ ಈ ವರ್ಷವು ಅಂಗಡಿ ಟೆಂಡರ್ ಪಡೆಯಲು ಹೋದರೆ ಅವಕಾಶ ನೀಡದೆ, ನಾಳೆ ಬನ್ನಿ ಎಂದು ಎಲ್ಲ ಮುಸ್ಲಿಂ ವ್ಯಾಪಾರಸ್ಥರನ್ನು ಮರಳಿ ಕಳುಹಿಸಿದ್ದಾರೆ. ಇದೀಗ ಎಲ್ಲ ಅಂಗಡಿಗಳನ್ನು ಹಿಂದೂ ವ್ಯಾಪಾರಸ್ಥರಿಗೆ ನೀಡಲಾಗಿದೆ. ಭಾನುವಾರವೇ ಜಾತ್ರೆ ಇರುವುದರಿಂದ ಮುಸ್ಲಿ ವ್ಯಾಪಾರಸ್ಥರಿಗೆ ಅವಕಾಶ ಇಲ್ಲದಂತಾಗಿದೆ” ಎಂದು ಹೇಳಿದರು.

”ಈ ಬಗ್ಗೆ ನಾವು ದೇವಸ್ಥಾನದ ಆಡಳಿತ ಮಂಡಳಿಯವರನ್ನು ಪ್ರಶ್ನೆ ಮಾಡಿದಾಗ ಅವರಿಗೆ ಸನಾತನ ಸಂಸ್ಥೆಯಿಂದ ಪತ್ರ ಬಂದಿದೆ. ಹಾಗಾಗಿ ನಾವು ಈ ರೀತಿ ಮಾಡಬೇಕಾಯಿತು. ಒಂದು ವೇಳೆ ಅದಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಗಲಾಟೆಗಳಾಗಿ ವ್ಯಾಪಾರಸ್ಥರಿಗೆ ತೊಂದರೆ ಆಗಬಾರದು ಎಂದು ನಾವು ಅನ್ಯಧರ್ಮಿಯರಿಗೆ ಅವಕಾಶ ನೀಡಲಿಲ್ಲ ಎಂದು ಹೇಳಿದರು. ಆ ಪತ್ರ ಬರೆದವರು ಯಾರು? ಆತ ಸರ್ಕಾರದ ಪ್ರತಿನಿಧಿಯೇ? ಇದು ಮುಜರಾಯಿ ಇಲಾಖೆಯ ದೇವಸ್ಥಾನವಾಗಿದೆ. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು” ಎಂದು ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

”ಈ ಬಗ್ಗೆ ನಾವು ಈಗಾಗಲೇ ಮಹಾನಗರ ಪಾಲಿಕೆ. ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಹಾಗೂ ದೂರು ಕೊಟ್ಟಿದ್ದೇವೆ. ಆದರೆ, ಅವರುಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ನಾವು ಇಂದು ಪ್ರತಿಭಟನೆ ನಡೆಸುತ್ತಿದ್ದೇವೆ. ಕಳೆದ 5 ವರ್ಷಗಳ ಹರಾಜು ಪಟ್ಟಿಯನ್ನು ನೋಡಿಕೊಂಡು ಅಲ್ಲಿ ಈ ಹಿಂದೆ ವ್ಯಾಪಾರ ಮಾಡಿದ್ದ ಮುಸ್ಲಿಂ ವ್ಯಾಪಾರಸ್ಥರಿಗೆ ಈ ಬಾರಿಯೂ ಅವಕಾಶ ನೀಡಬೇಕು. ಇಲ್ಲದಿದ್ದರೇ ನಾವು ಮತ್ತಷ್ಟು ಹೋರಾಟಗಳನ್ನು ಮಾಡುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

NOTE:

ಈ ಹಿಂದೆ ನಾವು ವರದಿಯಲ್ಲಿ ”ಸನಾತನ ಸಂಸ್ಥೆಯ ಪತ್ರಕ್ಕೆ ಹೆದರಿ, ಮುಸ್ಲಿಂ ವ್ಯಾಪಾರಸ್ಥರಿಗೆ ನಿರ್ಬಂಧ ಹೇರಿದ ದೇವಸ್ಥಾನದ ಆಡಳಿತ ಮಂಡಳಿ” ಎಂದು ತಲೆಬಹರ ನೀಡಿದ್ದೇವು.. ಆದರೆ ಇದೀಗ ಸನಾತನ ಸಂಸ್ಥೆಯು ತಾವು ಯಾವುದೇ ಪತ್ರ ಬರೆದಿರುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.

”ಮಂಗಳಾದೇವಿ ದೇವಸ್ಥಾನ ಜಾತ್ರಾ ಮಹೋತ್ಸವದ ನಿಮಿತ್ತ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ, ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ತರ ಸಂಘ(ರಿ) ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಜಾತ್ರಾ ಮಹೋತ್ಸವದಲ್ಲಿ ವ್ಯಾಪಾರವನ್ನು ಮಾಡಲು ಹಿಂದೂ ವ್ಯಾಪಾರಸ್ಥರಿಗೆ ಪ್ರಥಮ ಪ್ರಾಧಾನ್ಯತೆಯನ್ನು ನೀಡಬೇಕು ಎಂದು ದೇವಸ್ಥಾನ ಸಮಿತಿಗೆ ಮನವಿ ನೀಡಲಾಗಿತ್ತು. ಈ ವಿಷಯದಲ್ಲಿ ಸನಾತನ ಸಂಸ್ಥೆ ಯಾವುದೇ ಮನವಿಯನ್ನು ದೇವಸ್ಥಾನ ಸಮಿತಿಗೆ ನೀಡಿಲ್ಲ. ಈ ವಿಷಯದಲ್ಲಿ ತಪ್ಪಾಗಿ ಸನಾತನ ಸಂಸ್ಥೆಯ ಹೆಸರನ್ನು ಉಲ್ಲೇಖಿಸಲಾಗಿದೆ. ಈ ಘಟನೆಗೂ ಸನಾತನ ಸಂಸ್ಥೆಗೂ ಯಾವುದೇ ಸಂಬಂಧ ಇರುವುದಿಲ್ಲ” ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್ ಅವರಿಗೆ ಖುದ್ದಾಗಿ ಆಡಳಿತ ಮಂಡಳಿಯವರೇ ಸನಾತನ ಸಂಸ್ಥೆಯಿಂದ ಪತ್ರ ಬಂದಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ”ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ” ಎಂದವರು ಈಗ “ತಿಂದಿದ್ದು ಹೇಳಿದವರನ್ನು ಬಿಡುವುದಿಲ್ಲ” ಎಂದು ಬದಲಿಸಿದ್ದಾರೆಯೇ?: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. If such behaviours continue there will not be any difference between rowdies and commitee members. These things expected under BJP rules. But our state governed by Congress.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...