Homeಕರ್ನಾಟಕಮಂಗಳೂರು: ಮಂಗಳಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ

ಮಂಗಳೂರು: ಮಂಗಳಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ

- Advertisement -
- Advertisement -

ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧಿಸಿರುವ ಬಗ್ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯು ಜಿಲ್ಲಾಧಿಕಾರಿಗೆ ದೂರು ನೀಡಿದೆ.

ಈ ಮಂಗಳಾದೇವಿ ದೇವಸ್ಥಾನವು ಮುಜುರಾಯಿ ಇಲಾಖೆ ವ್ಯಾಪ್ತಿಗೆ ಬರುತ್ತದೆ. ದೇವಸ್ಥಾನದ ನವರಾತ್ರಿ ಉತ್ಸವವು ಅಕ್ಟೋಬರ್ 15 ರಿಂದ 24 ರ ವರೆಗೆ ನಡೆಯಲಿದೆ. ಆದರೆ, ಸನಾತನ ಸಂಸ್ಥೆಯಿಂದ ಪತ್ರ ಬಂದಿದೆ ಹಾಗಾಗಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ನಿರಾಕರಿಸಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯುವ ಹೇಳಿದೆ ಎನ್ನಲಾಗಿದೆ.

ಪ್ರತಿವರ್ಷದಂತೆ ಈ ವರ್ಷವು ನವರಾತ್ರಿ ಸಿದ್ಧತೆ ಹಿನ್ನೆಲೆಯಲ್ಲಿ ಅಂಗಡಿ ಜಾಗದ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ. ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ ವ್ಯಾಪಾರ ನಡೆಸಲು ಜಾಗ ಹಂಚಿಕೆ ಮಾಡಲಾಗುತ್ತಿದೆ. ಇದು ಮಂಗಳೂರು ಮಹಾನಗರ ಪಾಲಿಕೆಗೆ ಸೇರಿದ ಸರ್ಕಾರಿ ರಸ್ತೆಯಾಗಿದೆ.

ಹಲವು ವರ್ಷಗಳಿಂದ ಈ ರಸ್ತೆಯ ಬದಿಗಳಲ್ಲಿ ನವರಾತ್ರಿ ಜಾತ್ರಾ ವ್ಯಾಪಾರ ನಡೆಯುತ್ತಾ ಬಂದಿದೆ. ಪಾಲಿಕೆ ರಸ್ತೆಯಾಗಿದ್ದರೂ ಹಲವು ವರ್ಷಗಳಿಂದ ದೇವಸ್ಥಾನದ ಆಡಳಿತದಿಂದಲೇ ವ್ಯಾಪಾರದ ಜಾಗ ಹರಾಜು ಮಾಡಲಾಗುತ್ತಿದೆ. ಆದರೆ ಈ ಬಾರಿ ಮಾತ್ರ ದೇವಸ್ಥಾನದ ಆಡಳಿತ ಮಂಡಳಿಯು ಮುಸ್ಲಿಂ ಸಮುದಾಯದ ವ್ಯಾಪಾರಸ್ಥರಿಗೆ ಅವಕಾಶ ನೀಡಿಲ್ಲ. ಇದು ಮುಸ್ಲಿಂ ಸಮುದಾಯದ ವ್ಯಾಪಾರಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಸಂಬಂಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯು ಜಿಲ್ಲಾಧಿಕಾರಿಗೆ ದೂರು ನೀಡಿದ್ದು, ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡುವಂತೆ ಮನವಿ ಮಾಡಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್ ಅವರು, ”ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ದೇವಸ್ಥಾನಗಳಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂದು ಮಂಗಳೂರಿನ ಹಲವು ದೇವಸ್ಥಾನಗಳ ಮುಂದೆ ಬ್ಯಾನರ್ ಹಾಕಲಾಗುತ್ತಿತ್ತು. ಆದರೆ ಮಂಗಳಾದೇವಿ ದೇವಸ್ಥಾನದಲ್ಲಿ ಈವರೆಗೂ ಮುಸ್ಲಿಂ ವ್ಯಾಪಾರಸ್ಥರಿಗೆ ನಿಷೇಧ ಹೇರಿರಲಿಲ್ಲ. ಆದರೆ ಈ ಬಾರಿ ಇಲ್ಲಿಯೂ ಅದೇ ಬೆಳವಣಿಗೆ ನಡೆದಿದೆ” ಎಂದು ತಿಳಿಸಿದರು.

”ಕಾನೂನಿನ ಪ್ರಕಾರ ದೇವಸ್ಥಾನದ ಪ್ರಣಾಂಗದಲ್ಲಿ ಅನ್ಯ ಧರ್ಮಿಯರಿಗೆ ವ್ಯಾಪಾರ ನಡೆಸಲು ಅವಕಾಶ ಇಲ್ಲ, ಆದರೆ ಈವರೆಗೂ ಮುಸ್ಲಿಂ ವ್ಯಾಪಾರಸ್ಥರು ದೇವಸ್ಥಾನದ ಒಳಾಂಗಣದಲ್ಲಿ ವ್ಯಾಪಾರ ಮಾಡಿಲ್ಲ. ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ ವ್ಯಾಪಾರ ನಡೆಸಲು ಜಾಗ ಹಂಚಿಕೆ ಮಾಡಲಾಗುತ್ತದೆ. ಈ ಬಾರಿಯೂ ಅಂಗಡಿ ಜಾಗದ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ. ಅಲ್ಲಿ 95 ಅಂಗಡಿಗಳಿದ್ದು ಪ್ರತಿವರ್ಷದಂತೆ ಈ ವರ್ಷವು ಅಂಗಡಿ ಟೆಂಡರ್ ಪಡೆಯಲು ಹೋದರೆ ಅವಕಾಶ ನೀಡದೆ, ನಾಳೆ ಬನ್ನಿ ಎಂದು ಎಲ್ಲ ಮುಸ್ಲಿಂ ವ್ಯಾಪಾರಸ್ಥರನ್ನು ಮರಳಿ ಕಳುಹಿಸಿದ್ದಾರೆ. ಇದೀಗ ಎಲ್ಲ ಅಂಗಡಿಗಳನ್ನು ಹಿಂದೂ ವ್ಯಾಪಾರಸ್ಥರಿಗೆ ನೀಡಲಾಗಿದೆ. ಭಾನುವಾರವೇ ಜಾತ್ರೆ ಇರುವುದರಿಂದ ಮುಸ್ಲಿ ವ್ಯಾಪಾರಸ್ಥರಿಗೆ ಅವಕಾಶ ಇಲ್ಲದಂತಾಗಿದೆ” ಎಂದು ಹೇಳಿದರು.

”ಈ ಬಗ್ಗೆ ನಾವು ದೇವಸ್ಥಾನದ ಆಡಳಿತ ಮಂಡಳಿಯವರನ್ನು ಪ್ರಶ್ನೆ ಮಾಡಿದಾಗ ಅವರಿಗೆ ಸನಾತನ ಸಂಸ್ಥೆಯಿಂದ ಪತ್ರ ಬಂದಿದೆ. ಹಾಗಾಗಿ ನಾವು ಈ ರೀತಿ ಮಾಡಬೇಕಾಯಿತು. ಒಂದು ವೇಳೆ ಅದಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಗಲಾಟೆಗಳಾಗಿ ವ್ಯಾಪಾರಸ್ಥರಿಗೆ ತೊಂದರೆ ಆಗಬಾರದು ಎಂದು ನಾವು ಅನ್ಯಧರ್ಮಿಯರಿಗೆ ಅವಕಾಶ ನೀಡಲಿಲ್ಲ ಎಂದು ಹೇಳಿದರು. ಆ ಪತ್ರ ಬರೆದವರು ಯಾರು? ಆತ ಸರ್ಕಾರದ ಪ್ರತಿನಿಧಿಯೇ? ಇದು ಮುಜರಾಯಿ ಇಲಾಖೆಯ ದೇವಸ್ಥಾನವಾಗಿದೆ. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು” ಎಂದು ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

”ಈ ಬಗ್ಗೆ ನಾವು ಈಗಾಗಲೇ ಮಹಾನಗರ ಪಾಲಿಕೆ. ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಹಾಗೂ ದೂರು ಕೊಟ್ಟಿದ್ದೇವೆ. ಆದರೆ, ಅವರುಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ನಾವು ಇಂದು ಪ್ರತಿಭಟನೆ ನಡೆಸುತ್ತಿದ್ದೇವೆ. ಕಳೆದ 5 ವರ್ಷಗಳ ಹರಾಜು ಪಟ್ಟಿಯನ್ನು ನೋಡಿಕೊಂಡು ಅಲ್ಲಿ ಈ ಹಿಂದೆ ವ್ಯಾಪಾರ ಮಾಡಿದ್ದ ಮುಸ್ಲಿಂ ವ್ಯಾಪಾರಸ್ಥರಿಗೆ ಈ ಬಾರಿಯೂ ಅವಕಾಶ ನೀಡಬೇಕು. ಇಲ್ಲದಿದ್ದರೇ ನಾವು ಮತ್ತಷ್ಟು ಹೋರಾಟಗಳನ್ನು ಮಾಡುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

NOTE:

ಈ ಹಿಂದೆ ನಾವು ವರದಿಯಲ್ಲಿ ”ಸನಾತನ ಸಂಸ್ಥೆಯ ಪತ್ರಕ್ಕೆ ಹೆದರಿ, ಮುಸ್ಲಿಂ ವ್ಯಾಪಾರಸ್ಥರಿಗೆ ನಿರ್ಬಂಧ ಹೇರಿದ ದೇವಸ್ಥಾನದ ಆಡಳಿತ ಮಂಡಳಿ” ಎಂದು ತಲೆಬಹರ ನೀಡಿದ್ದೇವು.. ಆದರೆ ಇದೀಗ ಸನಾತನ ಸಂಸ್ಥೆಯು ತಾವು ಯಾವುದೇ ಪತ್ರ ಬರೆದಿರುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.

”ಮಂಗಳಾದೇವಿ ದೇವಸ್ಥಾನ ಜಾತ್ರಾ ಮಹೋತ್ಸವದ ನಿಮಿತ್ತ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ, ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ತರ ಸಂಘ(ರಿ) ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಜಾತ್ರಾ ಮಹೋತ್ಸವದಲ್ಲಿ ವ್ಯಾಪಾರವನ್ನು ಮಾಡಲು ಹಿಂದೂ ವ್ಯಾಪಾರಸ್ಥರಿಗೆ ಪ್ರಥಮ ಪ್ರಾಧಾನ್ಯತೆಯನ್ನು ನೀಡಬೇಕು ಎಂದು ದೇವಸ್ಥಾನ ಸಮಿತಿಗೆ ಮನವಿ ನೀಡಲಾಗಿತ್ತು. ಈ ವಿಷಯದಲ್ಲಿ ಸನಾತನ ಸಂಸ್ಥೆ ಯಾವುದೇ ಮನವಿಯನ್ನು ದೇವಸ್ಥಾನ ಸಮಿತಿಗೆ ನೀಡಿಲ್ಲ. ಈ ವಿಷಯದಲ್ಲಿ ತಪ್ಪಾಗಿ ಸನಾತನ ಸಂಸ್ಥೆಯ ಹೆಸರನ್ನು ಉಲ್ಲೇಖಿಸಲಾಗಿದೆ. ಈ ಘಟನೆಗೂ ಸನಾತನ ಸಂಸ್ಥೆಗೂ ಯಾವುದೇ ಸಂಬಂಧ ಇರುವುದಿಲ್ಲ” ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್ ಅವರಿಗೆ ಖುದ್ದಾಗಿ ಆಡಳಿತ ಮಂಡಳಿಯವರೇ ಸನಾತನ ಸಂಸ್ಥೆಯಿಂದ ಪತ್ರ ಬಂದಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ”ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ” ಎಂದವರು ಈಗ “ತಿಂದಿದ್ದು ಹೇಳಿದವರನ್ನು ಬಿಡುವುದಿಲ್ಲ” ಎಂದು ಬದಲಿಸಿದ್ದಾರೆಯೇ?: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. If such behaviours continue there will not be any difference between rowdies and commitee members. These things expected under BJP rules. But our state governed by Congress.

LEAVE A REPLY

Please enter your comment!
Please enter your name here

- Advertisment -

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...