Homeಕರ್ನಾಟಕಮಂಗಳೂರು: ಮಂಗಳಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ

ಮಂಗಳೂರು: ಮಂಗಳಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ

- Advertisement -
- Advertisement -

ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧಿಸಿರುವ ಬಗ್ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯು ಜಿಲ್ಲಾಧಿಕಾರಿಗೆ ದೂರು ನೀಡಿದೆ.

ಈ ಮಂಗಳಾದೇವಿ ದೇವಸ್ಥಾನವು ಮುಜುರಾಯಿ ಇಲಾಖೆ ವ್ಯಾಪ್ತಿಗೆ ಬರುತ್ತದೆ. ದೇವಸ್ಥಾನದ ನವರಾತ್ರಿ ಉತ್ಸವವು ಅಕ್ಟೋಬರ್ 15 ರಿಂದ 24 ರ ವರೆಗೆ ನಡೆಯಲಿದೆ. ಆದರೆ, ಸನಾತನ ಸಂಸ್ಥೆಯಿಂದ ಪತ್ರ ಬಂದಿದೆ ಹಾಗಾಗಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ನಿರಾಕರಿಸಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯುವ ಹೇಳಿದೆ ಎನ್ನಲಾಗಿದೆ.

ಪ್ರತಿವರ್ಷದಂತೆ ಈ ವರ್ಷವು ನವರಾತ್ರಿ ಸಿದ್ಧತೆ ಹಿನ್ನೆಲೆಯಲ್ಲಿ ಅಂಗಡಿ ಜಾಗದ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ. ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ ವ್ಯಾಪಾರ ನಡೆಸಲು ಜಾಗ ಹಂಚಿಕೆ ಮಾಡಲಾಗುತ್ತಿದೆ. ಇದು ಮಂಗಳೂರು ಮಹಾನಗರ ಪಾಲಿಕೆಗೆ ಸೇರಿದ ಸರ್ಕಾರಿ ರಸ್ತೆಯಾಗಿದೆ.

ಹಲವು ವರ್ಷಗಳಿಂದ ಈ ರಸ್ತೆಯ ಬದಿಗಳಲ್ಲಿ ನವರಾತ್ರಿ ಜಾತ್ರಾ ವ್ಯಾಪಾರ ನಡೆಯುತ್ತಾ ಬಂದಿದೆ. ಪಾಲಿಕೆ ರಸ್ತೆಯಾಗಿದ್ದರೂ ಹಲವು ವರ್ಷಗಳಿಂದ ದೇವಸ್ಥಾನದ ಆಡಳಿತದಿಂದಲೇ ವ್ಯಾಪಾರದ ಜಾಗ ಹರಾಜು ಮಾಡಲಾಗುತ್ತಿದೆ. ಆದರೆ ಈ ಬಾರಿ ಮಾತ್ರ ದೇವಸ್ಥಾನದ ಆಡಳಿತ ಮಂಡಳಿಯು ಮುಸ್ಲಿಂ ಸಮುದಾಯದ ವ್ಯಾಪಾರಸ್ಥರಿಗೆ ಅವಕಾಶ ನೀಡಿಲ್ಲ. ಇದು ಮುಸ್ಲಿಂ ಸಮುದಾಯದ ವ್ಯಾಪಾರಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಸಂಬಂಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯು ಜಿಲ್ಲಾಧಿಕಾರಿಗೆ ದೂರು ನೀಡಿದ್ದು, ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡುವಂತೆ ಮನವಿ ಮಾಡಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್ ಅವರು, ”ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ದೇವಸ್ಥಾನಗಳಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂದು ಮಂಗಳೂರಿನ ಹಲವು ದೇವಸ್ಥಾನಗಳ ಮುಂದೆ ಬ್ಯಾನರ್ ಹಾಕಲಾಗುತ್ತಿತ್ತು. ಆದರೆ ಮಂಗಳಾದೇವಿ ದೇವಸ್ಥಾನದಲ್ಲಿ ಈವರೆಗೂ ಮುಸ್ಲಿಂ ವ್ಯಾಪಾರಸ್ಥರಿಗೆ ನಿಷೇಧ ಹೇರಿರಲಿಲ್ಲ. ಆದರೆ ಈ ಬಾರಿ ಇಲ್ಲಿಯೂ ಅದೇ ಬೆಳವಣಿಗೆ ನಡೆದಿದೆ” ಎಂದು ತಿಳಿಸಿದರು.

”ಕಾನೂನಿನ ಪ್ರಕಾರ ದೇವಸ್ಥಾನದ ಪ್ರಣಾಂಗದಲ್ಲಿ ಅನ್ಯ ಧರ್ಮಿಯರಿಗೆ ವ್ಯಾಪಾರ ನಡೆಸಲು ಅವಕಾಶ ಇಲ್ಲ, ಆದರೆ ಈವರೆಗೂ ಮುಸ್ಲಿಂ ವ್ಯಾಪಾರಸ್ಥರು ದೇವಸ್ಥಾನದ ಒಳಾಂಗಣದಲ್ಲಿ ವ್ಯಾಪಾರ ಮಾಡಿಲ್ಲ. ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ ವ್ಯಾಪಾರ ನಡೆಸಲು ಜಾಗ ಹಂಚಿಕೆ ಮಾಡಲಾಗುತ್ತದೆ. ಈ ಬಾರಿಯೂ ಅಂಗಡಿ ಜಾಗದ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ. ಅಲ್ಲಿ 95 ಅಂಗಡಿಗಳಿದ್ದು ಪ್ರತಿವರ್ಷದಂತೆ ಈ ವರ್ಷವು ಅಂಗಡಿ ಟೆಂಡರ್ ಪಡೆಯಲು ಹೋದರೆ ಅವಕಾಶ ನೀಡದೆ, ನಾಳೆ ಬನ್ನಿ ಎಂದು ಎಲ್ಲ ಮುಸ್ಲಿಂ ವ್ಯಾಪಾರಸ್ಥರನ್ನು ಮರಳಿ ಕಳುಹಿಸಿದ್ದಾರೆ. ಇದೀಗ ಎಲ್ಲ ಅಂಗಡಿಗಳನ್ನು ಹಿಂದೂ ವ್ಯಾಪಾರಸ್ಥರಿಗೆ ನೀಡಲಾಗಿದೆ. ಭಾನುವಾರವೇ ಜಾತ್ರೆ ಇರುವುದರಿಂದ ಮುಸ್ಲಿ ವ್ಯಾಪಾರಸ್ಥರಿಗೆ ಅವಕಾಶ ಇಲ್ಲದಂತಾಗಿದೆ” ಎಂದು ಹೇಳಿದರು.

”ಈ ಬಗ್ಗೆ ನಾವು ದೇವಸ್ಥಾನದ ಆಡಳಿತ ಮಂಡಳಿಯವರನ್ನು ಪ್ರಶ್ನೆ ಮಾಡಿದಾಗ ಅವರಿಗೆ ಸನಾತನ ಸಂಸ್ಥೆಯಿಂದ ಪತ್ರ ಬಂದಿದೆ. ಹಾಗಾಗಿ ನಾವು ಈ ರೀತಿ ಮಾಡಬೇಕಾಯಿತು. ಒಂದು ವೇಳೆ ಅದಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಗಲಾಟೆಗಳಾಗಿ ವ್ಯಾಪಾರಸ್ಥರಿಗೆ ತೊಂದರೆ ಆಗಬಾರದು ಎಂದು ನಾವು ಅನ್ಯಧರ್ಮಿಯರಿಗೆ ಅವಕಾಶ ನೀಡಲಿಲ್ಲ ಎಂದು ಹೇಳಿದರು. ಆ ಪತ್ರ ಬರೆದವರು ಯಾರು? ಆತ ಸರ್ಕಾರದ ಪ್ರತಿನಿಧಿಯೇ? ಇದು ಮುಜರಾಯಿ ಇಲಾಖೆಯ ದೇವಸ್ಥಾನವಾಗಿದೆ. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು” ಎಂದು ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

”ಈ ಬಗ್ಗೆ ನಾವು ಈಗಾಗಲೇ ಮಹಾನಗರ ಪಾಲಿಕೆ. ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಹಾಗೂ ದೂರು ಕೊಟ್ಟಿದ್ದೇವೆ. ಆದರೆ, ಅವರುಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ನಾವು ಇಂದು ಪ್ರತಿಭಟನೆ ನಡೆಸುತ್ತಿದ್ದೇವೆ. ಕಳೆದ 5 ವರ್ಷಗಳ ಹರಾಜು ಪಟ್ಟಿಯನ್ನು ನೋಡಿಕೊಂಡು ಅಲ್ಲಿ ಈ ಹಿಂದೆ ವ್ಯಾಪಾರ ಮಾಡಿದ್ದ ಮುಸ್ಲಿಂ ವ್ಯಾಪಾರಸ್ಥರಿಗೆ ಈ ಬಾರಿಯೂ ಅವಕಾಶ ನೀಡಬೇಕು. ಇಲ್ಲದಿದ್ದರೇ ನಾವು ಮತ್ತಷ್ಟು ಹೋರಾಟಗಳನ್ನು ಮಾಡುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

NOTE:

ಈ ಹಿಂದೆ ನಾವು ವರದಿಯಲ್ಲಿ ”ಸನಾತನ ಸಂಸ್ಥೆಯ ಪತ್ರಕ್ಕೆ ಹೆದರಿ, ಮುಸ್ಲಿಂ ವ್ಯಾಪಾರಸ್ಥರಿಗೆ ನಿರ್ಬಂಧ ಹೇರಿದ ದೇವಸ್ಥಾನದ ಆಡಳಿತ ಮಂಡಳಿ” ಎಂದು ತಲೆಬಹರ ನೀಡಿದ್ದೇವು.. ಆದರೆ ಇದೀಗ ಸನಾತನ ಸಂಸ್ಥೆಯು ತಾವು ಯಾವುದೇ ಪತ್ರ ಬರೆದಿರುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.

”ಮಂಗಳಾದೇವಿ ದೇವಸ್ಥಾನ ಜಾತ್ರಾ ಮಹೋತ್ಸವದ ನಿಮಿತ್ತ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ, ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ತರ ಸಂಘ(ರಿ) ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಜಾತ್ರಾ ಮಹೋತ್ಸವದಲ್ಲಿ ವ್ಯಾಪಾರವನ್ನು ಮಾಡಲು ಹಿಂದೂ ವ್ಯಾಪಾರಸ್ಥರಿಗೆ ಪ್ರಥಮ ಪ್ರಾಧಾನ್ಯತೆಯನ್ನು ನೀಡಬೇಕು ಎಂದು ದೇವಸ್ಥಾನ ಸಮಿತಿಗೆ ಮನವಿ ನೀಡಲಾಗಿತ್ತು. ಈ ವಿಷಯದಲ್ಲಿ ಸನಾತನ ಸಂಸ್ಥೆ ಯಾವುದೇ ಮನವಿಯನ್ನು ದೇವಸ್ಥಾನ ಸಮಿತಿಗೆ ನೀಡಿಲ್ಲ. ಈ ವಿಷಯದಲ್ಲಿ ತಪ್ಪಾಗಿ ಸನಾತನ ಸಂಸ್ಥೆಯ ಹೆಸರನ್ನು ಉಲ್ಲೇಖಿಸಲಾಗಿದೆ. ಈ ಘಟನೆಗೂ ಸನಾತನ ಸಂಸ್ಥೆಗೂ ಯಾವುದೇ ಸಂಬಂಧ ಇರುವುದಿಲ್ಲ” ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್ ಅವರಿಗೆ ಖುದ್ದಾಗಿ ಆಡಳಿತ ಮಂಡಳಿಯವರೇ ಸನಾತನ ಸಂಸ್ಥೆಯಿಂದ ಪತ್ರ ಬಂದಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ”ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ” ಎಂದವರು ಈಗ “ತಿಂದಿದ್ದು ಹೇಳಿದವರನ್ನು ಬಿಡುವುದಿಲ್ಲ” ಎಂದು ಬದಲಿಸಿದ್ದಾರೆಯೇ?: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. If such behaviours continue there will not be any difference between rowdies and commitee members. These things expected under BJP rules. But our state governed by Congress.

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...