Homeಅಂತರಾಷ್ಟ್ರೀಯಇಸ್ರೇಲ್‌ ವಿರುದ್ಧ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ದಕ್ಷಿಣ ಆಫ್ರಿಕಾ

ಇಸ್ರೇಲ್‌ ವಿರುದ್ಧ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ದಕ್ಷಿಣ ಆಫ್ರಿಕಾ

- Advertisement -
- Advertisement -

ಗಾಝಾದ ಮೇಲೆ ಮಿಲಿಟರಿ ಆಕ್ರಮಣದ ಮೂಲಕ ಇಸ್ರೇಲ್‌ ನರಮೇಧ ನಡೆಸುತ್ತಿದೆ ಎಂದು ದಕ್ಷಿಣ ಆಫ್ರಿಕಾ ಯುಎನ್‌ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ವಿರುದ್ಧ ಮೊಕದ್ದಮೆಯನ್ನು ಹೂಡಿದೆ ಮತ್ತು ಅರ್ಜಿಯ ತ್ವರಿತ ವಿಲೇವಾರಿಗೆ ಆಗ್ರಹಿಸಿದೆ.

ಇಸ್ರೇಲ್ ದಕ್ಷಿಣ ಆಫ್ರಿಕಾದ ಆರೋಪಗಳನ್ನು ತಿರಸ್ಕರಿಸಿ ಸುಳ್ಳು ಆರೋಪ ಎಂದು ಕರೆದಿದ್ದು ಮೊಕದ್ದಮೆಯನ್ನು  ತಿರಸ್ಕರಿಸಲು ಯುಎನ್‌ ಅಂತರಾಷ್ಟ್ರೀಯ ನ್ಯಾಯಾಲಯಕ್ಕೆ (ICJ) ಒತ್ತಾಯಿಸಿದೆ.  ಐಸಿಜೆಯಲ್ಲಿ ಯಾವುದೇ ಪ್ರಕರಣವು ಪರಿಹರಿಸಲು ವರ್ಷಗಟ್ಟಲೆ ತೆಗೆದುಕೊಳ್ಳುವ ಸಾಧ್ಯತೆಯಿದೆ. ಆದರೆ ಕದನ ವಿರಾಮಕ್ಕೆ ಕರೆ ನೀಡುವ ಮಧ್ಯಂತರ ಆದೇಶಗಳನ್ನು ಹೊರಡಿಸಲು ಶೀಘ್ರ ವಿಚಾರಣೆಗೆ ನ್ಯಾಯಾಲಯಕ್ಕೆ ದಕ್ಷಿಣ ಆಫ್ರಿಕಾ ಆಗ್ರಹಿಸಿದೆ. ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾವು  ಇಸ್ರೇಲ್‌ನ ಕೃತ್ಯಗಳನ್ನು ನರಮೇಧ ಎಂದು ಹೇಳಿದ್ದು, ಗಾಝಾದಲ್ಲಿ ಪ್ಯಾಲೆಸ್ತೀನ್‌ ನಾಗರಿಕರನ್ನು ಇಸ್ರೇಲ್‌ ನಾಶಮಾಡುವ ಉದ್ದೇಶ ಹೊಂದಿದೆ ಎಂದು ಹೇಳಿದೆ.

ಮುಂದಿನ ದಿನಗಳಲ್ಲಿ ಅಥವಾ ವಾರಗಳಲ್ಲಿ ಆ ಅರ್ಜಿಯ ವಿಚಾರಣೆಯ ಸಾಧ್ಯತೆಯಿದೆ. ಪ್ರಕರಣವು ಮುಂದುವರಿದರೆ ವರ್ಷಗಳು ಬೇಕಾಗುತ್ತದೆ, ಆದರೆ ವಾರಗಳಲ್ಲಿ ಮಧ್ಯಂತರ ಆದೇಶವನ್ನು ನೀಡಬಹುದು. ಮಾ.2022ರಲ್ಲಿ ‘ಐಸಿಜೆ’ ಯುಕ್ರೇನ್‌ ಮೇಲಿನ ತನ್ನ ಆಕ್ರಮಣವನ್ನು ನಿಲ್ಲಿಸಲು ರಷ್ಯಾಕ್ಕೆ ಆದೇಶ ನೀಡಿತ್ತು. ಆದರೆ ರಷ್ಯಾ ಆದೇಶವನ್ನು ಕಡೆಗಣಿಸಿತ್ತು.

ಇಸ್ರೇಲ್‌ ಸರ್ಕಾರವು ನರಮೇಧದ ಆರೋಪಗಳನ್ನು ತಿರಸ್ಕರಿಸಿದೆ. ದಕ್ಷಿಣ ಆಫ್ರಿಕಾದ ಆರೋಪವು ಕಾನೂನಿನ ಸಮರ್ಥನೆ ಹೊಂದಿಲ್ಲ ಎಂದು ಹೇಳಿದೆ. ಹಮಾಸ್‌ಗೆ ಇಸ್ರೇಲ್‌ ಮೇಲೆ ದಾಳಿಗೆ  ದಕ್ಷಿಣ ಆಫ್ರಿಕಾ ಸಹಕರಿಸುತ್ತಿದೆ ಎಂದು ಇಸ್ರೇಲ್ ಪ್ರತ್ಯಾರೋಪ ಮಾಡಿದೆ.

ಗಾಝಾದ ಮೇಲಿನ ಇಸ್ರೇಲ್‌ನ ಸೇನಾ ಕಾರ್ಯಾಚರಣೆಯನ್ನು ದಕ್ಷಿಣ ಆಫ್ರಿಕಾ ತೀವ್ರವಾಗಿ ಟೀಕಿಸುತ್ತಾ ಬಂದಿದೆ. ಅಧ್ಯಕ್ಷ ಸಿರಿಲ್ ರಾಮಫೋಸಾ ಸೇರಿದಂತೆ ಆಫ್ರಿಕಾದ ಹಲವು ಮುಖಂಡರು ಗಾಝಾ ಮತ್ತು ವೆಸ್ಟ್‌ ಬ್ಯಾಂಕ್‌  ಮೇಲೆ ಇಸ್ರೇಲ್‌ ನಡೆಸುತ್ತಿರುವ ದಾಳಿಯನ್ನು ನರಮೇಧ ಎಂದು ಕರೆದಿದ್ದಾರೆ.

ಇಸ್ರೇಲ್‌ ಗಾಝಾ ಮೇಲೆ ಕಳೆದ ಮೂರು ತಿಂಗಳಿನಿಂದ ನಡೆಸುತ್ತಿರುವ ಯುದ್ಧದಲ್ಲಿ 24,000ಕ್ಕೂ ಅಧಿಕ ಮಂದಿ ಪ್ಯಾಲೆಸ್ತೀನ್‌ ನಾಗರಿಕರು ಮೃತಪಟ್ಟಿದ್ದಾರೆ. ಇವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ. 10,000ಕ್ಕೂ ಅಧಿಕ ಮಕ್ಕಳು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಲಕ್ಷಾಂತರ ಪ್ಯಾಲೆಸ್ತೀನ್‌ ನಾಗರಿಕರು ಗಾಯಗೊಂಡಿದ್ದು, ಸಾವಿರಾರು ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ಹತ್ಯಾಕಾಂಡವನ್ನು ನಡೆಸುತ್ತಿದೆ ಎಂದು ವಿವಿಧ ರಾಷ್ಟ್ರಗಳು ಕದನ ವಿರಾಮಕ್ಕೆ ಆಗ್ರಹಿಸುತ್ತಿದೆ. ಆದರೆ ಇಸ್ರೇಲ್‌ ಮಾತ್ರ ಗಾಝಾದಲ್ಲಿ ಅಮಾಯಕರ ಮೇಲೆ ತಮ್ಮ ಕ್ರೌರ್ಯವನ್ನು ಮುಂದುವರಿಸಿದೆ. ಅಮೆರಿಕ, ಬ್ರಿಟನ್‌ನಂತಹ ರಾಷ್ಟ್ರಗಳು ಈ ಕೃತ್ಯಕ್ಕೆ ಬೆಂಬಲಿಸುತ್ತಿದೆ.

ಇದನ್ನು ಓದಿ: ‘ಭಗವಾನ್ ರಾಮನನ್ನು’ ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲು ಮಾತ್ರ ಬಾಕಿ ಉಳಿದಿದೆ: ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....