Homeಅಂತರಾಷ್ಟ್ರೀಯಇಸ್ರೇಲ್‌ ವಿರುದ್ಧ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ದಕ್ಷಿಣ ಆಫ್ರಿಕಾ

ಇಸ್ರೇಲ್‌ ವಿರುದ್ಧ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ದಕ್ಷಿಣ ಆಫ್ರಿಕಾ

- Advertisement -
- Advertisement -

ಗಾಝಾದ ಮೇಲೆ ಮಿಲಿಟರಿ ಆಕ್ರಮಣದ ಮೂಲಕ ಇಸ್ರೇಲ್‌ ನರಮೇಧ ನಡೆಸುತ್ತಿದೆ ಎಂದು ದಕ್ಷಿಣ ಆಫ್ರಿಕಾ ಯುಎನ್‌ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ವಿರುದ್ಧ ಮೊಕದ್ದಮೆಯನ್ನು ಹೂಡಿದೆ ಮತ್ತು ಅರ್ಜಿಯ ತ್ವರಿತ ವಿಲೇವಾರಿಗೆ ಆಗ್ರಹಿಸಿದೆ.

ಇಸ್ರೇಲ್ ದಕ್ಷಿಣ ಆಫ್ರಿಕಾದ ಆರೋಪಗಳನ್ನು ತಿರಸ್ಕರಿಸಿ ಸುಳ್ಳು ಆರೋಪ ಎಂದು ಕರೆದಿದ್ದು ಮೊಕದ್ದಮೆಯನ್ನು  ತಿರಸ್ಕರಿಸಲು ಯುಎನ್‌ ಅಂತರಾಷ್ಟ್ರೀಯ ನ್ಯಾಯಾಲಯಕ್ಕೆ (ICJ) ಒತ್ತಾಯಿಸಿದೆ.  ಐಸಿಜೆಯಲ್ಲಿ ಯಾವುದೇ ಪ್ರಕರಣವು ಪರಿಹರಿಸಲು ವರ್ಷಗಟ್ಟಲೆ ತೆಗೆದುಕೊಳ್ಳುವ ಸಾಧ್ಯತೆಯಿದೆ. ಆದರೆ ಕದನ ವಿರಾಮಕ್ಕೆ ಕರೆ ನೀಡುವ ಮಧ್ಯಂತರ ಆದೇಶಗಳನ್ನು ಹೊರಡಿಸಲು ಶೀಘ್ರ ವಿಚಾರಣೆಗೆ ನ್ಯಾಯಾಲಯಕ್ಕೆ ದಕ್ಷಿಣ ಆಫ್ರಿಕಾ ಆಗ್ರಹಿಸಿದೆ. ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾವು  ಇಸ್ರೇಲ್‌ನ ಕೃತ್ಯಗಳನ್ನು ನರಮೇಧ ಎಂದು ಹೇಳಿದ್ದು, ಗಾಝಾದಲ್ಲಿ ಪ್ಯಾಲೆಸ್ತೀನ್‌ ನಾಗರಿಕರನ್ನು ಇಸ್ರೇಲ್‌ ನಾಶಮಾಡುವ ಉದ್ದೇಶ ಹೊಂದಿದೆ ಎಂದು ಹೇಳಿದೆ.

ಮುಂದಿನ ದಿನಗಳಲ್ಲಿ ಅಥವಾ ವಾರಗಳಲ್ಲಿ ಆ ಅರ್ಜಿಯ ವಿಚಾರಣೆಯ ಸಾಧ್ಯತೆಯಿದೆ. ಪ್ರಕರಣವು ಮುಂದುವರಿದರೆ ವರ್ಷಗಳು ಬೇಕಾಗುತ್ತದೆ, ಆದರೆ ವಾರಗಳಲ್ಲಿ ಮಧ್ಯಂತರ ಆದೇಶವನ್ನು ನೀಡಬಹುದು. ಮಾ.2022ರಲ್ಲಿ ‘ಐಸಿಜೆ’ ಯುಕ್ರೇನ್‌ ಮೇಲಿನ ತನ್ನ ಆಕ್ರಮಣವನ್ನು ನಿಲ್ಲಿಸಲು ರಷ್ಯಾಕ್ಕೆ ಆದೇಶ ನೀಡಿತ್ತು. ಆದರೆ ರಷ್ಯಾ ಆದೇಶವನ್ನು ಕಡೆಗಣಿಸಿತ್ತು.

ಇಸ್ರೇಲ್‌ ಸರ್ಕಾರವು ನರಮೇಧದ ಆರೋಪಗಳನ್ನು ತಿರಸ್ಕರಿಸಿದೆ. ದಕ್ಷಿಣ ಆಫ್ರಿಕಾದ ಆರೋಪವು ಕಾನೂನಿನ ಸಮರ್ಥನೆ ಹೊಂದಿಲ್ಲ ಎಂದು ಹೇಳಿದೆ. ಹಮಾಸ್‌ಗೆ ಇಸ್ರೇಲ್‌ ಮೇಲೆ ದಾಳಿಗೆ  ದಕ್ಷಿಣ ಆಫ್ರಿಕಾ ಸಹಕರಿಸುತ್ತಿದೆ ಎಂದು ಇಸ್ರೇಲ್ ಪ್ರತ್ಯಾರೋಪ ಮಾಡಿದೆ.

ಗಾಝಾದ ಮೇಲಿನ ಇಸ್ರೇಲ್‌ನ ಸೇನಾ ಕಾರ್ಯಾಚರಣೆಯನ್ನು ದಕ್ಷಿಣ ಆಫ್ರಿಕಾ ತೀವ್ರವಾಗಿ ಟೀಕಿಸುತ್ತಾ ಬಂದಿದೆ. ಅಧ್ಯಕ್ಷ ಸಿರಿಲ್ ರಾಮಫೋಸಾ ಸೇರಿದಂತೆ ಆಫ್ರಿಕಾದ ಹಲವು ಮುಖಂಡರು ಗಾಝಾ ಮತ್ತು ವೆಸ್ಟ್‌ ಬ್ಯಾಂಕ್‌  ಮೇಲೆ ಇಸ್ರೇಲ್‌ ನಡೆಸುತ್ತಿರುವ ದಾಳಿಯನ್ನು ನರಮೇಧ ಎಂದು ಕರೆದಿದ್ದಾರೆ.

ಇಸ್ರೇಲ್‌ ಗಾಝಾ ಮೇಲೆ ಕಳೆದ ಮೂರು ತಿಂಗಳಿನಿಂದ ನಡೆಸುತ್ತಿರುವ ಯುದ್ಧದಲ್ಲಿ 24,000ಕ್ಕೂ ಅಧಿಕ ಮಂದಿ ಪ್ಯಾಲೆಸ್ತೀನ್‌ ನಾಗರಿಕರು ಮೃತಪಟ್ಟಿದ್ದಾರೆ. ಇವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ. 10,000ಕ್ಕೂ ಅಧಿಕ ಮಕ್ಕಳು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಲಕ್ಷಾಂತರ ಪ್ಯಾಲೆಸ್ತೀನ್‌ ನಾಗರಿಕರು ಗಾಯಗೊಂಡಿದ್ದು, ಸಾವಿರಾರು ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ಹತ್ಯಾಕಾಂಡವನ್ನು ನಡೆಸುತ್ತಿದೆ ಎಂದು ವಿವಿಧ ರಾಷ್ಟ್ರಗಳು ಕದನ ವಿರಾಮಕ್ಕೆ ಆಗ್ರಹಿಸುತ್ತಿದೆ. ಆದರೆ ಇಸ್ರೇಲ್‌ ಮಾತ್ರ ಗಾಝಾದಲ್ಲಿ ಅಮಾಯಕರ ಮೇಲೆ ತಮ್ಮ ಕ್ರೌರ್ಯವನ್ನು ಮುಂದುವರಿಸಿದೆ. ಅಮೆರಿಕ, ಬ್ರಿಟನ್‌ನಂತಹ ರಾಷ್ಟ್ರಗಳು ಈ ಕೃತ್ಯಕ್ಕೆ ಬೆಂಬಲಿಸುತ್ತಿದೆ.

ಇದನ್ನು ಓದಿ: ‘ಭಗವಾನ್ ರಾಮನನ್ನು’ ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲು ಮಾತ್ರ ಬಾಕಿ ಉಳಿದಿದೆ: ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...