Homeಮುಖಪುಟಭಾರತೀಯ ಪತ್ರಕರ್ತರ ಯೂಟ್ಯೂಬ್ ವಿಡಿಯೋಗಳಿಗೆ ಕಾಪಿರೈಟ್ ನೋಟಿಸ್ ಕಳುಹಿಸಿದ ದ. ಆಫ್ರಿಕಾದ ಕಂಪನಿ

ಭಾರತೀಯ ಪತ್ರಕರ್ತರ ಯೂಟ್ಯೂಬ್ ವಿಡಿಯೋಗಳಿಗೆ ಕಾಪಿರೈಟ್ ನೋಟಿಸ್ ಕಳುಹಿಸಿದ ದ. ಆಫ್ರಿಕಾದ ಕಂಪನಿ

- Advertisement -
- Advertisement -

ಹಲವು ಸ್ವತಂತ್ರ ಪತ್ರಕರ್ತರು ತಮ್ಮ ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಸಾರ್ವತ್ರಿಕ ಚುನಾವಣಾ ಫಲಿತಾಂಶದ ಕುರಿತು ವಿಡಿಯೋ ಅಪ್ಲೋಡ್ ಮಾಡಿದ ಬಳಿಕ, ಅವರ ಹಲವಾರು ಹಳೆಯ ವಿಡಿಯೋಗಳು ಕಾಪಿರೈಟ್ ನೋಟಿಸ್ ಪಡೆದಿದ್ದು, ಆ ವಿಡಿಯೋಗಳು ಹಣ ಗಳಿಕೆಗೆ ಅನರ್ಹವಾಗಿವೆ ಎಂದು ತಿಳಿಸಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಸ್ವತಂತ್ರ ಪತ್ರಕರ್ತರಾದ ರವೀಶ್ ಕುಮಾರ್, ಅಜಿತ್ ಅಂಜುಮ್, ಅಭಿಸರ್ ಶರ್ಮಾ ಮತ್ತು ಸಾಕ್ಷಿ ಜೋಷಿ ಹಾಗೆಯೇ ಬೋಲ್ಟಾ ಹಿಂದೂಸ್ತಾನ್, ಪ್ರೋಬ್, ದಸ್ತಕ್ ಲೈವ್ ನ್ಯೂಸ್ ಮತ್ತು ಮಿಸ್ಟರ್ ರಿಯಾಕ್ಷನ್ ವಾಲಾ ಅವರಂತಹ ಕಂಟೆಂಟ್ ರಚನೆಕಾರರು ಕಾಪಿರೈಟ್ ನೋಟಿಸ್ ಸ್ವೀಕರಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಸಂಗೀತ ಸಂಗ್ರಾಹಕ, ವಿತರಕ ಮತ್ತು ನಿರ್ಮಾಣ ಸಂಸ್ಥೆಯಾದ ಝಿಕಿ ಮೀಡಿಯಾ ಎಂಟರ್‌ಟೈನ್‌ಮೆಂಟ್ ಎಂಬ ಒಂದೇ ಕಂಪನಿಯಿಂದ ಯೂಟ್ಯೂಬ್ ಮೂಲಕ ಎಲ್ಲರಿಗೂ ನೋಟಿಸ್ ಕಳುಹಿಸಲಾಗಿದೆ.

ಜೋಹಾನ್ಸ್‌ಬರ್ಗ್‌ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಈ ಕಂಪನಿ ಭಾರತದಲ್ಲಿ ವಾರ್ನರ್ ಮ್ಯೂಸಿಕ್ ಜೊತೆ ಪಾಲುದಾರಿಕೆ ಮಾಡಿಕೊಂಡಿದೆ. ನೋಯ್ಡಾದಲ್ಲಿ ವಾರ್ನರ್ ಮ್ಯೂಸಿಕ್‌ನ ಕಚೇರಿಯಿದೆ. ಅರುಣ್ ನಗರ್, ಅಭಿನಂದನ್ ಭಾರದ್ವಾಜ್ ಮತ್ತು ನಿಶಾ ನಗರ್ ಎಂಬವರು ಅದರ ನಿರ್ದೇಶಕರಾಗಿದ್ದಾರೆ. ದಲೇರ್ ಮೆಹೆಂದಿ, ಜಾಸ್ಮಿನ್ ಸ್ಯಾಂಡ್ಲಾಸ್ ಮತ್ತು ಜೆ ಸ್ಟಾರ್‌ನಂತಹ ಕಲಾವಿದರು ಕಂಪನಿಯ ಭಾಗವಾಗಿದ್ದಾರೆ.

ಕೆಲವು ವರ್ಷಗಳ ಹಿಂದೆ ಪ್ರಕಟಿಸಿದ ಆಡಿಯೋ ಮತ್ತು ವಿಡಿಯೋಗಳಿಗೆ ಸಂಬಂಧಿಸಿ ಝಿಕಿ ಮೀಡಿಯಾ ಕಾಪಿರೈಟ್ ನೋಟಿಸ್ ನೀಡಿದೆ. ಆದರೆ, ಪತ್ರಕರ್ತರ ವಿಡಿಯೋಗಳಲ್ಲಿ ಹೆಚ್ಚಿನವು ಪತ್ರಿಕಾಗೋಷ್ಠಿಗಳಂತಹ ಸಾರ್ವಜನಿಕ ಡೊಮೇನ್‌ನಿಂದ ಪಡೆದ ಕ್ಲಿಪ್‌ಗಳಾಗಿವೆ ಎಂದು ದಿ ನ್ಯೂಸ್ ಮಿನಿಟ್ ತಿಳಿಸಿದೆ.

ನಾವು ಝಿಕಿ ಮೀಡಿಯಾದ ಯಾವುದೇ ಮ್ಯೂಸಿಕ್, ಆಡಿಯೋ, ವಿಡಿಯೋಗಳನ್ನು ಬಳಸಿಕೊಂಡಿಲ್ಲ. ಆದರೂ, ಕಾಪಿರೈಟ್ ನೋಟಿಸ್ ಸ್ವೀಕರಿಸಿರುವುದು ಆಫಾತ ತಂದಿದೆ ಎಂದು ಪತ್ರಕರ್ತರು ಹೇಳಿಕೊಂಡಿದ್ದಾರೆ.

“ನಿಮ್ಮ ವಿಡಿಯೋಗಳಲ್ಲಿ ಕಾಪಿರೈಟ್ ಹೊಂದಿರುವ ಅಂಶಗಳಿವೆ. ಅವುಗಳ ಪ್ರದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲ. ಆದರೆ, ಇನ್ನು ಮುಂದೆ ತಮ್ಮ ಚಾನೆಲ್ ಹಣ ಗಳಿಸಲು ಸಾಧ್ಯವಿಲ್ಲ ಎಂದು ಯೂಟ್ಯೂಬ್‌ನಿಂದ ಈ-ಮೇಲ್ ಬಂದಿದೆ. ಕಾಪಿರೈಟ್ ಆರೋಪ ಮಾಡಿರುವುದು ಝಿಕಿ ಮೀಡಿಯಾ ಎಂಬುವುದಾಗಿ ಹೇಳಲಾಗಿದೆ” ಎಂದು ಪತ್ರಕರ್ತರು ತಿಳಿಸಿದ್ದಾರೆ. ಕೆಲ ಪತ್ರಕರ್ತರು ಈ ಸಮಸ್ಯೆಯನ್ನು ಪರಿಹರಿಸಿಕೊಂಡಿದ್ದಾರೆ ಎಂದು ನ್ಯೂಸ್‌ ಮಿನಿಟ್ ವರದಿ ಹೇಳಿದೆ.

ಇದನ್ನೂ ಓದಿ : ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಇಂಜಿನಿಯರ್ ರಶೀದ್, ಅಮೃತ್ ಪಾಲ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...