Homeಮುಖಪುಟಅಫ್ತಾಬ್- ಶ್ರದ್ಧಾ ಪ್ರಕರಣ: ಕತ್ತರಿಸಿ ಕಾಡಿಗೆ ಎಸೆದಿದ್ದ ದೇಹದ ಬಿಡಿಭಾಗಗಳಿಗೆ ಹುಡುಕಾಟ

ಅಫ್ತಾಬ್- ಶ್ರದ್ಧಾ ಪ್ರಕರಣ: ಕತ್ತರಿಸಿ ಕಾಡಿಗೆ ಎಸೆದಿದ್ದ ದೇಹದ ಬಿಡಿಭಾಗಗಳಿಗೆ ಹುಡುಕಾಟ

ಯುವತಿ ಕೊಲೆಗೆ ಸಂಬಂಧಿಸಿದಂತೆ 13 ಬಿಡಿಭಾಗಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಪಿಟಿಐ ವರದಿ ಮಾಡಿದೆ

- Advertisement -
- Advertisement -

ತನ್ನ ಸಂಗಾತಿಯನ್ನು ಕೊಂದ ಆರೋಪದಲ್ಲಿ ಬಂಧಿತನಾದ 28 ವರ್ಷದ ಅಫ್ತಾಬ್ ಅಮೀನ್ ಪೂನಾವಾಲಾನನ್ನು ದಕ್ಷಿಣ ದೆಹಲಿಯ ಛತ್ತರ್‌ಪುರದ ಅರಣ್ಯ ಪ್ರದೇಶಕ್ಕೆ ಪೊಲೀಸರು ಕರೆದೊಯ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ತಾವು ಕೊಲೆ ಮಾಡಿದ ಶ್ರದ್ಧಾ ವಾಕರ್ ಅವರ ದೇಹದ ಭಾಗಗಳನ್ನು ಇಲ್ಲಿ ಎಸೆದಿದ್ದನು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ದೆಹಲಿ ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿರುವ ವರದಿಯು, “ಅಫ್ತಾಬ್ ತಾನು ಬಿಡಿಭಾಗಗಳನ್ನು ಎಸೆದ ಪ್ರದೇಶಗಳನ್ನು ಗುರುತಿಸಿದ್ದಾನೆ. ನಂತರ ದೇಹದ 13 ಭಾಗಗಳು ಪತ್ತೆಯಾಗಿವೆ. ಆದರೆ ವಿಧಿವಿಜ್ಞಾನ ಪರೀಕ್ಷೆಯ ನಂತರವೇ, ಅವು ಕೊಲೆಯಾದ ಯುವತಿಗೆ ಸೇರಿದೆಯೇ ಎಂದು ದೃಢೀಕರಿಸಬಹುದು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆ ಪ್ರಕರಣದ ತನಿಖೆಯ ಭಾಗವಾಗಿ ಅಫ್ತಾಬ್‌ನನ್ನು ಛತ್ತರ್‌ಪುರ ಪ್ರದೇಶವನ್ನು ಹೊರತುಪಡಿಸಿ ನವದೆಹಲಿಯ ಇತರ ಕೆಲವು ಸ್ಥಳಗಳಿಗೆ ಕರೆದೊಯ್ಯಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮೇ 18ರಂದು ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ಅಫ್ತಾಬ್‌ ಪೂನವಾಲ ತನ್ನ ಪ್ರೇಯಸಿ ಶ್ರದ್ಧಾ ವಾಲ್ಕರ್‌ ಅವರ ಕತ್ತುಸೀಳಿ ಕೊಂದಿದ್ದ. ಬಳಿಕ ಆಕೆಯ ದೇಹವನ್ನು ಸುಮಾರು 35 ಭಾಗಗಳಾಗಿ ಕತ್ತರಿಸಿ ಮೂರು ವಾರಗಳ ಕಾಲ ಫ್ರಿಡ್ಜ್‌ನಲ್ಲಿಟ್ಟು, ನಂತರ ನಗರದ ವಿವಿಧ ಪ್ರದೇಶಗಳಲ್ಲಿ ಒಂದೊಂದು ಭಾಗವನ್ನು ವಿಲೇವಾರಿ ಮಾಡಿದ್ದ.

ಇದುವರೆಗೆ ಪತ್ತೆಯಾಗಿರುವ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಅವೆಲ್ಲವೂ ಮಾನವ ಅವಶೇಷಗಳೇ ಎಂದು ಖಚಿತಪಡಿಸಿಕೊಳ್ಳಲಾಗಿದೆ. ತಲೆ ಇನ್ನೂ ಪತ್ತೆಯಾಗಿಲ್ಲ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಕೊಲೆಗೆ ಬಳಸಲಾದ ಆಯುಧವನ್ನು ಪತ್ತೆಹಚ್ಚಲಾಗಿಲ್ಲ.

ಅಫ್ತಾಬ್ ಹದಿನೈದು ದಿನಗಳ ಹಿಂದೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸೈನಲ್ಲಿರುವ ಹೌಸಿಂಗ್ ಸೊಸೈಟಿಗೆ ಭೇಟಿ ನೀಡಿದ್ದನು. ಆತನ ಕುಟುಂಬ ಸದಸ್ಯರು ಮುಂಬೈಗೆ ತೆರಳಲು ಸಹಾಯ ಮಾಡಿದ್ದರು ಎಂದು ಸೊಸೈಟಿ ಸದಸ್ಯರೊಬ್ಬರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಆರೋಪಿ ಅಫ್ತಾಬ್‌‌ ಭೇಟಿ ಮಾಡಿದ ಯುವತಿಯ ವಿವರಗಳನ್ನು ಕಂಡುಹಿಡಿಯಲು ದೆಹಲಿ ಪೊಲೀಸರು ಡೇಟಿಂಗ್ ಆ್ಯಪ್ ಬಂಬಲ್‌ಗೆ ಪತ್ರ ಬರೆಯುವ ಸಾಧ್ಯತೆಯಿದೆ. ಈ ಡೇಟಿಂಗ್ ಆಪ್‌ನಲ್ಲಿ ಶ್ರದ್ಧಾ ಅವರನ್ನು ಅಫ್ತಾಬ್ ಭೇಟಿಯಾಗಿದ್ದನು. ಬಂಬಲ್‌ನ ಪ್ರಧಾನ ಕಛೇರಿಯು ಅಮೆರಿಕಾದ ಟೆಕ್ಸಾಸ್‌ನಲ್ಲಿದೆ.

ಶ್ರದ್ಧಾಳ ತಂದೆ ವಿಕಾಸ್ ವಾಕರ್ ಪ್ರತಿಕ್ರಿಯಿಸಿ, “ಆರೋಪಿಗೆ ಮರಣದಂಡನೆ ವಿಧಿಸಬೇಕು” ಎಂದು ಒತ್ತಾಯಿಸಿದ್ದಾರೆ. ಈ ಜೊತೆಯ ಬೆನ್ನಲ್ಲೇ ಲವ್‌ ಜಿಹಾದ್‌ ಚರ್ಚೆ ನಡೆಯುತ್ತಿದೆ.

ಜಗಳದ ನಂತರ ತನ್ನ ಪ್ರಿಯತಮೆ ಶ್ರದ್ಧಾಳನ್ನು ಕೊಂದಿರುವುದಾಗಿ ಮತ್ತು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸುವ ಆಲೋಚನೆಯನ್ನು ಅಮೇರಿಕನ್ ಕ್ರೈಮ್ ಟಿವಿ ಸರಣಿಯಾದ ‘ಡೆಕ್ಸ್ಟರ್’ನಿಂದ ಬೆಳೆಸಿಕೊಂಡಿದ್ದಾಗಿ ಪೂನಾವಾಲಾ ತನಿಖೆಯ ಸಮಯದಲ್ಲಿ ಪೊಲೀಸರಿಗೆ ತಿಳಿಸಿದ್ದಾನೆ.

ಪ್ರೇಯಸಿಯ ದೇಹದ ಬಿಡಿಭಾಗಗಳನ್ನು ಸಂರಕ್ಷಿಸಲು ಫ್ರಿಜ್ ಖರೀದಿಸಿದ್ದನು. ಅವುಗಳನ್ನು ವಿಲೇವಾರಿ ಮಾಡಲು ಮಧ್ಯರಾತ್ರಿಯ ನಂತರ ಹೊರಗೆ ಹೋಗುತ್ತಿದ್ದನು. ಯಾವ ಭಾಗವು ಬೇಗನೆ ಕೊಳೆಯಲು ಪ್ರಾರಂಭಿಸುತ್ತದೆ ಎಂಬುದರ ಆಧಾರದ ಮೇಲೆ ಆರೋಪಿಯು ಯಾವುದನ್ನು ಮೊದಲು ವಿಲೇವಾರಿ ಮಾಡಬೇಕೆಂದು ನಿರ್ಧರಿಸುತ್ತಿದ್ದನು ಎಂದು ಪೊಲೀಸರು ವಿವರಿಸಿದ್ದಾರೆ.

ಪೂನಾವಾಲಾ ಜೊತೆಗಿನ ಸಂಬಂಧದ ಬಗ್ಗೆ ಭಿನ್ನಾಭಿಪ್ರಾಯ ಇದ್ದಿದ್ದರಿಂದ ಯುವತಿಯು ತನ್ನ ಕುಟುಂಬದೊಂದಿಗೆ ಮಾತುಕತೆ ನಡೆಸಿರಲಿಲ್ಲ.

ಮೇ 18 ರಂದು, ಆರೋಪಿ ಮತ್ತು ಯುವತಿಯ ನಡುವೆ ಜಗಳವಾಗಿತ್ತು. ಯುವತಿಯು ಕೂಗುತ್ತಿದ್ದರಿಂದ ಅಫ್ತಾಬ್ ತನ್ನ ಕೈಯಿಂದ ಆಕೆಯ ಬಾಯಿಯನ್ನು ಮುಚ್ಚಿದನು. ನಂತರ ಆಕೆಯ ಕತ್ತು ಹಿಸುಕಿ, ದೇಹವನ್ನು ಭಾಗಗಳಾಗಿ ಕತ್ತರಿಸಿ ಹತ್ತಿರದ ಕಾಡಿನಲ್ಲಿ ವಿಲೇವಾರಿ ಮಾಡಲಾರಂಭಿಸಿದನು ಎಂದು ದೆಹಲಿ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೂನಾವಾಲಾನನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಶ್ರದ್ಧಾಳ ನೆನಪಿಗಾಗಿ ಫ್ರಿಡ್ಜ್‌ನಲ್ಲಿ ದೇಹವಿರಿಸಿದ್ದೆ: ಅಫ್ತಾಬ್

“ಕೊಲೆ ಮಾಡಿದ ನಂತರ ಯುವತಿಯ ತಲೆಯನ್ನು ರೆಫ್ರಿಜರೇಟರ್‌ನಲ್ಲಿ ಇರಿಸಿದ್ದೆನು. ಆಕೆ ಮತ್ತು ನನ್ನ ನಡುವಿನ ಸಂಬಂಧದ ನೆನಪಿಗಾಗಿ ಆ ದೇಹವನ್ನು ಆಗಾಗ್ಗೆ ನೋಡುತ್ತಿದ್ದೆ. ಆ ನಂತರದ ದಿನಗಳಲ್ಲಿ ಆಕೆಯ ತಲೆಯನ್ನು ಹೊರಗೆ ಎಸೆದಿದ್ದೇನೆ” ಎಂದು ಆರೋಪಿ ಅಫ್ತಾಬ್‌ ಪೊಲೀಸರಿಗೆ ತಿಳಿಸಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಇದನ್ನೂ ಓದಿರಿ: ಊನಾ ಪ್ರಕರಣದ ಆರೋಪಿಗಳಿಂದ ದಲಿತ ಸಂತ್ರಸ್ತರಿಗೆ ಜೀವ ಬೆದರಿಕೆ; ಎಫ್‌ಐಆರ್‌

ತಲೆ ಪತ್ತೆಯಾದ ನಂತರ, ಪೊಲೀಸರು ಸ್ಕಲ್ ಸೂಪರ್‌ಇಂಪೊಸಿಷನ್ ತಂತ್ರಜ್ಞಾನವನ್ನು ಬಳಸಿಕೊಂಡು ಸಂತ್ರಸ್ತೆಯ ಗುರುತನ್ನು ಪತ್ತೆಹಚ್ಚಲಿದ್ದಾರೆ. ಸದ್ಯಕ್ಕೆ ಅವರ ಏಕೈಕ ಭರವಸೆ ಎಂದರೆ ವಾಕರ್ ಅವರ ತಂದೆಯೊಂದಿಗೆ, ಈಗ ದೊರೆತಿರುವ ಕೆಲವು ಬಿಡಿಭಾಗಗಳ ಡಿಎನ್‌ಎ ಹೊಂದಾಣಿಕೆಯಾಗಿದೆ.

ಯುವತಿಯ ದೇಹದ ಭಾಗಗಳನ್ನು ಕತ್ತರಿಸುವಾಗ, ಸಂಗ್ರಹಿಸುವಾಗ ಮತ್ತು ವಿಲೇವಾರಿ ಮಾಡುವಾಗ ಆರ್ಥೋಬೊರಿಕ್ ಆಸಿಡ್ (ಬೋರಿಕ್ ಪೌಡರ್), ಫಾರ್ಮಾಲ್ಡಿಹೈಡ್, ಸಲ್ಫ್ಯೂರಿಕ್ ಆಸಿಡ್ ಮತ್ತು ಇತರ ಕೆಲವು ರಾಸಾಯನಿಕಗಳನ್ನು ಪೂನಾವಾಲಾ ಬಳಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಉಲ್ಲೇಖಿಸಿದೆ.

ಕೊಲೆಯಾಗಿ ಆರು ತಿಂಗಳುಗಳು ಕಳೆದಿರುವುದರಿಂದ, ಕೊಲೆಯನ್ನು ದೃಢೀಕರಿಸಲು ಪೊಲೀಸರು ವಿಧಿವಿಜ್ಞಾನವನ್ನು ಅವಲಂಬಿಸಬೇಕಾಗುತ್ತದೆ. ಆರೋಪಿಯು ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ತನ್ನ ಉತ್ತರಗಳನ್ನು ಆಗಾಗ್ಗೆ ಬದಲಾಯಿಸುತ್ತಿದ್ದಾನೆ ಮತ್ತು ಅನೇಕ ವಿವರಗಳನ್ನು ಮರೆತಿರುವುದಾಗಿ ಆತ ಹೇಳುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...