Homeಮುಖಪುಟಅಫ್ತಾಬ್- ಶ್ರದ್ಧಾ ಪ್ರಕರಣ: ಕತ್ತರಿಸಿ ಕಾಡಿಗೆ ಎಸೆದಿದ್ದ ದೇಹದ ಬಿಡಿಭಾಗಗಳಿಗೆ ಹುಡುಕಾಟ

ಅಫ್ತಾಬ್- ಶ್ರದ್ಧಾ ಪ್ರಕರಣ: ಕತ್ತರಿಸಿ ಕಾಡಿಗೆ ಎಸೆದಿದ್ದ ದೇಹದ ಬಿಡಿಭಾಗಗಳಿಗೆ ಹುಡುಕಾಟ

ಯುವತಿ ಕೊಲೆಗೆ ಸಂಬಂಧಿಸಿದಂತೆ 13 ಬಿಡಿಭಾಗಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಪಿಟಿಐ ವರದಿ ಮಾಡಿದೆ

- Advertisement -
- Advertisement -

ತನ್ನ ಸಂಗಾತಿಯನ್ನು ಕೊಂದ ಆರೋಪದಲ್ಲಿ ಬಂಧಿತನಾದ 28 ವರ್ಷದ ಅಫ್ತಾಬ್ ಅಮೀನ್ ಪೂನಾವಾಲಾನನ್ನು ದಕ್ಷಿಣ ದೆಹಲಿಯ ಛತ್ತರ್‌ಪುರದ ಅರಣ್ಯ ಪ್ರದೇಶಕ್ಕೆ ಪೊಲೀಸರು ಕರೆದೊಯ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ತಾವು ಕೊಲೆ ಮಾಡಿದ ಶ್ರದ್ಧಾ ವಾಕರ್ ಅವರ ದೇಹದ ಭಾಗಗಳನ್ನು ಇಲ್ಲಿ ಎಸೆದಿದ್ದನು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ದೆಹಲಿ ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿರುವ ವರದಿಯು, “ಅಫ್ತಾಬ್ ತಾನು ಬಿಡಿಭಾಗಗಳನ್ನು ಎಸೆದ ಪ್ರದೇಶಗಳನ್ನು ಗುರುತಿಸಿದ್ದಾನೆ. ನಂತರ ದೇಹದ 13 ಭಾಗಗಳು ಪತ್ತೆಯಾಗಿವೆ. ಆದರೆ ವಿಧಿವಿಜ್ಞಾನ ಪರೀಕ್ಷೆಯ ನಂತರವೇ, ಅವು ಕೊಲೆಯಾದ ಯುವತಿಗೆ ಸೇರಿದೆಯೇ ಎಂದು ದೃಢೀಕರಿಸಬಹುದು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆ ಪ್ರಕರಣದ ತನಿಖೆಯ ಭಾಗವಾಗಿ ಅಫ್ತಾಬ್‌ನನ್ನು ಛತ್ತರ್‌ಪುರ ಪ್ರದೇಶವನ್ನು ಹೊರತುಪಡಿಸಿ ನವದೆಹಲಿಯ ಇತರ ಕೆಲವು ಸ್ಥಳಗಳಿಗೆ ಕರೆದೊಯ್ಯಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮೇ 18ರಂದು ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ಅಫ್ತಾಬ್‌ ಪೂನವಾಲ ತನ್ನ ಪ್ರೇಯಸಿ ಶ್ರದ್ಧಾ ವಾಲ್ಕರ್‌ ಅವರ ಕತ್ತುಸೀಳಿ ಕೊಂದಿದ್ದ. ಬಳಿಕ ಆಕೆಯ ದೇಹವನ್ನು ಸುಮಾರು 35 ಭಾಗಗಳಾಗಿ ಕತ್ತರಿಸಿ ಮೂರು ವಾರಗಳ ಕಾಲ ಫ್ರಿಡ್ಜ್‌ನಲ್ಲಿಟ್ಟು, ನಂತರ ನಗರದ ವಿವಿಧ ಪ್ರದೇಶಗಳಲ್ಲಿ ಒಂದೊಂದು ಭಾಗವನ್ನು ವಿಲೇವಾರಿ ಮಾಡಿದ್ದ.

ಇದುವರೆಗೆ ಪತ್ತೆಯಾಗಿರುವ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಅವೆಲ್ಲವೂ ಮಾನವ ಅವಶೇಷಗಳೇ ಎಂದು ಖಚಿತಪಡಿಸಿಕೊಳ್ಳಲಾಗಿದೆ. ತಲೆ ಇನ್ನೂ ಪತ್ತೆಯಾಗಿಲ್ಲ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಕೊಲೆಗೆ ಬಳಸಲಾದ ಆಯುಧವನ್ನು ಪತ್ತೆಹಚ್ಚಲಾಗಿಲ್ಲ.

ಅಫ್ತಾಬ್ ಹದಿನೈದು ದಿನಗಳ ಹಿಂದೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸೈನಲ್ಲಿರುವ ಹೌಸಿಂಗ್ ಸೊಸೈಟಿಗೆ ಭೇಟಿ ನೀಡಿದ್ದನು. ಆತನ ಕುಟುಂಬ ಸದಸ್ಯರು ಮುಂಬೈಗೆ ತೆರಳಲು ಸಹಾಯ ಮಾಡಿದ್ದರು ಎಂದು ಸೊಸೈಟಿ ಸದಸ್ಯರೊಬ್ಬರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಆರೋಪಿ ಅಫ್ತಾಬ್‌‌ ಭೇಟಿ ಮಾಡಿದ ಯುವತಿಯ ವಿವರಗಳನ್ನು ಕಂಡುಹಿಡಿಯಲು ದೆಹಲಿ ಪೊಲೀಸರು ಡೇಟಿಂಗ್ ಆ್ಯಪ್ ಬಂಬಲ್‌ಗೆ ಪತ್ರ ಬರೆಯುವ ಸಾಧ್ಯತೆಯಿದೆ. ಈ ಡೇಟಿಂಗ್ ಆಪ್‌ನಲ್ಲಿ ಶ್ರದ್ಧಾ ಅವರನ್ನು ಅಫ್ತಾಬ್ ಭೇಟಿಯಾಗಿದ್ದನು. ಬಂಬಲ್‌ನ ಪ್ರಧಾನ ಕಛೇರಿಯು ಅಮೆರಿಕಾದ ಟೆಕ್ಸಾಸ್‌ನಲ್ಲಿದೆ.

ಶ್ರದ್ಧಾಳ ತಂದೆ ವಿಕಾಸ್ ವಾಕರ್ ಪ್ರತಿಕ್ರಿಯಿಸಿ, “ಆರೋಪಿಗೆ ಮರಣದಂಡನೆ ವಿಧಿಸಬೇಕು” ಎಂದು ಒತ್ತಾಯಿಸಿದ್ದಾರೆ. ಈ ಜೊತೆಯ ಬೆನ್ನಲ್ಲೇ ಲವ್‌ ಜಿಹಾದ್‌ ಚರ್ಚೆ ನಡೆಯುತ್ತಿದೆ.

ಜಗಳದ ನಂತರ ತನ್ನ ಪ್ರಿಯತಮೆ ಶ್ರದ್ಧಾಳನ್ನು ಕೊಂದಿರುವುದಾಗಿ ಮತ್ತು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸುವ ಆಲೋಚನೆಯನ್ನು ಅಮೇರಿಕನ್ ಕ್ರೈಮ್ ಟಿವಿ ಸರಣಿಯಾದ ‘ಡೆಕ್ಸ್ಟರ್’ನಿಂದ ಬೆಳೆಸಿಕೊಂಡಿದ್ದಾಗಿ ಪೂನಾವಾಲಾ ತನಿಖೆಯ ಸಮಯದಲ್ಲಿ ಪೊಲೀಸರಿಗೆ ತಿಳಿಸಿದ್ದಾನೆ.

ಪ್ರೇಯಸಿಯ ದೇಹದ ಬಿಡಿಭಾಗಗಳನ್ನು ಸಂರಕ್ಷಿಸಲು ಫ್ರಿಜ್ ಖರೀದಿಸಿದ್ದನು. ಅವುಗಳನ್ನು ವಿಲೇವಾರಿ ಮಾಡಲು ಮಧ್ಯರಾತ್ರಿಯ ನಂತರ ಹೊರಗೆ ಹೋಗುತ್ತಿದ್ದನು. ಯಾವ ಭಾಗವು ಬೇಗನೆ ಕೊಳೆಯಲು ಪ್ರಾರಂಭಿಸುತ್ತದೆ ಎಂಬುದರ ಆಧಾರದ ಮೇಲೆ ಆರೋಪಿಯು ಯಾವುದನ್ನು ಮೊದಲು ವಿಲೇವಾರಿ ಮಾಡಬೇಕೆಂದು ನಿರ್ಧರಿಸುತ್ತಿದ್ದನು ಎಂದು ಪೊಲೀಸರು ವಿವರಿಸಿದ್ದಾರೆ.

ಪೂನಾವಾಲಾ ಜೊತೆಗಿನ ಸಂಬಂಧದ ಬಗ್ಗೆ ಭಿನ್ನಾಭಿಪ್ರಾಯ ಇದ್ದಿದ್ದರಿಂದ ಯುವತಿಯು ತನ್ನ ಕುಟುಂಬದೊಂದಿಗೆ ಮಾತುಕತೆ ನಡೆಸಿರಲಿಲ್ಲ.

ಮೇ 18 ರಂದು, ಆರೋಪಿ ಮತ್ತು ಯುವತಿಯ ನಡುವೆ ಜಗಳವಾಗಿತ್ತು. ಯುವತಿಯು ಕೂಗುತ್ತಿದ್ದರಿಂದ ಅಫ್ತಾಬ್ ತನ್ನ ಕೈಯಿಂದ ಆಕೆಯ ಬಾಯಿಯನ್ನು ಮುಚ್ಚಿದನು. ನಂತರ ಆಕೆಯ ಕತ್ತು ಹಿಸುಕಿ, ದೇಹವನ್ನು ಭಾಗಗಳಾಗಿ ಕತ್ತರಿಸಿ ಹತ್ತಿರದ ಕಾಡಿನಲ್ಲಿ ವಿಲೇವಾರಿ ಮಾಡಲಾರಂಭಿಸಿದನು ಎಂದು ದೆಹಲಿ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೂನಾವಾಲಾನನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಶ್ರದ್ಧಾಳ ನೆನಪಿಗಾಗಿ ಫ್ರಿಡ್ಜ್‌ನಲ್ಲಿ ದೇಹವಿರಿಸಿದ್ದೆ: ಅಫ್ತಾಬ್

“ಕೊಲೆ ಮಾಡಿದ ನಂತರ ಯುವತಿಯ ತಲೆಯನ್ನು ರೆಫ್ರಿಜರೇಟರ್‌ನಲ್ಲಿ ಇರಿಸಿದ್ದೆನು. ಆಕೆ ಮತ್ತು ನನ್ನ ನಡುವಿನ ಸಂಬಂಧದ ನೆನಪಿಗಾಗಿ ಆ ದೇಹವನ್ನು ಆಗಾಗ್ಗೆ ನೋಡುತ್ತಿದ್ದೆ. ಆ ನಂತರದ ದಿನಗಳಲ್ಲಿ ಆಕೆಯ ತಲೆಯನ್ನು ಹೊರಗೆ ಎಸೆದಿದ್ದೇನೆ” ಎಂದು ಆರೋಪಿ ಅಫ್ತಾಬ್‌ ಪೊಲೀಸರಿಗೆ ತಿಳಿಸಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಇದನ್ನೂ ಓದಿರಿ: ಊನಾ ಪ್ರಕರಣದ ಆರೋಪಿಗಳಿಂದ ದಲಿತ ಸಂತ್ರಸ್ತರಿಗೆ ಜೀವ ಬೆದರಿಕೆ; ಎಫ್‌ಐಆರ್‌

ತಲೆ ಪತ್ತೆಯಾದ ನಂತರ, ಪೊಲೀಸರು ಸ್ಕಲ್ ಸೂಪರ್‌ಇಂಪೊಸಿಷನ್ ತಂತ್ರಜ್ಞಾನವನ್ನು ಬಳಸಿಕೊಂಡು ಸಂತ್ರಸ್ತೆಯ ಗುರುತನ್ನು ಪತ್ತೆಹಚ್ಚಲಿದ್ದಾರೆ. ಸದ್ಯಕ್ಕೆ ಅವರ ಏಕೈಕ ಭರವಸೆ ಎಂದರೆ ವಾಕರ್ ಅವರ ತಂದೆಯೊಂದಿಗೆ, ಈಗ ದೊರೆತಿರುವ ಕೆಲವು ಬಿಡಿಭಾಗಗಳ ಡಿಎನ್‌ಎ ಹೊಂದಾಣಿಕೆಯಾಗಿದೆ.

ಯುವತಿಯ ದೇಹದ ಭಾಗಗಳನ್ನು ಕತ್ತರಿಸುವಾಗ, ಸಂಗ್ರಹಿಸುವಾಗ ಮತ್ತು ವಿಲೇವಾರಿ ಮಾಡುವಾಗ ಆರ್ಥೋಬೊರಿಕ್ ಆಸಿಡ್ (ಬೋರಿಕ್ ಪೌಡರ್), ಫಾರ್ಮಾಲ್ಡಿಹೈಡ್, ಸಲ್ಫ್ಯೂರಿಕ್ ಆಸಿಡ್ ಮತ್ತು ಇತರ ಕೆಲವು ರಾಸಾಯನಿಕಗಳನ್ನು ಪೂನಾವಾಲಾ ಬಳಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಉಲ್ಲೇಖಿಸಿದೆ.

ಕೊಲೆಯಾಗಿ ಆರು ತಿಂಗಳುಗಳು ಕಳೆದಿರುವುದರಿಂದ, ಕೊಲೆಯನ್ನು ದೃಢೀಕರಿಸಲು ಪೊಲೀಸರು ವಿಧಿವಿಜ್ಞಾನವನ್ನು ಅವಲಂಬಿಸಬೇಕಾಗುತ್ತದೆ. ಆರೋಪಿಯು ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ತನ್ನ ಉತ್ತರಗಳನ್ನು ಆಗಾಗ್ಗೆ ಬದಲಾಯಿಸುತ್ತಿದ್ದಾನೆ ಮತ್ತು ಅನೇಕ ವಿವರಗಳನ್ನು ಮರೆತಿರುವುದಾಗಿ ಆತ ಹೇಳುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...