Homeಮುಖಪುಟಅಫ್ತಾಬ್- ಶ್ರದ್ಧಾ ಪ್ರಕರಣ: ಕತ್ತರಿಸಿ ಕಾಡಿಗೆ ಎಸೆದಿದ್ದ ದೇಹದ ಬಿಡಿಭಾಗಗಳಿಗೆ ಹುಡುಕಾಟ

ಅಫ್ತಾಬ್- ಶ್ರದ್ಧಾ ಪ್ರಕರಣ: ಕತ್ತರಿಸಿ ಕಾಡಿಗೆ ಎಸೆದಿದ್ದ ದೇಹದ ಬಿಡಿಭಾಗಗಳಿಗೆ ಹುಡುಕಾಟ

ಯುವತಿ ಕೊಲೆಗೆ ಸಂಬಂಧಿಸಿದಂತೆ 13 ಬಿಡಿಭಾಗಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಪಿಟಿಐ ವರದಿ ಮಾಡಿದೆ

- Advertisement -
- Advertisement -

ತನ್ನ ಸಂಗಾತಿಯನ್ನು ಕೊಂದ ಆರೋಪದಲ್ಲಿ ಬಂಧಿತನಾದ 28 ವರ್ಷದ ಅಫ್ತಾಬ್ ಅಮೀನ್ ಪೂನಾವಾಲಾನನ್ನು ದಕ್ಷಿಣ ದೆಹಲಿಯ ಛತ್ತರ್‌ಪುರದ ಅರಣ್ಯ ಪ್ರದೇಶಕ್ಕೆ ಪೊಲೀಸರು ಕರೆದೊಯ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ತಾವು ಕೊಲೆ ಮಾಡಿದ ಶ್ರದ್ಧಾ ವಾಕರ್ ಅವರ ದೇಹದ ಭಾಗಗಳನ್ನು ಇಲ್ಲಿ ಎಸೆದಿದ್ದನು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ದೆಹಲಿ ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿರುವ ವರದಿಯು, “ಅಫ್ತಾಬ್ ತಾನು ಬಿಡಿಭಾಗಗಳನ್ನು ಎಸೆದ ಪ್ರದೇಶಗಳನ್ನು ಗುರುತಿಸಿದ್ದಾನೆ. ನಂತರ ದೇಹದ 13 ಭಾಗಗಳು ಪತ್ತೆಯಾಗಿವೆ. ಆದರೆ ವಿಧಿವಿಜ್ಞಾನ ಪರೀಕ್ಷೆಯ ನಂತರವೇ, ಅವು ಕೊಲೆಯಾದ ಯುವತಿಗೆ ಸೇರಿದೆಯೇ ಎಂದು ದೃಢೀಕರಿಸಬಹುದು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆ ಪ್ರಕರಣದ ತನಿಖೆಯ ಭಾಗವಾಗಿ ಅಫ್ತಾಬ್‌ನನ್ನು ಛತ್ತರ್‌ಪುರ ಪ್ರದೇಶವನ್ನು ಹೊರತುಪಡಿಸಿ ನವದೆಹಲಿಯ ಇತರ ಕೆಲವು ಸ್ಥಳಗಳಿಗೆ ಕರೆದೊಯ್ಯಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮೇ 18ರಂದು ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ಅಫ್ತಾಬ್‌ ಪೂನವಾಲ ತನ್ನ ಪ್ರೇಯಸಿ ಶ್ರದ್ಧಾ ವಾಲ್ಕರ್‌ ಅವರ ಕತ್ತುಸೀಳಿ ಕೊಂದಿದ್ದ. ಬಳಿಕ ಆಕೆಯ ದೇಹವನ್ನು ಸುಮಾರು 35 ಭಾಗಗಳಾಗಿ ಕತ್ತರಿಸಿ ಮೂರು ವಾರಗಳ ಕಾಲ ಫ್ರಿಡ್ಜ್‌ನಲ್ಲಿಟ್ಟು, ನಂತರ ನಗರದ ವಿವಿಧ ಪ್ರದೇಶಗಳಲ್ಲಿ ಒಂದೊಂದು ಭಾಗವನ್ನು ವಿಲೇವಾರಿ ಮಾಡಿದ್ದ.

ಇದುವರೆಗೆ ಪತ್ತೆಯಾಗಿರುವ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಅವೆಲ್ಲವೂ ಮಾನವ ಅವಶೇಷಗಳೇ ಎಂದು ಖಚಿತಪಡಿಸಿಕೊಳ್ಳಲಾಗಿದೆ. ತಲೆ ಇನ್ನೂ ಪತ್ತೆಯಾಗಿಲ್ಲ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಕೊಲೆಗೆ ಬಳಸಲಾದ ಆಯುಧವನ್ನು ಪತ್ತೆಹಚ್ಚಲಾಗಿಲ್ಲ.

ಅಫ್ತಾಬ್ ಹದಿನೈದು ದಿನಗಳ ಹಿಂದೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸೈನಲ್ಲಿರುವ ಹೌಸಿಂಗ್ ಸೊಸೈಟಿಗೆ ಭೇಟಿ ನೀಡಿದ್ದನು. ಆತನ ಕುಟುಂಬ ಸದಸ್ಯರು ಮುಂಬೈಗೆ ತೆರಳಲು ಸಹಾಯ ಮಾಡಿದ್ದರು ಎಂದು ಸೊಸೈಟಿ ಸದಸ್ಯರೊಬ್ಬರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಆರೋಪಿ ಅಫ್ತಾಬ್‌‌ ಭೇಟಿ ಮಾಡಿದ ಯುವತಿಯ ವಿವರಗಳನ್ನು ಕಂಡುಹಿಡಿಯಲು ದೆಹಲಿ ಪೊಲೀಸರು ಡೇಟಿಂಗ್ ಆ್ಯಪ್ ಬಂಬಲ್‌ಗೆ ಪತ್ರ ಬರೆಯುವ ಸಾಧ್ಯತೆಯಿದೆ. ಈ ಡೇಟಿಂಗ್ ಆಪ್‌ನಲ್ಲಿ ಶ್ರದ್ಧಾ ಅವರನ್ನು ಅಫ್ತಾಬ್ ಭೇಟಿಯಾಗಿದ್ದನು. ಬಂಬಲ್‌ನ ಪ್ರಧಾನ ಕಛೇರಿಯು ಅಮೆರಿಕಾದ ಟೆಕ್ಸಾಸ್‌ನಲ್ಲಿದೆ.

ಶ್ರದ್ಧಾಳ ತಂದೆ ವಿಕಾಸ್ ವಾಕರ್ ಪ್ರತಿಕ್ರಿಯಿಸಿ, “ಆರೋಪಿಗೆ ಮರಣದಂಡನೆ ವಿಧಿಸಬೇಕು” ಎಂದು ಒತ್ತಾಯಿಸಿದ್ದಾರೆ. ಈ ಜೊತೆಯ ಬೆನ್ನಲ್ಲೇ ಲವ್‌ ಜಿಹಾದ್‌ ಚರ್ಚೆ ನಡೆಯುತ್ತಿದೆ.

ಜಗಳದ ನಂತರ ತನ್ನ ಪ್ರಿಯತಮೆ ಶ್ರದ್ಧಾಳನ್ನು ಕೊಂದಿರುವುದಾಗಿ ಮತ್ತು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸುವ ಆಲೋಚನೆಯನ್ನು ಅಮೇರಿಕನ್ ಕ್ರೈಮ್ ಟಿವಿ ಸರಣಿಯಾದ ‘ಡೆಕ್ಸ್ಟರ್’ನಿಂದ ಬೆಳೆಸಿಕೊಂಡಿದ್ದಾಗಿ ಪೂನಾವಾಲಾ ತನಿಖೆಯ ಸಮಯದಲ್ಲಿ ಪೊಲೀಸರಿಗೆ ತಿಳಿಸಿದ್ದಾನೆ.

ಪ್ರೇಯಸಿಯ ದೇಹದ ಬಿಡಿಭಾಗಗಳನ್ನು ಸಂರಕ್ಷಿಸಲು ಫ್ರಿಜ್ ಖರೀದಿಸಿದ್ದನು. ಅವುಗಳನ್ನು ವಿಲೇವಾರಿ ಮಾಡಲು ಮಧ್ಯರಾತ್ರಿಯ ನಂತರ ಹೊರಗೆ ಹೋಗುತ್ತಿದ್ದನು. ಯಾವ ಭಾಗವು ಬೇಗನೆ ಕೊಳೆಯಲು ಪ್ರಾರಂಭಿಸುತ್ತದೆ ಎಂಬುದರ ಆಧಾರದ ಮೇಲೆ ಆರೋಪಿಯು ಯಾವುದನ್ನು ಮೊದಲು ವಿಲೇವಾರಿ ಮಾಡಬೇಕೆಂದು ನಿರ್ಧರಿಸುತ್ತಿದ್ದನು ಎಂದು ಪೊಲೀಸರು ವಿವರಿಸಿದ್ದಾರೆ.

ಪೂನಾವಾಲಾ ಜೊತೆಗಿನ ಸಂಬಂಧದ ಬಗ್ಗೆ ಭಿನ್ನಾಭಿಪ್ರಾಯ ಇದ್ದಿದ್ದರಿಂದ ಯುವತಿಯು ತನ್ನ ಕುಟುಂಬದೊಂದಿಗೆ ಮಾತುಕತೆ ನಡೆಸಿರಲಿಲ್ಲ.

ಮೇ 18 ರಂದು, ಆರೋಪಿ ಮತ್ತು ಯುವತಿಯ ನಡುವೆ ಜಗಳವಾಗಿತ್ತು. ಯುವತಿಯು ಕೂಗುತ್ತಿದ್ದರಿಂದ ಅಫ್ತಾಬ್ ತನ್ನ ಕೈಯಿಂದ ಆಕೆಯ ಬಾಯಿಯನ್ನು ಮುಚ್ಚಿದನು. ನಂತರ ಆಕೆಯ ಕತ್ತು ಹಿಸುಕಿ, ದೇಹವನ್ನು ಭಾಗಗಳಾಗಿ ಕತ್ತರಿಸಿ ಹತ್ತಿರದ ಕಾಡಿನಲ್ಲಿ ವಿಲೇವಾರಿ ಮಾಡಲಾರಂಭಿಸಿದನು ಎಂದು ದೆಹಲಿ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೂನಾವಾಲಾನನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಶ್ರದ್ಧಾಳ ನೆನಪಿಗಾಗಿ ಫ್ರಿಡ್ಜ್‌ನಲ್ಲಿ ದೇಹವಿರಿಸಿದ್ದೆ: ಅಫ್ತಾಬ್

“ಕೊಲೆ ಮಾಡಿದ ನಂತರ ಯುವತಿಯ ತಲೆಯನ್ನು ರೆಫ್ರಿಜರೇಟರ್‌ನಲ್ಲಿ ಇರಿಸಿದ್ದೆನು. ಆಕೆ ಮತ್ತು ನನ್ನ ನಡುವಿನ ಸಂಬಂಧದ ನೆನಪಿಗಾಗಿ ಆ ದೇಹವನ್ನು ಆಗಾಗ್ಗೆ ನೋಡುತ್ತಿದ್ದೆ. ಆ ನಂತರದ ದಿನಗಳಲ್ಲಿ ಆಕೆಯ ತಲೆಯನ್ನು ಹೊರಗೆ ಎಸೆದಿದ್ದೇನೆ” ಎಂದು ಆರೋಪಿ ಅಫ್ತಾಬ್‌ ಪೊಲೀಸರಿಗೆ ತಿಳಿಸಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಇದನ್ನೂ ಓದಿರಿ: ಊನಾ ಪ್ರಕರಣದ ಆರೋಪಿಗಳಿಂದ ದಲಿತ ಸಂತ್ರಸ್ತರಿಗೆ ಜೀವ ಬೆದರಿಕೆ; ಎಫ್‌ಐಆರ್‌

ತಲೆ ಪತ್ತೆಯಾದ ನಂತರ, ಪೊಲೀಸರು ಸ್ಕಲ್ ಸೂಪರ್‌ಇಂಪೊಸಿಷನ್ ತಂತ್ರಜ್ಞಾನವನ್ನು ಬಳಸಿಕೊಂಡು ಸಂತ್ರಸ್ತೆಯ ಗುರುತನ್ನು ಪತ್ತೆಹಚ್ಚಲಿದ್ದಾರೆ. ಸದ್ಯಕ್ಕೆ ಅವರ ಏಕೈಕ ಭರವಸೆ ಎಂದರೆ ವಾಕರ್ ಅವರ ತಂದೆಯೊಂದಿಗೆ, ಈಗ ದೊರೆತಿರುವ ಕೆಲವು ಬಿಡಿಭಾಗಗಳ ಡಿಎನ್‌ಎ ಹೊಂದಾಣಿಕೆಯಾಗಿದೆ.

ಯುವತಿಯ ದೇಹದ ಭಾಗಗಳನ್ನು ಕತ್ತರಿಸುವಾಗ, ಸಂಗ್ರಹಿಸುವಾಗ ಮತ್ತು ವಿಲೇವಾರಿ ಮಾಡುವಾಗ ಆರ್ಥೋಬೊರಿಕ್ ಆಸಿಡ್ (ಬೋರಿಕ್ ಪೌಡರ್), ಫಾರ್ಮಾಲ್ಡಿಹೈಡ್, ಸಲ್ಫ್ಯೂರಿಕ್ ಆಸಿಡ್ ಮತ್ತು ಇತರ ಕೆಲವು ರಾಸಾಯನಿಕಗಳನ್ನು ಪೂನಾವಾಲಾ ಬಳಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಉಲ್ಲೇಖಿಸಿದೆ.

ಕೊಲೆಯಾಗಿ ಆರು ತಿಂಗಳುಗಳು ಕಳೆದಿರುವುದರಿಂದ, ಕೊಲೆಯನ್ನು ದೃಢೀಕರಿಸಲು ಪೊಲೀಸರು ವಿಧಿವಿಜ್ಞಾನವನ್ನು ಅವಲಂಬಿಸಬೇಕಾಗುತ್ತದೆ. ಆರೋಪಿಯು ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ತನ್ನ ಉತ್ತರಗಳನ್ನು ಆಗಾಗ್ಗೆ ಬದಲಾಯಿಸುತ್ತಿದ್ದಾನೆ ಮತ್ತು ಅನೇಕ ವಿವರಗಳನ್ನು ಮರೆತಿರುವುದಾಗಿ ಆತ ಹೇಳುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...