Homeಮುಖಪುಟಅಫ್ತಾಬ್- ಶ್ರದ್ಧಾ ಪ್ರಕರಣ: ಕತ್ತರಿಸಿ ಕಾಡಿಗೆ ಎಸೆದಿದ್ದ ದೇಹದ ಬಿಡಿಭಾಗಗಳಿಗೆ ಹುಡುಕಾಟ

ಅಫ್ತಾಬ್- ಶ್ರದ್ಧಾ ಪ್ರಕರಣ: ಕತ್ತರಿಸಿ ಕಾಡಿಗೆ ಎಸೆದಿದ್ದ ದೇಹದ ಬಿಡಿಭಾಗಗಳಿಗೆ ಹುಡುಕಾಟ

ಯುವತಿ ಕೊಲೆಗೆ ಸಂಬಂಧಿಸಿದಂತೆ 13 ಬಿಡಿಭಾಗಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಪಿಟಿಐ ವರದಿ ಮಾಡಿದೆ

- Advertisement -
- Advertisement -

ತನ್ನ ಸಂಗಾತಿಯನ್ನು ಕೊಂದ ಆರೋಪದಲ್ಲಿ ಬಂಧಿತನಾದ 28 ವರ್ಷದ ಅಫ್ತಾಬ್ ಅಮೀನ್ ಪೂನಾವಾಲಾನನ್ನು ದಕ್ಷಿಣ ದೆಹಲಿಯ ಛತ್ತರ್‌ಪುರದ ಅರಣ್ಯ ಪ್ರದೇಶಕ್ಕೆ ಪೊಲೀಸರು ಕರೆದೊಯ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ತಾವು ಕೊಲೆ ಮಾಡಿದ ಶ್ರದ್ಧಾ ವಾಕರ್ ಅವರ ದೇಹದ ಭಾಗಗಳನ್ನು ಇಲ್ಲಿ ಎಸೆದಿದ್ದನು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ದೆಹಲಿ ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿರುವ ವರದಿಯು, “ಅಫ್ತಾಬ್ ತಾನು ಬಿಡಿಭಾಗಗಳನ್ನು ಎಸೆದ ಪ್ರದೇಶಗಳನ್ನು ಗುರುತಿಸಿದ್ದಾನೆ. ನಂತರ ದೇಹದ 13 ಭಾಗಗಳು ಪತ್ತೆಯಾಗಿವೆ. ಆದರೆ ವಿಧಿವಿಜ್ಞಾನ ಪರೀಕ್ಷೆಯ ನಂತರವೇ, ಅವು ಕೊಲೆಯಾದ ಯುವತಿಗೆ ಸೇರಿದೆಯೇ ಎಂದು ದೃಢೀಕರಿಸಬಹುದು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆ ಪ್ರಕರಣದ ತನಿಖೆಯ ಭಾಗವಾಗಿ ಅಫ್ತಾಬ್‌ನನ್ನು ಛತ್ತರ್‌ಪುರ ಪ್ರದೇಶವನ್ನು ಹೊರತುಪಡಿಸಿ ನವದೆಹಲಿಯ ಇತರ ಕೆಲವು ಸ್ಥಳಗಳಿಗೆ ಕರೆದೊಯ್ಯಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮೇ 18ರಂದು ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ಅಫ್ತಾಬ್‌ ಪೂನವಾಲ ತನ್ನ ಪ್ರೇಯಸಿ ಶ್ರದ್ಧಾ ವಾಲ್ಕರ್‌ ಅವರ ಕತ್ತುಸೀಳಿ ಕೊಂದಿದ್ದ. ಬಳಿಕ ಆಕೆಯ ದೇಹವನ್ನು ಸುಮಾರು 35 ಭಾಗಗಳಾಗಿ ಕತ್ತರಿಸಿ ಮೂರು ವಾರಗಳ ಕಾಲ ಫ್ರಿಡ್ಜ್‌ನಲ್ಲಿಟ್ಟು, ನಂತರ ನಗರದ ವಿವಿಧ ಪ್ರದೇಶಗಳಲ್ಲಿ ಒಂದೊಂದು ಭಾಗವನ್ನು ವಿಲೇವಾರಿ ಮಾಡಿದ್ದ.

ಇದುವರೆಗೆ ಪತ್ತೆಯಾಗಿರುವ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಅವೆಲ್ಲವೂ ಮಾನವ ಅವಶೇಷಗಳೇ ಎಂದು ಖಚಿತಪಡಿಸಿಕೊಳ್ಳಲಾಗಿದೆ. ತಲೆ ಇನ್ನೂ ಪತ್ತೆಯಾಗಿಲ್ಲ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಕೊಲೆಗೆ ಬಳಸಲಾದ ಆಯುಧವನ್ನು ಪತ್ತೆಹಚ್ಚಲಾಗಿಲ್ಲ.

ಅಫ್ತಾಬ್ ಹದಿನೈದು ದಿನಗಳ ಹಿಂದೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸೈನಲ್ಲಿರುವ ಹೌಸಿಂಗ್ ಸೊಸೈಟಿಗೆ ಭೇಟಿ ನೀಡಿದ್ದನು. ಆತನ ಕುಟುಂಬ ಸದಸ್ಯರು ಮುಂಬೈಗೆ ತೆರಳಲು ಸಹಾಯ ಮಾಡಿದ್ದರು ಎಂದು ಸೊಸೈಟಿ ಸದಸ್ಯರೊಬ್ಬರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಆರೋಪಿ ಅಫ್ತಾಬ್‌‌ ಭೇಟಿ ಮಾಡಿದ ಯುವತಿಯ ವಿವರಗಳನ್ನು ಕಂಡುಹಿಡಿಯಲು ದೆಹಲಿ ಪೊಲೀಸರು ಡೇಟಿಂಗ್ ಆ್ಯಪ್ ಬಂಬಲ್‌ಗೆ ಪತ್ರ ಬರೆಯುವ ಸಾಧ್ಯತೆಯಿದೆ. ಈ ಡೇಟಿಂಗ್ ಆಪ್‌ನಲ್ಲಿ ಶ್ರದ್ಧಾ ಅವರನ್ನು ಅಫ್ತಾಬ್ ಭೇಟಿಯಾಗಿದ್ದನು. ಬಂಬಲ್‌ನ ಪ್ರಧಾನ ಕಛೇರಿಯು ಅಮೆರಿಕಾದ ಟೆಕ್ಸಾಸ್‌ನಲ್ಲಿದೆ.

ಶ್ರದ್ಧಾಳ ತಂದೆ ವಿಕಾಸ್ ವಾಕರ್ ಪ್ರತಿಕ್ರಿಯಿಸಿ, “ಆರೋಪಿಗೆ ಮರಣದಂಡನೆ ವಿಧಿಸಬೇಕು” ಎಂದು ಒತ್ತಾಯಿಸಿದ್ದಾರೆ. ಈ ಜೊತೆಯ ಬೆನ್ನಲ್ಲೇ ಲವ್‌ ಜಿಹಾದ್‌ ಚರ್ಚೆ ನಡೆಯುತ್ತಿದೆ.

ಜಗಳದ ನಂತರ ತನ್ನ ಪ್ರಿಯತಮೆ ಶ್ರದ್ಧಾಳನ್ನು ಕೊಂದಿರುವುದಾಗಿ ಮತ್ತು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸುವ ಆಲೋಚನೆಯನ್ನು ಅಮೇರಿಕನ್ ಕ್ರೈಮ್ ಟಿವಿ ಸರಣಿಯಾದ ‘ಡೆಕ್ಸ್ಟರ್’ನಿಂದ ಬೆಳೆಸಿಕೊಂಡಿದ್ದಾಗಿ ಪೂನಾವಾಲಾ ತನಿಖೆಯ ಸಮಯದಲ್ಲಿ ಪೊಲೀಸರಿಗೆ ತಿಳಿಸಿದ್ದಾನೆ.

ಪ್ರೇಯಸಿಯ ದೇಹದ ಬಿಡಿಭಾಗಗಳನ್ನು ಸಂರಕ್ಷಿಸಲು ಫ್ರಿಜ್ ಖರೀದಿಸಿದ್ದನು. ಅವುಗಳನ್ನು ವಿಲೇವಾರಿ ಮಾಡಲು ಮಧ್ಯರಾತ್ರಿಯ ನಂತರ ಹೊರಗೆ ಹೋಗುತ್ತಿದ್ದನು. ಯಾವ ಭಾಗವು ಬೇಗನೆ ಕೊಳೆಯಲು ಪ್ರಾರಂಭಿಸುತ್ತದೆ ಎಂಬುದರ ಆಧಾರದ ಮೇಲೆ ಆರೋಪಿಯು ಯಾವುದನ್ನು ಮೊದಲು ವಿಲೇವಾರಿ ಮಾಡಬೇಕೆಂದು ನಿರ್ಧರಿಸುತ್ತಿದ್ದನು ಎಂದು ಪೊಲೀಸರು ವಿವರಿಸಿದ್ದಾರೆ.

ಪೂನಾವಾಲಾ ಜೊತೆಗಿನ ಸಂಬಂಧದ ಬಗ್ಗೆ ಭಿನ್ನಾಭಿಪ್ರಾಯ ಇದ್ದಿದ್ದರಿಂದ ಯುವತಿಯು ತನ್ನ ಕುಟುಂಬದೊಂದಿಗೆ ಮಾತುಕತೆ ನಡೆಸಿರಲಿಲ್ಲ.

ಮೇ 18 ರಂದು, ಆರೋಪಿ ಮತ್ತು ಯುವತಿಯ ನಡುವೆ ಜಗಳವಾಗಿತ್ತು. ಯುವತಿಯು ಕೂಗುತ್ತಿದ್ದರಿಂದ ಅಫ್ತಾಬ್ ತನ್ನ ಕೈಯಿಂದ ಆಕೆಯ ಬಾಯಿಯನ್ನು ಮುಚ್ಚಿದನು. ನಂತರ ಆಕೆಯ ಕತ್ತು ಹಿಸುಕಿ, ದೇಹವನ್ನು ಭಾಗಗಳಾಗಿ ಕತ್ತರಿಸಿ ಹತ್ತಿರದ ಕಾಡಿನಲ್ಲಿ ವಿಲೇವಾರಿ ಮಾಡಲಾರಂಭಿಸಿದನು ಎಂದು ದೆಹಲಿ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೂನಾವಾಲಾನನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಶ್ರದ್ಧಾಳ ನೆನಪಿಗಾಗಿ ಫ್ರಿಡ್ಜ್‌ನಲ್ಲಿ ದೇಹವಿರಿಸಿದ್ದೆ: ಅಫ್ತಾಬ್

“ಕೊಲೆ ಮಾಡಿದ ನಂತರ ಯುವತಿಯ ತಲೆಯನ್ನು ರೆಫ್ರಿಜರೇಟರ್‌ನಲ್ಲಿ ಇರಿಸಿದ್ದೆನು. ಆಕೆ ಮತ್ತು ನನ್ನ ನಡುವಿನ ಸಂಬಂಧದ ನೆನಪಿಗಾಗಿ ಆ ದೇಹವನ್ನು ಆಗಾಗ್ಗೆ ನೋಡುತ್ತಿದ್ದೆ. ಆ ನಂತರದ ದಿನಗಳಲ್ಲಿ ಆಕೆಯ ತಲೆಯನ್ನು ಹೊರಗೆ ಎಸೆದಿದ್ದೇನೆ” ಎಂದು ಆರೋಪಿ ಅಫ್ತಾಬ್‌ ಪೊಲೀಸರಿಗೆ ತಿಳಿಸಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಇದನ್ನೂ ಓದಿರಿ: ಊನಾ ಪ್ರಕರಣದ ಆರೋಪಿಗಳಿಂದ ದಲಿತ ಸಂತ್ರಸ್ತರಿಗೆ ಜೀವ ಬೆದರಿಕೆ; ಎಫ್‌ಐಆರ್‌

ತಲೆ ಪತ್ತೆಯಾದ ನಂತರ, ಪೊಲೀಸರು ಸ್ಕಲ್ ಸೂಪರ್‌ಇಂಪೊಸಿಷನ್ ತಂತ್ರಜ್ಞಾನವನ್ನು ಬಳಸಿಕೊಂಡು ಸಂತ್ರಸ್ತೆಯ ಗುರುತನ್ನು ಪತ್ತೆಹಚ್ಚಲಿದ್ದಾರೆ. ಸದ್ಯಕ್ಕೆ ಅವರ ಏಕೈಕ ಭರವಸೆ ಎಂದರೆ ವಾಕರ್ ಅವರ ತಂದೆಯೊಂದಿಗೆ, ಈಗ ದೊರೆತಿರುವ ಕೆಲವು ಬಿಡಿಭಾಗಗಳ ಡಿಎನ್‌ಎ ಹೊಂದಾಣಿಕೆಯಾಗಿದೆ.

ಯುವತಿಯ ದೇಹದ ಭಾಗಗಳನ್ನು ಕತ್ತರಿಸುವಾಗ, ಸಂಗ್ರಹಿಸುವಾಗ ಮತ್ತು ವಿಲೇವಾರಿ ಮಾಡುವಾಗ ಆರ್ಥೋಬೊರಿಕ್ ಆಸಿಡ್ (ಬೋರಿಕ್ ಪೌಡರ್), ಫಾರ್ಮಾಲ್ಡಿಹೈಡ್, ಸಲ್ಫ್ಯೂರಿಕ್ ಆಸಿಡ್ ಮತ್ತು ಇತರ ಕೆಲವು ರಾಸಾಯನಿಕಗಳನ್ನು ಪೂನಾವಾಲಾ ಬಳಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಉಲ್ಲೇಖಿಸಿದೆ.

ಕೊಲೆಯಾಗಿ ಆರು ತಿಂಗಳುಗಳು ಕಳೆದಿರುವುದರಿಂದ, ಕೊಲೆಯನ್ನು ದೃಢೀಕರಿಸಲು ಪೊಲೀಸರು ವಿಧಿವಿಜ್ಞಾನವನ್ನು ಅವಲಂಬಿಸಬೇಕಾಗುತ್ತದೆ. ಆರೋಪಿಯು ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ತನ್ನ ಉತ್ತರಗಳನ್ನು ಆಗಾಗ್ಗೆ ಬದಲಾಯಿಸುತ್ತಿದ್ದಾನೆ ಮತ್ತು ಅನೇಕ ವಿವರಗಳನ್ನು ಮರೆತಿರುವುದಾಗಿ ಆತ ಹೇಳುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...