Homeಮುಖಪುಟಅಫ್ತಾಬ್-ಶ್ರದ್ಧಾ 2019ರಿಂದಲೂ ಜೊತೆಯಲ್ಲಿದ್ದರು; ಮುಂಬೈ ತೊರೆದು ದೆಹಲಿಗೆ ಹೋದರು: ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು ಹೀಗೆ...

ಅಫ್ತಾಬ್-ಶ್ರದ್ಧಾ 2019ರಿಂದಲೂ ಜೊತೆಯಲ್ಲಿದ್ದರು; ಮುಂಬೈ ತೊರೆದು ದೆಹಲಿಗೆ ಹೋದರು: ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು ಹೀಗೆ…

- Advertisement -
- Advertisement -

27 ವರ್ಷದ ಶ್ರದ್ಧಾ ವಾಕರ್ ಮೃತ ದುರ್ದೈವಿ. ದೆಹಲಿಯ ಚತ್ತರ್‌ಪುರದಲ್ಲಿ ಗೆಳೆಯ ಅಫ್ತಾಬ್ ಪೂನವಾಲಾ (28) ಜೊತೆ ವಾಸಿಸಲೆಂದು ಮುಂಬೈನ ವಸಾಯ್‌ನಲ್ಲಿರುವ ತನ್ನ ಮನೆಯನ್ನು ತೊರೆದಿದ್ದಳಾಕೆ. ಶ್ರದ್ಧಾ ಆತನಲ್ಲಿ ಮದುವೆಯಾಗುವಂತೆ ಕೇಳುತ್ತಿದ್ದಳು. ಆದರೆ ಆತ ಒಪ್ಪಲಿಲ್ಲ. ಆಕೆ ತನ್ನ ಜೀವವನ್ನೇ ಕಳೆದುಕೊಂಡಳು.- ಸದ್ಯಕ್ಕೆ ದೆಹಲಿ ಪೊಲೀಸರು ಹೇಳುತ್ತಿರುವುದಿಷ್ಟು.

2019ರಲ್ಲಿ ಡೇಟಿಂಗ್ ಅಪ್ಲಿಕೇಶನ್ ಬಂಬಲ್ (Bumbl) ಮೂಲಕ, ವಸಾಯ್‌ನಲ್ಲಿ ವಾಸಿಸುತ್ತಿದ್ದ ಅಫ್ತಾಬ್‌ನನ್ನು ಶ್ರದ್ಧಾ ಭೇಟಿಯಾಗಿದ್ದರು. ಶ್ರದ್ಧಾ ಕುಟುಂಬವು ಈ ಸಂಬಂಧವನ್ನು ಒಪ್ಪಿಕೊಳ್ಳಲಿಲ್ಲ. ಆದ್ದರಿಂದ ಆಕೆ ಅಫ್ತಾಬ್‌ನೊಂದಿಗೆ ವಾಸಿಸಲೆಂದು ತನ್ನ ಕುಟುಂಬವನ್ನು ತೊರೆದಳು. ಮೊದಲು ಮುಂಬೈನಲ್ಲಿ ವಾಸವಿದ್ದರು. ನಂತರ ಮೇ 2022ರಿಂದ ದೆಹಲಿಯಲ್ಲಿ ವಾಸವಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“2019ರಲ್ಲಿ ಶ್ರದ್ಧಾ-ಅಫ್ತಾಬ್ ಜೊತೆಯಲ್ಲಿ ವಾಸಿಸಲು ಆರಂಭಿಸಿದ್ದರು” ಎಂದು ಶ್ರದ್ಧಾ ಸಂಪರ್ಕದಲ್ಲಿದ್ದ ಆಕೆಯ ಸ್ನೇಹಿತ ಲಕ್ಷ್ಮಣ್ ನಾಡಾರ್ ಹೇಳುತ್ತಾರೆ. “ಶ್ರದ್ಧಾ ಆತನನ್ನು ಮದುವೆಯಾಗಲು ಬಯಸಿದ್ದಳು. ಆದರೆ ಅವಳ ತಾಯಿ ವಿರೋಧಿಸಿದರು. ಆದ್ದರಿಂದ ಆಕೆ ಮನೆ ಬಿಟ್ಟಿದ್ದಳು”.

ಶ್ರದ್ಧಾ ಮನೆಯಿಂದ ಹೊರಬಂದ ನಂತರ ಇಡೀ ಕುಟುಂಬದಲ್ಲಿ ಆಕೆಯ ತಾಯಿ ಮಾತ್ರ ಶ್ರದ್ಧಾ ಜೊತೆಯಲ್ಲಿ ಸಂಪರ್ಕದಲ್ಲಿದ್ದರು ಎನ್ನುತ್ತಾರೆ ಲಕ್ಷ್ಮಣ್. ಶ್ರದ್ಧಾ ಅವರ ತಾಯಿ 2020ರಲ್ಲಿ ನಿಧನರಾದರು. ಶ್ರದ್ಧಾ ಅವರ ಕುಟುಂಬದೊಂದಿಗಿನ ಏಕೈಕ ಸಂಪರ್ಕ ಲಕ್ಷ್ಮಣ್ ಮಾತ್ರ ಆಗಿದ್ದರು. ಆಕೆ ದೆಹಲಿಗೆ ತೆರಳಿ, ಸಂಪರ್ಕ ಕಡಿತವಾಗುವವರೆಗೂ ಲಕ್ಷ್ಮಣ್ ಮಾತನಾಡಿದ್ದಳು. ಶ್ರದ್ಧಾ ಅವರ ತಂದೆ ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಮಗಳ ಮೇಲೆ ನಿಗಾ ಇಟ್ಟಿದ್ದರು.

 

View this post on Instagram

 

A post shared by Shraddha (@thatshortrebel)

 

View this post on Instagram

 

A post shared by Shraddha (@thatshortrebel)

ಶ್ರದ್ಧಾ ಅವರ ತಂದೆ ತಾಯಿ ನಾಲ್ಕು ವರ್ಷಗಳ ಹಿಂದೆ ಬೇರೆಯಾಗಿದ್ದರು. ಆಕೆ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದಳು. 2018ರಲ್ಲಿ ಆಕೆ ವಸೈನಲ್ಲಿನ ಕಾಲ್ ಸೆಂಟರ್‌ನಲ್ಲಿ ಉದ್ಯೋಗ ಆರಂಭಿಸಿದ್ದಳು.

ಶ್ರದ್ಧಾಳನ್ನು ಮಾತನಾಡಿಸಲು ಲಕ್ಷ್ಮಣ್ ಪ್ರಯತ್ನಿಸುತ್ತಲೇ ಇದ್ದರು. ಅವರು ಜೂನ್ ಮತ್ತು ಜುಲೈನಲ್ಲಿ ಸಾಕಷ್ಟು ಸಲ ಆಕೆಗೆ ಕರೆ ಮಾಡಿದರು. ಆದರೆ ಆಕೆಯ ಮೊಬೈಲ್‌ ಸಂಖ್ಯೆ ಸ್ವಿಚ್ ಆಫ್ ಆಗಿತ್ತು. ಲಕ್ಷ್ಮಣ್ ಕಳುಹಿಸಿದ ಸಂದೇಶಗಳಿಗೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ.

ಶ್ರದ್ಧಾ ಅವರ ಸಹೋದರ ಶ್ರೀಜಯ್ ವಾಕರ್ ಅವರಿಗೆ ಸೆಪ್ಟೆಂಬರ್ 14ರಂದು ಕರೆ ಮಾಡಿದ ಲಕ್ಷ್ಮಣ್, ಎರಡು ತಿಂಗಳಿನಿಂದ ಶ್ರದ್ಧಾ ಅವರ ಫೋನ್ ಆಫ್ ಆಗಿದೆ ಎಂದು ತಿಳಿಸಿದ್ದರು. ಶ್ರೀಜಯ್ ತನ್ನ ತಂದೆ ವಿಕಾಸ್ ವಾಕರ್‌ಗೆ ಮಾಹಿತಿ ನೀಡಿದ್ದು, ಅವರು ಮಹಾರಾಷ್ಟ್ರದ ಮಾಣಿಕ್‌ಪುರದಲ್ಲಿ ಮಿಸ್ಸಿಂಗ್ ದೂರು ದಾಖಲಿಸಿದ್ದರು.

ಕೆಲವು ದಿನಗಳ ನಂತರ, ವಿಕಾಸ್‌ ವಾಕರ್‌ ಅವರಿಗೆ ಮಾಣಿಕ್‌ಪುರ ಪೊಲೀಸರು ಪ್ರತಿಕ್ರಿಯಿಸಿ, “ದೆಹಲಿಯ ಛತ್ತರ್‌ಪುರದಲ್ಲಿ ನಿಮ್ಮ ಮಗಳು ಆಕೆಯ ಗೆಳೆಯ ಅಫ್ತಾಬ್‌ನೊಂದಿಗೆ ವಾಸಿಸುತ್ತಿದ್ದಳು” ಎಂದು ಮಾಹಿತಿ ನೀಡಿದರು. ವಿಕಾಸ್ ನವೆಂಬರ್ 8ರಂದು ಶ್ರದ್ಧಾ ಅವರ ಫ್ಲಾಟ್‌ಗೆ ಬಂದರು. ಆದರೆ ಅದು ಲಾಕ್ ಆಗಿತ್ತು. ದೆಹಲಿಯ ಮೆಹ್ರೌಲಿ ಪೊಲೀಸ್ ಠಾಣೆಯಲ್ಲಿ ಮಗಳ ಅಪಹರಣದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದರು.

ಪೊಲೀಸರಿಗೆ ನೀಡಿದ ದೂರಿನಲ್ಲಿ ವಿಕಾಸ್, “ಅಫ್ತಾಬ್ ಶ್ರದ್ಧಾಳನ್ನು ಥಳಿಸುತ್ತಿದ್ದನು. ಆಕೆ ಸಂಬಂಧ ಚೆನ್ನಾಗಿರಲಿಲ್ಲ ಎಂದು ಶ್ರದ್ಧಾಳ ಸ್ನೇಹಿತರಾದ ಶಿವಾನಿ ಮತ್ತು ಲಕ್ಷ್ಮಣ್ ಹೇಳುತ್ತಾರೆ. ಹಾಗಾಗಿ ನನ್ನ ಮಗಳ ನಾಪತ್ತೆಯಲ್ಲಿ ಅಫ್ತಾಬ್ ಪೂನವಾಲಾ ಕೈವಾಡವಿದೆ ಎಂದು ನನಗೆ ಖಚಿತವಾಗಿದೆ” ಎಂದು ತಿಳಿಸಿದ್ದರು.

ತನ್ನ ತಾಯಿಯ ಮರಣದ ಒಂದು ತಿಂಗಳ ನಂತರ ಶ್ರದ್ಧಾ ನನ್ನನ್ನು ಭೇಟಿ ಮಾಡಿದ್ದಳು. ಅಫ್ತಾಬ್ ಆಗಾಗ್ಗೆ ಹೊಡೆಯುತ್ತಿರುತ್ತಾನೆ ಎಂದು ತಿಳಿಸಿದ್ದಳು ಎಂದು ವಿಕಾಸ್ ದೂರಿನಲ್ಲಿ ವಿವರಿಸಿದ್ದಾರೆ. “ಅಫ್ತಾಬ್‌ನನ್ನು ಬಿಟ್ಟು ಮನೆಗೆ ಹಿಂತಿರುಗುವಂತೆ ಆಕೆಗೆ ಸಲಹೆ ನೀಡಿದ್ದೆ. ಆದರೆ ಅಫ್ತಾಬ್ ಮರುದಿನ ಅವಳಲ್ಲಿ ಕ್ಷಮೆಯಾಚಿಸಿದ್ದನು. ಮತ್ತು ಶ್ರದ್ಧಾ ಅವನೊಂದಿಗೆ ಹಿಂತಿರುಗಿದ್ದಳು” ಎಂದಿದ್ದಾರೆ.

ವಿಕಾಸ್ ಅವರ ದೂರಿನ ಮೇರೆಗೆ ಮೆಹ್ರೌಲಿ ಪೊಲೀಸರು ಅಫ್ತಾಬ್‌ನನ್ನು ಪತ್ತೆಹಚ್ಚಿ ಬಂಧಿಸಿದರು. “ಜಗಳವಾಡಿಕೊಂಡು ಶ್ರದ್ಧಾ ದೂರವಾದಳು. ಆಕೆ ಎಲ್ಲಿಗೆ ಹೋಗಿದ್ದಾಳೆಂದು ನನಗೆ ಗೊತ್ತಿಲ್ಲ ಎಂದು ಆತ ಆರಂಭದಲ್ಲಿ ಹೇಳುತ್ತಿದ್ದ” ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ಅಂಕಿತ್ ಚೌಹಾಣ್ ಮಾಹಿತಿ ನೀಡಿದ್ದಾರೆ.

ಪೊಲೀಸರು ಆತನನ್ನು ಕಟ್ಟುನಿಟ್ಟಾಗಿ ವಿಚಾರಣೆಗೆ ಒಳಪಡಿಸಿದಾಗ, “ಶ್ರದ್ಧಾ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಳು, ಆದರೆ ಆತನಿಗೆ ಇದು ಇಷ್ಟವಿರಲಿಲ್ಲ. ಈ ವಿಚಾರವಾಗಿ ಆಗಾಗ ಜಗಳವಾಡುತ್ತಿದ್ದರು. ಮೇ 18ರ ಸಂಜೆ, ಅವರು ಮತ್ತೆ ಜಗಳವಾಡಿದರು. ಅಫ್ತಾಬ್ ನಿಯಂತ್ರಣ ಕಳೆದುಕೊಂಡು ಆಕೆಯ ಕತ್ತು ಹಿಸುಕಿದನು” ಎಂದು ತಿಳಿದುಬಂದಿದೆ.

ತಾನು ಸಿಕ್ಕಿಬೀಳಬಹುದೆಂದು ಗಾಬರಿಗೊಂಡ ಅಫ್ತಾಬ್, ಶ್ರದ್ಧಾಳ ದೇಹವನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಪ್ಲಾಸ್ಟಿಕ್ ಚೀಲಗಳಲ್ಲಿ ಪ್ಯಾಕ್ ಮಾಡಿದನು, ನಿರ್ದಿಷ್ಟ ಉದ್ದೇಶಕ್ಕಾಗಿ ಖರೀದಿಸಿದ ಫ್ರಿಜ್‌ನಲ್ಲಿ ಸಂಗ್ರಹಿಸಿದನು. ನಂತರ 18 ದಿನಗಳ ಕಾಲ, ಆತ ಪ್ರತಿ ರಾತ್ರಿ ದೇಹದ ಸಣ್ಣ ತುಂಡುಗಳನ್ನು ತೆಗೆದು ಮೆಹ್ರಾಲಿ ಅರಣ್ಯದಲ್ಲಿ ಎಸೆಯುತ್ತಿದ್ದನು. ಫ್ಲಾಟ್‌ಗೆ ಹಿಂತಿರುಗಿ ಅಗರಬತ್ತಿಗಳನ್ನು ಹಚ್ಚಿಡುತ್ತಿದ್ದನು. ಶವದ ದುರ್ನಾತವನ್ನು ಮರೆಮಾಡಲು ಏರ್ ಫ್ರೆಶ್ನರ್ ಮತ್ತು ಸುಗಂಧ ದ್ರವ್ಯಗಳನ್ನು ಸಿಂಪಡಿಸುತ್ತಿದ್ದನು.

ಇದನ್ನೂ ಓದಿರಿ: ಅಫ್ತಾಬ್- ಶ್ರದ್ಧಾ ಪ್ರಕರಣ: ಕತ್ತರಿಸಿ ಕಾಡಿಗೆ ಎಸೆದಿದ್ದ ದೇಹದ ಬಿಡಿಭಾಗಗಳಿಗೆ ಹುಡುಕಾಟ

ಛತ್ತರ್‌ಪುರದಲ್ಲಿ ಶ್ರದ್ಧಾ ಮತ್ತು ಅಫ್ತಾಬ್ ಅವರ ನೆರೆಹೊರೆಯವರು ಮಾಧ್ಯಮಗಳೊಂದಿಗೆ ನೇರವಾಗಿ ಮಾತನಾಡಲು ನಿರಾಕರಿಸಿದ್ದಾರೆ. ಅವರಲ್ಲಿ ಹೆಚ್ಚಿನವರು ಹೆಸರು ಹೇಳಲಿಚ್ಛಿಸದೆ ಪ್ರತಿಕ್ರಿಯಿಸಿದ್ದಾರೆ. “ನಾವು ಅಫ್ತಾಬ್ ಅನ್ನು ಮಾತ್ರ ನೋಡಿದ್ದೆವು. ಎಂದಿಗೂ ಶ್ರದ್ಧಾಳನ್ನು ನೋಡಿಲ್ಲ” ಎಂದು ಹಲವರು ಹೇಳಿಕೆ ನೀಡಿದ್ದಾರೆ. ಮೇ 15ರಂದು ಈ ಜೋಡಿಯು ತಮ್ಮ ಫ್ಲಾಟ್‌ಗೆ ತೆರಳಿತ್ತು. ಮೂರು ದಿನಗಳ ನಂತರ ಶ್ರದ್ಧಾಳನ್ನು ಕೊಲೆ ಮಾಡಲಾಗಿತ್ತು.

ಅಫ್ತಾಬ್ ಕೊಲೆಯ ಬಗ್ಗೆ ತಪ್ಪೊಪ್ಪಿಕೊಂಡ ನಂತರ, ಪೊಲೀಸರು ಶ್ರದ್ಧಾಳ ಶವದ ತುಂಡುಗಳನ್ನು ಪತ್ತೆ ಮಾಡಲು ಮೆಹ್ರೌಲಿ ಅರಣ್ಯಕ್ಕೆ ಆರೋಪಿಯನ್ನು ಕರೆದೊಯ್ದರು. ಅವರು ಇಲ್ಲಿಯವರೆಗೆ 13 ತುಣುಕುಗಳನ್ನು ವಶಕ್ಕೆ ಪಡೆದಿದ್ದಾರೆ. ಅವು ಹೆಚ್ಚಿನದಾಗಿ ಮೂಳೆಗಳಾಗಿವೆ. ಆದರೆ ಇನ್ನೂ ವಿಧಿವಿಜ್ಞಾನ ತಪಾಸಣೆಗೆ ಒಳಪಡಿಸಿಲ್ಲ.

“ಈ ಇಬ್ಬರ ನಡುವಿನ ಸಂಬಂಧ ಹದಗೆಟ್ಟಿದ್ದರಿಂದ ಈ ಕೊಲೆ ಸಂಭವಿಸಿದೆ ಎಂದು ತೋರುತ್ತದೆ, ಈಗಲೇ ಈ ಬಗ್ಗೆ ಹೆಚ್ಚು ಹೇಳುವುದು ಸರಿಯಲ್ಲ” ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ವರದಿ ಕೃಪೆ: ನ್ಯೂಸ್ ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...