Homeಮುಖಪುಟಅಫ್ತಾಬ್-ಶ್ರದ್ಧಾ 2019ರಿಂದಲೂ ಜೊತೆಯಲ್ಲಿದ್ದರು; ಮುಂಬೈ ತೊರೆದು ದೆಹಲಿಗೆ ಹೋದರು: ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು ಹೀಗೆ...

ಅಫ್ತಾಬ್-ಶ್ರದ್ಧಾ 2019ರಿಂದಲೂ ಜೊತೆಯಲ್ಲಿದ್ದರು; ಮುಂಬೈ ತೊರೆದು ದೆಹಲಿಗೆ ಹೋದರು: ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು ಹೀಗೆ…

- Advertisement -
- Advertisement -

27 ವರ್ಷದ ಶ್ರದ್ಧಾ ವಾಕರ್ ಮೃತ ದುರ್ದೈವಿ. ದೆಹಲಿಯ ಚತ್ತರ್‌ಪುರದಲ್ಲಿ ಗೆಳೆಯ ಅಫ್ತಾಬ್ ಪೂನವಾಲಾ (28) ಜೊತೆ ವಾಸಿಸಲೆಂದು ಮುಂಬೈನ ವಸಾಯ್‌ನಲ್ಲಿರುವ ತನ್ನ ಮನೆಯನ್ನು ತೊರೆದಿದ್ದಳಾಕೆ. ಶ್ರದ್ಧಾ ಆತನಲ್ಲಿ ಮದುವೆಯಾಗುವಂತೆ ಕೇಳುತ್ತಿದ್ದಳು. ಆದರೆ ಆತ ಒಪ್ಪಲಿಲ್ಲ. ಆಕೆ ತನ್ನ ಜೀವವನ್ನೇ ಕಳೆದುಕೊಂಡಳು.- ಸದ್ಯಕ್ಕೆ ದೆಹಲಿ ಪೊಲೀಸರು ಹೇಳುತ್ತಿರುವುದಿಷ್ಟು.

2019ರಲ್ಲಿ ಡೇಟಿಂಗ್ ಅಪ್ಲಿಕೇಶನ್ ಬಂಬಲ್ (Bumbl) ಮೂಲಕ, ವಸಾಯ್‌ನಲ್ಲಿ ವಾಸಿಸುತ್ತಿದ್ದ ಅಫ್ತಾಬ್‌ನನ್ನು ಶ್ರದ್ಧಾ ಭೇಟಿಯಾಗಿದ್ದರು. ಶ್ರದ್ಧಾ ಕುಟುಂಬವು ಈ ಸಂಬಂಧವನ್ನು ಒಪ್ಪಿಕೊಳ್ಳಲಿಲ್ಲ. ಆದ್ದರಿಂದ ಆಕೆ ಅಫ್ತಾಬ್‌ನೊಂದಿಗೆ ವಾಸಿಸಲೆಂದು ತನ್ನ ಕುಟುಂಬವನ್ನು ತೊರೆದಳು. ಮೊದಲು ಮುಂಬೈನಲ್ಲಿ ವಾಸವಿದ್ದರು. ನಂತರ ಮೇ 2022ರಿಂದ ದೆಹಲಿಯಲ್ಲಿ ವಾಸವಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“2019ರಲ್ಲಿ ಶ್ರದ್ಧಾ-ಅಫ್ತಾಬ್ ಜೊತೆಯಲ್ಲಿ ವಾಸಿಸಲು ಆರಂಭಿಸಿದ್ದರು” ಎಂದು ಶ್ರದ್ಧಾ ಸಂಪರ್ಕದಲ್ಲಿದ್ದ ಆಕೆಯ ಸ್ನೇಹಿತ ಲಕ್ಷ್ಮಣ್ ನಾಡಾರ್ ಹೇಳುತ್ತಾರೆ. “ಶ್ರದ್ಧಾ ಆತನನ್ನು ಮದುವೆಯಾಗಲು ಬಯಸಿದ್ದಳು. ಆದರೆ ಅವಳ ತಾಯಿ ವಿರೋಧಿಸಿದರು. ಆದ್ದರಿಂದ ಆಕೆ ಮನೆ ಬಿಟ್ಟಿದ್ದಳು”.

ಶ್ರದ್ಧಾ ಮನೆಯಿಂದ ಹೊರಬಂದ ನಂತರ ಇಡೀ ಕುಟುಂಬದಲ್ಲಿ ಆಕೆಯ ತಾಯಿ ಮಾತ್ರ ಶ್ರದ್ಧಾ ಜೊತೆಯಲ್ಲಿ ಸಂಪರ್ಕದಲ್ಲಿದ್ದರು ಎನ್ನುತ್ತಾರೆ ಲಕ್ಷ್ಮಣ್. ಶ್ರದ್ಧಾ ಅವರ ತಾಯಿ 2020ರಲ್ಲಿ ನಿಧನರಾದರು. ಶ್ರದ್ಧಾ ಅವರ ಕುಟುಂಬದೊಂದಿಗಿನ ಏಕೈಕ ಸಂಪರ್ಕ ಲಕ್ಷ್ಮಣ್ ಮಾತ್ರ ಆಗಿದ್ದರು. ಆಕೆ ದೆಹಲಿಗೆ ತೆರಳಿ, ಸಂಪರ್ಕ ಕಡಿತವಾಗುವವರೆಗೂ ಲಕ್ಷ್ಮಣ್ ಮಾತನಾಡಿದ್ದಳು. ಶ್ರದ್ಧಾ ಅವರ ತಂದೆ ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಮಗಳ ಮೇಲೆ ನಿಗಾ ಇಟ್ಟಿದ್ದರು.

 

View this post on Instagram

 

A post shared by Shraddha (@thatshortrebel)

 

View this post on Instagram

 

A post shared by Shraddha (@thatshortrebel)

ಶ್ರದ್ಧಾ ಅವರ ತಂದೆ ತಾಯಿ ನಾಲ್ಕು ವರ್ಷಗಳ ಹಿಂದೆ ಬೇರೆಯಾಗಿದ್ದರು. ಆಕೆ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದಳು. 2018ರಲ್ಲಿ ಆಕೆ ವಸೈನಲ್ಲಿನ ಕಾಲ್ ಸೆಂಟರ್‌ನಲ್ಲಿ ಉದ್ಯೋಗ ಆರಂಭಿಸಿದ್ದಳು.

ಶ್ರದ್ಧಾಳನ್ನು ಮಾತನಾಡಿಸಲು ಲಕ್ಷ್ಮಣ್ ಪ್ರಯತ್ನಿಸುತ್ತಲೇ ಇದ್ದರು. ಅವರು ಜೂನ್ ಮತ್ತು ಜುಲೈನಲ್ಲಿ ಸಾಕಷ್ಟು ಸಲ ಆಕೆಗೆ ಕರೆ ಮಾಡಿದರು. ಆದರೆ ಆಕೆಯ ಮೊಬೈಲ್‌ ಸಂಖ್ಯೆ ಸ್ವಿಚ್ ಆಫ್ ಆಗಿತ್ತು. ಲಕ್ಷ್ಮಣ್ ಕಳುಹಿಸಿದ ಸಂದೇಶಗಳಿಗೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ.

ಶ್ರದ್ಧಾ ಅವರ ಸಹೋದರ ಶ್ರೀಜಯ್ ವಾಕರ್ ಅವರಿಗೆ ಸೆಪ್ಟೆಂಬರ್ 14ರಂದು ಕರೆ ಮಾಡಿದ ಲಕ್ಷ್ಮಣ್, ಎರಡು ತಿಂಗಳಿನಿಂದ ಶ್ರದ್ಧಾ ಅವರ ಫೋನ್ ಆಫ್ ಆಗಿದೆ ಎಂದು ತಿಳಿಸಿದ್ದರು. ಶ್ರೀಜಯ್ ತನ್ನ ತಂದೆ ವಿಕಾಸ್ ವಾಕರ್‌ಗೆ ಮಾಹಿತಿ ನೀಡಿದ್ದು, ಅವರು ಮಹಾರಾಷ್ಟ್ರದ ಮಾಣಿಕ್‌ಪುರದಲ್ಲಿ ಮಿಸ್ಸಿಂಗ್ ದೂರು ದಾಖಲಿಸಿದ್ದರು.

ಕೆಲವು ದಿನಗಳ ನಂತರ, ವಿಕಾಸ್‌ ವಾಕರ್‌ ಅವರಿಗೆ ಮಾಣಿಕ್‌ಪುರ ಪೊಲೀಸರು ಪ್ರತಿಕ್ರಿಯಿಸಿ, “ದೆಹಲಿಯ ಛತ್ತರ್‌ಪುರದಲ್ಲಿ ನಿಮ್ಮ ಮಗಳು ಆಕೆಯ ಗೆಳೆಯ ಅಫ್ತಾಬ್‌ನೊಂದಿಗೆ ವಾಸಿಸುತ್ತಿದ್ದಳು” ಎಂದು ಮಾಹಿತಿ ನೀಡಿದರು. ವಿಕಾಸ್ ನವೆಂಬರ್ 8ರಂದು ಶ್ರದ್ಧಾ ಅವರ ಫ್ಲಾಟ್‌ಗೆ ಬಂದರು. ಆದರೆ ಅದು ಲಾಕ್ ಆಗಿತ್ತು. ದೆಹಲಿಯ ಮೆಹ್ರೌಲಿ ಪೊಲೀಸ್ ಠಾಣೆಯಲ್ಲಿ ಮಗಳ ಅಪಹರಣದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದರು.

ಪೊಲೀಸರಿಗೆ ನೀಡಿದ ದೂರಿನಲ್ಲಿ ವಿಕಾಸ್, “ಅಫ್ತಾಬ್ ಶ್ರದ್ಧಾಳನ್ನು ಥಳಿಸುತ್ತಿದ್ದನು. ಆಕೆ ಸಂಬಂಧ ಚೆನ್ನಾಗಿರಲಿಲ್ಲ ಎಂದು ಶ್ರದ್ಧಾಳ ಸ್ನೇಹಿತರಾದ ಶಿವಾನಿ ಮತ್ತು ಲಕ್ಷ್ಮಣ್ ಹೇಳುತ್ತಾರೆ. ಹಾಗಾಗಿ ನನ್ನ ಮಗಳ ನಾಪತ್ತೆಯಲ್ಲಿ ಅಫ್ತಾಬ್ ಪೂನವಾಲಾ ಕೈವಾಡವಿದೆ ಎಂದು ನನಗೆ ಖಚಿತವಾಗಿದೆ” ಎಂದು ತಿಳಿಸಿದ್ದರು.

ತನ್ನ ತಾಯಿಯ ಮರಣದ ಒಂದು ತಿಂಗಳ ನಂತರ ಶ್ರದ್ಧಾ ನನ್ನನ್ನು ಭೇಟಿ ಮಾಡಿದ್ದಳು. ಅಫ್ತಾಬ್ ಆಗಾಗ್ಗೆ ಹೊಡೆಯುತ್ತಿರುತ್ತಾನೆ ಎಂದು ತಿಳಿಸಿದ್ದಳು ಎಂದು ವಿಕಾಸ್ ದೂರಿನಲ್ಲಿ ವಿವರಿಸಿದ್ದಾರೆ. “ಅಫ್ತಾಬ್‌ನನ್ನು ಬಿಟ್ಟು ಮನೆಗೆ ಹಿಂತಿರುಗುವಂತೆ ಆಕೆಗೆ ಸಲಹೆ ನೀಡಿದ್ದೆ. ಆದರೆ ಅಫ್ತಾಬ್ ಮರುದಿನ ಅವಳಲ್ಲಿ ಕ್ಷಮೆಯಾಚಿಸಿದ್ದನು. ಮತ್ತು ಶ್ರದ್ಧಾ ಅವನೊಂದಿಗೆ ಹಿಂತಿರುಗಿದ್ದಳು” ಎಂದಿದ್ದಾರೆ.

ವಿಕಾಸ್ ಅವರ ದೂರಿನ ಮೇರೆಗೆ ಮೆಹ್ರೌಲಿ ಪೊಲೀಸರು ಅಫ್ತಾಬ್‌ನನ್ನು ಪತ್ತೆಹಚ್ಚಿ ಬಂಧಿಸಿದರು. “ಜಗಳವಾಡಿಕೊಂಡು ಶ್ರದ್ಧಾ ದೂರವಾದಳು. ಆಕೆ ಎಲ್ಲಿಗೆ ಹೋಗಿದ್ದಾಳೆಂದು ನನಗೆ ಗೊತ್ತಿಲ್ಲ ಎಂದು ಆತ ಆರಂಭದಲ್ಲಿ ಹೇಳುತ್ತಿದ್ದ” ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ಅಂಕಿತ್ ಚೌಹಾಣ್ ಮಾಹಿತಿ ನೀಡಿದ್ದಾರೆ.

ಪೊಲೀಸರು ಆತನನ್ನು ಕಟ್ಟುನಿಟ್ಟಾಗಿ ವಿಚಾರಣೆಗೆ ಒಳಪಡಿಸಿದಾಗ, “ಶ್ರದ್ಧಾ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಳು, ಆದರೆ ಆತನಿಗೆ ಇದು ಇಷ್ಟವಿರಲಿಲ್ಲ. ಈ ವಿಚಾರವಾಗಿ ಆಗಾಗ ಜಗಳವಾಡುತ್ತಿದ್ದರು. ಮೇ 18ರ ಸಂಜೆ, ಅವರು ಮತ್ತೆ ಜಗಳವಾಡಿದರು. ಅಫ್ತಾಬ್ ನಿಯಂತ್ರಣ ಕಳೆದುಕೊಂಡು ಆಕೆಯ ಕತ್ತು ಹಿಸುಕಿದನು” ಎಂದು ತಿಳಿದುಬಂದಿದೆ.

ತಾನು ಸಿಕ್ಕಿಬೀಳಬಹುದೆಂದು ಗಾಬರಿಗೊಂಡ ಅಫ್ತಾಬ್, ಶ್ರದ್ಧಾಳ ದೇಹವನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಪ್ಲಾಸ್ಟಿಕ್ ಚೀಲಗಳಲ್ಲಿ ಪ್ಯಾಕ್ ಮಾಡಿದನು, ನಿರ್ದಿಷ್ಟ ಉದ್ದೇಶಕ್ಕಾಗಿ ಖರೀದಿಸಿದ ಫ್ರಿಜ್‌ನಲ್ಲಿ ಸಂಗ್ರಹಿಸಿದನು. ನಂತರ 18 ದಿನಗಳ ಕಾಲ, ಆತ ಪ್ರತಿ ರಾತ್ರಿ ದೇಹದ ಸಣ್ಣ ತುಂಡುಗಳನ್ನು ತೆಗೆದು ಮೆಹ್ರಾಲಿ ಅರಣ್ಯದಲ್ಲಿ ಎಸೆಯುತ್ತಿದ್ದನು. ಫ್ಲಾಟ್‌ಗೆ ಹಿಂತಿರುಗಿ ಅಗರಬತ್ತಿಗಳನ್ನು ಹಚ್ಚಿಡುತ್ತಿದ್ದನು. ಶವದ ದುರ್ನಾತವನ್ನು ಮರೆಮಾಡಲು ಏರ್ ಫ್ರೆಶ್ನರ್ ಮತ್ತು ಸುಗಂಧ ದ್ರವ್ಯಗಳನ್ನು ಸಿಂಪಡಿಸುತ್ತಿದ್ದನು.

ಇದನ್ನೂ ಓದಿರಿ: ಅಫ್ತಾಬ್- ಶ್ರದ್ಧಾ ಪ್ರಕರಣ: ಕತ್ತರಿಸಿ ಕಾಡಿಗೆ ಎಸೆದಿದ್ದ ದೇಹದ ಬಿಡಿಭಾಗಗಳಿಗೆ ಹುಡುಕಾಟ

ಛತ್ತರ್‌ಪುರದಲ್ಲಿ ಶ್ರದ್ಧಾ ಮತ್ತು ಅಫ್ತಾಬ್ ಅವರ ನೆರೆಹೊರೆಯವರು ಮಾಧ್ಯಮಗಳೊಂದಿಗೆ ನೇರವಾಗಿ ಮಾತನಾಡಲು ನಿರಾಕರಿಸಿದ್ದಾರೆ. ಅವರಲ್ಲಿ ಹೆಚ್ಚಿನವರು ಹೆಸರು ಹೇಳಲಿಚ್ಛಿಸದೆ ಪ್ರತಿಕ್ರಿಯಿಸಿದ್ದಾರೆ. “ನಾವು ಅಫ್ತಾಬ್ ಅನ್ನು ಮಾತ್ರ ನೋಡಿದ್ದೆವು. ಎಂದಿಗೂ ಶ್ರದ್ಧಾಳನ್ನು ನೋಡಿಲ್ಲ” ಎಂದು ಹಲವರು ಹೇಳಿಕೆ ನೀಡಿದ್ದಾರೆ. ಮೇ 15ರಂದು ಈ ಜೋಡಿಯು ತಮ್ಮ ಫ್ಲಾಟ್‌ಗೆ ತೆರಳಿತ್ತು. ಮೂರು ದಿನಗಳ ನಂತರ ಶ್ರದ್ಧಾಳನ್ನು ಕೊಲೆ ಮಾಡಲಾಗಿತ್ತು.

ಅಫ್ತಾಬ್ ಕೊಲೆಯ ಬಗ್ಗೆ ತಪ್ಪೊಪ್ಪಿಕೊಂಡ ನಂತರ, ಪೊಲೀಸರು ಶ್ರದ್ಧಾಳ ಶವದ ತುಂಡುಗಳನ್ನು ಪತ್ತೆ ಮಾಡಲು ಮೆಹ್ರೌಲಿ ಅರಣ್ಯಕ್ಕೆ ಆರೋಪಿಯನ್ನು ಕರೆದೊಯ್ದರು. ಅವರು ಇಲ್ಲಿಯವರೆಗೆ 13 ತುಣುಕುಗಳನ್ನು ವಶಕ್ಕೆ ಪಡೆದಿದ್ದಾರೆ. ಅವು ಹೆಚ್ಚಿನದಾಗಿ ಮೂಳೆಗಳಾಗಿವೆ. ಆದರೆ ಇನ್ನೂ ವಿಧಿವಿಜ್ಞಾನ ತಪಾಸಣೆಗೆ ಒಳಪಡಿಸಿಲ್ಲ.

“ಈ ಇಬ್ಬರ ನಡುವಿನ ಸಂಬಂಧ ಹದಗೆಟ್ಟಿದ್ದರಿಂದ ಈ ಕೊಲೆ ಸಂಭವಿಸಿದೆ ಎಂದು ತೋರುತ್ತದೆ, ಈಗಲೇ ಈ ಬಗ್ಗೆ ಹೆಚ್ಚು ಹೇಳುವುದು ಸರಿಯಲ್ಲ” ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ವರದಿ ಕೃಪೆ: ನ್ಯೂಸ್ ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...