Homeಮುಖಪುಟಅಫ್ತಾಬ್-ಶ್ರದ್ಧಾ 2019ರಿಂದಲೂ ಜೊತೆಯಲ್ಲಿದ್ದರು; ಮುಂಬೈ ತೊರೆದು ದೆಹಲಿಗೆ ಹೋದರು: ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು ಹೀಗೆ...

ಅಫ್ತಾಬ್-ಶ್ರದ್ಧಾ 2019ರಿಂದಲೂ ಜೊತೆಯಲ್ಲಿದ್ದರು; ಮುಂಬೈ ತೊರೆದು ದೆಹಲಿಗೆ ಹೋದರು: ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು ಹೀಗೆ…

- Advertisement -
- Advertisement -

27 ವರ್ಷದ ಶ್ರದ್ಧಾ ವಾಕರ್ ಮೃತ ದುರ್ದೈವಿ. ದೆಹಲಿಯ ಚತ್ತರ್‌ಪುರದಲ್ಲಿ ಗೆಳೆಯ ಅಫ್ತಾಬ್ ಪೂನವಾಲಾ (28) ಜೊತೆ ವಾಸಿಸಲೆಂದು ಮುಂಬೈನ ವಸಾಯ್‌ನಲ್ಲಿರುವ ತನ್ನ ಮನೆಯನ್ನು ತೊರೆದಿದ್ದಳಾಕೆ. ಶ್ರದ್ಧಾ ಆತನಲ್ಲಿ ಮದುವೆಯಾಗುವಂತೆ ಕೇಳುತ್ತಿದ್ದಳು. ಆದರೆ ಆತ ಒಪ್ಪಲಿಲ್ಲ. ಆಕೆ ತನ್ನ ಜೀವವನ್ನೇ ಕಳೆದುಕೊಂಡಳು.- ಸದ್ಯಕ್ಕೆ ದೆಹಲಿ ಪೊಲೀಸರು ಹೇಳುತ್ತಿರುವುದಿಷ್ಟು.

2019ರಲ್ಲಿ ಡೇಟಿಂಗ್ ಅಪ್ಲಿಕೇಶನ್ ಬಂಬಲ್ (Bumbl) ಮೂಲಕ, ವಸಾಯ್‌ನಲ್ಲಿ ವಾಸಿಸುತ್ತಿದ್ದ ಅಫ್ತಾಬ್‌ನನ್ನು ಶ್ರದ್ಧಾ ಭೇಟಿಯಾಗಿದ್ದರು. ಶ್ರದ್ಧಾ ಕುಟುಂಬವು ಈ ಸಂಬಂಧವನ್ನು ಒಪ್ಪಿಕೊಳ್ಳಲಿಲ್ಲ. ಆದ್ದರಿಂದ ಆಕೆ ಅಫ್ತಾಬ್‌ನೊಂದಿಗೆ ವಾಸಿಸಲೆಂದು ತನ್ನ ಕುಟುಂಬವನ್ನು ತೊರೆದಳು. ಮೊದಲು ಮುಂಬೈನಲ್ಲಿ ವಾಸವಿದ್ದರು. ನಂತರ ಮೇ 2022ರಿಂದ ದೆಹಲಿಯಲ್ಲಿ ವಾಸವಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“2019ರಲ್ಲಿ ಶ್ರದ್ಧಾ-ಅಫ್ತಾಬ್ ಜೊತೆಯಲ್ಲಿ ವಾಸಿಸಲು ಆರಂಭಿಸಿದ್ದರು” ಎಂದು ಶ್ರದ್ಧಾ ಸಂಪರ್ಕದಲ್ಲಿದ್ದ ಆಕೆಯ ಸ್ನೇಹಿತ ಲಕ್ಷ್ಮಣ್ ನಾಡಾರ್ ಹೇಳುತ್ತಾರೆ. “ಶ್ರದ್ಧಾ ಆತನನ್ನು ಮದುವೆಯಾಗಲು ಬಯಸಿದ್ದಳು. ಆದರೆ ಅವಳ ತಾಯಿ ವಿರೋಧಿಸಿದರು. ಆದ್ದರಿಂದ ಆಕೆ ಮನೆ ಬಿಟ್ಟಿದ್ದಳು”.

ಶ್ರದ್ಧಾ ಮನೆಯಿಂದ ಹೊರಬಂದ ನಂತರ ಇಡೀ ಕುಟುಂಬದಲ್ಲಿ ಆಕೆಯ ತಾಯಿ ಮಾತ್ರ ಶ್ರದ್ಧಾ ಜೊತೆಯಲ್ಲಿ ಸಂಪರ್ಕದಲ್ಲಿದ್ದರು ಎನ್ನುತ್ತಾರೆ ಲಕ್ಷ್ಮಣ್. ಶ್ರದ್ಧಾ ಅವರ ತಾಯಿ 2020ರಲ್ಲಿ ನಿಧನರಾದರು. ಶ್ರದ್ಧಾ ಅವರ ಕುಟುಂಬದೊಂದಿಗಿನ ಏಕೈಕ ಸಂಪರ್ಕ ಲಕ್ಷ್ಮಣ್ ಮಾತ್ರ ಆಗಿದ್ದರು. ಆಕೆ ದೆಹಲಿಗೆ ತೆರಳಿ, ಸಂಪರ್ಕ ಕಡಿತವಾಗುವವರೆಗೂ ಲಕ್ಷ್ಮಣ್ ಮಾತನಾಡಿದ್ದಳು. ಶ್ರದ್ಧಾ ಅವರ ತಂದೆ ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಮಗಳ ಮೇಲೆ ನಿಗಾ ಇಟ್ಟಿದ್ದರು.

 

View this post on Instagram

 

A post shared by Shraddha (@thatshortrebel)

 

View this post on Instagram

 

A post shared by Shraddha (@thatshortrebel)

ಶ್ರದ್ಧಾ ಅವರ ತಂದೆ ತಾಯಿ ನಾಲ್ಕು ವರ್ಷಗಳ ಹಿಂದೆ ಬೇರೆಯಾಗಿದ್ದರು. ಆಕೆ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದಳು. 2018ರಲ್ಲಿ ಆಕೆ ವಸೈನಲ್ಲಿನ ಕಾಲ್ ಸೆಂಟರ್‌ನಲ್ಲಿ ಉದ್ಯೋಗ ಆರಂಭಿಸಿದ್ದಳು.

ಶ್ರದ್ಧಾಳನ್ನು ಮಾತನಾಡಿಸಲು ಲಕ್ಷ್ಮಣ್ ಪ್ರಯತ್ನಿಸುತ್ತಲೇ ಇದ್ದರು. ಅವರು ಜೂನ್ ಮತ್ತು ಜುಲೈನಲ್ಲಿ ಸಾಕಷ್ಟು ಸಲ ಆಕೆಗೆ ಕರೆ ಮಾಡಿದರು. ಆದರೆ ಆಕೆಯ ಮೊಬೈಲ್‌ ಸಂಖ್ಯೆ ಸ್ವಿಚ್ ಆಫ್ ಆಗಿತ್ತು. ಲಕ್ಷ್ಮಣ್ ಕಳುಹಿಸಿದ ಸಂದೇಶಗಳಿಗೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ.

ಶ್ರದ್ಧಾ ಅವರ ಸಹೋದರ ಶ್ರೀಜಯ್ ವಾಕರ್ ಅವರಿಗೆ ಸೆಪ್ಟೆಂಬರ್ 14ರಂದು ಕರೆ ಮಾಡಿದ ಲಕ್ಷ್ಮಣ್, ಎರಡು ತಿಂಗಳಿನಿಂದ ಶ್ರದ್ಧಾ ಅವರ ಫೋನ್ ಆಫ್ ಆಗಿದೆ ಎಂದು ತಿಳಿಸಿದ್ದರು. ಶ್ರೀಜಯ್ ತನ್ನ ತಂದೆ ವಿಕಾಸ್ ವಾಕರ್‌ಗೆ ಮಾಹಿತಿ ನೀಡಿದ್ದು, ಅವರು ಮಹಾರಾಷ್ಟ್ರದ ಮಾಣಿಕ್‌ಪುರದಲ್ಲಿ ಮಿಸ್ಸಿಂಗ್ ದೂರು ದಾಖಲಿಸಿದ್ದರು.

ಕೆಲವು ದಿನಗಳ ನಂತರ, ವಿಕಾಸ್‌ ವಾಕರ್‌ ಅವರಿಗೆ ಮಾಣಿಕ್‌ಪುರ ಪೊಲೀಸರು ಪ್ರತಿಕ್ರಿಯಿಸಿ, “ದೆಹಲಿಯ ಛತ್ತರ್‌ಪುರದಲ್ಲಿ ನಿಮ್ಮ ಮಗಳು ಆಕೆಯ ಗೆಳೆಯ ಅಫ್ತಾಬ್‌ನೊಂದಿಗೆ ವಾಸಿಸುತ್ತಿದ್ದಳು” ಎಂದು ಮಾಹಿತಿ ನೀಡಿದರು. ವಿಕಾಸ್ ನವೆಂಬರ್ 8ರಂದು ಶ್ರದ್ಧಾ ಅವರ ಫ್ಲಾಟ್‌ಗೆ ಬಂದರು. ಆದರೆ ಅದು ಲಾಕ್ ಆಗಿತ್ತು. ದೆಹಲಿಯ ಮೆಹ್ರೌಲಿ ಪೊಲೀಸ್ ಠಾಣೆಯಲ್ಲಿ ಮಗಳ ಅಪಹರಣದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದರು.

ಪೊಲೀಸರಿಗೆ ನೀಡಿದ ದೂರಿನಲ್ಲಿ ವಿಕಾಸ್, “ಅಫ್ತಾಬ್ ಶ್ರದ್ಧಾಳನ್ನು ಥಳಿಸುತ್ತಿದ್ದನು. ಆಕೆ ಸಂಬಂಧ ಚೆನ್ನಾಗಿರಲಿಲ್ಲ ಎಂದು ಶ್ರದ್ಧಾಳ ಸ್ನೇಹಿತರಾದ ಶಿವಾನಿ ಮತ್ತು ಲಕ್ಷ್ಮಣ್ ಹೇಳುತ್ತಾರೆ. ಹಾಗಾಗಿ ನನ್ನ ಮಗಳ ನಾಪತ್ತೆಯಲ್ಲಿ ಅಫ್ತಾಬ್ ಪೂನವಾಲಾ ಕೈವಾಡವಿದೆ ಎಂದು ನನಗೆ ಖಚಿತವಾಗಿದೆ” ಎಂದು ತಿಳಿಸಿದ್ದರು.

ತನ್ನ ತಾಯಿಯ ಮರಣದ ಒಂದು ತಿಂಗಳ ನಂತರ ಶ್ರದ್ಧಾ ನನ್ನನ್ನು ಭೇಟಿ ಮಾಡಿದ್ದಳು. ಅಫ್ತಾಬ್ ಆಗಾಗ್ಗೆ ಹೊಡೆಯುತ್ತಿರುತ್ತಾನೆ ಎಂದು ತಿಳಿಸಿದ್ದಳು ಎಂದು ವಿಕಾಸ್ ದೂರಿನಲ್ಲಿ ವಿವರಿಸಿದ್ದಾರೆ. “ಅಫ್ತಾಬ್‌ನನ್ನು ಬಿಟ್ಟು ಮನೆಗೆ ಹಿಂತಿರುಗುವಂತೆ ಆಕೆಗೆ ಸಲಹೆ ನೀಡಿದ್ದೆ. ಆದರೆ ಅಫ್ತಾಬ್ ಮರುದಿನ ಅವಳಲ್ಲಿ ಕ್ಷಮೆಯಾಚಿಸಿದ್ದನು. ಮತ್ತು ಶ್ರದ್ಧಾ ಅವನೊಂದಿಗೆ ಹಿಂತಿರುಗಿದ್ದಳು” ಎಂದಿದ್ದಾರೆ.

ವಿಕಾಸ್ ಅವರ ದೂರಿನ ಮೇರೆಗೆ ಮೆಹ್ರೌಲಿ ಪೊಲೀಸರು ಅಫ್ತಾಬ್‌ನನ್ನು ಪತ್ತೆಹಚ್ಚಿ ಬಂಧಿಸಿದರು. “ಜಗಳವಾಡಿಕೊಂಡು ಶ್ರದ್ಧಾ ದೂರವಾದಳು. ಆಕೆ ಎಲ್ಲಿಗೆ ಹೋಗಿದ್ದಾಳೆಂದು ನನಗೆ ಗೊತ್ತಿಲ್ಲ ಎಂದು ಆತ ಆರಂಭದಲ್ಲಿ ಹೇಳುತ್ತಿದ್ದ” ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ಅಂಕಿತ್ ಚೌಹಾಣ್ ಮಾಹಿತಿ ನೀಡಿದ್ದಾರೆ.

ಪೊಲೀಸರು ಆತನನ್ನು ಕಟ್ಟುನಿಟ್ಟಾಗಿ ವಿಚಾರಣೆಗೆ ಒಳಪಡಿಸಿದಾಗ, “ಶ್ರದ್ಧಾ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಳು, ಆದರೆ ಆತನಿಗೆ ಇದು ಇಷ್ಟವಿರಲಿಲ್ಲ. ಈ ವಿಚಾರವಾಗಿ ಆಗಾಗ ಜಗಳವಾಡುತ್ತಿದ್ದರು. ಮೇ 18ರ ಸಂಜೆ, ಅವರು ಮತ್ತೆ ಜಗಳವಾಡಿದರು. ಅಫ್ತಾಬ್ ನಿಯಂತ್ರಣ ಕಳೆದುಕೊಂಡು ಆಕೆಯ ಕತ್ತು ಹಿಸುಕಿದನು” ಎಂದು ತಿಳಿದುಬಂದಿದೆ.

ತಾನು ಸಿಕ್ಕಿಬೀಳಬಹುದೆಂದು ಗಾಬರಿಗೊಂಡ ಅಫ್ತಾಬ್, ಶ್ರದ್ಧಾಳ ದೇಹವನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಪ್ಲಾಸ್ಟಿಕ್ ಚೀಲಗಳಲ್ಲಿ ಪ್ಯಾಕ್ ಮಾಡಿದನು, ನಿರ್ದಿಷ್ಟ ಉದ್ದೇಶಕ್ಕಾಗಿ ಖರೀದಿಸಿದ ಫ್ರಿಜ್‌ನಲ್ಲಿ ಸಂಗ್ರಹಿಸಿದನು. ನಂತರ 18 ದಿನಗಳ ಕಾಲ, ಆತ ಪ್ರತಿ ರಾತ್ರಿ ದೇಹದ ಸಣ್ಣ ತುಂಡುಗಳನ್ನು ತೆಗೆದು ಮೆಹ್ರಾಲಿ ಅರಣ್ಯದಲ್ಲಿ ಎಸೆಯುತ್ತಿದ್ದನು. ಫ್ಲಾಟ್‌ಗೆ ಹಿಂತಿರುಗಿ ಅಗರಬತ್ತಿಗಳನ್ನು ಹಚ್ಚಿಡುತ್ತಿದ್ದನು. ಶವದ ದುರ್ನಾತವನ್ನು ಮರೆಮಾಡಲು ಏರ್ ಫ್ರೆಶ್ನರ್ ಮತ್ತು ಸುಗಂಧ ದ್ರವ್ಯಗಳನ್ನು ಸಿಂಪಡಿಸುತ್ತಿದ್ದನು.

ಇದನ್ನೂ ಓದಿರಿ: ಅಫ್ತಾಬ್- ಶ್ರದ್ಧಾ ಪ್ರಕರಣ: ಕತ್ತರಿಸಿ ಕಾಡಿಗೆ ಎಸೆದಿದ್ದ ದೇಹದ ಬಿಡಿಭಾಗಗಳಿಗೆ ಹುಡುಕಾಟ

ಛತ್ತರ್‌ಪುರದಲ್ಲಿ ಶ್ರದ್ಧಾ ಮತ್ತು ಅಫ್ತಾಬ್ ಅವರ ನೆರೆಹೊರೆಯವರು ಮಾಧ್ಯಮಗಳೊಂದಿಗೆ ನೇರವಾಗಿ ಮಾತನಾಡಲು ನಿರಾಕರಿಸಿದ್ದಾರೆ. ಅವರಲ್ಲಿ ಹೆಚ್ಚಿನವರು ಹೆಸರು ಹೇಳಲಿಚ್ಛಿಸದೆ ಪ್ರತಿಕ್ರಿಯಿಸಿದ್ದಾರೆ. “ನಾವು ಅಫ್ತಾಬ್ ಅನ್ನು ಮಾತ್ರ ನೋಡಿದ್ದೆವು. ಎಂದಿಗೂ ಶ್ರದ್ಧಾಳನ್ನು ನೋಡಿಲ್ಲ” ಎಂದು ಹಲವರು ಹೇಳಿಕೆ ನೀಡಿದ್ದಾರೆ. ಮೇ 15ರಂದು ಈ ಜೋಡಿಯು ತಮ್ಮ ಫ್ಲಾಟ್‌ಗೆ ತೆರಳಿತ್ತು. ಮೂರು ದಿನಗಳ ನಂತರ ಶ್ರದ್ಧಾಳನ್ನು ಕೊಲೆ ಮಾಡಲಾಗಿತ್ತು.

ಅಫ್ತಾಬ್ ಕೊಲೆಯ ಬಗ್ಗೆ ತಪ್ಪೊಪ್ಪಿಕೊಂಡ ನಂತರ, ಪೊಲೀಸರು ಶ್ರದ್ಧಾಳ ಶವದ ತುಂಡುಗಳನ್ನು ಪತ್ತೆ ಮಾಡಲು ಮೆಹ್ರೌಲಿ ಅರಣ್ಯಕ್ಕೆ ಆರೋಪಿಯನ್ನು ಕರೆದೊಯ್ದರು. ಅವರು ಇಲ್ಲಿಯವರೆಗೆ 13 ತುಣುಕುಗಳನ್ನು ವಶಕ್ಕೆ ಪಡೆದಿದ್ದಾರೆ. ಅವು ಹೆಚ್ಚಿನದಾಗಿ ಮೂಳೆಗಳಾಗಿವೆ. ಆದರೆ ಇನ್ನೂ ವಿಧಿವಿಜ್ಞಾನ ತಪಾಸಣೆಗೆ ಒಳಪಡಿಸಿಲ್ಲ.

“ಈ ಇಬ್ಬರ ನಡುವಿನ ಸಂಬಂಧ ಹದಗೆಟ್ಟಿದ್ದರಿಂದ ಈ ಕೊಲೆ ಸಂಭವಿಸಿದೆ ಎಂದು ತೋರುತ್ತದೆ, ಈಗಲೇ ಈ ಬಗ್ಗೆ ಹೆಚ್ಚು ಹೇಳುವುದು ಸರಿಯಲ್ಲ” ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ವರದಿ ಕೃಪೆ: ನ್ಯೂಸ್ ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...