Homeಮುಖಪುಟಬೆಂಕಿಪೊಟ್ಟಣಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ:14 ವರ್ಷಗಳ ಬಳಿಕ ಶೇ.100 ರಷ್ಟು ಬೆಲೆ ಏರಿಕೆ

ಬೆಂಕಿಪೊಟ್ಟಣಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ:14 ವರ್ಷಗಳ ಬಳಿಕ ಶೇ.100 ರಷ್ಟು ಬೆಲೆ ಏರಿಕೆ

- Advertisement -
- Advertisement -

ಪೆಟ್ರೋಲ್, ಡಿಸೇಲ್, ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆಯಾಗಿ, ದಿನ ಬಳಕೆ ವಸ್ತುಗಳ ಬೆಲೆ ದಿನ ದಿನಕ್ಕೂ ಹೆಚ್ಚಾಗುತ್ತಲೇ ಇದೆ. ಇದರ ನಡುವೆ ಬರೋಬ್ಬರಿ  14 ವರ್ಷಗಳ ಬಳಿಕ ಬೆಂಕಿಪೊಟ್ಟಣಕ್ಕೂ ಬೆಲೆ ಏರಿಕೆ ಬಿಸಿ ತಟ್ಟಿದ್ದು, ಬೆಂಕಿಪೊಟ್ಟಣದ ಬೆಲೆಯಲ್ಲಿ ಶೇ.100 ರಷ್ಟು ಏರಿಕೆ ಮಾಡಲು ನಿರ್ಧರಿಸಲಾಗಿದೆ.

ತಮಿಳುನಾಡಿನ ಶಿವಕಾಶಿಯಲ್ಲಿರುವ ಆಲ್ ಇಂಡಿಯಾ ಚೇಂಬರ್ ಆಫ್ ಮ್ಯಾಚಸ್ 14 ವರ್ಷಗಳ ನಂತರ ಬೆಂಕಿಪೊಟ್ಟಣದ ಬೆಲೆಯನ್ನು 1 ರಿಂದ 2 ರೂಪಾಯಿಗೆ ಏರಿಸಲು ನಿರ್ಧರಿಸಿದೆ. ಹೆಚ್ಚುತ್ತಿರುವ ವೆಚ್ಚಗಳು ಮತ್ತು ಹಣದುಬ್ಬರವನ್ನು ಉಲ್ಲೇಖಿಸಿ ಈ ಒಕ್ಕೂಟವೂ ಬೆಂಕಿಪೊಟ್ಟಣದ ಬೆಲೆ ಡಿಸೆಂಬರ್ 1 ರಿಂದ ಏರಿಕೆಯಾಗುವುದನ್ನು ಘೋಷಿಸಿದೆ.

ಕಳೆದ 14 ವರ್ಷಗಳಲ್ಲಿ ಬೆಲೆ ಏರಿಕೆ ಕಾಣದ ದಿನ ಬಳಕೆ ವಸ್ತುಗಳಲ್ಲಿದ್ದ ಏಕೈಕ ವಸ್ತು ಬೆಂಕಿಪೊಟ್ಟಣವಾಗಿತ್ತು.  2007ರಲ್ಲಿ ಬೆಂಕಿ ಪೊಟ್ಟಣದ ದರವನ್ನು 50 ಪೈಸೆಗಳಿಂದ 1 ರೂಪಾಯಿಗೆ ಹೆಚ್ಚಿಸಲಾಗಿತ್ತು. ಅದಕ್ಕಿಂತ ಮೊದಲು 1995 ರಲ್ಲಿ ಮ್ಯಾಚ್‌ಬಾಕ್ಸ್‌ನ ಬೆಲೆಯನ್ನು 25 ಪೈಸೆಯಿಂದ 50 ಪೈಸೆಗೆ  ಹೆಚ್ಚಿಸಲಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್: ಕಳೆದ 25 ದಿನಗಳಲ್ಲಿ 19 ಬಾರಿ ಬೆಲೆ ಏರಿಕೆ!

ಮ್ಯಾಚ್‌ಬಾಕ್ಸ್‌ಗಳನ್ನು ತಯಾರಿಸಲು 14 ಬಗೆಯ ಕಚ್ಚಾ ಸಾಮಗ್ರಿಗಳು ಬೇಕಾಗುತ್ತವೆ ಎಂದು ತಯಾರಕರು ತಿಳಿಸಿದ್ದಾರೆ. ಬೆಂಕಿಪೊಟ್ಟಣ ತಯಾರಿಸಲು ಬೇಕಾಗುವ ಪ್ರಮುಖ ವಸ್ತುವಾದ ಕೆಂಪು ರಂಜಕ ಒಂದು ಕೆಜಿಗೆ 425 ರಿಂದ 810 ರೂಪಾಯಿಯಾಗಿದೆ.

ಮೇಣದ ಬೆಲೆ 58 ರಿಂದ 80 ರೂಪಾಯಿಯಾಗಿದೆ. ಹೊರ ಬಾಕ್ಸ್ ಬೋರ್ಡ್ 36 ರಿಂದ 55 ರೂ. ಒಳಗಿನ ಬಾಕ್ಸ್ ಬೋರ್ಡ್ ಬೆಲೆ 32 ರಿಂದ  58 ರೂಪಾಯಿಗೆ ಏರಿಕೆಯಾಗಿದೆ ಎಂದು ಆಲ್ ಇಂಡಿಯಾ ಚೇಂಬರ್ ಆಫ್ ಮ್ಯಾಚಸ್ ತಿಳಿಸಿದೆ.

ಇದರ ಜೊತೆಗೆ ಪೇಪರ್, ಸ್ಪ್ಲಿಂಟ್ಸ್, ಪೊಟ್ಯಾಶಿಯಂ ಕ್ಲೋರೇಟ್ ಮತ್ತು ಸಲ್ಫರ್ ನಂತಹ ವಸ್ತುಗಳ ಬೆಲೆಯೂ ಹೆಚ್ಚಾಗಿದೆ. ಇವುಗಳು ಕೂಡ ಬೆಂಕಿಪೊಟ್ಟಣ ಬೆಲೆ ಏರಿಕೆಗೆ ಕಾರಣವಾಗಿದೆ. ನಿರಂತರವಾಗಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗಿ ಸಾಗಣೆ ವೆಚ್ಚ ಕೂಡ ಅಧಿಕವಾಗಿದೆ ಎಂದು ತಯಾರಕರು ಹೇಳಿದ್ದಾರೆ.


ಇದನ್ನೂ ಓದಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ನಿಂತಿಲ್ಲ: ಏಕೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...