Homeಮುಖಪುಟಬೆಂಕಿಪೊಟ್ಟಣಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ:14 ವರ್ಷಗಳ ಬಳಿಕ ಶೇ.100 ರಷ್ಟು ಬೆಲೆ ಏರಿಕೆ

ಬೆಂಕಿಪೊಟ್ಟಣಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ:14 ವರ್ಷಗಳ ಬಳಿಕ ಶೇ.100 ರಷ್ಟು ಬೆಲೆ ಏರಿಕೆ

- Advertisement -
- Advertisement -

ಪೆಟ್ರೋಲ್, ಡಿಸೇಲ್, ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆಯಾಗಿ, ದಿನ ಬಳಕೆ ವಸ್ತುಗಳ ಬೆಲೆ ದಿನ ದಿನಕ್ಕೂ ಹೆಚ್ಚಾಗುತ್ತಲೇ ಇದೆ. ಇದರ ನಡುವೆ ಬರೋಬ್ಬರಿ  14 ವರ್ಷಗಳ ಬಳಿಕ ಬೆಂಕಿಪೊಟ್ಟಣಕ್ಕೂ ಬೆಲೆ ಏರಿಕೆ ಬಿಸಿ ತಟ್ಟಿದ್ದು, ಬೆಂಕಿಪೊಟ್ಟಣದ ಬೆಲೆಯಲ್ಲಿ ಶೇ.100 ರಷ್ಟು ಏರಿಕೆ ಮಾಡಲು ನಿರ್ಧರಿಸಲಾಗಿದೆ.

ತಮಿಳುನಾಡಿನ ಶಿವಕಾಶಿಯಲ್ಲಿರುವ ಆಲ್ ಇಂಡಿಯಾ ಚೇಂಬರ್ ಆಫ್ ಮ್ಯಾಚಸ್ 14 ವರ್ಷಗಳ ನಂತರ ಬೆಂಕಿಪೊಟ್ಟಣದ ಬೆಲೆಯನ್ನು 1 ರಿಂದ 2 ರೂಪಾಯಿಗೆ ಏರಿಸಲು ನಿರ್ಧರಿಸಿದೆ. ಹೆಚ್ಚುತ್ತಿರುವ ವೆಚ್ಚಗಳು ಮತ್ತು ಹಣದುಬ್ಬರವನ್ನು ಉಲ್ಲೇಖಿಸಿ ಈ ಒಕ್ಕೂಟವೂ ಬೆಂಕಿಪೊಟ್ಟಣದ ಬೆಲೆ ಡಿಸೆಂಬರ್ 1 ರಿಂದ ಏರಿಕೆಯಾಗುವುದನ್ನು ಘೋಷಿಸಿದೆ.

ಕಳೆದ 14 ವರ್ಷಗಳಲ್ಲಿ ಬೆಲೆ ಏರಿಕೆ ಕಾಣದ ದಿನ ಬಳಕೆ ವಸ್ತುಗಳಲ್ಲಿದ್ದ ಏಕೈಕ ವಸ್ತು ಬೆಂಕಿಪೊಟ್ಟಣವಾಗಿತ್ತು.  2007ರಲ್ಲಿ ಬೆಂಕಿ ಪೊಟ್ಟಣದ ದರವನ್ನು 50 ಪೈಸೆಗಳಿಂದ 1 ರೂಪಾಯಿಗೆ ಹೆಚ್ಚಿಸಲಾಗಿತ್ತು. ಅದಕ್ಕಿಂತ ಮೊದಲು 1995 ರಲ್ಲಿ ಮ್ಯಾಚ್‌ಬಾಕ್ಸ್‌ನ ಬೆಲೆಯನ್ನು 25 ಪೈಸೆಯಿಂದ 50 ಪೈಸೆಗೆ  ಹೆಚ್ಚಿಸಲಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್: ಕಳೆದ 25 ದಿನಗಳಲ್ಲಿ 19 ಬಾರಿ ಬೆಲೆ ಏರಿಕೆ!

ಮ್ಯಾಚ್‌ಬಾಕ್ಸ್‌ಗಳನ್ನು ತಯಾರಿಸಲು 14 ಬಗೆಯ ಕಚ್ಚಾ ಸಾಮಗ್ರಿಗಳು ಬೇಕಾಗುತ್ತವೆ ಎಂದು ತಯಾರಕರು ತಿಳಿಸಿದ್ದಾರೆ. ಬೆಂಕಿಪೊಟ್ಟಣ ತಯಾರಿಸಲು ಬೇಕಾಗುವ ಪ್ರಮುಖ ವಸ್ತುವಾದ ಕೆಂಪು ರಂಜಕ ಒಂದು ಕೆಜಿಗೆ 425 ರಿಂದ 810 ರೂಪಾಯಿಯಾಗಿದೆ.

ಮೇಣದ ಬೆಲೆ 58 ರಿಂದ 80 ರೂಪಾಯಿಯಾಗಿದೆ. ಹೊರ ಬಾಕ್ಸ್ ಬೋರ್ಡ್ 36 ರಿಂದ 55 ರೂ. ಒಳಗಿನ ಬಾಕ್ಸ್ ಬೋರ್ಡ್ ಬೆಲೆ 32 ರಿಂದ  58 ರೂಪಾಯಿಗೆ ಏರಿಕೆಯಾಗಿದೆ ಎಂದು ಆಲ್ ಇಂಡಿಯಾ ಚೇಂಬರ್ ಆಫ್ ಮ್ಯಾಚಸ್ ತಿಳಿಸಿದೆ.

ಇದರ ಜೊತೆಗೆ ಪೇಪರ್, ಸ್ಪ್ಲಿಂಟ್ಸ್, ಪೊಟ್ಯಾಶಿಯಂ ಕ್ಲೋರೇಟ್ ಮತ್ತು ಸಲ್ಫರ್ ನಂತಹ ವಸ್ತುಗಳ ಬೆಲೆಯೂ ಹೆಚ್ಚಾಗಿದೆ. ಇವುಗಳು ಕೂಡ ಬೆಂಕಿಪೊಟ್ಟಣ ಬೆಲೆ ಏರಿಕೆಗೆ ಕಾರಣವಾಗಿದೆ. ನಿರಂತರವಾಗಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗಿ ಸಾಗಣೆ ವೆಚ್ಚ ಕೂಡ ಅಧಿಕವಾಗಿದೆ ಎಂದು ತಯಾರಕರು ಹೇಳಿದ್ದಾರೆ.


ಇದನ್ನೂ ಓದಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ನಿಂತಿಲ್ಲ: ಏಕೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...