Homeಮುಖಪುಟಹಿಂಸಾಚಾರದ ಮಧ್ಯೆಯೇ 23 ವರ್ಷಗಳ ಬಳಿಕ ಮಣಿಪುರದಲ್ಲಿ ಹಿಂದಿ ಸಿನಿಮಾ ಪ್ರಸಾರ

ಹಿಂಸಾಚಾರದ ಮಧ್ಯೆಯೇ 23 ವರ್ಷಗಳ ಬಳಿಕ ಮಣಿಪುರದಲ್ಲಿ ಹಿಂದಿ ಸಿನಿಮಾ ಪ್ರಸಾರ

- Advertisement -
- Advertisement -

ಮಣಿಪುರವು ಜನಾಂಗೀಯ ದ್ವೇಷದ ಜ್ವಾಲೆಯಲ್ಲಿ ಬೇಯುತ್ತಿದೆ. ಇಂತಹ ಈ ಸಂದರ್ಭದಲ್ಲಿ ಒಂದು ಜನಾಂಗ ನಿಷೇಧ ಹೇರಿದ್ದ ಹಿಂದಿ ಸಿನಿಮಾವನ್ನು ಇನ್ನೊಂದು ಜನಾಂಗದವರು ಪ್ರದರ್ಶಿಸಿದ್ದಾರೆ. ಮಣಿಪುರದಲ್ಲಿ ಸುಮಾರು 23 ವರ್ಷಗಳ ಬಳಿಕ ಹಿಂದಿ ಸಿನಿಮಾವೊಂದು ಪ್ರದರ್ಶನ ಕಂಡಿದೆ.

ಮೈತಿ ಸಮುದಾಯದವರು ಮಣಿಪುರದಲ್ಲಿ ಹಿಂದಿ ಸಿನಿಮಾಗೆ ನಿಷೇಧ ಹೇರಿದ್ದರು. ಆದರೆ ಇದೀಗ ಕುಕಿ ಸಮುದಾಯದವರು ‘ಉರಿ: ದಿ ಸರ್ಜಿಕಲ್ ಸ್ಟೈಕ್’ ಸಿನಿಮಾವನ್ನು ಚುರ್ಚಾಂದಪುರದ ರೆಂಗ್‌ ಎಂಬಲ್ಲಿ ತೆರೆದ ಸಿನಿಮಾ ಮಂದಿರದಲ್ಲಿ ಪ್ರದರ್ಶಿಸಿದ್ದಾರೆ. ಚಿತ್ರ ವೀಕ್ಷಣೆಗೆ ದೊಡ್ಡ ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದರು.

ಮಣಿಪುರದಲ್ಲಿ ಹಿಂದಿ ಸಿನಿಮಾ ಪ್ರದರ್ಶನಕ್ಕೆ ಮೈತಿ ಹಾಗೂ ನಾಗಗಳ ಸಂಘಟನೆಯಾದ ‘ರೆವೆಲ್ಯೂಷನರಿ ಪೀಪಲ್ಸ್ ಫ್ರೆಂಟ್’ ನಿಷೇಧ ಹೇರಿತ್ತು. ಹಿಂದಿ ಸಿನಿಮಾ ಹೇರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ 2000ನೇ ಇಸವಿಯ ಸೆಪ್ಟೆಂಬರ್‌ನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಕುಕಿ ಸಮುದಾಯದ ಸಂಘಟನೆಯಾದ ‘ಮಾರ್ ವಿದ್ಯಾರ್ಥಿ ಒಕ್ಕೂಟ’ವು ಮಂಗಳವಾರ ಸಿನಿಮಾ ಪ್ರದರ್ಶನವನ್ನು ಆಯೋಜಿಸಿತ್ತು. 23ವರ್ಷಗಳ ಹಿಂದೆ ರೆವೆಲ್ಯೂಷನರಿ ಪೀಪಲ್ಸ್ ಫ್ರೆಂಟ್ ತೆಗೆದುಕೊಂಡ ನಿರ್ಧಾರಕ್ಕೆ ವಿರುದ್ಧವಾಗಿ ಈ ಸಿನಿಮಾ ಪ್ರದರ್ಶನ ಏರ್ಪಡಿಸಲಾಗಿತ್ತು.

ಈ ಬಗ್ಗೆ ಕುಕಿ ಜನಾಂಗದ ಬೆಂಬಲಿತ ಸಂಘಟನೆ ‘ಇಂಡಿಜೀನಿಯಸ್ ಟ್ರೈಬಲ್ ಲೀಸರ್ಡ್ ಫೋರಂ’ನ ವಕ್ತಾರ ಗಿಂಜಾ ವುಲಾಜೋಂಗ್ ಮಾತನಾಡಿದ್ದು, ”ನಮ್ಮಊರಿನಲ್ಲಿ ಹಿಂದಿ ಸಿನಿಮಾ ಪ್ರದರ್ಶನವಾಗಿ ಎರಡು ದಶಕಗಳು ಕಳೆದಿದ್ದವು. ಸುಮಾರು ವರ್ಷಗಳಿಂದ ಮೈತಿಗಳು ಹಿಂದಿ ಸಿನಿಮಾಗೆ ನಿಷೇಧ ಹೇರಿದ್ದರು. ಮೈತೇಯಿ ಗುಂಪುಗಳ ದೇಶ ವಿರೋಧಿ ನೀತಿಗಳನ್ನು ಧಿಕ್ಕರಿಸುವ ಹಾಗೂ ದೇಶದ ಮೇಲೆ ನಮ್ಮ ಪ್ರೀತಿಯನ್ನು ತೋರಿಸುವ ಸಲುವಾಗಿ ಸಿನಿಮಾ ಪ್ರದರ್ಶನ ಮಾಡಿದ್ದೇವೆ” ಎಂದು ಹೇಳಿದ್ದಾರೆ.

ರಾಜ್ಯ ರಾಜಧಾನಿ ಇಂಫಾಲದಿಂದ 63 ಕಿ.ಮೀ. ದೂರದಲ್ಲಿ ಈ ಘಟನೆ ನಡೆದಿದ್ದು, ಸಿನಿಮಾ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಹಾಡಲಾಯಿತು.

ಮಣಿಪುರದಲ್ಲಿ ಮೇ 3 ರಿಂದ ಆರಂಭವಾದ ಜನಾಂಗೀಯ ಸಂಘರ್ಷದಲ್ಲಿ ಈವರೆಗೂ 180ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. 60 ಸಾವಿರಕ್ಕೂ ಅಧಿಕ ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ಮಣಿಪುರ, ಹರಿಯಾಣದಂತೆ ದೇಶದೆಲ್ಲೆಡೆ ಸಂಘರ್ಷ ಮುಂದುವರಿದರೆ ಭಾರತ ಹೇಗೆ ವಿಶ್ವಗುರುವಾಗುತ್ತದೆ?: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...