Homeಮುಖಪುಟಹಿಂಸಾಚಾರದ ಮಧ್ಯೆಯೇ 23 ವರ್ಷಗಳ ಬಳಿಕ ಮಣಿಪುರದಲ್ಲಿ ಹಿಂದಿ ಸಿನಿಮಾ ಪ್ರಸಾರ

ಹಿಂಸಾಚಾರದ ಮಧ್ಯೆಯೇ 23 ವರ್ಷಗಳ ಬಳಿಕ ಮಣಿಪುರದಲ್ಲಿ ಹಿಂದಿ ಸಿನಿಮಾ ಪ್ರಸಾರ

- Advertisement -
- Advertisement -

ಮಣಿಪುರವು ಜನಾಂಗೀಯ ದ್ವೇಷದ ಜ್ವಾಲೆಯಲ್ಲಿ ಬೇಯುತ್ತಿದೆ. ಇಂತಹ ಈ ಸಂದರ್ಭದಲ್ಲಿ ಒಂದು ಜನಾಂಗ ನಿಷೇಧ ಹೇರಿದ್ದ ಹಿಂದಿ ಸಿನಿಮಾವನ್ನು ಇನ್ನೊಂದು ಜನಾಂಗದವರು ಪ್ರದರ್ಶಿಸಿದ್ದಾರೆ. ಮಣಿಪುರದಲ್ಲಿ ಸುಮಾರು 23 ವರ್ಷಗಳ ಬಳಿಕ ಹಿಂದಿ ಸಿನಿಮಾವೊಂದು ಪ್ರದರ್ಶನ ಕಂಡಿದೆ.

ಮೈತಿ ಸಮುದಾಯದವರು ಮಣಿಪುರದಲ್ಲಿ ಹಿಂದಿ ಸಿನಿಮಾಗೆ ನಿಷೇಧ ಹೇರಿದ್ದರು. ಆದರೆ ಇದೀಗ ಕುಕಿ ಸಮುದಾಯದವರು ‘ಉರಿ: ದಿ ಸರ್ಜಿಕಲ್ ಸ್ಟೈಕ್’ ಸಿನಿಮಾವನ್ನು ಚುರ್ಚಾಂದಪುರದ ರೆಂಗ್‌ ಎಂಬಲ್ಲಿ ತೆರೆದ ಸಿನಿಮಾ ಮಂದಿರದಲ್ಲಿ ಪ್ರದರ್ಶಿಸಿದ್ದಾರೆ. ಚಿತ್ರ ವೀಕ್ಷಣೆಗೆ ದೊಡ್ಡ ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದರು.

ಮಣಿಪುರದಲ್ಲಿ ಹಿಂದಿ ಸಿನಿಮಾ ಪ್ರದರ್ಶನಕ್ಕೆ ಮೈತಿ ಹಾಗೂ ನಾಗಗಳ ಸಂಘಟನೆಯಾದ ‘ರೆವೆಲ್ಯೂಷನರಿ ಪೀಪಲ್ಸ್ ಫ್ರೆಂಟ್’ ನಿಷೇಧ ಹೇರಿತ್ತು. ಹಿಂದಿ ಸಿನಿಮಾ ಹೇರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ 2000ನೇ ಇಸವಿಯ ಸೆಪ್ಟೆಂಬರ್‌ನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಕುಕಿ ಸಮುದಾಯದ ಸಂಘಟನೆಯಾದ ‘ಮಾರ್ ವಿದ್ಯಾರ್ಥಿ ಒಕ್ಕೂಟ’ವು ಮಂಗಳವಾರ ಸಿನಿಮಾ ಪ್ರದರ್ಶನವನ್ನು ಆಯೋಜಿಸಿತ್ತು. 23ವರ್ಷಗಳ ಹಿಂದೆ ರೆವೆಲ್ಯೂಷನರಿ ಪೀಪಲ್ಸ್ ಫ್ರೆಂಟ್ ತೆಗೆದುಕೊಂಡ ನಿರ್ಧಾರಕ್ಕೆ ವಿರುದ್ಧವಾಗಿ ಈ ಸಿನಿಮಾ ಪ್ರದರ್ಶನ ಏರ್ಪಡಿಸಲಾಗಿತ್ತು.

ಈ ಬಗ್ಗೆ ಕುಕಿ ಜನಾಂಗದ ಬೆಂಬಲಿತ ಸಂಘಟನೆ ‘ಇಂಡಿಜೀನಿಯಸ್ ಟ್ರೈಬಲ್ ಲೀಸರ್ಡ್ ಫೋರಂ’ನ ವಕ್ತಾರ ಗಿಂಜಾ ವುಲಾಜೋಂಗ್ ಮಾತನಾಡಿದ್ದು, ”ನಮ್ಮಊರಿನಲ್ಲಿ ಹಿಂದಿ ಸಿನಿಮಾ ಪ್ರದರ್ಶನವಾಗಿ ಎರಡು ದಶಕಗಳು ಕಳೆದಿದ್ದವು. ಸುಮಾರು ವರ್ಷಗಳಿಂದ ಮೈತಿಗಳು ಹಿಂದಿ ಸಿನಿಮಾಗೆ ನಿಷೇಧ ಹೇರಿದ್ದರು. ಮೈತೇಯಿ ಗುಂಪುಗಳ ದೇಶ ವಿರೋಧಿ ನೀತಿಗಳನ್ನು ಧಿಕ್ಕರಿಸುವ ಹಾಗೂ ದೇಶದ ಮೇಲೆ ನಮ್ಮ ಪ್ರೀತಿಯನ್ನು ತೋರಿಸುವ ಸಲುವಾಗಿ ಸಿನಿಮಾ ಪ್ರದರ್ಶನ ಮಾಡಿದ್ದೇವೆ” ಎಂದು ಹೇಳಿದ್ದಾರೆ.

ರಾಜ್ಯ ರಾಜಧಾನಿ ಇಂಫಾಲದಿಂದ 63 ಕಿ.ಮೀ. ದೂರದಲ್ಲಿ ಈ ಘಟನೆ ನಡೆದಿದ್ದು, ಸಿನಿಮಾ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಹಾಡಲಾಯಿತು.

ಮಣಿಪುರದಲ್ಲಿ ಮೇ 3 ರಿಂದ ಆರಂಭವಾದ ಜನಾಂಗೀಯ ಸಂಘರ್ಷದಲ್ಲಿ ಈವರೆಗೂ 180ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. 60 ಸಾವಿರಕ್ಕೂ ಅಧಿಕ ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ಮಣಿಪುರ, ಹರಿಯಾಣದಂತೆ ದೇಶದೆಲ್ಲೆಡೆ ಸಂಘರ್ಷ ಮುಂದುವರಿದರೆ ಭಾರತ ಹೇಗೆ ವಿಶ್ವಗುರುವಾಗುತ್ತದೆ?: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...