Homeಮುಖಪುಟಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಕಪ್ : 28 ವರ್ಷಗಳ ನಂತರ ಪ್ರಶಸ್ತಿ ಬರ ನೀಗಿಸಿಕೊಂಡ...

ಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಕಪ್ : 28 ವರ್ಷಗಳ ನಂತರ ಪ್ರಶಸ್ತಿ ಬರ ನೀಗಿಸಿಕೊಂಡ ಮೆಸ್ಸಿ ಎಂಡ್‌ ಟೀಮ್‌

ನೆಯ್ಮಾರ್ ಕ್ರೀಡಾಂಗಣದಲ್ಲಿ ಕಂಬನಿಗರೆದರೆ, ಮೆಸ್ಸಿ ತನ್ನ ಕಿರಿಯ ಸಹೋದರನನ್ನು ಸಂತೈಸುವಂತೆ ನೆಯ್ಮಾರ್‌ರನ್ನು ಅಪ್ಪಿಕೊಂಡು  ಸಮಾಧಾನ ಹೇಳಿದರು. ಸೋಲು ಗೆಲುವಿನ ನಡುವೆ ಕ್ರೀಡೆ ಮಾಡಬೇಕಿದ್ದ ಕೆಲಸವನ್ನು ಕೋಪಾ ಅಮೆರಿಕ ಸದ್ದಿಲ್ಲದೇ ಮಾಡಿಯಾಗಿತ್ತು.

- Advertisement -
- Advertisement -

ಫುಟ್ಬಾಲ್‌ ದಂತಕತೆ ಮರಡೋನಾ, ವಿಶ್ವ ಶ್ರೇಷ್ಠ ಆಟಗಾರ ಮೆಸ್ಸಿ ಹೀಗೆ ಜಗತ್ತಿಗೆ ಶ್ರೇಷ್ಠ ಫುಟ್ಬಾಲರ್‌ಗಳನ್ನು ನೀಡಿದ ಅರ್ಜೆಂಟೆನಾ ಅಂತರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಪ್ರಶಸ್ತಿಯ ಹಂತಕ್ಕೆ ಹೋಗಿ ಮುಗ್ಗರಿಸುತ್ತಿತ್ತು. ವಿಶ್ವ ಶ್ರೇಷ್ಠ ತಂಡವಾಗಿದ್ದರೂ ಕಳೆದ 28 ವರ್ಷಗಳಿಂದ ಯಾವುದೇ ಮಹತ್ವದ ಕ್ರೀಡಾಕೂಟದಲ್ಲಿ ಚಾಂಪಿಯನ್‌ ಪಟ್ಟವನ್ನು ಧರಿಸಲು ಸಾಧ್ಯವಾಗುತ್ತಿರಲಿಲ್ಲ. ಸರಿ ಸುಮಾರು ಮೂರು ದಶಕಗಳ ಅರ್ಜೆಂಟಿನಾದ ಪ್ರಶಸ್ತಿ ಬರ    ನೀಗಿದೆ. ಇಂದು ಬೆಳಗಿನ ಜಾವ ಬ್ರೆಜಿಲ್‌ನ ರಿಯೋ ಡಿ ಜನೈರೋದ ವಿಶ್ವ ಪ್ರಸಿದ್ಧ ಮೆರಕಾನಾ ಕ್ರೀಡಾಂಗಣದಲ್ಲಿ ನಡೆದ ಕೋಪ ಅಮೆರಿಕಾ ಚಾಂಪಿಯನ್‌ಶಿಪ್‌ ಟ್ರೋಫಿ ಗೆಲ್ಲುವ ಮೂಲಕ ಲಿಯೋನಲ್‌ ಮೆಸ್ಸಿ ನಾಯಕತ್ವದ ತಂಡ ಲ್ಯಾಟಿನ್ ಅಮೆರಿಕದ ಫುಟ್ಬಾಲ್ ಚಾಂಪಿಯನ್‌ ಆಗಿ ಹೊರ ಹೊಮ್ಮಿದೆ.

ಇಂದು ಬೆಳಗಿನ ಜಾವ ನಡೆದ ಬ್ರೆಜಿಲ್ ಮತ್ತು ಅರ್ಜೆಂಟಿನಾ  ತಂಡಗಳ ನಡುವಿನ ಫೈನಲ್‌ ಪಂದ್ಯ ಕೊನೆ  ಕ್ಷಣದವರೆಗೂ ಫುಟ್ಬಾಲ್‌ ಪ್ರೇಮಿಗಳನ್ನು ರೋಚಕತೆಯ ಉತ್ತುಂಗದಲ್ಲಿ ತಂದು ನಿಲ್ಲಿಸಿತ್ತು. ಜಗತ್ತಿನ ಫುಟ್ಬಾಲ್ ಪ್ರೇಮಿಗಳು ಮೆಸ್ಸಿ ಮತ್ತು ನೆಯ್ಮಾರ್‌ ಗೋಲು ಸಿಡಿಸುವುದನ್ನು ನೋಡಲು ಕಾತರದಿಂದ ಕಾಯುತ್ತಿದ್ದರು. ಮೆಸ್ಸಿಯಾಗಲಿ ‍ನೆಯ್ಮಾರ್‌ ಆಗಲಿ ಅಂತಿಮ ಹಣಾಹಣಿಯಲ್ಲಿ ಗೋಲು ಸಿಡಿಸದೇ ಫುಟ್ಬಾಲ್‌ ಪ್ರೇಮಿಗಳನ್ನು ನಿರಾಸೆ ಗೊಳಿಸಿದರು. ಅರ್ಜೆಂಟಿನಾದ ಗೆಲುವಿನ ಗೋಲು ಪಂದ್ಯದ 22 ನಿಮಿಷದಲ್ಲಿ ಎಂಜೆಲ್‌ ಡಿ ಮಾರಿಯಾ ಅವರ ಮೂಲಕ ಬಂತು. ಆಮೂಲಕ ಅರ್ಜೆಂಟಿನಾ 1-0 ಗೋಲುಗಳ ಅಂತರದಲ್ಲಿ ಬ್ರೆಜಿಲ್‌ ತಂಡವನ್ನು ಮಣಿಸಿ ಲ್ಯಾಟಿನ್‌ ಅಮೆರಿಕಾದ  ಪುಟ್ಬಾಲ್‌ ಚಾಂಪಿಯನ್ನು ಪಟ್ಟವನ್ನು ಧರಿಸಿತು.

ಅರ್ಜೆಂಟಿನಾ ಗೆಲುವಿನ ರುವಾರಿ ಅಂಜೆಲ್ ಡಿ ಮಾರಿಯಾ

ಮಿಡ್‌ಫೀಲ್ಡರ್‌ ರೋಡ್ರಿಗೊ ಡಿ ಪಾಲ್ ನೀಡಿದ ಲಾಂಗ್‌ ಪಾಸನ್ನು ಮಾರಿಯೋ ಯಾವುದೇ ಪ್ರಮಾದವಿಲ್ಲದೇ ಬ್ರೆಜಿಲ್‌ನ ಗೋಲು ಪೆಟ್ಟಿಗೆ ತಲುಪಿಸಿದರು. ಆ ಕ್ಷಣ ಅರ್ಜೆಂಟಿನಾ ಪಾಳಯದಲ್ಲಿ ಸಂತಸದ ಕಲರವ ಮುಗಿಲು ಮುಟ್ಟಿತು. ಪಂದ್ಯದ ಅಂತ್ಯದವರೆಗೂ ದಕ್ಷಿಣದ ಅಮೆರಿಕದ ಎರಡು ಶ್ರೇಷ್ಠ ತಂಡಗಳು ಗೋಲು ಗಳಿಸಲು ತೀವ್ರ ಹಣಾಹಣಿ ನಡೆಸಿದವಾದರೂ ಗೋಲ್‌ಕೀಪರ್‌ ಮತ್ತು ಬಲಿಷ್ಠ ರಕ್ಷಣೆಯಿಂದ ಮತ್ತೊಂದು ಗೋಲು ಪಂದ್ಯದಲ್ಲಿ ದಾಖಲಾಗಲಿಲ್ಲ.

ಇದನ್ನೂ ಓದಿ: ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಪಂದ್ಯದ 88 ನೇ ನಿಮಿಷದಲ್ಲಿ  ಲಿಯೋನಲ್‌ ಮೆಸ್ಸಿ ಗೋಲು ಪೆಟ್ಟಿಗೆಯ ಹತ್ತಿರಕ್ಕೆ ಚೆಂಡನ್ನು ತಂದು  ಅಭಿಮಾನಿಗಳು ಒಂದು ಕ್ಷಣ ಉಸಿರನ್ನು ಬಿಗಿಹಿಡಿದು ನಿಲ್ಲುವಂತೆ ಮಾಡಿದರು. ಆದರೆ ಮೆಸ್ಸಿ ಫೈನಲ್‌ನಲ್ಲಿ ಅಭಿಮಾನಿಗಳನ್ನು ನಿರಾಸೆ ಗೊಳಿಸಿದರು. ಇಡೀ  ಪಂದ್ಯದಲ್ಲಿ ಅರ್ಜೆಂಟಿನಾ ಗೋಲು ಪೆಟ್ಟಿಗೆಗೆ ಭದ್ರ ತಡೆಗೋಡೆಯಾಗಿ ನಿಂತು ಪಂದ್ಯವನ್ನು ಗೆಲ್ಲಿಸಿಕೊಟ್ಟಿದ್ದು ಗೋಲ್‌ಕೀಪರ್ ಎಮಿಲಿಯಾನೋ ಮಾರ್ಟಿನೇಜ್‌.  ಫೈನಲ್‌ ಪಂದ್ಯದಲ್ಲಿ ಮಾರ್ಟಿನೇಜ್‌ ತೋರಿದ ಕೆಚ್ಚೆದೆಯ ಪ್ರದರ್ಶನ ಎಂತಹವರನ್ನಾದರೂ ದಂಗುಬಡಿಸದೇ ಇರಲಾರದು. ಬ್ರೆಜಿಲಿಯನ್‌ ಸ್ಟ್ರೈಕರ್‌ಗಳ ಪ್ರಬಲ ದಾಳಿಯನ್ನು ಮೆಟ್ಟಿನಿಂತ ಮಾರ್ಟಿನೇಜ್‌ ಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಟ್ರೋಫಿ ಬರಲು ಮುಖ್ಯ ಕಾರಣ.

ಅರ್ಜೆಂಟಿನಾ ಗೋಲ್‌ಕೀಪರ್‌ ಎಮಿಲಿಯಾನೊ ಡಿ ಮಾರ್ಟಿನೇಜ್‌

ಬ್ರೆಜಿಲ್‌ನಲ್ಲಿ ಫೈನಲ್‌ ಪಂದ್ಯ. ಬ್ರೆಜಿಲ್ ಟ್ರೋಫಿಯಿಂದ ಒಂದು ಹೆಜ್ಜೆಯಷ್ಟೆ ದೂರವಿದೆ. ಆಂತಿಮ ಹಣಾಹಣಿ ಸಾಂಪ್ರದಾಯಿಕ ಎದುರಾಳಿ ಅಜೆಂಟಿನಾ ವಿರುದ್ಧ. ಹಾಗಿದ್ದ ಮೇಲೆ ಬ್ರೆಜಿಲಿಯನ್‌ ಅಭಿಮಾನಿಗಳ ಉತ್ಸಾಹಕ್ಕೆಲ್ಲಿ ತಡೆ ? ಅಂತಿಮ ಕ್ಷಣದ ವರೆಗೂ ಟ್ರೋಫಿ ಗೆಲ್ಲುವ ನಿರೀಕ್ಷೆಯಲ್ಲಿ ನೆರೆದಿದ್ದ ಸಾವಿರಾರು ಬ್ರೆಜಿಲಿಯನ್‌ ಪ್ರೇಕ್ಷಕರ ಕಂಗಳು ಪಂದ್ಯದಂತ್ಯಕ್ಕೆ ಹನಿಗೂಡಿದ್ದವು. ನೆಯ್ಮಾರ್ ಕ್ರೀಡಾಂಗಣದಲ್ಲಿ ಕಂಬನಿಗರೆದರೆ, ಮೆಸ್ಸಿ ತನ್ನ ಕಿರಿಯ ಸಹೋದರನನ್ನು ಸಂತೈಸುವಂತೆ ನೆಯ್ಮಾರ್‌ರನ್ನು ಅಪ್ಪಿಕೊಂಡು  ಸಮಾಧಾನ ಹೇಳಿದರು. ಸೋಲು ಗೆಲುವಿನ ನಡುವೆ ಕ್ರೀಡೆ ಮಾಡಬೇಕಿದ್ದ ಕೆಲಸವನ್ನು ಕೋಪಾ ಅಮೆರಿಕ ಸದ್ದಿಲ್ಲದೇ ಮಾಡಿಯಾಗಿತ್ತು.

ಕೊರೊನಾ ಸಾಂಕ್ರಾಮಿಕದ ನಡುವೆಯೂ ಜಗತ್ತಿನ ಅತಿ ಹಳೆಯ ಫುಟ್ಬಾಲ್‌ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಬ್ರೆಜಿಲ್ ಸರ್ಕಾರ ಮತ್ತು ಬ್ರೆಜಿಲಿಯನ್‌ ಫುಟ್ಬಾಲ್‌ ಫೆಡರೇಷನ್‌ ನಿಜಕ್ಕೂ ಅಭಿನಂದನೆಗೆ ಅರ್ಹರು. ಕ್ರೀಡಾಕೂಟದ ಆರಂಭದಲ್ಲಿ ಬ್ರೆಜಿಲ್‌ನಲ್ಲಿ ನಡೆದ ಪ್ರತಿಭಟನೆಯನ್ನೆಲ್ಲ ಫುಟ್ಬಾಲ್ ತನ್ನ ತೆಕ್ಕೆಯಲ್ಲಿ ಕರಗಿಸಿಕೊಂಡಿದ್ದು ವಿಶೇಷ.

ಇದನ್ನೂ ಓದಿ: ಡಿಯಾಗೋ ಮರಡೋನಾ: ಫುಟ್‌ಬಾಲ್ ಲೋಕವನ್ನು ಪ್ರಜ್ವಲಿಸಿದ ಅದ್ಭುತ ಮಾಂತ್ರಿಕ

 2014ರಲ್ಲಿ ಇದೇ ಮೆರಕಾನಾ ಕ್ರೀಡಾಂಗಣದಲ್ಲಿ ಫುಟ್ಬಾಲ್‌ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಅರ್ಜೆಂಟಿನಾ ತಂಡ ಜರ್ಮನಿ ವಿರುದ್ಧ ಪಾರಾಭಾವಗೊಂಡು ನಿರಾಸೆಗೊಳಗಾಗಿತ್ತು. ಇಂದು 2014ರ ಅರ್ಜೆಂಟಿನಾದ  ನಿರಾಸೆಯನ್ನು ಅದೇ ಮೆರಕಾನಾ ಕ್ರೀಡಾಂಗಣ ಮರೆಸಿದೆ.

ವಿಶ್ವ ಫುಟ್ಬಾಲ್‌ನ ಮುಕುಟಮಣಿಯಾಗಿ ಕಂಗೊಳಿಸುತ್ತಿರವ ಮೆಸ್ಸಿ ಕ್ಲಬ್‌ ಫುಟ್ಬಾಲ್‌ನಲ್ಲಿ ಇದುವರೆಗೆ ನೂರಾರು ಪ್ರಶಸ್ತಿಗಳನ್ನು ಹತ್ತಾರು ಚಾಂಪಿಯನ್‌ ಶಿಫ್‌ ಜಯಿಸಿದ್ದಾರೆ. ಆದರೆ ಅರ್ಜೆಂಟಿನಾದ ಬಿಳಿ ನೀಲಿ ಪಟ್ಟೆಯ ಜೆರ್ಸಿ ತೊಟ್ಟು ದೇಶಕ್ಕೆ ಟ್ರೋಫಿ ಗೆಲ್ಲುವ  ಮೆಸ್ಸಿ ಕನಸು ಇದುವರೆಗೆ ಈಡೇರಿರಲಿಲ್ಲ. ಇಂದು ಮೆಸ್ಸಿ ಮತ್ತು ಅರ್ಜೆಂಟಿನಾದ ದೀರ್ಘಕಾಲದ ಟ್ರೊಫಿ ಕನಸು ನನಸಾಗಿದೆ . ಈ ರೋಚಕ ಪಂದ್ಯವನ್ನು ಗೆಲ್ಲುತ್ತಿದ್ದಂತೆಯೇ ಅರ್ಜೆಂಟಿನಾ ಆಟಗಾರರು ಮೆಸ್ಸಿಯನ್ನು ಮೇಲಕ್ಕೆ ಚಿಮ್ಮಿಸಿ ಸಂಭ್ರಮಿಸಿದ ಕ್ಷಣ ವಿಶ್ವ ಫುಟ್ಬಾಲ್ ಇತಿಹಾಸದಲ್ಲಿ ಅಚ್ಚಳಿಯದ ದಾಖಲೆಯಾಗಿ ಸೇರ್ಪಡೆಗೊಂಡಿತು.

ಅರ್ಜೆಂಟಿನಾ ಆಟಗಾರರು ಮೆಸ್ಸಿಯನ್ನು ಮೇಲಕ್ಕೆ ಚಿಮ್ಮಿಸಿ ಸಂಭ್ರಮಿಸಿದ ಕ್ಷಣ

2016 ರ ಜುಲೈ ೧೦ ರಂದು ಅಂದರೆ ಇಂದಿಗೆ ೫ ವರ್ಷ ಮೊದಲು ಫುಟ್ಬಾಲ್ ಕ್ರೀಡೆಯ ಮತ್ತೊಬ್ಬ ಶ್ರೇಷ್ಠ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ನೇತೃತ್ವದ ಪೋರ್ಚುಗಲ್ ಯುರೋಪಿಯನ್ ಚಾಂಪಿಯಾನ್‌ ಆಗಿ ಹೊರಹೊಮ್ಮಿತ್ತು. ರೊನಾಲ್ಡೋ ಗೆಲುವಿಗೂ ಪೋರ್ಚುಗಲ್‌ ಅಭಿಮಾನಿಗಳು ಹೀಗೆಯೇ ಸಂಭ್ರಮಿಸಿದ್ದರು.

ನಿವೃತ್ತಿಯ ಅಂಚಿನಲ್ಲಿರುವ ಫುಟ್ಬಾಲ್‌ ಜಗತ್ತಿನ ಇಬ್ಬರು ಶ್ರೇಷ್ಠ ಆಟಗಾರರಾದ ಮೆಸ್ಸಿ ಮತ್ತು ರೊನಾಲ್ಡೋ ಇನ್ನೆಷ್ಟು ವರ್ಷ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆಂಬುದು ತಿಳಿದಿಲ್ಲ. ವರ್ಷಗಳ ಹಿಂದೆ ನಿವೃತ್ತಿಯ ನಿರ್ಧಾರ ಮಾಡಿದ್ದ ಮೆಸ್ಸಿ ಅಭಿಮಾನಿಗಳ ಒತ್ತಾಯ ಮತ್ತು ದೇಶಕ್ಕಾಗಿ ಟ್ರೋಫಿ ಗೆಲ್ಲುವ ಕನಸಿನಿಂದ ತಮ್ಮ ನಿವೃತ್ತಿಯಿಂದ ಹಿಂದೆ ಸರಿದಿದ್ದರು.

 -ರಾಜೇಶ್ ಹೆಬ್ಬಾರ್‌

  ಇದನ್ನೂ ಓದಿ: ವಿಂಬಲ್ಡನ್ ಟೆನಿಸ್ ಟೂರ್ನಿ ಆರಂಭ; ಇಲ್ಲ ಭಾರತದ ಪ್ರಾತಿನಿಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...