Homeಮುಖಪುಟಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಕಪ್ : 28 ವರ್ಷಗಳ ನಂತರ ಪ್ರಶಸ್ತಿ ಬರ ನೀಗಿಸಿಕೊಂಡ...

ಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಕಪ್ : 28 ವರ್ಷಗಳ ನಂತರ ಪ್ರಶಸ್ತಿ ಬರ ನೀಗಿಸಿಕೊಂಡ ಮೆಸ್ಸಿ ಎಂಡ್‌ ಟೀಮ್‌

ನೆಯ್ಮಾರ್ ಕ್ರೀಡಾಂಗಣದಲ್ಲಿ ಕಂಬನಿಗರೆದರೆ, ಮೆಸ್ಸಿ ತನ್ನ ಕಿರಿಯ ಸಹೋದರನನ್ನು ಸಂತೈಸುವಂತೆ ನೆಯ್ಮಾರ್‌ರನ್ನು ಅಪ್ಪಿಕೊಂಡು  ಸಮಾಧಾನ ಹೇಳಿದರು. ಸೋಲು ಗೆಲುವಿನ ನಡುವೆ ಕ್ರೀಡೆ ಮಾಡಬೇಕಿದ್ದ ಕೆಲಸವನ್ನು ಕೋಪಾ ಅಮೆರಿಕ ಸದ್ದಿಲ್ಲದೇ ಮಾಡಿಯಾಗಿತ್ತು.

- Advertisement -
- Advertisement -

ಫುಟ್ಬಾಲ್‌ ದಂತಕತೆ ಮರಡೋನಾ, ವಿಶ್ವ ಶ್ರೇಷ್ಠ ಆಟಗಾರ ಮೆಸ್ಸಿ ಹೀಗೆ ಜಗತ್ತಿಗೆ ಶ್ರೇಷ್ಠ ಫುಟ್ಬಾಲರ್‌ಗಳನ್ನು ನೀಡಿದ ಅರ್ಜೆಂಟೆನಾ ಅಂತರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಪ್ರಶಸ್ತಿಯ ಹಂತಕ್ಕೆ ಹೋಗಿ ಮುಗ್ಗರಿಸುತ್ತಿತ್ತು. ವಿಶ್ವ ಶ್ರೇಷ್ಠ ತಂಡವಾಗಿದ್ದರೂ ಕಳೆದ 28 ವರ್ಷಗಳಿಂದ ಯಾವುದೇ ಮಹತ್ವದ ಕ್ರೀಡಾಕೂಟದಲ್ಲಿ ಚಾಂಪಿಯನ್‌ ಪಟ್ಟವನ್ನು ಧರಿಸಲು ಸಾಧ್ಯವಾಗುತ್ತಿರಲಿಲ್ಲ. ಸರಿ ಸುಮಾರು ಮೂರು ದಶಕಗಳ ಅರ್ಜೆಂಟಿನಾದ ಪ್ರಶಸ್ತಿ ಬರ    ನೀಗಿದೆ. ಇಂದು ಬೆಳಗಿನ ಜಾವ ಬ್ರೆಜಿಲ್‌ನ ರಿಯೋ ಡಿ ಜನೈರೋದ ವಿಶ್ವ ಪ್ರಸಿದ್ಧ ಮೆರಕಾನಾ ಕ್ರೀಡಾಂಗಣದಲ್ಲಿ ನಡೆದ ಕೋಪ ಅಮೆರಿಕಾ ಚಾಂಪಿಯನ್‌ಶಿಪ್‌ ಟ್ರೋಫಿ ಗೆಲ್ಲುವ ಮೂಲಕ ಲಿಯೋನಲ್‌ ಮೆಸ್ಸಿ ನಾಯಕತ್ವದ ತಂಡ ಲ್ಯಾಟಿನ್ ಅಮೆರಿಕದ ಫುಟ್ಬಾಲ್ ಚಾಂಪಿಯನ್‌ ಆಗಿ ಹೊರ ಹೊಮ್ಮಿದೆ.

ಇಂದು ಬೆಳಗಿನ ಜಾವ ನಡೆದ ಬ್ರೆಜಿಲ್ ಮತ್ತು ಅರ್ಜೆಂಟಿನಾ  ತಂಡಗಳ ನಡುವಿನ ಫೈನಲ್‌ ಪಂದ್ಯ ಕೊನೆ  ಕ್ಷಣದವರೆಗೂ ಫುಟ್ಬಾಲ್‌ ಪ್ರೇಮಿಗಳನ್ನು ರೋಚಕತೆಯ ಉತ್ತುಂಗದಲ್ಲಿ ತಂದು ನಿಲ್ಲಿಸಿತ್ತು. ಜಗತ್ತಿನ ಫುಟ್ಬಾಲ್ ಪ್ರೇಮಿಗಳು ಮೆಸ್ಸಿ ಮತ್ತು ನೆಯ್ಮಾರ್‌ ಗೋಲು ಸಿಡಿಸುವುದನ್ನು ನೋಡಲು ಕಾತರದಿಂದ ಕಾಯುತ್ತಿದ್ದರು. ಮೆಸ್ಸಿಯಾಗಲಿ ‍ನೆಯ್ಮಾರ್‌ ಆಗಲಿ ಅಂತಿಮ ಹಣಾಹಣಿಯಲ್ಲಿ ಗೋಲು ಸಿಡಿಸದೇ ಫುಟ್ಬಾಲ್‌ ಪ್ರೇಮಿಗಳನ್ನು ನಿರಾಸೆ ಗೊಳಿಸಿದರು. ಅರ್ಜೆಂಟಿನಾದ ಗೆಲುವಿನ ಗೋಲು ಪಂದ್ಯದ 22 ನಿಮಿಷದಲ್ಲಿ ಎಂಜೆಲ್‌ ಡಿ ಮಾರಿಯಾ ಅವರ ಮೂಲಕ ಬಂತು. ಆಮೂಲಕ ಅರ್ಜೆಂಟಿನಾ 1-0 ಗೋಲುಗಳ ಅಂತರದಲ್ಲಿ ಬ್ರೆಜಿಲ್‌ ತಂಡವನ್ನು ಮಣಿಸಿ ಲ್ಯಾಟಿನ್‌ ಅಮೆರಿಕಾದ  ಪುಟ್ಬಾಲ್‌ ಚಾಂಪಿಯನ್ನು ಪಟ್ಟವನ್ನು ಧರಿಸಿತು.

ಅರ್ಜೆಂಟಿನಾ ಗೆಲುವಿನ ರುವಾರಿ ಅಂಜೆಲ್ ಡಿ ಮಾರಿಯಾ

ಮಿಡ್‌ಫೀಲ್ಡರ್‌ ರೋಡ್ರಿಗೊ ಡಿ ಪಾಲ್ ನೀಡಿದ ಲಾಂಗ್‌ ಪಾಸನ್ನು ಮಾರಿಯೋ ಯಾವುದೇ ಪ್ರಮಾದವಿಲ್ಲದೇ ಬ್ರೆಜಿಲ್‌ನ ಗೋಲು ಪೆಟ್ಟಿಗೆ ತಲುಪಿಸಿದರು. ಆ ಕ್ಷಣ ಅರ್ಜೆಂಟಿನಾ ಪಾಳಯದಲ್ಲಿ ಸಂತಸದ ಕಲರವ ಮುಗಿಲು ಮುಟ್ಟಿತು. ಪಂದ್ಯದ ಅಂತ್ಯದವರೆಗೂ ದಕ್ಷಿಣದ ಅಮೆರಿಕದ ಎರಡು ಶ್ರೇಷ್ಠ ತಂಡಗಳು ಗೋಲು ಗಳಿಸಲು ತೀವ್ರ ಹಣಾಹಣಿ ನಡೆಸಿದವಾದರೂ ಗೋಲ್‌ಕೀಪರ್‌ ಮತ್ತು ಬಲಿಷ್ಠ ರಕ್ಷಣೆಯಿಂದ ಮತ್ತೊಂದು ಗೋಲು ಪಂದ್ಯದಲ್ಲಿ ದಾಖಲಾಗಲಿಲ್ಲ.

ಇದನ್ನೂ ಓದಿ: ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಪಂದ್ಯದ 88 ನೇ ನಿಮಿಷದಲ್ಲಿ  ಲಿಯೋನಲ್‌ ಮೆಸ್ಸಿ ಗೋಲು ಪೆಟ್ಟಿಗೆಯ ಹತ್ತಿರಕ್ಕೆ ಚೆಂಡನ್ನು ತಂದು  ಅಭಿಮಾನಿಗಳು ಒಂದು ಕ್ಷಣ ಉಸಿರನ್ನು ಬಿಗಿಹಿಡಿದು ನಿಲ್ಲುವಂತೆ ಮಾಡಿದರು. ಆದರೆ ಮೆಸ್ಸಿ ಫೈನಲ್‌ನಲ್ಲಿ ಅಭಿಮಾನಿಗಳನ್ನು ನಿರಾಸೆ ಗೊಳಿಸಿದರು. ಇಡೀ  ಪಂದ್ಯದಲ್ಲಿ ಅರ್ಜೆಂಟಿನಾ ಗೋಲು ಪೆಟ್ಟಿಗೆಗೆ ಭದ್ರ ತಡೆಗೋಡೆಯಾಗಿ ನಿಂತು ಪಂದ್ಯವನ್ನು ಗೆಲ್ಲಿಸಿಕೊಟ್ಟಿದ್ದು ಗೋಲ್‌ಕೀಪರ್ ಎಮಿಲಿಯಾನೋ ಮಾರ್ಟಿನೇಜ್‌.  ಫೈನಲ್‌ ಪಂದ್ಯದಲ್ಲಿ ಮಾರ್ಟಿನೇಜ್‌ ತೋರಿದ ಕೆಚ್ಚೆದೆಯ ಪ್ರದರ್ಶನ ಎಂತಹವರನ್ನಾದರೂ ದಂಗುಬಡಿಸದೇ ಇರಲಾರದು. ಬ್ರೆಜಿಲಿಯನ್‌ ಸ್ಟ್ರೈಕರ್‌ಗಳ ಪ್ರಬಲ ದಾಳಿಯನ್ನು ಮೆಟ್ಟಿನಿಂತ ಮಾರ್ಟಿನೇಜ್‌ ಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಟ್ರೋಫಿ ಬರಲು ಮುಖ್ಯ ಕಾರಣ.

ಅರ್ಜೆಂಟಿನಾ ಗೋಲ್‌ಕೀಪರ್‌ ಎಮಿಲಿಯಾನೊ ಡಿ ಮಾರ್ಟಿನೇಜ್‌

ಬ್ರೆಜಿಲ್‌ನಲ್ಲಿ ಫೈನಲ್‌ ಪಂದ್ಯ. ಬ್ರೆಜಿಲ್ ಟ್ರೋಫಿಯಿಂದ ಒಂದು ಹೆಜ್ಜೆಯಷ್ಟೆ ದೂರವಿದೆ. ಆಂತಿಮ ಹಣಾಹಣಿ ಸಾಂಪ್ರದಾಯಿಕ ಎದುರಾಳಿ ಅಜೆಂಟಿನಾ ವಿರುದ್ಧ. ಹಾಗಿದ್ದ ಮೇಲೆ ಬ್ರೆಜಿಲಿಯನ್‌ ಅಭಿಮಾನಿಗಳ ಉತ್ಸಾಹಕ್ಕೆಲ್ಲಿ ತಡೆ ? ಅಂತಿಮ ಕ್ಷಣದ ವರೆಗೂ ಟ್ರೋಫಿ ಗೆಲ್ಲುವ ನಿರೀಕ್ಷೆಯಲ್ಲಿ ನೆರೆದಿದ್ದ ಸಾವಿರಾರು ಬ್ರೆಜಿಲಿಯನ್‌ ಪ್ರೇಕ್ಷಕರ ಕಂಗಳು ಪಂದ್ಯದಂತ್ಯಕ್ಕೆ ಹನಿಗೂಡಿದ್ದವು. ನೆಯ್ಮಾರ್ ಕ್ರೀಡಾಂಗಣದಲ್ಲಿ ಕಂಬನಿಗರೆದರೆ, ಮೆಸ್ಸಿ ತನ್ನ ಕಿರಿಯ ಸಹೋದರನನ್ನು ಸಂತೈಸುವಂತೆ ನೆಯ್ಮಾರ್‌ರನ್ನು ಅಪ್ಪಿಕೊಂಡು  ಸಮಾಧಾನ ಹೇಳಿದರು. ಸೋಲು ಗೆಲುವಿನ ನಡುವೆ ಕ್ರೀಡೆ ಮಾಡಬೇಕಿದ್ದ ಕೆಲಸವನ್ನು ಕೋಪಾ ಅಮೆರಿಕ ಸದ್ದಿಲ್ಲದೇ ಮಾಡಿಯಾಗಿತ್ತು.

ಕೊರೊನಾ ಸಾಂಕ್ರಾಮಿಕದ ನಡುವೆಯೂ ಜಗತ್ತಿನ ಅತಿ ಹಳೆಯ ಫುಟ್ಬಾಲ್‌ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಬ್ರೆಜಿಲ್ ಸರ್ಕಾರ ಮತ್ತು ಬ್ರೆಜಿಲಿಯನ್‌ ಫುಟ್ಬಾಲ್‌ ಫೆಡರೇಷನ್‌ ನಿಜಕ್ಕೂ ಅಭಿನಂದನೆಗೆ ಅರ್ಹರು. ಕ್ರೀಡಾಕೂಟದ ಆರಂಭದಲ್ಲಿ ಬ್ರೆಜಿಲ್‌ನಲ್ಲಿ ನಡೆದ ಪ್ರತಿಭಟನೆಯನ್ನೆಲ್ಲ ಫುಟ್ಬಾಲ್ ತನ್ನ ತೆಕ್ಕೆಯಲ್ಲಿ ಕರಗಿಸಿಕೊಂಡಿದ್ದು ವಿಶೇಷ.

ಇದನ್ನೂ ಓದಿ: ಡಿಯಾಗೋ ಮರಡೋನಾ: ಫುಟ್‌ಬಾಲ್ ಲೋಕವನ್ನು ಪ್ರಜ್ವಲಿಸಿದ ಅದ್ಭುತ ಮಾಂತ್ರಿಕ

 2014ರಲ್ಲಿ ಇದೇ ಮೆರಕಾನಾ ಕ್ರೀಡಾಂಗಣದಲ್ಲಿ ಫುಟ್ಬಾಲ್‌ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಅರ್ಜೆಂಟಿನಾ ತಂಡ ಜರ್ಮನಿ ವಿರುದ್ಧ ಪಾರಾಭಾವಗೊಂಡು ನಿರಾಸೆಗೊಳಗಾಗಿತ್ತು. ಇಂದು 2014ರ ಅರ್ಜೆಂಟಿನಾದ  ನಿರಾಸೆಯನ್ನು ಅದೇ ಮೆರಕಾನಾ ಕ್ರೀಡಾಂಗಣ ಮರೆಸಿದೆ.

ವಿಶ್ವ ಫುಟ್ಬಾಲ್‌ನ ಮುಕುಟಮಣಿಯಾಗಿ ಕಂಗೊಳಿಸುತ್ತಿರವ ಮೆಸ್ಸಿ ಕ್ಲಬ್‌ ಫುಟ್ಬಾಲ್‌ನಲ್ಲಿ ಇದುವರೆಗೆ ನೂರಾರು ಪ್ರಶಸ್ತಿಗಳನ್ನು ಹತ್ತಾರು ಚಾಂಪಿಯನ್‌ ಶಿಫ್‌ ಜಯಿಸಿದ್ದಾರೆ. ಆದರೆ ಅರ್ಜೆಂಟಿನಾದ ಬಿಳಿ ನೀಲಿ ಪಟ್ಟೆಯ ಜೆರ್ಸಿ ತೊಟ್ಟು ದೇಶಕ್ಕೆ ಟ್ರೋಫಿ ಗೆಲ್ಲುವ  ಮೆಸ್ಸಿ ಕನಸು ಇದುವರೆಗೆ ಈಡೇರಿರಲಿಲ್ಲ. ಇಂದು ಮೆಸ್ಸಿ ಮತ್ತು ಅರ್ಜೆಂಟಿನಾದ ದೀರ್ಘಕಾಲದ ಟ್ರೊಫಿ ಕನಸು ನನಸಾಗಿದೆ . ಈ ರೋಚಕ ಪಂದ್ಯವನ್ನು ಗೆಲ್ಲುತ್ತಿದ್ದಂತೆಯೇ ಅರ್ಜೆಂಟಿನಾ ಆಟಗಾರರು ಮೆಸ್ಸಿಯನ್ನು ಮೇಲಕ್ಕೆ ಚಿಮ್ಮಿಸಿ ಸಂಭ್ರಮಿಸಿದ ಕ್ಷಣ ವಿಶ್ವ ಫುಟ್ಬಾಲ್ ಇತಿಹಾಸದಲ್ಲಿ ಅಚ್ಚಳಿಯದ ದಾಖಲೆಯಾಗಿ ಸೇರ್ಪಡೆಗೊಂಡಿತು.

ಅರ್ಜೆಂಟಿನಾ ಆಟಗಾರರು ಮೆಸ್ಸಿಯನ್ನು ಮೇಲಕ್ಕೆ ಚಿಮ್ಮಿಸಿ ಸಂಭ್ರಮಿಸಿದ ಕ್ಷಣ

2016 ರ ಜುಲೈ ೧೦ ರಂದು ಅಂದರೆ ಇಂದಿಗೆ ೫ ವರ್ಷ ಮೊದಲು ಫುಟ್ಬಾಲ್ ಕ್ರೀಡೆಯ ಮತ್ತೊಬ್ಬ ಶ್ರೇಷ್ಠ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ನೇತೃತ್ವದ ಪೋರ್ಚುಗಲ್ ಯುರೋಪಿಯನ್ ಚಾಂಪಿಯಾನ್‌ ಆಗಿ ಹೊರಹೊಮ್ಮಿತ್ತು. ರೊನಾಲ್ಡೋ ಗೆಲುವಿಗೂ ಪೋರ್ಚುಗಲ್‌ ಅಭಿಮಾನಿಗಳು ಹೀಗೆಯೇ ಸಂಭ್ರಮಿಸಿದ್ದರು.

ನಿವೃತ್ತಿಯ ಅಂಚಿನಲ್ಲಿರುವ ಫುಟ್ಬಾಲ್‌ ಜಗತ್ತಿನ ಇಬ್ಬರು ಶ್ರೇಷ್ಠ ಆಟಗಾರರಾದ ಮೆಸ್ಸಿ ಮತ್ತು ರೊನಾಲ್ಡೋ ಇನ್ನೆಷ್ಟು ವರ್ಷ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆಂಬುದು ತಿಳಿದಿಲ್ಲ. ವರ್ಷಗಳ ಹಿಂದೆ ನಿವೃತ್ತಿಯ ನಿರ್ಧಾರ ಮಾಡಿದ್ದ ಮೆಸ್ಸಿ ಅಭಿಮಾನಿಗಳ ಒತ್ತಾಯ ಮತ್ತು ದೇಶಕ್ಕಾಗಿ ಟ್ರೋಫಿ ಗೆಲ್ಲುವ ಕನಸಿನಿಂದ ತಮ್ಮ ನಿವೃತ್ತಿಯಿಂದ ಹಿಂದೆ ಸರಿದಿದ್ದರು.

 -ರಾಜೇಶ್ ಹೆಬ್ಬಾರ್‌

  ಇದನ್ನೂ ಓದಿ: ವಿಂಬಲ್ಡನ್ ಟೆನಿಸ್ ಟೂರ್ನಿ ಆರಂಭ; ಇಲ್ಲ ಭಾರತದ ಪ್ರಾತಿನಿಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...