Homeಮುಖಪುಟಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಕಪ್ : 28 ವರ್ಷಗಳ ನಂತರ ಪ್ರಶಸ್ತಿ ಬರ ನೀಗಿಸಿಕೊಂಡ...

ಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಕಪ್ : 28 ವರ್ಷಗಳ ನಂತರ ಪ್ರಶಸ್ತಿ ಬರ ನೀಗಿಸಿಕೊಂಡ ಮೆಸ್ಸಿ ಎಂಡ್‌ ಟೀಮ್‌

ನೆಯ್ಮಾರ್ ಕ್ರೀಡಾಂಗಣದಲ್ಲಿ ಕಂಬನಿಗರೆದರೆ, ಮೆಸ್ಸಿ ತನ್ನ ಕಿರಿಯ ಸಹೋದರನನ್ನು ಸಂತೈಸುವಂತೆ ನೆಯ್ಮಾರ್‌ರನ್ನು ಅಪ್ಪಿಕೊಂಡು  ಸಮಾಧಾನ ಹೇಳಿದರು. ಸೋಲು ಗೆಲುವಿನ ನಡುವೆ ಕ್ರೀಡೆ ಮಾಡಬೇಕಿದ್ದ ಕೆಲಸವನ್ನು ಕೋಪಾ ಅಮೆರಿಕ ಸದ್ದಿಲ್ಲದೇ ಮಾಡಿಯಾಗಿತ್ತು.

- Advertisement -
- Advertisement -

ಫುಟ್ಬಾಲ್‌ ದಂತಕತೆ ಮರಡೋನಾ, ವಿಶ್ವ ಶ್ರೇಷ್ಠ ಆಟಗಾರ ಮೆಸ್ಸಿ ಹೀಗೆ ಜಗತ್ತಿಗೆ ಶ್ರೇಷ್ಠ ಫುಟ್ಬಾಲರ್‌ಗಳನ್ನು ನೀಡಿದ ಅರ್ಜೆಂಟೆನಾ ಅಂತರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಪ್ರಶಸ್ತಿಯ ಹಂತಕ್ಕೆ ಹೋಗಿ ಮುಗ್ಗರಿಸುತ್ತಿತ್ತು. ವಿಶ್ವ ಶ್ರೇಷ್ಠ ತಂಡವಾಗಿದ್ದರೂ ಕಳೆದ 28 ವರ್ಷಗಳಿಂದ ಯಾವುದೇ ಮಹತ್ವದ ಕ್ರೀಡಾಕೂಟದಲ್ಲಿ ಚಾಂಪಿಯನ್‌ ಪಟ್ಟವನ್ನು ಧರಿಸಲು ಸಾಧ್ಯವಾಗುತ್ತಿರಲಿಲ್ಲ. ಸರಿ ಸುಮಾರು ಮೂರು ದಶಕಗಳ ಅರ್ಜೆಂಟಿನಾದ ಪ್ರಶಸ್ತಿ ಬರ    ನೀಗಿದೆ. ಇಂದು ಬೆಳಗಿನ ಜಾವ ಬ್ರೆಜಿಲ್‌ನ ರಿಯೋ ಡಿ ಜನೈರೋದ ವಿಶ್ವ ಪ್ರಸಿದ್ಧ ಮೆರಕಾನಾ ಕ್ರೀಡಾಂಗಣದಲ್ಲಿ ನಡೆದ ಕೋಪ ಅಮೆರಿಕಾ ಚಾಂಪಿಯನ್‌ಶಿಪ್‌ ಟ್ರೋಫಿ ಗೆಲ್ಲುವ ಮೂಲಕ ಲಿಯೋನಲ್‌ ಮೆಸ್ಸಿ ನಾಯಕತ್ವದ ತಂಡ ಲ್ಯಾಟಿನ್ ಅಮೆರಿಕದ ಫುಟ್ಬಾಲ್ ಚಾಂಪಿಯನ್‌ ಆಗಿ ಹೊರ ಹೊಮ್ಮಿದೆ.

ಇಂದು ಬೆಳಗಿನ ಜಾವ ನಡೆದ ಬ್ರೆಜಿಲ್ ಮತ್ತು ಅರ್ಜೆಂಟಿನಾ  ತಂಡಗಳ ನಡುವಿನ ಫೈನಲ್‌ ಪಂದ್ಯ ಕೊನೆ  ಕ್ಷಣದವರೆಗೂ ಫುಟ್ಬಾಲ್‌ ಪ್ರೇಮಿಗಳನ್ನು ರೋಚಕತೆಯ ಉತ್ತುಂಗದಲ್ಲಿ ತಂದು ನಿಲ್ಲಿಸಿತ್ತು. ಜಗತ್ತಿನ ಫುಟ್ಬಾಲ್ ಪ್ರೇಮಿಗಳು ಮೆಸ್ಸಿ ಮತ್ತು ನೆಯ್ಮಾರ್‌ ಗೋಲು ಸಿಡಿಸುವುದನ್ನು ನೋಡಲು ಕಾತರದಿಂದ ಕಾಯುತ್ತಿದ್ದರು. ಮೆಸ್ಸಿಯಾಗಲಿ ‍ನೆಯ್ಮಾರ್‌ ಆಗಲಿ ಅಂತಿಮ ಹಣಾಹಣಿಯಲ್ಲಿ ಗೋಲು ಸಿಡಿಸದೇ ಫುಟ್ಬಾಲ್‌ ಪ್ರೇಮಿಗಳನ್ನು ನಿರಾಸೆ ಗೊಳಿಸಿದರು. ಅರ್ಜೆಂಟಿನಾದ ಗೆಲುವಿನ ಗೋಲು ಪಂದ್ಯದ 22 ನಿಮಿಷದಲ್ಲಿ ಎಂಜೆಲ್‌ ಡಿ ಮಾರಿಯಾ ಅವರ ಮೂಲಕ ಬಂತು. ಆಮೂಲಕ ಅರ್ಜೆಂಟಿನಾ 1-0 ಗೋಲುಗಳ ಅಂತರದಲ್ಲಿ ಬ್ರೆಜಿಲ್‌ ತಂಡವನ್ನು ಮಣಿಸಿ ಲ್ಯಾಟಿನ್‌ ಅಮೆರಿಕಾದ  ಪುಟ್ಬಾಲ್‌ ಚಾಂಪಿಯನ್ನು ಪಟ್ಟವನ್ನು ಧರಿಸಿತು.

ಅರ್ಜೆಂಟಿನಾ ಗೆಲುವಿನ ರುವಾರಿ ಅಂಜೆಲ್ ಡಿ ಮಾರಿಯಾ

ಮಿಡ್‌ಫೀಲ್ಡರ್‌ ರೋಡ್ರಿಗೊ ಡಿ ಪಾಲ್ ನೀಡಿದ ಲಾಂಗ್‌ ಪಾಸನ್ನು ಮಾರಿಯೋ ಯಾವುದೇ ಪ್ರಮಾದವಿಲ್ಲದೇ ಬ್ರೆಜಿಲ್‌ನ ಗೋಲು ಪೆಟ್ಟಿಗೆ ತಲುಪಿಸಿದರು. ಆ ಕ್ಷಣ ಅರ್ಜೆಂಟಿನಾ ಪಾಳಯದಲ್ಲಿ ಸಂತಸದ ಕಲರವ ಮುಗಿಲು ಮುಟ್ಟಿತು. ಪಂದ್ಯದ ಅಂತ್ಯದವರೆಗೂ ದಕ್ಷಿಣದ ಅಮೆರಿಕದ ಎರಡು ಶ್ರೇಷ್ಠ ತಂಡಗಳು ಗೋಲು ಗಳಿಸಲು ತೀವ್ರ ಹಣಾಹಣಿ ನಡೆಸಿದವಾದರೂ ಗೋಲ್‌ಕೀಪರ್‌ ಮತ್ತು ಬಲಿಷ್ಠ ರಕ್ಷಣೆಯಿಂದ ಮತ್ತೊಂದು ಗೋಲು ಪಂದ್ಯದಲ್ಲಿ ದಾಖಲಾಗಲಿಲ್ಲ.

ಇದನ್ನೂ ಓದಿ: ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಪಂದ್ಯದ 88 ನೇ ನಿಮಿಷದಲ್ಲಿ  ಲಿಯೋನಲ್‌ ಮೆಸ್ಸಿ ಗೋಲು ಪೆಟ್ಟಿಗೆಯ ಹತ್ತಿರಕ್ಕೆ ಚೆಂಡನ್ನು ತಂದು  ಅಭಿಮಾನಿಗಳು ಒಂದು ಕ್ಷಣ ಉಸಿರನ್ನು ಬಿಗಿಹಿಡಿದು ನಿಲ್ಲುವಂತೆ ಮಾಡಿದರು. ಆದರೆ ಮೆಸ್ಸಿ ಫೈನಲ್‌ನಲ್ಲಿ ಅಭಿಮಾನಿಗಳನ್ನು ನಿರಾಸೆ ಗೊಳಿಸಿದರು. ಇಡೀ  ಪಂದ್ಯದಲ್ಲಿ ಅರ್ಜೆಂಟಿನಾ ಗೋಲು ಪೆಟ್ಟಿಗೆಗೆ ಭದ್ರ ತಡೆಗೋಡೆಯಾಗಿ ನಿಂತು ಪಂದ್ಯವನ್ನು ಗೆಲ್ಲಿಸಿಕೊಟ್ಟಿದ್ದು ಗೋಲ್‌ಕೀಪರ್ ಎಮಿಲಿಯಾನೋ ಮಾರ್ಟಿನೇಜ್‌.  ಫೈನಲ್‌ ಪಂದ್ಯದಲ್ಲಿ ಮಾರ್ಟಿನೇಜ್‌ ತೋರಿದ ಕೆಚ್ಚೆದೆಯ ಪ್ರದರ್ಶನ ಎಂತಹವರನ್ನಾದರೂ ದಂಗುಬಡಿಸದೇ ಇರಲಾರದು. ಬ್ರೆಜಿಲಿಯನ್‌ ಸ್ಟ್ರೈಕರ್‌ಗಳ ಪ್ರಬಲ ದಾಳಿಯನ್ನು ಮೆಟ್ಟಿನಿಂತ ಮಾರ್ಟಿನೇಜ್‌ ಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಟ್ರೋಫಿ ಬರಲು ಮುಖ್ಯ ಕಾರಣ.

ಅರ್ಜೆಂಟಿನಾ ಗೋಲ್‌ಕೀಪರ್‌ ಎಮಿಲಿಯಾನೊ ಡಿ ಮಾರ್ಟಿನೇಜ್‌

ಬ್ರೆಜಿಲ್‌ನಲ್ಲಿ ಫೈನಲ್‌ ಪಂದ್ಯ. ಬ್ರೆಜಿಲ್ ಟ್ರೋಫಿಯಿಂದ ಒಂದು ಹೆಜ್ಜೆಯಷ್ಟೆ ದೂರವಿದೆ. ಆಂತಿಮ ಹಣಾಹಣಿ ಸಾಂಪ್ರದಾಯಿಕ ಎದುರಾಳಿ ಅಜೆಂಟಿನಾ ವಿರುದ್ಧ. ಹಾಗಿದ್ದ ಮೇಲೆ ಬ್ರೆಜಿಲಿಯನ್‌ ಅಭಿಮಾನಿಗಳ ಉತ್ಸಾಹಕ್ಕೆಲ್ಲಿ ತಡೆ ? ಅಂತಿಮ ಕ್ಷಣದ ವರೆಗೂ ಟ್ರೋಫಿ ಗೆಲ್ಲುವ ನಿರೀಕ್ಷೆಯಲ್ಲಿ ನೆರೆದಿದ್ದ ಸಾವಿರಾರು ಬ್ರೆಜಿಲಿಯನ್‌ ಪ್ರೇಕ್ಷಕರ ಕಂಗಳು ಪಂದ್ಯದಂತ್ಯಕ್ಕೆ ಹನಿಗೂಡಿದ್ದವು. ನೆಯ್ಮಾರ್ ಕ್ರೀಡಾಂಗಣದಲ್ಲಿ ಕಂಬನಿಗರೆದರೆ, ಮೆಸ್ಸಿ ತನ್ನ ಕಿರಿಯ ಸಹೋದರನನ್ನು ಸಂತೈಸುವಂತೆ ನೆಯ್ಮಾರ್‌ರನ್ನು ಅಪ್ಪಿಕೊಂಡು  ಸಮಾಧಾನ ಹೇಳಿದರು. ಸೋಲು ಗೆಲುವಿನ ನಡುವೆ ಕ್ರೀಡೆ ಮಾಡಬೇಕಿದ್ದ ಕೆಲಸವನ್ನು ಕೋಪಾ ಅಮೆರಿಕ ಸದ್ದಿಲ್ಲದೇ ಮಾಡಿಯಾಗಿತ್ತು.

ಕೊರೊನಾ ಸಾಂಕ್ರಾಮಿಕದ ನಡುವೆಯೂ ಜಗತ್ತಿನ ಅತಿ ಹಳೆಯ ಫುಟ್ಬಾಲ್‌ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಬ್ರೆಜಿಲ್ ಸರ್ಕಾರ ಮತ್ತು ಬ್ರೆಜಿಲಿಯನ್‌ ಫುಟ್ಬಾಲ್‌ ಫೆಡರೇಷನ್‌ ನಿಜಕ್ಕೂ ಅಭಿನಂದನೆಗೆ ಅರ್ಹರು. ಕ್ರೀಡಾಕೂಟದ ಆರಂಭದಲ್ಲಿ ಬ್ರೆಜಿಲ್‌ನಲ್ಲಿ ನಡೆದ ಪ್ರತಿಭಟನೆಯನ್ನೆಲ್ಲ ಫುಟ್ಬಾಲ್ ತನ್ನ ತೆಕ್ಕೆಯಲ್ಲಿ ಕರಗಿಸಿಕೊಂಡಿದ್ದು ವಿಶೇಷ.

ಇದನ್ನೂ ಓದಿ: ಡಿಯಾಗೋ ಮರಡೋನಾ: ಫುಟ್‌ಬಾಲ್ ಲೋಕವನ್ನು ಪ್ರಜ್ವಲಿಸಿದ ಅದ್ಭುತ ಮಾಂತ್ರಿಕ

 2014ರಲ್ಲಿ ಇದೇ ಮೆರಕಾನಾ ಕ್ರೀಡಾಂಗಣದಲ್ಲಿ ಫುಟ್ಬಾಲ್‌ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಅರ್ಜೆಂಟಿನಾ ತಂಡ ಜರ್ಮನಿ ವಿರುದ್ಧ ಪಾರಾಭಾವಗೊಂಡು ನಿರಾಸೆಗೊಳಗಾಗಿತ್ತು. ಇಂದು 2014ರ ಅರ್ಜೆಂಟಿನಾದ  ನಿರಾಸೆಯನ್ನು ಅದೇ ಮೆರಕಾನಾ ಕ್ರೀಡಾಂಗಣ ಮರೆಸಿದೆ.

ವಿಶ್ವ ಫುಟ್ಬಾಲ್‌ನ ಮುಕುಟಮಣಿಯಾಗಿ ಕಂಗೊಳಿಸುತ್ತಿರವ ಮೆಸ್ಸಿ ಕ್ಲಬ್‌ ಫುಟ್ಬಾಲ್‌ನಲ್ಲಿ ಇದುವರೆಗೆ ನೂರಾರು ಪ್ರಶಸ್ತಿಗಳನ್ನು ಹತ್ತಾರು ಚಾಂಪಿಯನ್‌ ಶಿಫ್‌ ಜಯಿಸಿದ್ದಾರೆ. ಆದರೆ ಅರ್ಜೆಂಟಿನಾದ ಬಿಳಿ ನೀಲಿ ಪಟ್ಟೆಯ ಜೆರ್ಸಿ ತೊಟ್ಟು ದೇಶಕ್ಕೆ ಟ್ರೋಫಿ ಗೆಲ್ಲುವ  ಮೆಸ್ಸಿ ಕನಸು ಇದುವರೆಗೆ ಈಡೇರಿರಲಿಲ್ಲ. ಇಂದು ಮೆಸ್ಸಿ ಮತ್ತು ಅರ್ಜೆಂಟಿನಾದ ದೀರ್ಘಕಾಲದ ಟ್ರೊಫಿ ಕನಸು ನನಸಾಗಿದೆ . ಈ ರೋಚಕ ಪಂದ್ಯವನ್ನು ಗೆಲ್ಲುತ್ತಿದ್ದಂತೆಯೇ ಅರ್ಜೆಂಟಿನಾ ಆಟಗಾರರು ಮೆಸ್ಸಿಯನ್ನು ಮೇಲಕ್ಕೆ ಚಿಮ್ಮಿಸಿ ಸಂಭ್ರಮಿಸಿದ ಕ್ಷಣ ವಿಶ್ವ ಫುಟ್ಬಾಲ್ ಇತಿಹಾಸದಲ್ಲಿ ಅಚ್ಚಳಿಯದ ದಾಖಲೆಯಾಗಿ ಸೇರ್ಪಡೆಗೊಂಡಿತು.

ಅರ್ಜೆಂಟಿನಾ ಆಟಗಾರರು ಮೆಸ್ಸಿಯನ್ನು ಮೇಲಕ್ಕೆ ಚಿಮ್ಮಿಸಿ ಸಂಭ್ರಮಿಸಿದ ಕ್ಷಣ

2016 ರ ಜುಲೈ ೧೦ ರಂದು ಅಂದರೆ ಇಂದಿಗೆ ೫ ವರ್ಷ ಮೊದಲು ಫುಟ್ಬಾಲ್ ಕ್ರೀಡೆಯ ಮತ್ತೊಬ್ಬ ಶ್ರೇಷ್ಠ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ನೇತೃತ್ವದ ಪೋರ್ಚುಗಲ್ ಯುರೋಪಿಯನ್ ಚಾಂಪಿಯಾನ್‌ ಆಗಿ ಹೊರಹೊಮ್ಮಿತ್ತು. ರೊನಾಲ್ಡೋ ಗೆಲುವಿಗೂ ಪೋರ್ಚುಗಲ್‌ ಅಭಿಮಾನಿಗಳು ಹೀಗೆಯೇ ಸಂಭ್ರಮಿಸಿದ್ದರು.

ನಿವೃತ್ತಿಯ ಅಂಚಿನಲ್ಲಿರುವ ಫುಟ್ಬಾಲ್‌ ಜಗತ್ತಿನ ಇಬ್ಬರು ಶ್ರೇಷ್ಠ ಆಟಗಾರರಾದ ಮೆಸ್ಸಿ ಮತ್ತು ರೊನಾಲ್ಡೋ ಇನ್ನೆಷ್ಟು ವರ್ಷ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆಂಬುದು ತಿಳಿದಿಲ್ಲ. ವರ್ಷಗಳ ಹಿಂದೆ ನಿವೃತ್ತಿಯ ನಿರ್ಧಾರ ಮಾಡಿದ್ದ ಮೆಸ್ಸಿ ಅಭಿಮಾನಿಗಳ ಒತ್ತಾಯ ಮತ್ತು ದೇಶಕ್ಕಾಗಿ ಟ್ರೋಫಿ ಗೆಲ್ಲುವ ಕನಸಿನಿಂದ ತಮ್ಮ ನಿವೃತ್ತಿಯಿಂದ ಹಿಂದೆ ಸರಿದಿದ್ದರು.

 -ರಾಜೇಶ್ ಹೆಬ್ಬಾರ್‌

  ಇದನ್ನೂ ಓದಿ: ವಿಂಬಲ್ಡನ್ ಟೆನಿಸ್ ಟೂರ್ನಿ ಆರಂಭ; ಇಲ್ಲ ಭಾರತದ ಪ್ರಾತಿನಿಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...