Homeಕರೋನಾ ತಲ್ಲಣ3 ತಿಂಗಳ ನಂತರ, ದಿನಕ್ಕೆ ಕಡಿಮೆ ಪ್ರಕರಣಗಳನ್ನು ವರದಿ ಮಾಡಿದ ಮುಂಬೈ.

3 ತಿಂಗಳ ನಂತರ, ದಿನಕ್ಕೆ ಕಡಿಮೆ ಪ್ರಕರಣಗಳನ್ನು ವರದಿ ಮಾಡಿದ ಮುಂಬೈ.

ದೇಶದ ಹಣಕಾಸು ರಾಜಧಾನಿಯಾದ ಮುಂಬೈ, ಭಾನುವಾರ ನಡೆಸಿದ ಪರೀಕ್ಷೆಗಳಿಂದ 1,033 ಕೊರೊನಾ ಪ್ರಕರಣಗಳನ್ನು ಸೋಮವಾರ ವರದಿ ಮಾಡಿದೆ.

- Advertisement -
- Advertisement -

ಕೊರೊನಾ ವೈರಸ್‌ನಿಂದ ತೀವ್ರ ಕೆಟ್ಟ ಹೊಡೆತ ಅನುಭವಿಸಿದ್ದ ಮುಂಬೈನಲ್ಲಿ ಸೋಮವಾರ ನಡೆಸಿದ 8,776 ಕೊರೊನಾ ವೈರಸ್‌ ಪರೀಕ್ಷೆಗಳ ಫಲಿತಾಂಶ ಹೊರಬಿದಿದ್ದು ಅದರಲ್ಲಿ ಸುಮಾರು 700 ಮಾದರಿಗಳು ಮಾತ್ರ ಪಾಸಿಟಿವ್ ಆಗಿದೆ. ಇದು ಕಳೆದ 100 ದಿನಗಳಲ್ಲಿ ಅತ್ಯಂತ ಕಡಿಮೆ ಪ್ರಕರಣ ದಾಖಲು ಮಾಡಿದ ದಿನವಾಗಿದೆ.

ದೇಶದ ಹಣಕಾಸು ರಾಜಧಾನಿಯಾದ ಮುಂಬೈ, ಭಾನುವಾರ ನಡೆಸಿದ ಪರೀಕ್ಷೆಗಳಿಂದ 1,033 ಕೊರೊನಾ ಪ್ರಕರಣಗಳನ್ನು ವರದಿ ಮಾಡಿತ್ತು. ಪ್ರಕರಣಗಳು ದ್ವಿಗುಣವಾಗಲು ಈಗ 68 ದಿನಗಳನ್ನು ತೆಗೆದುಕೊಳ್ಳುತ್ತಿದ್ದು, ಮುಂಬೈನ ಚೇತರಿಕೆ ಪ್ರಮಾಣವು ಶೇಕಡಾ 73 ರಷ್ಟಿದೆ. ಜುಲೈ 20 ರಿಂದ ಜುಲೈ 26 ರವರೆಗೆ ಮುಂಬೈನಲ್ಲಿನ ಕೊರೊನಾವೈರಸ್ ಪ್ರಕರಣಗಳ ಒಟ್ಟಾರೆ ಬೆಳವಣಿಗೆಯ ದರವು ಶೇಕಡಾ 1.03 ರಷ್ಟಿತ್ತು ಎನ್ನಲಾಗಿದೆ.

ಸೋಮವಾರ, ಇಡೀ ಮಹಾರಾಷ್ಟ್ರದಲ್ಲಿ 7,924 ಪ್ರಕರಣಗಳು ಮತ್ತು 227 ಸಾವುಗಳು ದಾಖಲಾಗಿವೆ. ಮುಂಬೈಯಲ್ಲಿ ಇದುವರೆಗೆ 6,132 ಸಾವುಗಳು ಸಂಭವಿಸಿವೆ.

“ಮುಂಬೈನಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಪರೀಕ್ಷೆ ನಡೆಸಿ (8,776) ಕೇವಲ 700 ಪ್ರಕರಣಗಳು ದಾಖಲಾಗಿವೆ. ಇದರಿಂದ ವೈರಸ್ ಅನ್ನು ಪೂರ್ಣ ಪ್ರಮಾಣದಲ್ಲಿ ಹಿಮ್ಮೆಟ್ಟಿಸಲು ಸಾಧ್ಯವಾಗಿದೆ. 3 ತಿಂಗಳ ನಂತರ ಒಂದು ದೊಡ್ಡ ಸಮಾಧಾನ ಸಿಕ್ಕಂತಾಗಿದೆ. ನಿಮ್ಮ ಮಾಸ್ಕ್ ಅನ್ನು ಮುಖದಿಂದ ಕೆಳಗೆ ಇಳಿಸಬೇಡಿ! ಸಂಖ್ಯೆಗಳನ್ನು ಮಾತ್ರ ಇಳಿಸಿ!” ಎಂದು ಮಹಾರಾಷ್ಟ್ರದ ಸಚಿವ ಆದಿತ್ಯ ಠಾಕ್ರೆ ಟ್ವೀಟ್‌ ಮಾಡಿದ್ದಾರೆ.

ಮುಂಬೈನಲ್ಲಿ ಒಟ್ಟು 1,10,182 ಪ್ರಕರಣಗಳಿದ್ದು, ಈ ಪೈಕಿ 21,812 ಪ್ರಕರಣಗಳು ಮಾತ್ರ ಸಕ್ರಿಯ ಪ್ರಕರಣಗಳಾಗಿವೆ. ನೆರೆಯ ಥಾಣೆಯಲ್ಲಿ 34,471 ಸಕ್ರಿಯ ಪ್ರಕರಣಗಳು ಮತ್ತು ಪುಣೆಯಲ್ಲಿ 48,672 ಸಕ್ರಿಯ ಪ್ರಕರಣಗಳಿವೆ.

ಆದಾಗ್ಯೂ, ಅಧಿಕಾರಿಗಳು ಎರಡನೇ ಅಲೆಗೆ ಹೆದರುತ್ತಿದ್ದಾರೆ. ಲಸಿಕೆ ಬರಲು ಇನ್ನೂ ಸ್ವಲ್ಪ ಸಮಯವಿದೆ ಎಂದು ಹೇಳುತ್ತಿರುವುದರಿಂದ ಬಹಳ ಎಚ್ಚರಿಕೆಯಿಂದಿದ್ದಾರೆ.

ಮುಂಬೈನಲ್ಲಿರುವ ಧಾರವಿ ಏಷ್ಯಾದ ಅತಿದೊಡ್ಡ ಸ್ಲಂ ಆಗಿದ್ದು ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡುವಲ್ಲಿ ಯಶಸ್ವಿಯಾಗಿದೆ. ಈ ಪ್ರದೇಶದಲ್ಲಿ ಈಗ 98 ಸಕ್ರಿಯ ಪ್ರಕರಣಗಳಿವೆ. ಸೋಮವಾರ ಕೇವಲ ಒಂಬತ್ತು ಹೊಸ ಪ್ರಕರಣಗಳು ವರದಿಯಾಗಿವೆ. ಧಾರವಿ ಯಲ್ಲಿ ಒಟ್ಟು 2,540 ಪ್ರಕರಣಗಳು ವರದಿಯಾಗಿವೆ.


ಇದನ್ನೂ ಓದಿ: ಉತ್ತರ ಪ್ರದೇಶದ ಕೊರೊನಾ ರೋಗಿಯ ವೀಡಿಯೋ: ಆತನ ಸಾವಿನ ನಂತರ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...