Homeಕರೋನಾ ತಲ್ಲಣ3 ತಿಂಗಳ ನಂತರ, ದಿನಕ್ಕೆ ಕಡಿಮೆ ಪ್ರಕರಣಗಳನ್ನು ವರದಿ ಮಾಡಿದ ಮುಂಬೈ.

3 ತಿಂಗಳ ನಂತರ, ದಿನಕ್ಕೆ ಕಡಿಮೆ ಪ್ರಕರಣಗಳನ್ನು ವರದಿ ಮಾಡಿದ ಮುಂಬೈ.

ದೇಶದ ಹಣಕಾಸು ರಾಜಧಾನಿಯಾದ ಮುಂಬೈ, ಭಾನುವಾರ ನಡೆಸಿದ ಪರೀಕ್ಷೆಗಳಿಂದ 1,033 ಕೊರೊನಾ ಪ್ರಕರಣಗಳನ್ನು ಸೋಮವಾರ ವರದಿ ಮಾಡಿದೆ.

- Advertisement -
- Advertisement -

ಕೊರೊನಾ ವೈರಸ್‌ನಿಂದ ತೀವ್ರ ಕೆಟ್ಟ ಹೊಡೆತ ಅನುಭವಿಸಿದ್ದ ಮುಂಬೈನಲ್ಲಿ ಸೋಮವಾರ ನಡೆಸಿದ 8,776 ಕೊರೊನಾ ವೈರಸ್‌ ಪರೀಕ್ಷೆಗಳ ಫಲಿತಾಂಶ ಹೊರಬಿದಿದ್ದು ಅದರಲ್ಲಿ ಸುಮಾರು 700 ಮಾದರಿಗಳು ಮಾತ್ರ ಪಾಸಿಟಿವ್ ಆಗಿದೆ. ಇದು ಕಳೆದ 100 ದಿನಗಳಲ್ಲಿ ಅತ್ಯಂತ ಕಡಿಮೆ ಪ್ರಕರಣ ದಾಖಲು ಮಾಡಿದ ದಿನವಾಗಿದೆ.

ದೇಶದ ಹಣಕಾಸು ರಾಜಧಾನಿಯಾದ ಮುಂಬೈ, ಭಾನುವಾರ ನಡೆಸಿದ ಪರೀಕ್ಷೆಗಳಿಂದ 1,033 ಕೊರೊನಾ ಪ್ರಕರಣಗಳನ್ನು ವರದಿ ಮಾಡಿತ್ತು. ಪ್ರಕರಣಗಳು ದ್ವಿಗುಣವಾಗಲು ಈಗ 68 ದಿನಗಳನ್ನು ತೆಗೆದುಕೊಳ್ಳುತ್ತಿದ್ದು, ಮುಂಬೈನ ಚೇತರಿಕೆ ಪ್ರಮಾಣವು ಶೇಕಡಾ 73 ರಷ್ಟಿದೆ. ಜುಲೈ 20 ರಿಂದ ಜುಲೈ 26 ರವರೆಗೆ ಮುಂಬೈನಲ್ಲಿನ ಕೊರೊನಾವೈರಸ್ ಪ್ರಕರಣಗಳ ಒಟ್ಟಾರೆ ಬೆಳವಣಿಗೆಯ ದರವು ಶೇಕಡಾ 1.03 ರಷ್ಟಿತ್ತು ಎನ್ನಲಾಗಿದೆ.

ಸೋಮವಾರ, ಇಡೀ ಮಹಾರಾಷ್ಟ್ರದಲ್ಲಿ 7,924 ಪ್ರಕರಣಗಳು ಮತ್ತು 227 ಸಾವುಗಳು ದಾಖಲಾಗಿವೆ. ಮುಂಬೈಯಲ್ಲಿ ಇದುವರೆಗೆ 6,132 ಸಾವುಗಳು ಸಂಭವಿಸಿವೆ.

“ಮುಂಬೈನಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಪರೀಕ್ಷೆ ನಡೆಸಿ (8,776) ಕೇವಲ 700 ಪ್ರಕರಣಗಳು ದಾಖಲಾಗಿವೆ. ಇದರಿಂದ ವೈರಸ್ ಅನ್ನು ಪೂರ್ಣ ಪ್ರಮಾಣದಲ್ಲಿ ಹಿಮ್ಮೆಟ್ಟಿಸಲು ಸಾಧ್ಯವಾಗಿದೆ. 3 ತಿಂಗಳ ನಂತರ ಒಂದು ದೊಡ್ಡ ಸಮಾಧಾನ ಸಿಕ್ಕಂತಾಗಿದೆ. ನಿಮ್ಮ ಮಾಸ್ಕ್ ಅನ್ನು ಮುಖದಿಂದ ಕೆಳಗೆ ಇಳಿಸಬೇಡಿ! ಸಂಖ್ಯೆಗಳನ್ನು ಮಾತ್ರ ಇಳಿಸಿ!” ಎಂದು ಮಹಾರಾಷ್ಟ್ರದ ಸಚಿವ ಆದಿತ್ಯ ಠಾಕ್ರೆ ಟ್ವೀಟ್‌ ಮಾಡಿದ್ದಾರೆ.

ಮುಂಬೈನಲ್ಲಿ ಒಟ್ಟು 1,10,182 ಪ್ರಕರಣಗಳಿದ್ದು, ಈ ಪೈಕಿ 21,812 ಪ್ರಕರಣಗಳು ಮಾತ್ರ ಸಕ್ರಿಯ ಪ್ರಕರಣಗಳಾಗಿವೆ. ನೆರೆಯ ಥಾಣೆಯಲ್ಲಿ 34,471 ಸಕ್ರಿಯ ಪ್ರಕರಣಗಳು ಮತ್ತು ಪುಣೆಯಲ್ಲಿ 48,672 ಸಕ್ರಿಯ ಪ್ರಕರಣಗಳಿವೆ.

ಆದಾಗ್ಯೂ, ಅಧಿಕಾರಿಗಳು ಎರಡನೇ ಅಲೆಗೆ ಹೆದರುತ್ತಿದ್ದಾರೆ. ಲಸಿಕೆ ಬರಲು ಇನ್ನೂ ಸ್ವಲ್ಪ ಸಮಯವಿದೆ ಎಂದು ಹೇಳುತ್ತಿರುವುದರಿಂದ ಬಹಳ ಎಚ್ಚರಿಕೆಯಿಂದಿದ್ದಾರೆ.

ಮುಂಬೈನಲ್ಲಿರುವ ಧಾರವಿ ಏಷ್ಯಾದ ಅತಿದೊಡ್ಡ ಸ್ಲಂ ಆಗಿದ್ದು ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡುವಲ್ಲಿ ಯಶಸ್ವಿಯಾಗಿದೆ. ಈ ಪ್ರದೇಶದಲ್ಲಿ ಈಗ 98 ಸಕ್ರಿಯ ಪ್ರಕರಣಗಳಿವೆ. ಸೋಮವಾರ ಕೇವಲ ಒಂಬತ್ತು ಹೊಸ ಪ್ರಕರಣಗಳು ವರದಿಯಾಗಿವೆ. ಧಾರವಿ ಯಲ್ಲಿ ಒಟ್ಟು 2,540 ಪ್ರಕರಣಗಳು ವರದಿಯಾಗಿವೆ.


ಇದನ್ನೂ ಓದಿ: ಉತ್ತರ ಪ್ರದೇಶದ ಕೊರೊನಾ ರೋಗಿಯ ವೀಡಿಯೋ: ಆತನ ಸಾವಿನ ನಂತರ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...